Breaking News

ಪ್ರತಿಭಟನಾಕಾರರ ಆಕ್ರೋಶಕ್ಕೆ ‘ಮಣಿದ’ ಬಿಬಿಎಂಪಿ: ಬೆಂಗಳೂರಿನಲ್ಲಿ ವಾರ್ಡ್ ಗೆ 1 ಕ್ಕಿಂತ ಹೆಚ್ಚು ಗಣೇಶ ಪ್ರತಿಷ್ಠಾಪನೆಗೆ ಅನುಮತಿ

ಬೆಂಗಳೂರು : ನಾಳೆ ಗಣೇಶ ಚತುರ್ಥಿಗೆ ನಾಡು ಸಜ್ಜಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಬಿಬಿಎಂಪಿ ಸಡಿಲಗೊಳಿಸಿದೆ. ಬೇಡಿಕೆ ಬಂದರೆ ವಾರ್ಡ್ ಗೆ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ.   ಪ್ರತಿಭಟನಾಕಾರರ ಪ್ರತಿಭಟನೆಗೆ ಮಣಿದ ಬಿಬಿಎಂಪಿ ವಾರ್ಡ್ ಗೆ ಒಂದಕ್ಕಿಂತ ಹೆಚ್ಚು ಗಣೇಶ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿದೆ. ಈ ಕುರಿತಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ …

Read More »

ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್

ಗೋಕಾಕ: ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ನಿನ್ನೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್ ಆಗಿದೆ. ಇನ್ನು ಅಧಿವೇಶನ ಬಳಿಕ ಉಳಿದ 4 ಸಚಿವ ಸ್ಥಾನದಲ್ಲಿ ಒಂದು ಮಂತ್ರಿ ಸ್ಥಾನ ರಮೇಶ ಜಾರಕಿಹೊಳಿ ಅವರಿಗೆ ಕೊಡೋದು ಫಿಕ್ಸ್ ಎಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಹಾಯ್ ಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ . ಉಳಿದ ನಾಲ್ಕು ಸಚಿವ ಸ್ಥಾನದಲ್ಲಿ ಒಂದು ರಮೇಶ್ ಜಾರಕಿಹೊಳಿ …

Read More »

ಸೆ.13ರಂದು ಗಜಪಡೆ ಆಗಮನ, ಅ.7ಕ್ಕೆ ದಸರಾ ಉದ್ಘಾಟನೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಪಯಣ ಸೆ.13ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ನಡೆಯಲಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯಲಿದೆ. ಬುಧವಾರ ದಸರಾ ಆಚರಣೆ ಸಂಬಂಧ ಅರಮನೆ ಮಂಡಳಿ ಸಭಾಂಗಣದಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಕೋವಿಡ್‌ ಹಿನ್ನೆಲೆ ಕಳೆದ ಬಾರಿಯಂತೆ ಈ ಬಾರಿಯೂ ಅರಮನೆಗೆ ಸೀಮಿತವಾಗುವಂತೆ …

Read More »

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಸೆ.09. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ …

Read More »

ಅಭಿಮನ್ಯು ಹೆಗಲಿಗೆ ಅಂಬಾರಿ, 157 ವೃತ್ತಗಳಲ್ಲಿ ದೀಪಾಲಂಕಾರ -ಹೇಗಿರಲಿದೆ ಮೈಸೂರು ದಸರಾ..?

‘ಮೈಸೂರು ದಸರಾ’ ಸಂಬಂಧ ಇಂದು ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಏನೆಲ್ಲಾ ತೀರ್ಮಾನ ಮಾಡಲಾಯಿತು ಅನ್ನೋದ್ರ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.     8 ಆನೆಗಳು ಭಾಗಿ ವೀರನಹೊಸಹಳ್ಳಿಯಿಂದ ಎಂಟು ಆನೆ ಕರೆ ತರುತ್ತೇವೆ. ಸೆಪ್ಟೆಂಬರ್ 13 ರಂದು ಬೆಳಗ್ಗೆ 9.30ಕ್ಕೆ ಗಜಪಡೆ ಪೂಜೆ, 16 ರಂದು ಅರಮನೆ ಬಳಿ ಗಜಪಡೆ ಸ್ವಾಗತ ನೀಡಲಾಗುತ್ತದೆ. ಅಕ್ಟೋಬರ್ 16 …

Read More »

ಎಣ್ಣೆಪ್ರಿಯರಿಗೆ ಹೊಡೆತ ಕೊಟ್ಟ ನಿಫಾ ವೈರಸ್​; ಮಂಗಳೂರಲ್ಲಿ 31 ಮದ್ಯದಂಗಡಿ ಬಂದ್

ಬೆಂಗಳೂರು: ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಕಾಟ ಒಂದೆಡೆಯಾದ್ರೆ, ನಿಫಾ ವೈರಸ್​ನ ಭೀತಿ ಮತ್ತೊಂದೆಡೆಯಾಗಿದೆ. ಈ ಸಂಬಂಧ ಕೇರಳದಿಂದ ಕರ್ನಾಟಕಕ್ಕೂ ನಿಫಾ ವೈರಸ್​ನ ಕಂಟಕ ಎದುರಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆರೋಗ್ಯ ಇಲಾಖೆಯು ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ನಿಫಾ ಅಲರ್ಟ್​ ಘೋಷಣೆ ಮಾಡಲಾಗಿದೆ. ಈ ಸಂಬಂಧ ಚಿಕಿತ್ಸೆಗಾಗಿ ಜಿಲ್ಲೆಯ ಆಸ್ಪತ್ರೆಗೆ ಬರುವ ರೋಗಿಗಗಳ ಮೇಲೆ …

