ಬೆಳಗಾವಿ: ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಖಾತೆಗೆ ಕನ್ನ ಹಾಕಿ 10 ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದ ವಂಚಕರನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ.ಹೆಚ್. ಗ್ರಾಮದ ಯಲ್ಲಪ್ಪ ಜಾಧವ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ್ದ, ಚಂದ್ರಪ್ರಕಾಶ್(30), ಆಶಾದೇವಿ(25)ಯನ್ನು ಇಂದು ಜಾರ್ಖಂಡ್ಗೆ ತೆರಳಿ ಬೆಳಗಾವಿ ಪೊಲೀಸರು( Karnataka police) ಬಂಧಿಸಿದ್ದಾರೆ. ಕೆವೈಸಿ ಅಪ್ಡೆಟ್ ನೆಪದಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ವಾಟ್ಸಪ್ ಪಡೆದಿದ್ದ …
Read More »41ನೇ ರೈತ ಹುತಾತ್ಮ ದಿನಾಚರಣೆ; ಹುತಾತ್ಮ ರೈತನಿಗೆ ನಮನ ಸಲ್ಲಿಸಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ರೈತರು
ಗದಗ: 41ನೇ ರೈತ ಹುತಾತ್ಮ ದಿನಾಚರಣೆ ಹಿನ್ನೆಯಲ್ಲಿ ಬಂಡಾಯದ ನಾಡಿನತ್ತ ಇಂದು (ಜುಲೈ 21) ರೈತ ಸಮೂಹವೇ ಹರಿದು ಬಂದಿತ್ತು. ಹುತಾತ್ಮ ರೈತನ ವೀರಗಲ್ಲಿಗೆ ಹೂವು ಅರ್ಪಿಸಿ ರೈತರು, ಮುಖಂಡರು, ಜನಪ್ರತಿನಿಧಿಗಳು ನಮನ ಸಲ್ಲಿಸಿದರು. ಈ ವೇಳೆ ಮಹದಾಯಿ, ಕಳಸಾ ಬಂಡೂರಿಗಾಗಿ ರೈತರು ಹಸಿರು ಶಾಲು ಹಾರಿಸುವ ಮೂಲಕ ಮತ್ತೆ ರಣಕಹಳೆ ಊದಿದರು. ಜೊತೆಗೆ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ಹಾಕುವ ಮೂಲಕ ಸರ್ಕಾರಗಳಿಗೆ …
Read More »ಅವರು ಸಿಪಿ ಯೋಗೇಶ್ವರ್ ಅಲ್ಲ… ಸಿಡಿ ಯೋಗೇಶ್ವರ್… ಸಿಡಿ ಇಟ್ಕೊಂಡೇ ಆಟ ಆಡ್ತಿದ್ದಾರೆ.: ಡಿ.ಕೆ ಸುರೇಶ್
ನವದೆಹಲಿ: ಅವರು ಸಿಪಿ ಯೋಗೇಶ್ವರ್ ಅಲ್ಲ… ಸಿಡಿ ಯೋಗೇಶ್ವರ್… ಸಿಡಿ ಇಟ್ಕೊಂಡೇ ಆಟ ಆಡ್ತಿದ್ದಾರೆ. ಇದು ಕರ್ನಾಟಕಕ್ಕೆ ಕಪ್ಪು ಚುಕ್ಕೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ನವದೆಹಲಿಯಲ್ಲಿ ಸಚಿವ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು. ರೇಣುಕಾಚಾರ್ಯ ಸಿಡಿ ಪ್ರಸ್ತಾಪ ಹಿನ್ನೆಲೆಯಲ್ಲಿ ಈ ಮಾತುಗಳನ್ನು ಆಡಿದರು. ಲಿಂಗಾಯತರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ವಿಚಾರವಾಗಿ ಹೈಕಮಾಂಡ್ ನಿರ್ದೇಶನವನ್ನು ನಾವು ಪಾಲಿಸುತ್ತೇವೆ. ಯಾವುದೇ ಸಮುದಾಯದ ಅಧ್ಯಕ್ಷ ಆದರೂ ನಾವು …
Read More »ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ವಾಗ್ದಾಳಿ
ಮುಂಬೈ,ಜು.21-ಕೊರೊನಾ ಎರಡನೆ ಅಲೆ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ತಮ್ಮವರನ್ನು ಕಳೆದುಕೊಂಡಿರುವವರು ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ಕೊರೊನಾ ಎರಡನೆ ಅಲೆ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಯಾರು ಸಾವನ್ನಪ್ಪಿಲ ಎಂದು ಸಮರ್ಥಿಸಿಕೊಂಡ ಬೆನ್ನಲ್ಲೆ ರಾವತ್ ಈ ಹೇಳಿಕೆ ನೀಡಿದ್ದಾರೆ. ಕೊರೊನಾ ಎರಡನೆ ಅಲೆ ಸಂದರ್ಭದಲ್ಲೂ ಆಕ್ಸಿಜನ್ ಕೊರತೆ ಇತ್ತು. ಆಗಲೂ ಹಲವು ರಾಜ್ಯಗಳಲ್ಲಿ ಆಮ್ಲಜನಕ …
Read More »‘ಸಿಡಿ ಅಸ್ತ್ರ’ಕ್ಕೆ ಬೆಟ್ಟಿ ಬಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ : ‘ಶಾಸಕ ಎಂಪಿ ರೇಣುಕಾಚಾರ್ಯ’ ವಿರುದ್ಧ ‘CD ಷಡ್ಯಂತ್ರ’.?
