Breaking News

ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಹೇಗೆ? ಯಾವ್ಯಾವುದಕ್ಕೆ, ಎಷ್ಟು ದಿನ ಬ್ರೇಕ್‌? ಅಪಾರ್ಟ್‌ಮೆಂಟ್‌ಗಳಿಗೇನು ರೂಲ್ಸ್‌?

ಬೆಂಗಳೂರು: ಕರೊನಾ, ಒಮಿಕ್ರಾನ್‌ ಭೀತಿಯ ನಡುವೆ ಮತ್ತೊಂದು ಹೊಸ ವರ್ಷ ಕಾಲಿಡುತ್ತಿದೆ. ಕಳೆದ ವರ್ಷದಂತೆಯೇ ನೂತನ ವರ್ಷದ ಆಚರಣೆಗೆ ಈ ಬಾರಿಯೂ ಬ್ರೇಕ್‌ ಹಾಕಲಾಗಿದೆ. ಕ್ಷಣಕ್ಷಣಕ್ಕೂ ಕರೊನಾ ಜತೆ ಒಮಿಕ್ರಾನ್‌ ಭೀತಿ ಕಾಡುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಆಚರಣೆಗೆ ಕೆಲವೊಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲವೊಂದು ಮಾಹಿತಿ ನೀಡಿದ್ದಾರೆ. ತಜ್ಞರ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ನಂತರ ಕ್ರಿಸ್‌ಮಸ್‌ ಮತ್ತು …

Read More »

200 ಕೋಟಿ ರೂ. ವೆಚ್ಚದಲ್ಲಿ ಹೊಸ ಪೊಲೀಸ್ ಠಾಣೆ ನಿರ್ಮಾಣ: ಅರಗ ಜ್ಞಾನೇಂದ್ರ

ಬೆಳಗಾವಿ,ಡಿ.21- ರಾಜ್ಯದಲ್ಲಿ ಕಟ್ಟಡವಿಲ್ಲದ ಪ್ರಮುಖ ಪೊಲೀಸ್ ಠಾಣೆಗಳಿಗೆ ನೂತನ ಕಟ್ಟಡಗಳನ್ನು ಮಂಜೂರು ಮಾಡಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 100 ಠಾಣೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಸಭೆ ತಿಳಿಸಿದರು.   ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎಸ್.ಕುಮಾರಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 200 ಕೋಟಿ ರೂ. ವೆಚ್ಚದಲ್ಲಿ ಹೊಸ ಪೊಲೀಸ್ ಠಾಣೆ ನಿರ್ಮಾಣ ಮಾಡಲಾಗುತ್ತಿದೆ. ಉಪಠಾಣೆಗಳ ನಿರ್ಮಾಣದ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಪೊಲೀಸ್ ಗೃಹ …

Read More »

‘ನಾನು ಇಲ್ಲದೆ ಮೈಸೂರಿನಲ್ಲಿ ನೀವು ಸಭೆ ಮಾಡಬೇಡಿ. ಅದು ಸರಿಯಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ

ಬೆಳಗಾವಿ (ಸುವರ್ಣ ವಿಧಾಸೌಧ): ‘ನಾನು ಇಲ್ಲದೆ ಮೈಸೂರಿನಲ್ಲಿ ನೀವು ಸಭೆ ಮಾಡಬೇಡಿ. ಅದು ಸರಿಯಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.   ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಹಮ್ಮಿಕೊಳ್ಳಲಿರುವ ಪಾದಯಾತ್ರೆಗೆ ಪೂರ್ವಭಾವಿಯಾಗಿ ಇದೇ 23ರಂದು ಮೈಸೂರಿನಲ್ಲಿ ಪಕ್ಷದ ಶಾಸಕರ ಸಭೆ ನಡೆಸಲು ಶಿವಕುಮಾರ್‌ ನಿರ್ಧರಿಸಿದ್ದರು. ಸದನ ನಡೆಯುತ್ತಿರುವ ಮಧ್ಯೆ ಸಭೆ ನಡೆಸಲು ಮುಂದಾಗಿರುವ ಶಿವಕುಮಾರ್ ಕ್ರಮಕ್ಕೆ ಮೈಸೂರು ಭಾಗದ …

Read More »

ಮಾನ್ಯತೆ ನವೀಕರಣ ಗುಮ್ಮಕ್ಕೆ ಖಾಸಗಿ ಶಾಲೆ ತತ್ತರ!

