Breaking News

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸುತ್ತಿರುವುದು. 

ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …

Read More »

ಮನೆಯಲ್ಲಿ ನಿಗೂಢ ಸ್ಫೋಟ; ಪತಿ-ಪತ್ನಿ ಗಂಭೀರ ಮಧ್ಯರಾತ್ರಿ ಮನೆಯಲ್ಲಿ ಏಕಾಏಕಿ ಸ್ಫೋಟ

ಬೆಂಗಳೂರು: ಮಧ್ಯರಾತ್ರಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದು, ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ.   ಎರಡು ಅಂತಸ್ತಿನ ಮೊದಲನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ವೃದ್ಧ ದಂಪತಿಗಳಾದ ಸೂರ್ಯನಾರಾಯಣ ಶೆಟ್ಟಿ ಹಾಗೂ ಪತ್ನಿ ಪುಷ್ಪಾವತಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.   ಇನ್ನು ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು ಐದಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ …

Read More »

ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸುತ್ತಿರುವುದು.

ಗೋಕಾಕ ;- ವಿದ್ಯಾರ್ಥಿಗಳು ನಿರ್ಧಿಷ್ಠ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ ಎಂದು ಮೂಡಲಗಿ ತಾಲೂಕಿನ ತಹಶೀಲ್ದಾರ ಡಿ.ಜಿ. ಮಹಾಂತ ಅವರು ಹೇಳಿದರು. ರವಿವಾರದಂದು ನಗರದ ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಶಾಸಕ ಹಾಗೂ ಟ್ರಸ್ಟಿನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಆಯೋಜಿಸಿದ್ದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಸತ್ಕಾರ …

Read More »

ಸ್ವಾತಂತ್ರ್ಯಕ್ಕೆ ಬೆಳ್ತಂಗಡಿಗೆ ಒಲಿದು ಬಂತು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅವಾರ್ಡ್..!

ಬೆಳ್ತಂಗಡಿ : 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ 5000 ಕ್ಕೂ ಮಿಕ್ಕಿ ಮಂದಿ ಸ್ಪರ್ಧಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ನೆಲೆಯಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನ ಪ್ರಶಸ್ತಿಯನ್ನು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಏಷ್ಯಾ ಮುಖ್ಯಸ್ಥರಾದ, ಡಾ. ಮನೀಶ್ ವೈಷ್ಣವ್, ಅವರು ಶಾಸಕ ಹರೀಶ್ ಪೂಂಜ ಅವರಿಗೆ 75 ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯ ಸಂದರ್ಭದಲ್ಲಿ( …

Read More »

ಏಳನೇ ಬಾರಿಗೆ ವಿಶ್ಚದಾಖಲೆ ಬರೆದ ಬಾಲಕಿ; ಗೋಲ್ಡನ್ ಗರ್ಲ್ ಕಿರೀಟ ಮುಡಿಗೇರಿಸಿ ಸಾಧನೆ!

ಉಡುಪಿ: ಈಕೆ 12 ವರ್ಷದ ಬಾಲಕಿ. ಈಕೆಯ ಸಾಧನೆ ಕಂಡು ಜಗತ್ತೆ ನಿಬ್ಬೆರಗಾಗಿದೆ. ಈಗಾಗಲೇ ಆರು ವಿಶ್ವದಾಖಲೆ ಮಾಡಿರುವ ಈಕೆಯ ಏಳನೆ ವಿಶ್ವದಾಖಲೆಯನ್ನ ಯಾರೂ ಮುರಿಯಲು ಅಸಾಧ್ಯವೆಂಬಂತೆ‌ ಸಾಧಿಸಿ ತೋರಿಸಿದ್ದಾಳೆ. ಸ್ವತಃ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರೇ ಮೂಖವಿಸ್ಮಿತರಾಗಿ ಗೋಲ್ಡನ್ ಗರ್ಲ್ ಗರಿಯನ್ನ ಈಕೆ ಮುಡಿಗೇರಿಸಿದ್ದಾರೆ. ಉಡುಪಿಯ ಯೋಗಸಾಧಕಿ, ಪುಟ್ಟ ಹೆಣ್ಣು ಮಗಳು ಜಗತ್ತೇ ಬೆರಗುಗಣ್ಣಿನಿಂದ ನೋಡುವಂತಹ ಸಾಧನೆ ಮಾಡಿದ್ದಾಳೆ. ದೇಹದೊಳಗೆ ಮೂಳೆಯೇ ಇಲ್ಲದವಳಂತೆ ಲೀಲಾಜಾಲವಾಗಿ ತಿರುಗುವ ಈಕೆ, …