Read More »

ಭ್ರಷ್ಟಚಾರ ಕೇಸಲ್ಲಿ ಸಿಕ್ಕಿಬಿದ್ದ ಅಧಿಕಾರಿ; ಎಸಿಬಿಗೆ ಮಾಹಿತಿ ನೀಡ್ತೀರಾ? ಎಂದು ಪಕ್ಕದ ಮನೆಯವ್ರ ಮೇಲೆ ಹಲ್ಲೆ

ದಾವಣಗೆರೆ: ಎಸಿಬಿ ದಾಳಿಗೆ ಮಾಹಿತಿ‌ ನೀಡಿದ್ದಾರೆ ಎಂಬ ಆರೋಪ ಮಾಡಿ ಸರ್ಕಾರ ಅಧಿಕಾರಿ ಹಾಗೂ ಸಂಬಂಧಿಕರು ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ನಗರಸಭೆಯ ಯೋಜನಾ ನಿರ್ದೇಶಕ ಎಚ್.ಕೆ.ಕೃಷ್ಣಪ್ಪ ಹಾಗೂ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಅಂತ ಇದೇ ಗ್ರಾಮದ ಎಚ್.ಜೆ.ಗಣೇಶ ಅವರ ಕುಟುಂಬಸ್ಥರಯ ಆರೋಪ ಮಾಡಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

Read More »

ಅರ್ಕಾವತಿ ಹಗರಣ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​​

ಬೆಂಗಳೂರು: ಅರ್ಕಾವತಿ ಲೇಔಟ್ ಭೂ ಅವ್ಯವಹಾರ ಹಗರಣ ಕೇಸ್​ಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾ. ಸಚಿನ್​ ಶಂಕರ್​ ಮಗದುಮ್ ನೇತೃತ್ವದ ವಿಭಾಗೀಯ ಪೀಠದಿಂದ ನೊಟೀಸ್ ಜಾರಿ ಮಾಡಲಾಗಿದ್ದು, ಈ ಮನವಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆಕ್ಷೇಪಣೆ ಬಳಿಕ ನವೆಂಬರ್ 15ಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ವಿಭಾಗೀಯ ಪೀಠ …

Read More »

ಕೆಎಂಸಿ ಚುನಾವಣೆ ರದ್ದು ಆದೇಶಕ್ಕೆ ತಡೆ

ಬೆಂಗಳೂರು: ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ನಡೆದಿದ್ದ ಚುನಾವಣೆ ರದ್ದುಗೊಳಿಸಿರುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಡಾ.ಮಧುಸೂಧನ ಕರಿಗನೂರು ಮತ್ತು ಇತರರು ಸಲ್ಲಿಸಿದ್ದ ರಿಟ್ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ನೇತೃತ್ವದ ವಿಭಾಗೀಯ ಪೀಠ, ಮಧ್ಯಂತರ ಆದೇಶ ನೀಡಿದೆ. ಈ ವಿಷಯದ ಬಗ್ಗೆ ವಿವರಣೆ ಅಗತ್ಯವಿದೆ ಎಂದು ತಿಳಿಸಿದ ಪೀಠ, ಕೆಎಂಸಿ ರಿಜಿಸ್ಟ್ರಾರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿತು. ‘2020ರ ಜನವರಿ …

Read More »

ಕನ್ನಡ ಹೇವರಿಕೆ ಭಾಷೆ ಕೇಸ್: ಹೈಕೋರ್ಟಲ್ಲಿ ಕ್ಷಮೆ ಕೋರಿದ ಗೂಗಲ್

ಬೆಂಗಳೂರು, ಸೆಪ್ಟೆಂಬರ್ 08: ಸರ್ಚ್ ಇಂಜಿನ್ ದೈತ್ಯ ಗೂಗಲ್ ಸಂಸ್ಥೆ ಮತ್ತೊಮ್ಮೆ ಕನ್ನಡ ಭಾಷೆ ಸರ್ಚ್ ಬಗ್ಗೆ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಕ್ಷಮೆಯಾಚಿಸಿದೆ. ಕನ್ನಡವನ್ನು ಹೇವರಿಕೆ ಭಾಷೆ ಎಂದು ತೋರಿಸಿದ್ದ ಜಾಗತಿಕ ದೈತ್ಯ ಟೆಕ್‌ ಕಂಪೆನಿ ಹೈಕೋರ್ಟಲ್ಲಿ ಕ್ಷಮೆಯಾಚಿಸಿದ್ದರಿಂದ ಗೂಗಲ್‌ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸುವಂತೆ ಕೋರಿದ್ದ ಮನವಿಯನ್ನು ವಜಾಗೊಳಿಸಲಾಗಿದೆ. ಗೂಗಲ್ ವಿರುದ್ಧ ಲೀಗಲ್‌ ಅಟಾರ್ನೀಸ್‌ ಮತ್ತು ಬ್ಯಾರಿಸ್ಟರ್ಸ್‌ ಸಂಸ್ಥೆಯ ಮೂಲಕ ಭಾರತೀಯ ಭ್ರಷ್ಟಾಚಾರ ವಿರೋಧಿ ಮಂಡಳಿ ಟ್ರಸ್ಟ್ …

Read More »