ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದಂತೆ ಬೆಂಗಳೂರಿನಲ್ಲಿ ಜಿಟಿ- ಜಿಟಿ ಮಳೆ ಇತ್ತು. ಆದರೆ ನಿನ್ನೆ (ನವೆಂಬರ್ 18) ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟದ (Karnataka rains) ಪರಿಣಾಮ ಕೆಲವು ಕಡೆ ರಸ್ತೆಗಳು ಕೆರೆಯಂತಾದರೆ ಮತ್ತೆ ಹಲವು ಕಡೆ ಜನರ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಸೇರಿದಂತೆ ಹೊರವಲಯದಲ್ಲೂ ನಿನ್ನೆ ಸಂಜೆ ಧಾರಾಕಾರವಾಗಿ ಮಳೆ ಸುರಿದಿದೆ. ನಗರದ ಬಹುಪಾಲು ರಸ್ತೆಗಳು ಕೆರೆಯಂತಾಗಿ ಕೆಲಸ …
Read More »ತಿರುಮಲ ತಿರುಪತಿಯಲ್ಲಿ ಭಾರಿ ಮಳೆ
ತಿರುಪತಿ: ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ಪಾದಚಾರಿ ಮಾರ್ಗವನ್ನೂ ಟಿಟಿಡಿ ಮುಚ್ಚಿದೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಟಿಟಿಡಿಯ ಎಲ್ಲ ಸರ್ವರ್, ನೆಟ್ವರ್ಕ್ ಕೂಡ ಸ್ಥಗಿತವಾಗಿದ್ದು, ನಗರದಲ್ಲಿ ರೈಲ್ವೆ ಅಂಡರ್ಪಾಸ್ಗಳು ಮುಳುಗಡೆಯಾಗಿವೆ. ರೇಣಿಗುಂಟ ಏರ್ಪೋರ್ಟ್ನಲ್ಲಿ ಪ್ರವಾಹ ಪರಿಸ್ಥಿತಿ ಇದ್ದು, ಸ್ತಬ್ಧವಾಗಿದೆ. ಭಾರಿ ಮಳೆಯಿಂದ …
Read More »ನಟ ದುನಿಯಾ ವಿಜಯ್ ತಂದೆ ವಿಧಿವಶ
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ, ಇಂದು ನಿಧನರಾಗಿದ್ದಾರೆ ( Actor Dunia Vijay Father No More). ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ (81) ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂತಹ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ದುನಿಯಾ ವಿಜಯ್ ( Sandalwood Actor …
Read More »ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ
ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು ನಿರ್ವಹಿಸಲು ನಿಯಂತ್ರಣಾ ಚೌಕಟ್ಟಿನ ಅಗತ್ಯತೆ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು. ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ. ಬಿಟ್ಕಾಯಿನ್ ಅಥವಾ …
Read More »ಕೆಎಎಸ್ ಅಧಿಕಾರಿ ರಾಜಿನಾಮೆ ಅಂಗೀಕಾರ: ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ!
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್. ಆರ್ ಅವರು ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅನಿಲ್ ಕುಮಾರ್ ಕಣಕ್ಕಿಳಿಯಲಿದ್ದಾರೆ. 41 ವರ್ಷದ ಅನಿಲ್ ಕುಮಾರ್ ಕೆಐಎಡಿಬಿ ವಿಶೇಷ ಭೂ ಸ್ವಾದೀನ ಅಧಿಕಾರಿಯಾಗಿ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರು ವಿಆರ್ ಎಸ್ ತೆಗೆದುಕೊಳ್ಳಲು ಬಯಸಿ ಅರ್ಜಿ ಸಲ್ಲಿಸಿದ್ದರು, ಆದರೆ …
Read More »ಡಿಸೆಂಬರ್ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಡಿಸೆಂಬರ್ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಡಿಸೆಂಬರ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನವೆಂಬರ್ 26 ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಹೈಕೋರ್ಟ್ಗೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ …
