Breaking News

ಮಿನಿ ವಿಧಾನಸೌಧವನ್ನೇ ಮಾರಾಟಕ್ಕಿಟ್ಟಿದ್ದ ರೈತನ ಸಾವು..!

ವಿಜಯಪುರ: ನಾಪತ್ತೆಯಾಗಿದ್ದ ರೈತ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೂವಿನಡಗಲಿಯಲ್ಲಿ ನಡೆದಿದೆ. ಬಣಕಾರ್ ಮಲ್ಲಪ್ಪ ಮೃತ ರೈತ. ಬಣಕಾರ್ ಮಲ್ಲಪ್ಪ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ.   ಬಣಕಾರ್ ಮಲ್ಲಪ್ಪ ಹೂವಿನಡಗಲಿಯ ನಂದಿಹಳ್ಳಿ ಗ್ರಾಮದವರು. ಇವರ ಜಮೀನಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣವನ್ನ ವಿರೋಧಿಸಿದ್ದರು. ಅದಕ್ಕಾಗಿ ಸಾಕಷ್ಟು ಹೋರಾಟವನ್ನು ಮಾಡಿದ್ದವರು. ಅಷ್ಟೇ ಅಲ್ಲ ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಿದ್ದವರ ವಿರುದ್ಧ ಹೋರಾಟ ಮಾಡುತ್ತಿದ್ದರು. ಇದೀಗ ಇದ್ದಕ್ಕಿದ್ದ ಹಾಗೇ ಶವವಾಗಿ ಪತ್ತೆಯಾಗಿದ್ದಾರೆ. ತಮ್ಮ …

Read More »

ಸಿಬಿಐ ತನಿಖೆಯ ಸಿಂಧುತ್ವ ಪ್ರಶ್ನಿಸಿದ್ದ ಮೇಲ್ಮನವಿ: ವಿನಯ್ ಕುಲಕರ್ಣಿ ಅರ್ಜಿ ವಜಾ

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣದ ಸಿಬಿಐ ತನಿಖೆಯ ಸಿಂಧುತ್ವವನ್ನು ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಭಟ್ ಹಾಗೂ‌ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಕೊಲೆ ಪ್ರಕರಣದ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ‌ ಮಾಡಿತು.   ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು 2019ರಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು. …

Read More »

ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ

ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು       ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.

Read More »

ಯಾದಗಿರಿಯ ಶಿಕ್ಷಕ ಒಂದಲ್ಲ, ಎರಡಲ್ಲ, ಮೂವರು ಹೆಂಡ್ತೀರ ಗಂಡ! ಇಬ್ಬರಿಗೆ ಕೈ ಕೊಟ್ಟು 3ನೇ ಹೆಂಡ್ತಿ ಜತೆ ಸಂಸಾರ.

ಯಾದಗಿರಿ: ಇಲ್ಲೊಬ್ಬ ಶಿಕ್ಷಕ ಸುಳ್ಳು ಹೇಳಿ ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂವರನ್ನು ಮದ್ವೆ ಆಗಿದ್ದಾನೆ. ಈ ವಿಚಾರ ಪರಸ್ಪರ ಪತ್ನಿಯರಿಗೂ ಗೊತ್ತಾಗದಂತೆ ಹಲವು ವರ್ಷ ಸಂಸಾರ ನಡೆಸಿದ ಇದೀಗ ಸಿಕ್ಕಿಬಿದ್ದಿದ್ದಾನೆ. ಆ ಭೂಪನ ಹೆಸರು ಮೋಹನರೆಡ್ಡಿ ಪಾಟೀಲ್. ಯಾದಗಿರಿ ತಾಲೂಕಿನ ನಿಲನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದ. ಮೂರು ಮದ್ವೆಯಾದ ವಿಚಾರ ತಿಳಿಯುತ್ತಿದ್ದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಮೋಹನರೆಡ್ಡಿ ಪಾಟೀಲ್ 1988ರಲ್ಲಿ ಮದುವೆ ಆಗಿದ್ದ. 1992ರಲ್ಲಿ ಎರಡನೇ ಮದುವೆ ಆಗಿದ್ದ. …

Read More »

ಎಲ್ಲಿದ್ದೀರಾ ಕಾಮನ್‌ಮ್ಯಾನ್‌ ಸಿಎಂ ಸಾರ್‌.. ನಿಮ್ಮ ಪಕ್ಷದ ಶಾಸಕನಿಂದ ನನಗೆ ಮಗುವಾಗಿದೆ, ನ್ಯಾಯ ಕೊಡ್ಸಿ..

ಕಲಬುರಗಿ: ಶಾಸಕರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ಕಲಬುರಗಿ ಬಿಜೆಪಿ ಶಾಸಕರ ಸರದಿ. ಸಾಮಾಜಿಕ ಜಾಲತಾಣದ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   ‘ನಿಮ್ಮ ಪಕ್ಷದ ಶಾಸಕರಿಂದ ಮೋಸ ಹೋದ ಮಹಿಳೆ ನಾನು. ನಮಗೆ ಮತ್ತು ನಿಮ್ಮ ಶಾಸಕರಿಗೆ ಹುಟ್ಟಿರುವ ಮಗುವಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದೆ ಬಂದಿದ್ದೇನೆ. ನಿಮ್ಮ ಭೇಟಿ ಮಾಡಲು ಸಾಕಷ್ಟು ಬಾರಿ ಬಂದಿದ್ದು, …

