Breaking News

ಮೈಸೂರಿನಲ್ಲಿ ಶಾಕ್ ನೀಡಿದ ನಕಲಿ ನಂದಿನಿ ತುಪ್ಪ

ಮೈಸೂರು: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪವನ್ನು ತಯಾರಿಸಿ ಮಾರಾಟ ಮಾಡುವುದರೊಂದಿಗೆ ಕೆಎಂಎಫ್ ಗೆ ಕಪ್ಪು ಚುಕ್ಕೆ ನೀಡಿದ್ದಲ್ಲದೆ, ಕೋಟ್ಯಂತರ ರೂ. ಅಕ್ರಮ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ. ಎಪಿಎಂಸಿ ಬಳಿಯ ಹೊಸಹುಂಡಿ ಗ್ರಾಮದಲ್ಲಿದ್ದ ನಕಲಿ ನಂದಿನಿ ತುಪ್ಪ ತಯಾರಿಕಾ ಗೋದಾಮು ಪತ್ತೆಯಾಗಿದ್ದು, ಈ ನಕಲಿ ತುಪ್ಪದ ಸೃಷ್ಟಿಕರ್ತ ಯಾರು ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ.   ವಿಷಯ ತಿಳಿದು ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್ ನೇತೃತ್ವದಲ್ಲಿ ದಾಳಿ ಮಾಡಿದಾಗ …

Read More »

ಭಿಕ್ಷಾಟನೆ ಮುಕ್ತ ಕರ್ನಾಟಕ ಮಾಡಲು ಕ್ರಮ : ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು : ಕರ್ನಾಟಕ ವನ್ನು ಭಿಕ್ಷಾಟನೆ ಮುಕ್ತ ಮಾಡಲು ಮುಂದಿನ ವಾರ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯ ಕೆ.ಗೋವಿಂದರಾಜು ಅವರ ಪ್ರಶ್ನೆ ಕೇಳಿ, 2021ರಲ್ಲಿ ಆರು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಣೆ ಮಾಡಲಾಗಿದೆ.   ಬೆಂಗಳೂರಿನಲ್ಲಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿ ಮಕ್ಕಳನ್ನು ರಕ್ಷಿಸಲಾಗಿದೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಬಿಬಿಎಂಪಿ 280 ಕೋಟಿ ಸೇರಿ ಸುಮಾರು 400 …

Read More »

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಗುಡ್ ನ್ಯೂಸ್’ : ‘ಮೊಟ್ಟೆ’ ತಿನ್ನದ ಮಕ್ಕಳಿಗೆ ಸಿಗುತ್ತೆ ಹಾಲು ..!

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.   ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ …

Read More »

ಬೆಳಗಾವಿಯಲ್ಲಿ ಮತ್ತೆ `MES’ ಪುಂಡಾಟ : ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ!

ಬೆಳಗಾವಿ : ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಆರೋಪ ಕೇಳಿಬಂದಿತ್ತು. ಈ ಘಟನೆ ಖಂಡಿಸಿ ಹಿಂದೂಪರ ಸಂಘಟನೆಳು ಪ್ರತಿಭಟನೆ ನಡೆಸಿದ್ದು. ಈ ವೇಳೆ ಎಂಇಎಸ್ ಪುಂಡಾಟ ನಡೆಸಿದ್ದು, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.     ಬೆಂಗಳೂರಿನ ಶಿವಾಜಿನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳು …

Read More »

BPL’ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆಯಿಂದ ಬಿಗ್ ಶಾಕ್!

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ರಾಜ್ಯದ ಜನರಿಗೆ ಉಚಿತ ಆಹಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬಿಪಿಎಲ್ ಪಡಿತರ ಚೀಟಿ( BPL Ration Card ) ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಈ ಕಾರ್ಡಗಳಿಗಾಗಿ ಹೊಸದಾಗಿ ಅರ್ಜಿಯನ್ನು ಅನೇಕ ಅರ್ಹ ಫಲಾನುಭವಿ ಕುಟುಂಬಗಳಿಂದ ಸಲ್ಲಿಸಲಾಗಿದೆ. ಆದ್ರೇ ರಾಜ್ಯ ಸರ್ಕಾರ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ಆರ್ಥಿಕ ಸಬಲರು ವಾಪಸ್ ಕೊಟ್ಟ ನಂತರವಷ್ಟೇ ಹೊಸ ಅರ್ಜಿದಾರರಿಗೆ ಕಾರ್ಡ್ ವಿತರಿಸಲು ನಿರ್ಧರಿಸಿದೆ ಎನ್ನಲಾಗಿದೆ.   …