Read More »ಸತೀಶ ಜಾರಕಿಹೊಳಿ ನೇತೃತ್ವದಲ್ಲಿಯೇ ಚುನಾವಣೆ: ಲಕ್ಷ್ಮೀ ಹೆಬ್ಬಾಳ್ಕರ್
ನವೆಂಬರ್ 23ರಂದು ಚನ್ನರಾಜ್ ಹಟ್ಟಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೆಯನ್ನು ಕಾರ್ಯಾಧ್ಯಕ್ಷರು, ನಮ್ಮ ನಾಯಕರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿಯೇ ಮಾಡುತ್ತೇವೆ. ಅವರ ಜವಾಬ್ದಾರಿ ತಗೊಂಡ ಮೇಲೆಯೇ ಟಿಕೆಟ್ ಘೋಷಣೆ ಆಗಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಎಂಎಲ್ಸಿ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಕುಟುಂಬ ರಾಜಕಾರಣ ಮಾಡುವುದಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಪ್ರತಿಕ್ರಯಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸತೀಶ ಜಾರಕಿಹೊಳಿ ಭವಿಷ್ಯ …
Read More »ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಹರ್ಷದ್ ಗದ್ಯಾಳ ಮನೆಯಲ್ಲಿ ರಮೇಶ ಜಾರಕಿಹೊಳಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಸಭೆ
ಎಂಎಲ್ಸಿ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಅಥಣಿಯಲ್ಲಿ ಸಹೋದರನ ಪರ ಮತಬೇಟೆ ಆರಂಭಿಸಿದ್ದಾರೆ. ಹೌದು ಗುರುವಾರ ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಹರ್ಷದ್ ಗದ್ಯಾಳ ಮನೆಯಲ್ಲಿ ರಮೇಶ ಜಾರಕಿಹೊಳಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಸಭೆ ನಡೆಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ವೇಳೆ ಕಾಗವಾಡದ ರಾಜು ಕಾಗೆ ಮತ್ತು ಅಥಣಿಯ ಹರ್ಷದ …
Read More »ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್, 18 ತಿಂಗಳಿನಿಂದ ತಡೆಹಿಡಿಯಲಾಗಿದ್ದ ತುಟ್ಟಿಭತ್ಯೆ ಬಗ್ಗೆ ನಿರ್ಧಾರ
ನವದೆಹಲಿ : ಕೇಂದ್ರ ನೌಕರರ ತುಟ್ಟಿಭತ್ಯೆಯನ್ನು (Dearness Allowance) 31 ಶೇ. ಕ್ಕೆ ಹೆಚ್ಚಿಸಲಾಗಿದೆ. ಇದು ಜುಲೈ 1 ರಿಂದಲೇ ಇದು ಅನ್ವಯವಾಗಲಿದೆ. ಅಂದರೆ ಸರ್ಕಾರವು ತನ್ನ ನೌಕರರಿಗೆ 4 ತಿಂಗಳ ತುಟ್ಟಿಭತ್ಯೆಯ ಬಾಕಿಯನ್ನು (Dearness Allowance Arrear)ಸಹ ನೀಡಲಿದೆ. ಆದರೆ, 18 ತಿಂಗಳಿಂದ ಬಾಕಿ ಉಳಿದಿರುವ ತುಟ್ಟಿಭತ್ಯೆ ಬಾಕಿಯ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಕ್ರಿಸ್ಮಸ್ ಮತ್ತು ಹೊಸ ವರ್ಷಕ್ಕೂ ಮುನ್ನ ಡಿಸೆಂಬರ್ನಲ್ಲಿ ಕೇಂದ್ರ ನೌಕರರ ಡಿಎ (DA)ಬಾಕಿ ಬಗ್ಗೆಯೂ ನಿರ್ಧಾರ …
Read More »ನಾದಬ್ರಹ್ಮ ಹಂಸಲೇಖ ವಿರುದ್ಧ ಟ್ರೋಲ್ ಮಾಡುವವರಿಗೆ ಕಠಿಣ ಕ್ರಮ
ನಾದಬ್ರಹ್ಮ ಹಂಸಲೇಖ ವಿರುದ್ಧ ಟ್ರೋಲ್ ಮಾಡುವವರಿಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ಪ್ರತಿಭಟನೆ ಜರುಗಿದೆ. ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಾಕಷ್ಟು ಟೀಕೆಗೆ ಒಳಗಾಗಿದ್ದ ಹಂಸಲೇಖ ಅವರ ಪರ ಬೆಂಗಳೂರು ವಿವಿ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಹಂಸಲೇಖ ಅವರ ವಿರುದ್ಧ ದಾಖಲಾಗಿರುವಂತಹ FIR ರದ್ದುಗೊಳಿಸಿ, ಟ್ರೋಲಿಗರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇನ್ನೂ ಇದು ಹಂಸಲೇಖ …
Read More »
Laxmi News 24×7