Breaking News

ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ

ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಮೊತ್ತದ ಹಣ, ಚಿನ್ನ ಹಾಗೂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಮಹಾಮಾರಿ ಕೋವಿಡ್ ಸೋಂಕಿನ ಕಾರಣದಿಂದ 1 ವರ್ಷ 8 ತಿಂಗಳು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಬಂದ್ ಆಗಿತ್ತು. ಸೆಪ್ಟೆಂಬರ್ 28ರಂದು ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತಗೊಳಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. …

Read More »

ಮತದಾನ ಮಾಡುವ ವಿಧಾನ ಹಾಗೂ ಮತ ತಿರಸ್ಕೃತವಾಗಲು ಕಾರ

ಬೆಳಗಾವಿ – ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಮತದಾನ ಮಾಡುವ ವಿಧಾನ ಸಾಮಾನ್ಯ ಚುನಾವಣೆಗಿಂತ ಭಿನ್ನವಾಗಿದೆ. ಇಲ್ಲಿ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಲಿದೆ.     ಮತದಾನದ ವಿಧಾನ 1. ಮತ ಚಲಾಯಿಸುವ ಉದ್ದೇಶಕ್ಕಾಗಿ ಚುನಾವಣಾಧಿಕಾರಿಯು ಮತಪತ್ರದೊಡನೆ ನಿಮಗೆ ನೀಡುವ ನೇರಳೆ ಬಣ್ಣದ ಸೈಟ್ ಪೆನ್ನನ್ನು ಮಾತ್ರ ಬಳಸಿ ಮತ ಚಲಾಯಿಸಿ, ಬೇರೆ ಯಾವುದೇ, ಪೆನ್ನು ಪೆನ್ಸಿಲ್ಲು, …

Read More »

ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ

ಬೆಳಗಾವಿ : ಕರ್ನಾಟಕ ವಿಧಾನಪರಿಷತ್ ಚುನಾವಣೆ-2021 ಅಂಗವಾಗಿ ಡಿಸೆಂಬರ್ 10, 2021ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 9 ಹಾಗೂ 10 ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಣಾವಲು ಸಮಿತಿಯ (ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆರ್.ವೆಂಕಟೇಶಕುಮಾರ್ ಅವರು ತಿಳಿಸಿದ್ದಾರೆ. ಡಿಸೆಂಬರ್ …

Read More »

ಕೊವಿಡ್ ರೂಲ್ಸ್ ಉಲ್ಲಂಘಿಸಿ ಬಿಜೆಪಿ ಪ್ರಚಾರ ಸಭೆ; ದೈಹಿಕ ಅಂತರ, ಮಾಸ್ಕ್ ಮರೆತ ಸಚಿವ

ಕೊಪ್ಪಳ: ಕಳೆದ ಎರಡು ವರ್ಷ ಕೊರೊನಾ ಆಂತಕದಲ್ಲೇ ಕಾಲ ಕಳೆದಿದ್ದ ರಾಜ್ಯದ ಜನತೆ ಇತ್ತೀಚೆಗೆ ಕೊಂಚ ನೆಮ್ಮದಿಯಿಂದಿದ್ದರು. ಕೆಲಸ, ವ್ಯಾಪಾರ, ಶಾಲೆ ಅಂತಾ ಬ್ಯುಸಿಯಾಗ್ತಿದ್ರು.ಆದ್ರೀಗ, ಮತ್ತದ್ದೇ ಆತಂಕ, ಮತ್ತದ್ದೇ ಭಯ ಶುರುವಾಗಿದೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆ ವಿಧಾನ ಪರಿಷತ್ ಚುನಾವಣೆ ಕೂಡ ಎದುರಾಗಿದ್ದು ಪ್ರಚಾರದ ಭರದಲ್ಲಿ ರಾಜಕೀಯ ವ್ಯಕ್ತಿಗಳೇ ಕೊರೊನಾ ರೂಲ್ಸ್ ಬ್ರೇಕ್ ಮಾಡ್ತಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ವಿಧಾನ ಪರಿಷತ್ …

Read More »