ಬೆಂಗಳೂರು : ಸಿಎಂ ಬದಲಾವಣೆ ಬೆನ್ನಲ್ಲೇ, ಈಗ ಸಿಡಿ ಷಡ್ಯಂತ್ರದ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಿಡಿ ವಿಚಾರ ಕೂಡ ಈಗ ಮುನ್ನಲೆಗೆ ಬಂದಿದ್ದು, ಇದೇ ಕಾರಣಕ್ಕಾಗಿ ದಿಢೀರ್ ದೆಹಲಿಗೆ ಅವರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಎಂಪಿ ರೇಣುಕಾಚಾರ್ಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿದೆ ಎನ್ನಲಾಗಿದೆ. ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ದೆಹಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಂ ಪರವಾಗಿ …
Read More »ನಟ ದರ್ಶನ್ ಗೆ 5 ವರ್ಷ ನಿಷೇಧ ಹೇರಿ: ಫಿಲ್ಮಂ ಚೇಂಬರ್ ಗೆ ಮಾನವಹಕ್ಕುಗಳು, ಭ್ರಷ್ಟಚಾರ ನಿಗ್ರಹದಳದಿಂದ ದೂರು
ಬೆಂಗಳೂರು :ಕಳೆದ ಕೆಲವು ದಿನಗಳಿಂದ ಸ್ಯಾಂಡಲ್ವುಡ್ ನಟ ದರ್ಶನ್ ಅವರ ವಿರುದ್ಧ ಸಾಲಕ್ಕೆ ಶ್ಯೂರಿಟಿ ಪ್ರಕರಣ ಹಾಗು ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಆರೋಪ-ಪ್ರತ್ಯಾರೋಪಗಳು ಕನ್ನಡ ಚಿತ್ರರಂಗದಲ್ಲಿ ಬೇಸರ ಮೂಡಿಸಿದೆ. ಈ ಕುರಿತಾಗಿ ಇಂದು ಮಾನವ ಹಕ್ಕುಗಳು ಮತ್ತು ಭ್ರಷ್ಟಚಾರ ನಿಗ್ರಹದಳ ಸಂಸ್ಥೆಯ ಅಧ್ಯಕ್ಷ ಮೋಹನ್ ಅವರ ನಿಯೋಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ನಟನಿಗೆ ಐದು ವರ್ಷಗಳ ಕಾಲ ನಿಷೇಧ ಹೇರುವಂತೆ ಆಗ್ರಹಿಸಿ ಸೂಕ್ತ ಕ್ರಮಕ್ಕೆ …
Read More »ಬಾಯಿ ಮುಚ್ಚಿಸಿಕೊಂಡು ಇದ್ದರೆ ಎಲ್ಲ ಸರಿಹೋಗುತ್ತೆ : ಈಶ್ವರಪ್ಪ ಗರಂ
ಶಿವಮೊಗ್ಗ : ಕೇಂದ್ರೀಯ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಬದ್ಧ ಅಂತಾ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಯತ್ನಾಳ್ ಸೇರಿದಂತೆ ಯಾರು ಮಾತನಾಡದೆ ಬಾಯಿ ಮುಚ್ಚಿಸಿಕೊಂಡು ಇದ್ದರೆ ಎಲ್ಲವೂ ಸರಿಯಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸದ್ಯ ರಾಜಕೀಯ ಬೆಳವಣಿಗೆ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕರ್ನಾಟಕದಲ್ಲಿ ಏನು ಮಾಡಬೇಕೆಂದು ರಾಷ್ಟ್ರೀಯ ನಾಯಕರುಗಳು ಒಂದು ತೀರ್ಮಾನ ತೆಗೆದುಕೊಂಡಿದ್ದರು. ಪಕ್ಷದ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಬಂದು ಎಲ್ಲರ ಅಭಿಪ್ರಾಯ ಪಡೆದು ರಾಷ್ಟ್ರೀಯ …
Read More »ಸಿಎಂ ಯಡಿಯೂರಪ್ಪನವರನ್ನು ಬದಲಿಸಿದ್ರೆ ಬಿಜೆಪಿ ಸರ್ವನಾಶ; ಹೈಕಮಾಂಡ್ ಗೆ ದಿಂಗಾಲೆಶ್ವರ ಸ್ವಾಮೀಜಿ ಎಚ್ಚರಿಕೆ
ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಮಠಾಧೀಶರ ನಿಯೋಗ ಬಿಜೆಪಿ ಹೈಕಮಾಂಡ್ ಗೆ ಖಡಕ್ ಎಚ್ಚರಿಕೆ ನೀಡಿದೆ. ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಶ್ರೀ, ಸಮರ್ಥವಾಗಿ ಆಡಳಿತ ನಡೆಸುತ್ತಿರುವ ಯಡಿಯೂರಪ್ಪನರನ್ನು ಬದಲಾವಣೆ ಮಾಡಬೇಕು ಎಂಬುದು ಒಂದು ಕೆಟ್ಟ ಉದ್ದೇಶ. ಸಿಎಂ ಬಿ ಎಸ್ ವೈ ಕೇವಲ ಲಿಂಗಾಯತ ನಾಯಕ ಮಾತ್ರವಲ್ಲ, ಈ ರಾಜ್ಯದ …
Read More »ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಗಣಿ ಸಚಿವ ಮುರುಗೇಶ್ ನಿರಾಣಿ ಕಾಶಿ ವಿಶ್ವನಾಥ ದೇವರ ದರ್ಶನ ಪಡೆದು ವಾಪಸ್ ಆಗಿದ್ದ ಬೆನ್ನಲ್ಲೇ ಇದೀಗ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು …
Read More »ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ
ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ …
Read More »