Read More »

ಹಳ್ಳಿಯ ಗ್ರಾಮಸ್ಥರಲ್ಲಿ ಟ್ರ್ಯಾಕ್ಟರ್ ಸ್ಪರ್ಧೆ ಕ್ರೇಜ್ -ಎಂಜಿನ್ ಹಾರಿದರೂ ನಿಲ್ಲೋದಿಲ್ಲ ಚಾಲನೆ!

ಬಾಗಲಕೋಟೆ: ಪಂಚಮಿ ಹಬ್ಬ ಕಳೆದು ಮೂರು ನಾಲ್ಕು ದಿನವಾದ್ರು, ನಾಗದೇವತೆಗೆ ಹಾಲೆರೆಯುವ ಕಾರ್ಯ ಮಾತ್ರ ಮುಕ್ತಾಯವಾಗಿಲ್ಲ. ರಾಜ್ಯದ ಗ್ರಾಮೀಣ ಭಾಗದಲ್ಲಿ ಪಂಚಮಿ ಅಂದ್ರೆ ಹಬ್ಬದ ಮತ್ತೊಂದು ಮುಖ. ವರ್ಷಕ್ಕೊಮ್ಮೆ ಬರುವ ಪಂಚಮಿ ಹಬ್ಬದ ಪ್ರಯುಕ್ತ ವಿವಿಧ ಗ್ರಾಮೀಣ ಕ್ರೀಡೆಗಳು ನಡೆಯುತ್ತಿವೆ. ಆದ್ರೆ ಅದೊಂದು ಹಳ್ಳಿಯ ಟ್ರ್ಯಾಕ್ಟರ್ ಸಾಹಸ ಕ್ರೀಡೆ ಮಾತ್ರ ಎಲ್ಲರ ಗಮನ ಸೆಳೆಯಿತು.     ಕೊರೊನಾ ನಿಯಮಕ್ಕೆ ಬ್ರೇಕ್​.. ಟ್ರ್ಯಾಕ್ಟರ್ ಎಕ್ಷಲರೇಟ್ ರೈಜ್ ಟ್ರ್ಯಾಕ್ಟರ್ ಎಂಜಿನ್​ಗೆ ಮೂರು …

Read More »

ಪ್ರಧಾನಿ ನರೇಂದ್ರ ಮೋದಿ ಭಾಷಣ ಟೊಳ್ಳು: ‍ಪ್ರತಿಪಕ್ಷಗಳ ಟೀಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವನ್ನು ‘ವಾಕ್ಚಾತುರ್ಯ ಮತ್ತು ಖಾಲಿ ಘೋಷಣೆ’ಗಳಿಂದ ಕೂಡಿದೆ ಎಂದಿರುವ ಪ್ರತಿಪಕ್ಷಗಳು, ಎಂಟು ವರ್ಷಗಳಿಂದ ಅದೇ ಭಾಷಣ ಮಾಡುತ್ತಿದ್ದಾರೆ ಎಂದು ಟೀಕಿಸಿವೆ. ಘೋಷಿಸಲಾಗಿರುವ ಅಂಶಗಳು ಜಾರಿಗೆ ತರುವಂತಹವುಗಳಲ್ಲ ಎಂದು ಅಭಿಪ್ರಾಯಪಟ್ಟಿವೆ. ‘ಪ್ರಧಾನಿ ಅಧಿಕಾರ ಸ್ವೀಕರಿಸಿದ ನಂತರ ದೇಶವು ‘ಅದೇ ಭಾಷಣಗಳನ್ನು’ ಕೇಳುತ್ತಿದೆ. ಆದರೆ ರೈತರು ಸೇರಿದಂತೆ ಅನ್ಯಾಯಕ್ಕೊಳಗಾದವರಿಗೆ ಯಾವುದೇ ಪರಿಹಾರಗಳನ್ನು ನೀಡುತ್ತಿಲ್ಲ’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ. …

Read More »

ಮಾನವೀಯ ಮೌಲ್ಯ ಮರುಸ್ಥಾಪನೆಯೇ ಅಭಿವೃದ್ಧಿಯ ಹಾದಿ!

