Breaking News

ಐ.ಸಿ.ಯುನಲ್ಲಿದ್ದ ರೋಗಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ… ಬೆಳಗಾವಿ ಬಿಮ್ಸ್’ನಲ್ಲಿ ಮಹಿಳೆ ಸಾವು!!!?

ಐ.ಸಿ.ಯುನಲ್ಲಿದ್ದ ರೋಗಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ… ಬೆಳಗಾವಿ ಬಿಮ್ಸ್’ನಲ್ಲಿ ಮಹಿಳೆ ಸಾವು!!!? ತುರ್ತು ಪರಿಸ್ಥಿತಿಯ ವೇಳೆ ಚಿಕಿತ್ಸೆ ನೀಡಲು ವೈದ್ಯರು ನರ್ಸಗಳಿಲ್ಲದ ಹಿನ್ನೆಲೆ ಮಹಿಳಾ ರೋಗಿಯೊಬ್ಬರು ತಡರಾತ್ರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿಯ ವಿಶ್ವೇಶ್ವರಯ್ಯಾ ನಗರ, ಸಂಪಿಗೆ ರಸ್ತೆಯ ರಹಿವಾಸಿ ಪ್ರಭಾವತಿ ವಿಷ್ಣು ಮೀರಜ್’ಕರ ಅವರನ್ನು ಮೇ 19 ರಂದು ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿರಿಸಲಾಗಿತ್ತು. ಆದರೇ, ಮಂಗಳವಾರ …

Read More »

ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಂದು ತಾಕೀತು ನೀಡಿದ್ರೂ ಡೋಂಟ್ ಕೇರ್

ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಂದು ತಾಕೀತು ನೀಡಿದ್ರೂ ಡೋಂಟ್ ಕೇರ್ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಂಗಳ ತಲುಪಿದ ಬಾಗಲಕೋಟೆ ಬಿಜೆಪಿ ಬಣ ಬಡಿದಾಟ..!!! ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಂದು ತಾಕೀತು ನೀಡಿದ್ರೂ ಡೋಂಟ್ ಕೇರ್ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಂಗಳ ತಲುಪಿದ ಬಾಗಲಕೋಟೆ ಬಿಜೆಪಿ ಬಣ ಬಡಿದಾಟ..!!! ನಾನಾ… ನೀನಾ.. ಅಂತಿರೋ ಇಬ್ಬರು ನಾಯಕರ ಮಧ್ಯೆ ತಾರಕಕ್ಕೇರಿದ ಮುಸುಕಿನ ಗುದ್ದಾಟ ಪರಸ್ಪರ ದೂರಿನ ಬೆನ್ನಲ್ಲೆ ಬಾಗಲಕೋಟೆ ಜಿಲ್ಲಾಧ್ಯಕ್ಷರಿಗೆ …

Read More »

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ ಗುರುವಾರ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಸರಣಿ ರಸ್ತೆ ಅಪಘಾತದಲ್ಲಿ 6 ಜನರು ಮೃತರಾಗಿದ್ದಾರೆ. ಡಿವೈಡರ್ ಗೆ ಡಿಕ್ಕಿಯಾದ ಸ್ಕಾರ್ಪಿಯೋ ಖಾಸಗಿ‌ ಬಸ್ ಹಾಗೂ ಲಾರಿಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲಿಯೇ ಮೃತರಾಗಿದ್ದು ಅದೃಷ್ಟವಶಾತ್ 10 ವರ್ಷದ ಬಾಲಕ ಸಾವಿನಿಂದ ಪಾರಾಗಿದ್ದಾನೆ.‌ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ಜಿಲ್ಲೆಯ ಬಸವನ …

Read More »

ವಿನೂತನ ಸಂಚಾರಿ ಆರೋಗ್ಯ ವಾಹನಗಳಿಗೆ ಸಚಿವ ಎಂ.ಬಿ.ಪಾಟೀಲ ಚಾಲನೆ: ಶೀಘ್ರದಲ್ಲೇ ಇನ್ನೊಂದು ವಾಹನ ಲೋಕಾರ್ಪಣೆ