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಳಗಾವಿ : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಿಯು ಕಾಲೇಜು ಉಪನ್ಯಾಸಕರ ವರ್ಗಾವಣೆಗೆ ಅವಕಾಶ ಕಲ್ಪಿಸವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ 2021 ಅನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.   ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿದ್ದುಪಡಿ ವಿಧೇಯಕ ಮಂಡಿಸಿದ್ದು, ವಿಧೇಯಕದಲ್ಲಿ ಪ್ರತಿ ವರ್ಷ ಶೇ. 10 ರಷ್ಟು ಪ್ರಮಾಣ …

Read More »

ಬೆಳಗಾವಿಯಲ್ಲಿ ರಾತ್ರಿ ಕಲ್ಲು ತೂರಾಟ: 20ಕ್ಕೂ ಹೆಚ್ಚುವಾಹನಗಳ ಗಾಜು ಪುಡಿ ಪುಡಿ

ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು, 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿದೆ. ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಅವಮಾನ ಮಾಡಲಾಗಿದೆ ಎನ್ನುವ ಸುದ್ದಿಯಿಂದ ಸಾವಿರಾರು ಹಿಂದೂ ಕಾರ್ಯಕರ್ತರು ದಿಢೀರ್ ಸಂಭಾಜಿ ವೃತ್ತದ ಬಳಿ ಜಮಾಯಿಸಿದರು. ಸುದ್ದಿ ತಿಳಿದ ತಕ್ಷಣ ಪೊಲೀಸರೂ ಆಗಮಿಸಿ ಪ್ರತಿಭಟನೆ ಆಯೋಜಿಸಿದವರನ್ನು ಸಮಾಧಾನಪಡಿಸಲು ಯತ್ನಿಸಿದರು.

Read More »

ಮಧ್ಯರಾತ್ರಿ ದುಷ್ಕರ್ಮಿಗಳು ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ.

ಇಲ್ಲಿಯ ಆನಗೋಳದಲ್ಲಿ ಇಡಲಾಗಿದ್ದ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಇದರಿಂದಾ ಆಕ್ರೋಶಗೊಂಡ ರಾಯಣ್ಣ ಅಭಿಮಾನಿಗಳು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ರಾತ್ರಿ 2.30ರ ಹೊತ್ತಿಗೆ ಬಂದ ನಾಲ್ವರು ದುಷ್ಕರ್ಮಿಗಳು ಮೂರ್ತಿಯ ಡಾಲ್ ಮುರಿದಿದ್ದು, ಖಡ್ಗವನ್ನೂ ಕಿತ್ತು ಹಾಕಿದ್ದಾರೆ. ರಾಯಣ್ಣ ಮುಖದ ಮೇಲೆಲ್ಲ ರಾಡ್ ನಿಂತ ಡ್ಯಾಮೇಜ್ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ ಅಲ್ಲಿಯ ಜನ ಸೇರತೊಡಗಿದರು. ಈಗ ಅಲ್ಲಿನ ಯುವಕರು ಟಿಳಕವಾಡಿ ಪೊಲೀಸ್ …

Read More »

ರೇಪ್ ಆದಾಗ ತಡೆಯಲು ಸಾಧ್ಯವಾಗದಿದ್ರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದರಮೇಶ್ ಕುಮಾರ್ ಇಂದು ಸದನದಲ್ಲಿ ಹೇಳಿದ್ದೇನು?

ಬೆಳಗಾವಿ: ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ (KR Ramesh Kumar) ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್‌ ಕುಮಾರ್ (KR Ramesh Kumar) ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಅತಿವೃಷ್ಟಿ ಬಗ್ಗೆ ಸದನದಲ್ಲಿ ನಿಯಮ 69ರಡಿ ಚರ್ಚೆ ನಡೆಯುತ್ತಿದ್ದ ವೇಳೆ, ಅತ್ಯಾಚಾರ ಆದಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ರಮೇಶ್ ಕುಮಾರ್‌ (KR Ramesh …

Read More »

ಭೂಕಬಳಿಕೆ ಪ್ರಕರಣ: ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ;

ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಡಿಕಾರಿದ್ಧಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಮಾದಪ್ಪ ಎನ್ನುವವರು ಐವರ ಮೇಲೆ ಕೇಸ್ ಹಾಕಿದ್ದಾರೆ. ಸಚಿವ ಭೈರತಿ, ಎಮ್​ಎಲ್​ಸಿ …

Read More »