2023ರ ಫೆಬ್ರವರಿಗೆ ತೆರೆ ಕಾಣಲಿದೆ ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ

ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರು ಶಬಾನಾ ಅಜ್ಮಿ ಮತ್ತು ಧರ್ಮೇಂದ್ರ ಅವರೊಂದಿಗೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದ ಚಿತ್ರೀಕರಣದ ಬ್ಯುಸಿಯಲ್ಲಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದು, ತಾರೆಯರ ಚಿತ್ರೀಕರಣದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಚಿತ್ರದ ಸಮಗ್ರ ಪಾತ್ರವರ್ಗದಲ್ಲಿ ಜಯಾ ಬಚ್ಚನ್ ಕೂಡ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ, ಕುತುಬ್ ಮಿನಾರ್‌ನಲ್ಲಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರೀಕರಣದಲ್ಲಿ ತಾರೆಯರು …

Read More »

ಈ 2 ರೂ. ನಾಣ್ಯ ನಿಮ್ಮಲ್ಲಿದ್ದರೆ ಸಾವಿರಾರು ರೂಪಾಯಿ ಜೇಬಿಗಿಳಿಸಬಹುದು

ಮನೆಯಲ್ಲೇ ಕುಳಿತು ಆದಾಯ ಗಳಿಸುವ ವಿಧವೊಂದನ್ನು ಹುಡುಕುವ ಮಂದಿಗೆ ನಾಣ್ಯ ಸಂಗ್ರಹವೂ ದುಡ್ಡು ಮಾಡುವ ಒಳ್ಳೆಯ ಮೂಲ. ಯಾವುದೇ ಪರಿಶ್ರಮ ಇಲ್ಲದೇ ತ್ವರಿತವಾಗಿ ದುಡ್ಡು ಮಾಡಲು ಇದೊಂದು ಒಳ್ಳೆಯ ಮಾರ್ಗ. ಮನೆಯಲ್ಲೇ ಕುಳಿತು ಸಾವಿರಾರು ರೂಪಾಯಿಗಳನ್ನು ಸಂಪಾದಿಸಬಲ್ಲ ಆಯ್ಕೆಯೊಂದರ ಕುರಿತು ನಿಮಗೆ ನಾವು ತಿಳಿಸುತ್ತಿದ್ದೇವೆ. ನಿಮ್ಮ ಬಳಿ 2 ರೂಪಾಯಿ ಮುಖಬೆಲೆಯ ನಾಣ್ಯವಿದ್ದರೆ, ಆನ್ಲೈನ್ ಮೂಲಕ ಸಾವಿರಾರು ರೂಪಾಯಿಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ನಾಣ್ಯವು 1994, 1995, 1997 ಅಥವಾ 2000ನೇ …

Read More »

ಒಮಿಕ್ರಾನ್ ವಿರುದ್ಧ ಹೋರಾಟಕ್ಕೆ ಸಜ್ಜು: ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸಲಹೆ

ಕೊರೊನಾ ವೈರಸ್‌ ಹೊಸ ರೂಪಾಂತರ ಒಮಿಕ್ರಾನ್ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿದೆ. ಒಮಿಕ್ರಾನ್ ಬಗ್ಗೆ ಡಬ್ಲ್ಯುಎಚ್ ಒ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು, ಗೃಹ ವ್ಯವಹಾರಗಳ ಸಚಿವಾಲಯವು ರಾಜ್ಯಗಳಿಗೆ ಸಲಹೆ ಕಳುಹಿಸಿದೆ. ಅಂತರಾಷ್ಟ್ರೀಯ ಪ್ರಯಾಣಿಕರು ಹಾಗೂ ಅವರ ಕಾಂಟೆಕ್ಟ್ ಟ್ರೇಸಿಂಗ್ ಸರಿಯಾದ ರೀತಿಯಲ್ಲಿ ಮಾಡಿ ಎಂದು ಕೇಂದ್ರ ಗೃಹ ಸಚಿವಾಲಯವು ತನ್ನ ಆದೇಶದಲ್ಲಿ ಎಲ್ಲಾ ರಾಜ್ಯಗಳಿಗೆ ಸಲಹೆ ನೀಡಿದೆ. ನವೆಂಬರ್ 25 ರಂದು ಆರೋಗ್ಯ ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆರೋಗ್ಯ …