ವಿನೂತನ ಸಂಚಾರಿ ಆರೋಗ್ಯ ವಾಹನಗಳಿಗೆ ಸಚಿವ ಎಂ.ಬಿ.ಪಾಟೀಲ ಚಾಲನೆ: ಶೀಘ್ರದಲ್ಲೇ ಇನ್ನೊಂದು ವಾಹನ ಲೋಕಾರ್ಪಣೆ ಕಾರ್ಮಿಕರ ಆರೋಗ್ಯ ಸೇವೆಗಾಗಿ, ಅವರಿರುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರವು ವಿನೂತನ ಸಂಚಾರಿ ಆರೋಗ್ಯ ಘಟಕವು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಎರಡು ವಾಹನಗಳಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹಸಿರು ನಿಶಾನೆ ತೋರಿಸಿ ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ವಿಜಯಪುರ ಜಿಲ್ಲೆಗೆ ಮೂರು …

Read More »

ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್

ಬೆಂಗಳೂರು: ಮಹಿಳೆಯನ್ನ ವಿವಸ್ತ್ರಗೊಳಿಸಿ ಸಹಚರರಿಂದ ಆತ್ಯಾಚಾರ ಮಾಡಿಸಿದ್ದಾರೆ ಎಂಬ ಆರೋಪದಡಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆಯು ನೀಡಿದ ದೂರು ಆಧರಿಸಿ ಶಾಸಕ ಮುನಿರತ್ನ, ಸಹಚರರಾದ ವಸಂತ, ಚನ್ನಕೇಶವ ಹಾಗೂ ಕಮಲ್ ಎಂಬುವರ ವಿರುದ್ಧ ಅತ್ಯಾಚಾರ ಆರೋಪದಡಿ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?: ”40 ವರ್ಷದ ಸಂತ್ರಸ್ತೆಯಾದ ತಾನು ಪೀಣ್ಯ 2ನೇ ಹಂತದ ನಿವಾಸಿಯಾಗಿದ್ದು, …

Read More »

ಜಗತ್ತಿನ ಮುಂದೆ ಪಾಕ್​ನ ಬಂಡವಾಳ ಬಯಲು ಮಾಡಲು ಇಂದಿನಿಂದ ಸಂಸದರ ವಿದೇಶ ಯಾತ್ರೆ ಶುರು

ನವದೆಹಲಿ, ಮೇ 21: ಜಗತ್ತಿನ ಮುಂದೆ ಪಾಕಿಸ್ತಾನ(Pakistan)ದ ಬಂಡವಾಳ ಬಯಲು ಮಾಡಲು ಕೇಂದ್ರ ಸರ್ಕಾರವು 59 ಸದಸ್ಯರ ನಿಯೋಗವನ್ನು ಇಂದು ಪ್ರಪಂಚದಾದ್ಯಂತ ಕಳುಹಿಸಲಿದೆ. ಸರ್ವಪಕ್ಷ ಸಂಸದರ 7 ನಿಯೋಗಗಳನ್ನು ರಚಿಸಲಾಗಿದೆ. ಇದರಲ್ಲಿ 10 ಮುಸ್ಲಿಂ ನಾಯಕರನ್ನು ಸಹ ಇರಿಸಲಾಗದೆ. ನಿಯೋಗದಲ್ಲಿ 51 ನಾಯಕರು ಮತ್ತು 8 ರಾಯಭಾರಿಗಳು ಸೇರಿದ್ದಾರೆ. ಎನ್‌ಡಿಎ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಅದರಲ್ಲಿ ಸ್ಥಾನ ಪಡೆದಿದ್ದಾರೆ. ಭಾರತೀಯ ನಿಯೋಗ ಬುಧವಾರ (ಮೇ 21) ಹೊರಡಲಿದೆ. …

Read More »

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರ ನಡೆಯಲು ಕಾರಣ ಅಕ್ಷಯ್ ಕುಮಾರ್?