Read More »

ಚಿಕ್ಕಮಗಳೂರು: ಹಿಜಾಬ್ ಆಯ್ತು, ಕೇಸರಿ ಆಯ್ತು; ಇದೀಗ ನೀಲಿ ಶಾಲು ಸರದಿ

ಚಿಕ್ಕಮಗಳೂರು, ಫೆಬ್ರವರಿ 7: ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದೆ. ಕರಾವಳಿ ಮತ್ತು ಮಲೆನಾಡಿನ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ವಿವಾದ ರಾಜ್ಯದಲ್ಲಿ ಮಾತ್ರವಲ್ಲ ದೇಶಾದ್ಯಂತ ಸದ್ದು ಮಾಡುತ್ತಿದೆ.   ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಶನಿವಾರ …

Read More »

ಹಿಜಾಬ್‍ನಿಂದ ತನ್ನ ವೈಪಲ್ಯ ಮುಚ್ಚಿ ಹಾಕಲು ಯತ್ನ:ಎಂ.ಬಿ.ಪಾಟೀಲ್

ಸರ್ಕಾರ ತನ್ನ ವೈಪಲ್ಯವನ್ನು ಮುಚ್ಚಿ ಹಾಕಲು ಮತ್ತು ಜನರ ದಿಕ್ಕು ತಪ್ಪಿಸಲು ಹಿಜಾಬ್ ಪ್ರಕರಣವನ್ನು ಎತ್ತಿಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ನಾವು ಶಾಲಾ ಕಾಲೇಜುಗಳಿಗೆ ಹೋಗಿ ರಾಜಕಾರಣ ಮಾಡುತ್ತೇವೆ ಎಂದರೆ ಇದು ಸರಿಯಲ್ಲ. ಹಿಂದೆ ಯಾವಾಗಲೂ ಈ ರೀತಿ ಆಗಿರಲಿಲ್ಲ. ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸ ಸರಿಯಲ್ಲ. …

Read More »

ಹಿಜಾಬ್ ವರ್ಸಸ್ ಕೇಸರಿ ವಿವಾದ: ಕೋರ್ಟ ತೀರ್ಪು ಬಂದ ಬಳಿಕ ನಿರ್ಧಾರ: ಸಿಎಂ

ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಮೌನ ಮುರಿದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡಬಾರದು. ನಾಳೆ ಕೋರ್ಟನಿಂದ ತೀರ್ಪು ಬರುತ್ತದೆ. ತೀರ್ಪು ಬಂದ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಹಿಜಾಬ್ ವಿವಾದದ ಹಿಂದೆ ಕೆಲ ಶಕ್ತಿಗಳು ಕೆಲಸ ಮಾಡುತ್ತಿವೆ. ಕೇರಳ, ಮಹಾರಾಷ್ಟ್ರದಲ್ಲಿಯೂ ಈ ಹಿಂದೆ ವಿವಾದ …

Read More »

ಗೋವಾ ಚುನಾವಣೆ: ಎರಡು ದಿನ ಸಿದ್ದರಾಮಯ್ಯ ಪ್ರಚಾರ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗೋವಾ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಎರಡು ದಿನಗಳ ಕಾಲ ಗೋವಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಲ ಪ್ರಚಾರ ನಡೆಸಲಿದ್ದಾರೆ. ಮಂಗಳವಾರ ಗೋವಾ ತೆರಳಲಿರುವ ಸಿದ್ದರಾಮಯ್ಯ ಮರಮಗಾವ್, ವಾಸ್ಕೋ, ದಾಬೊಲಿಮ್, ಕಾರ್ತಲಿಮ್​ನಲ್ಲಿ ಪ್ರಚಾರ ನಡೆಸಲಿದ್ದಾರೆ. ಬುಧವಾರ ಚುನಾವಣಾ ವೀಕ್ಷಕರ ಸಭೆಯಲ್ಲೂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ …

Read More »

ವಿದ್ಯಾಕಾಶಿಯಲ್ಲಿ ಡಸ್ಟ್ ಆರ್ಟ್ ಮೂಲಕ ಗಾನ ಕೋಗಿಲೆಗೆ ನಮನ ಸಲ್ಲಿಸಿದ ಕಲಾವಿದ

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆ ಧಾರವಾಡದ‌‌ ಕಲಾವಿದನೋರ್ವ ವಿಶೇಷವಾಗಿ ಕಲಾ ನಮನ ಸಲ್ಲಿಸಿದ್ದಾರೆ. ಕಾರಿನ ಮೇಲೆ ಬಿದ್ದ ಧೂಳಿನಲ್ಲಿ ಅವರ ಭಾವಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ. ಕೆಲಗೇರಿ ಗಾಯತ್ರಿಪುರ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ಲತಾ ಮಂಗೇಶ್ಕರ್ ಅವರ ನಿಧನದ ವಿಷಯ ತಿಳಿದು ಕಾರಿನ ಮೇಲೆ ಬಿದ್ದ ಡಸ್ಟ್‌ನಲ್ಲಿ ಗಾನ ಕೋಗಿಲೆಯ ಭಾವಚಿತ್ರ ಬಿಡಿಸಿ ಡಸ್ಟ್ ಆರ್ಟ್ ಮೂಲಕ ಕಲಾ ನಮನ ಸಲ್ಲಿಸಿದ್ದಾರೆ. ಸುಮಾರು …

Read More »