ರಾಯಚೂರು: ಮಾನ್ಯತೆ ನವೀಕರಣಕ್ಕೆ ಸರ್ಕಾರ ಒಡ್ಡಿದ ಷರತ್ತುಗಳಿಂದ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳು ತತ್ತರಿಸಿವೆ. ಪ್ರತಿ ವರ್ಷಬೆಣ್ಣೆಯಲ್ಲಿ ಕೂದಲು ತೆಗೆದಷ್ಟು ಸುಲಭದಲ್ಲಿ ಕೆಲಸಮಾಡಿಕೊಳ್ಳುತ್ತಿದ್ದವರಿಗೆ ಈಗ ಕಬ್ಬಿಣದ ಕಡಲೆ ತಿನ್ನುವಂತಾಗಿದೆ.   ಸರ್ಕಾರ ಇಷ್ಟು ವರ್ಷ ಮಾನ್ಯತೆ ನವೀಕರಣ ಎನ್ನುವುದನ್ನು ಸಂಪ್ರದಾಯದಂತೆ ಮಾಡಿಕೊಂಡು ಬರುತ್ತಿತ್ತು. ಖಾಸಗಿ ಸಂಸ್ಥೆಗಳಿಗೆ ಅದೇನು ದೊಡ್ಡಕೆಲಸ ಎನ್ನುವಂತಿರಲಿಲ್ಲ. ಆದರೆ, ಈಗ ಸರ್ಕಾರ ಸುಮಾರು 62 ನಿಯಮ ಒಳಗೊಂಡ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕೆಲವೊಂದು ನಿಯಮಗಳುಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ …

Read More »

ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗಕ್ಕೆ ಸಚಿವ ಸಂಪುಟದಿಂದ ಆಡಳಿತಾತ್ಮಕ ಅನುಮೋದನೆ

ಬೆಳಗಾವಿ: ಕಿತ್ತೂರು ಮೂಲಕ ಹಾದುಹೋಗುವ ಬೆಳಗಾವಿ-ಧಾರವಾಡ ನಡುವಿನ 73 ಕಿ.ಮೀ ಉದ್ದದ ಹೊಸ ರೈಲು ಮಾರ್ಗಕ್ಕೆ ಮಂಗಳವಾರ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. 927.4 ಕೋಟಿ ರೂ. ವೆಚ್ಚದ ಈ ಹೊಸ ರೈಲ್ವೆ ಯೋಜನೆಯು ಬೆಳಗಾವಿ ಮತ್ತು ಧಾರವಾಡ ನಡುವಿನ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಈ ಹೊಸ ರೈಲು ಮಾರ್ಗದಲ್ಲಿ ಐತಿಹಾಸಿಕ ಕಿತ್ತೂರು ಪಟ್ಟಣ ಸೇರಿದಂತೆ 11 ಹೊಸ ರೈಲು ನಿಲ್ದಾಣಗಳನ್ನು ಹೊಂದಿರುತ್ತದೆ. ಪ್ರಸ್ತುತ ಎರಡು ನಗರಗಳ …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂತೃಪ್ತಿಗೊಳಿಸಲು ಎಂಇಎಸ್ ಪುಂಡರ ಪರ ಮಾತನಾಡುತ್ತಿದ್ದಾರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂತೃಪ್ತಿಗೊಳಿಸಲು ಎಂಇಎಸ್ ಪುಂಡರ ಪರ ಮಾತನಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದಿದ್ದಾರೆ. ಮಂಗಳವಾರ ಆನಗೋಳದಲ್ಲಿ ಭಗ್ನಗೊಂಡಿದ್ದ ರಾಯಣ್ಣ ಮೂರ್ತಿ ಮರುಸ್ಥಾಪನೆ ಮಾಡಿದ ಕನಕದಾಸ ಕಾಲೋನಿಗೆ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣನವರ ಮೂರ್ತಿಗೆ ಸಚಿವ ಕೆ.ಎಸ್.ಈಶ್ವರಪ್ಪ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಕ್ಕಾಲು ಭಾಗ …

Read More »

ಬೆಳಗಾವಿಯಲ್ಲಿ ನಡೆದ ಗಲಾಟೆ ಬಗ್ಗೆ ಈಗಾಗಲೇ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ: ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ನಡೆದ ಗಲಾಟೆ ಬಗ್ಗೆ ಈಗಾಗಲೇ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ನಾವು ಜನಪ್ರತಿನಿಧಿಗಳು ಏನು ಮಾಡೋಕೆ ಆಗುವುದಿಲ್ಲ. ಮುಂಚೆಯೇ ಹೇಳಿದ್ದೇವು ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವಂತೆ. ಹೀಗಾಗಿ ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ನಾವು ಹೇಳಲು ಬರೋದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತಾಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಇದು ಕರ್ನಾಟಕದಲ್ಲಿ ಅಷ್ಟೇ ಅಲ್ಲ ಮಹಾರಾಷ್ಟ್ರದಲ್ಲಿಯೂ ಆಗುತ್ತದೆ. ಹೀಗಾಗಿ …