‘ಹೇರಾ ಫೇರಿ’ ಹಾಗೂ ‘ಫಿರ್ ಹೇರಾ ಫೇರಿ’ ಚಿತ್ರದಲ್ಲಿ ಅಕ್ಷಯ್ ಕುಮಾರ್ (Akshay Kumar), ಸುನೀಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ಅವರು ಬಹುವಾಗಿ ನಗಿಸಿದ್ದರು. ಅದರಲ್ಲೂ ಬಾಬು ಭಯ್ಯಾ ಪಾತ್ರದ ಮೂಲಕ ಪರೇಶ್ ರಾವಲ್ ಅವರು ಎಲ್ಲರ ಮೆಚ್ಚುಗೆ ಪಡೆದರು. ಆದರೆ, ಈಗ ‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರ ನಡೆದಿದ್ದಾರೆ. ಈ ಬೆನ್ನಲ್ಲೇ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಅಕ್ಷಯ್ ಕುಮಾರ್ ಅವರು ಪರೇಶ್ ರಾವಲ್​ಗೆ ನೋಟಿಸ್ ಕಳುಹಿಸಿದ್ದು, 25 …

Read More »

ವಧುವಿನ ಕೊಠಡಿಗೆ ನುಗ್ಗಿ 3.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!:ವಾರಸುದಾರರಿಗೆ ಚಿನ್ನಾಭರಣವನ್ನು ವಾಪಸ್ ನೀಡಿದ ಪೊಲೀಸರು

ನೆಲಮಂಗಲ: ಮದುವೆ ಕಾರ್ಯದಲ್ಲಿ ಎಲ್ಲರೂ ಬ್ಯೂಸಿ ಇದ್ದ ಸಮಯದಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ಕಳ್ಳನೊಬ್ಬ, ನಕಲಿ ಕೀ ಬಳಿಸಿ ವಧುವಿನ ಕೊಠಡಿ ಪ್ರವೇಶಿಸಿದ್ದಲ್ಲದೇ ಸೂಟ್ ಕೇಸ್​ನಲ್ಲಿ ಇಡಲಾಗಿದ್ದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ. ಅರೋಪಿಯನ್ನು ಬಂಧಿಸಿರುವ ನೆಲಮಂಗಲ ಟೌನ್ ಪೊಲೀಸರು, ಚಿನ್ನಾಭರಣವನ್ನ ವಾರಸುದಾರರಿಗೆ ವಾಪಸ್ ನೀಡಿದ್ದಾರೆ. ಬಂಧಿತ ಆರೋಪಿ ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಎಂದು ಗುರುತಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು …

Read More »

ಭಾರಿ ಮಳೆಗೆ ಉಡುಪಿ ತತ್ತರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಗೆ, ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್​ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದ್ದು, ಇದರಿಂದಾಗಿ ಕಲ್ಲು ಮಿಶ್ರಿತ ನೀರು ರಸ್ತೆಯಲ್ಲಿ ಪ್ರವಾಹದಂತೆ ಹರಿದಿದೆ. ಹಲವು ವಾಹನಗಳಿಗೆ ಹಾನಿಯಾಗಿದ್ದಲ್ಲದೇ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ. …

Read More »

ಮರಣೋತ್ತರ ಪರೀಕ್ಷೆಯ ವರದಿಗೆ ಲಂಚ: ಸಿಕ್ಕಿಬಿದ್ದ ಶಿಕಾರಿಪುರ ತಾಲೂಕು ಆಸ್ಪತ್ರೆ ವೈದ್ಯ

ಶಿವಮೊಗ್ಗ: ಮರಣೋತ್ತರ ಪರೀಕ್ಷೆಯ ವರದಿ ನೀಡಲು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟು 10 ಸಾವಿರ ರೂ ಪಡೆಯುವಾಗ ಶಿಕಾರಿಪುರ ತಾಲೂಕು ಆಸ್ಪತ್ರೆಯ ವೈದ್ಯ ಡಾ.ಗೋಪಾಲ್ ಜಿ.ಹರಿಗಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ವಿವರ: ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ಗ್ರಾಮದ ಸುನೀಲ್ ಎಂಬವರು ಮರಣೋತ್ತರ ಪರೀಕ್ಷೆ ವರದಿ ನೀಡಲು ಹಣದ ಬೇಡಿಕೆ ಇಟ್ಟಿರುವ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ …

Read More »