ಕಳೆದ 75 ವರ್ಷಗಳನ್ನು ಗಮನಿಸಿದರೆ ಪರಿವರ್ತನೆಗಳು ನಿಧಾನವಾಗಿ ಆರಂಭವಾಗಿ ಈಚೆಗಿನ ದಶಕಗಳಲ್ಲಿ ತೀವ್ರಗತಿ ಪಡೆದಿವೆ. ಬದಲಾವಣೆ ಮುಂದಿನ ದಶಕಗಳಲ್ಲಿ ಇನ್ನೂ ವೇಗವನ್ನು ಗಳಿಸಲಿದೆ ಎನ್ನುವುದು ಶತಸ್ಸಿದ್ಧ. ಸ್ವಾತಂತ್ರ್ಯದ ಶತಮಾನೋತ್ಸವ ಸಮಯಕ್ಕೆ ಭಾರತ ಹೇಗಿರಬೇಕು ಎಂಬ ಹೊಂಗನಸು ಕಾಣುವ ಲೇಖನ ಸರಣಿ ಇದು. ಅಧಿಕಾರ ಮತ್ತು ಶ್ರೀಮಂತಿಕೆಯನ್ನು ಪೂಜಿಸುವ ಸಮಾಜವನ್ನು ನಾವಿಂದು ಕಾಣುತ್ತಿದ್ದೇವೆ. ಇಂದರಿಂದ ಭ್ರಷ್ಟರು ಮತ್ತು ಭ್ರಷ್ಟ ವ್ಯವಸ್ಥೆಗೆ ಗೌರವ ಹೆಚ್ಚಾಗುತ್ತಿದೆ. ಭ್ರಷ್ಟರನ್ನು ಬಹಿಷ್ಕರಿಸಿ, ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಾಣ …

Read More »

ವಿರಕ್ತಮಠದ ಪೀಠಾಧಿಕಾರಿಗಳಾಗಿದ್ದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ವಿಜಯಪುರ: ಸಿಂದಗಿ ಪಟ್ಟಣದ ವಿರಕ್ತಮಠದ ಪೀಠಾಧಿಕಾರಿಗಳಾಗಿದ್ದ ಸಿದ್ದಲಿಂಗ ಸ್ವಾಮೀಜಿ (58) ಭಾನುವಾರ ಬೆಳಿಗ್ಗೆ ಲಿಂಗ್ಯೆಕ್ಯರಾದರು. ಸುದೀರ್ಘ ಪರಂಪರೆ ಹೊಂದಿದ ವಿರಕ್ತಮಠದ 18 ನೇ ಪೀಠಾಧಿಕಾರಿಗಳಾಗಿದ್ದರು. 1985 ರಲ್ಲಿ ಶ್ರೀಗಳ ಪಟ್ಟಾಧಿಕಾರ ಅದ್ದೂರಿಯಾಗಿ ನಡೆದಿತ್ತು. ತಪಸ್ವಿಗಳು, ಮಾತೃಹೃದಯಿಗಳಾಗಿದ್ದರು. ಈ ಭಾಗದಲ್ಲಿ ಅಪಾರ ಭಕ್ತರು ಶ್ರೀಮಠದ ಶಿಷ್ಯರಾಗಿದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಭಾನುವಾರ ಸಂಜೆ ಶ್ರೀಮಠದ ಆವರಣದಲ್ಲಿ ವಿರಕ್ತ ಸಂಪ್ರದಾಯದಂತೆ ನೆರವೇರಲಿದೆ.

Read More »

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ : ದೇಶಾದ್ಯಂತ ನಡೆಯಲಿದೆ ಯಾತ್ರೆ

ಬೆಂಗಳೂರು: ರಾಷ್ಟ್ರಾದ್ಯಂತ ಕೇಂದ್ರದ ನೂತನ ಸಚಿವರಿಂದ ಜನಾಶೀರ್ವಾದ ಯಾತ್ರೆಗೆ ಸೋಮವಾರ ಚಾಲನೆ ದೊರೆಯಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌, ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) …

Read More »