Read More »

ನಾವು ಈ ಮಸೂದೆ ಖಂಡಿಸುತ್ತೇವೆ. ಇದು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಲಿದೆ ಎಂದು ಡಿಕೆಶಿ ಎಚ್ಚರಿಕೆ

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್ ಬಲವಂತವಾಗಿ ಮತಾಂತರ ಮಾಡುವಂತಿಲ್ಲ ಎಂಬ ಕಾನೂನು ಈಗಾಗಲೇ ಇದ್ದರೂ ಧಾರ್ಮಿಕ ಸ್ವಾತಂತ್ರ್ಯ, ಬದುಕಿನ ಹಾಗೂ ವಿಚಾರದ ಹಕ್ಕನ್ನು ಯಾರು ಕಸಿಯಲು ಆಗುವುದಿಲ್ಲ. ಇದು ಎಲ್ಲ ಧರ್ಮಕ್ಕೂ ಸೇರಿದ ವಿಚಾರ. ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲವೂ ಇದರ ವ್ಯಾಪ್ತಿಯಲ್ಲಿದೆ. ಇಸ್ಕಾನ್, ಅಮೃತಾನಂದಮಯಿ ಆಶ್ರಮ ಸೇರಿದಂತೆ ಹಲವೆಡೆ ವಿದೇಶದಿಂದ ಅನ್ಯ ಧರ್ಮದವರು ಬಂದು ಹರೇ ರಾಮ, ಹರೇ ಕೃಷ್ಣ ಎಂದು ಭಜನೆ ಮಾಡುತ್ತಾರೆ. ಹೀಗಿರುವಾಗ …

Read More »

ಮತಾಂತರ ನಿಷೇಧ ಕಾಯ್ದೆಗೆ ಪರಿಷತ್, ವಿಧಾನಸಭೆ ಎರಡರಲ್ಲಿಯೂ ಜೆಡಿಎಸ್ ಬೆಂಬಲಿಸುವುದಿಲ್ಲ:H.D.K.

ಯಾವ ಉದ್ದೇಶದಿಂದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಿದ್ದೇವೆ. ಅಧಿವೇಶನ ಆರಂಭ ಮಾಡಿದ್ದೇವೆ. ಅದರ ಸಂಪೂರ್ಣ ಉಪಯೋಗ ಆಗಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬೆಳಗಾವಿಗೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ವೀರರಾಣಿ ಕಿತ್ತೂರು ಚನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಈ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಇನ್ನಿತರು ಜೆಡಿಎಸ್ ನಾಯಕರು ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದರು. ಇದೇ ವೇಳೆ …

Read More »

ಕಾಂಗ್ರೆಸ್ ಬರಲು ಇಬ್ಬರು ಕಾರಣ? ಸತ್ಯ ಹೊರಗೆಡವಿದ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 21: ವಿಧಾನಸಭೆಯ ಅಧಿವೇಶನದ ಆರಂಭದಿಂದ ಅಂತ್ಯದವರೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಖದರ್ ದಿನವೂ ಇರುತ್ತದೆ. ತಮ್ಮ ಅನುಭವವನ್ನು ತಮ್ಮದೇ ರೀತಿಯಲ್ಲಿ ಪ್ರಸ್ತಾವಿಸುವಾಗ ವಿರೋಧಿಗಳೂ ಕಿವಿಗೊಟ್ಟು ಕೇಳುತ್ತಾರೆ. ಚಳಿಗಾಲದ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಅಹಿಂದ, ಬೆಳಗಾವಿ ಗಲಾಟೆ ಸೇರಿದಂತೆ, ಅಂದು ಕಾಂಗ್ರೆಸ್ ಬರಲು ಕಾರಣರಾದವರು ಯಾರು ಎನ್ನುವುದನ್ನೂ ಸವಿಸ್ತಾರವಾಗಿ ವಿವರಿಸಿದ್ದಾರೆ.   ಎಂಇಎಸ್ ಪುಂಡರ ಬಗ್ಗೆ ಸದನದಲ್ಲಿ ಪ್ರಸ್ತಾವಿಸಿದ ಸಿದ್ದರಾಮಯ್ಯ, “ಅವರು ಈ ನೆಲದಲ್ಲಿ ಇದ್ದಾರೆ, ನಮ್ಮ …

Read More »