Read More »

ವಂಚಕನಿ​​ಗೆ ಮುತ್ತಿಟ್ಟ ನಟಿ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ವಂಚಕ ಸುಕೇಶ್​​ ಚಂದ್ರಶೇಖರ್​ ಜೊತೆ ಇರುವ ಮತ್ತೊಂದು ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿರುವ ಈ ಹೊಸ ಫೋಟೋದಲ್ಲಿ ಸುಕೇಶ್​ ಮಿರರ್​ ಸೆಲ್ಫಿ ಕ್ಲಿಕ್ಕಿಸುತ್ತಿದ್ದರೆ ನಟಿ ಜಾಕ್ವೆಲಿನ್​ ಆತನ ಕೆನ್ನೆಗೆ ಮುತ್ತು ನೀಡುತ್ತಿದ್ದಾರೆ.   ಈ ಫೋಟೋದಲ್ಲಿ ಜಾಕ್ವೆಲಿನ್​​ ಸುಕೇಶ್​​​ ಚಂದ್ರಶೇಖರ್​​ನನ್ನು ಬಿಗಿಯಾಗಿ ಹಿಡಿದುಕೊಂಡಿರೋದನ್ನೂ ಕಾಣಬಹುದಾಗಿದೆ. ಜಾಮೀನಿನ ಮೇಲೆ ಸುಕೇಶ್​​ ಹೊರಗಿದ್ದ ಸಂದರ್ಭದಲ್ಲಿ ಈ ವರ್ಷದ ಏಪ್ರಿಲ್​​ – …

Read More »

ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು..!

ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯ ನಂತರ ಶಿವಮೊಗ್ಗದತ್ತ ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಮಲ್ಲೇನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಕಾರ್ಯಕ್ರಮ ಮುಗಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಶಿವಮೊಗ್ಗದತ್ತ ಪ್ರಚಾರಕ್ಕಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೆ ಈಡಾಗಿದೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಳದಲ್ಲಿಯೇ ನಿಂತ …

Read More »

ಮುರಗೋಡ, ರುದ್ರಾಪುರ, ಮರಕುಂಬಿ, ಹಾರೂಗೊಪ್ಪ, ಚಚಡಿ, ಇಂಚಲ, ತಡಸಲೂರ, ಬುದ್ದನೂರ ಭಾಗದಲ್ಲಿ ಮತಯಾಚನೆ

ಸವದತ್ತಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆ ನಿಮಿತ್ತ ಸವದತ್ತಿ ತಾಲೂಕಿನ ವಿವಿಧೆಡೆ ಮತಯಾಚನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ, ಮುರಗೋಡ ಮಹಾಂತ ಅಜ್ಜನವರ ಕೃರ್ತು ಗದ್ದುಗೆ ದರ್ಶನ ಪಡೆದರು.  ಸವದತ್ತಿ ತಾಲೂಕಿನ ಧಾರ್ಮಿಕ ಕ್ಷೇತ್ರವಾದ ಮುರಗೋಡ ಗ್ರಾಮದ ಶ್ರೀ ಮಹಾಂತ ( ದುರದುಂಡೇಶ್ವರ) ಮಠಕ್ಕೆ ತೆರಳಿ ಪವಾಡ ಪುರುಷ, ನಡೆದಾಡುವ ದೇವರೆಂದೇ ಪ್ರಸಿದ್ದರಾಗಿದ್ದ ಶ್ರೀ ಮಹಾಂತ ಅಜ್ಜನವರ ಕೃರ್ತು ಗದ್ದುಗೆಗೆ ನಮನವನ್ನು ಸಲ್ಲಿಸಿದ ಅವರು, ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ನೀಲಕಂಠೇಶ್ವರ ಮಹಾಸ್ವಾಮಿಗಳ ಚರಣ …

Read More »