Breaking News

ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ನಿನ್ನೆ ರಾತ್ರಿ ಖಾಸಗಿ ಹೋಟೆಲ್‍ನಲ್ಲಿ ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆಗೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ‘ಈಗಲೂ ಕೂಡ ಅವರೆಲ್ಲರೂ ನನ್ನ ಸ್ನೇಹಿತರೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಂದೆ ಈ ರೀತಿ ಸಭೆಗಳು ನಡೆಯಬಾರದು. ಪ್ರತ್ಯೇಕ ಸಭೆಗಳನ್ನು ನಡೆಸುವುದಕ್ಕೆ ಕಡಿವಾಣ ಹಾಕಬೇಕು. ಇದರಿಂದ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಾನು ನಾಯಕ ಎಂದು ಎಲ್ಲಿಯೂ ಹೇಳಿಲ್ಲ. …

Read More »

BJP ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ.

ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕು ತಗುಲಿದ್ದ ಅವರು 2 ಬಾರಿ ಗುಣಮುಖರಾಗಿ ಹೊರಬಂದಿದ್ದರು. ಆದರೆ ಆ ವೇಳೆ ದೇಹದ ಅನೇಕ ಅಂಗಾಂಗಗಳಿಗೆ ಡ್ಯಾಮೇಜ್ ಆಗಿತ್ತು. ಸಧ್ಯ ಅವರು ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ನಿಧನರಾದರು. ಯಮಕನಮರಡಿ ಸಮೀಪ ಕುರಣಿಯವರಾಗಿದ್ದ ಅವರು ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು.

Read More »

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ

ಬೆಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ ಆಂಧ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಹಿಂದೂಪರ ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಮಂತ್ರಾಲಯದ ಒಟ್ಟು 208 ಎಕರೆ ಇನಾಮು ಭೂಮಿಯನ್ನು ಮಾರಾಟ ಮಾಡಲು ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಠಕ್ಕೆ ಸಂಬಂಧಿಸಿದ ವಡ್ಡೆಪಲ್ಲೆ, ಮಲದಕಲ್, ಧರೂರು ಮಂಡಲ ವ್ಯಾಪ್ತಿಯಲ್ಲಿ ಭೂಮಿ ಒತ್ತುವರಿಯಾಗಿದೆ ಎಂಬ ಕಾರಣಕ್ಕೆ ಮಾರಾಟ ಮಾಡಲು ಮಠವೇ ಸರ್ಕಾರಕ್ಕೆ ಪತ್ರ ಬರೆದಿತ್ತು. ಆದ ಕಾರಣ ಸರ್ಕಾರ ಪ್ರಕಟಣೆ ಹೊರಡಿಸಿದೆ. …

Read More »

ಎಂಎಲ್‍ಸಿ ಮತ್ತು ಮಂತ್ರಿ ಇಬ್ಬರೂ ಸೇರಿ ಸಿಎಂ ಹಾಗೂ ಸಂತೋμïಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಕೇಳಿದ್ದೆ.: ಡಿ.ಕೆ.ಶಿವಕುಮಾರ

ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ರಹಸ್ಯ ವಿಡಿಯೋ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಕಾರವಾರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯಾವುದೋ ಒಂದು ವೈಯಕ್ತಿಕ ವಿಡಿಯೋ ಎತ್ತಿಕೊಂಡು ಹೋಗಿ, ಎಂಎಲ್‍ಸಿಗೆ ಹಾಗೂ ಸಚಿವರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೇ ಇತ್ತು. ಎಂಎಲ್‍ಸಿ ಮತ್ತು ಮಂತ್ರಿ ಇಬ್ಬರೂ ಸೇರಿ ಸಿಎಂ ಹಾಗೂ ಸಂತೋμïಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು …

Read More »

ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್‌ಲಾಕ್‌ 6 ಮಾರ್ಗಸೂಚಿ

ಬೆಂಗಳೂರು,ನ.28- ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್‌ಲಾಕ್‌ 6 ಮಾರ್ಗಸೂಚಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಹೊಸ ಮಾರ್ಗಸೂಚಿ ಡಿಸೆಂಬರ್ 31ರವರೆಗೆ ಜಾರಿಯಲ್ಲಿರುತ್ತದೆ. ಮಾರ್ಗಸೂಚಿಯಲ್ಲಿ ಕೊರೊನಾ ಹಿನ್ನೆಲೆ ಮುಖ್ಯವಾಗಿ ಕಣ್ಗಾವಲು, ನಿಯಂತ್ರಣ ಮತ್ತು ಕಟ್ಟುನಿಟ್ಟಾದ ಪಾಲನೆಯನ್ನು ಒಳಗೊಂಡ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವುದು, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕೋವಿಡ್-19 ಹರಡುವುದನ್ನು …

Read More »

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಮಂದಿಗೆ ಕೊರೊನಾ ಪಾಸಿಟಿವ್…!

ನವದೆಹಲಿ,ನ.28-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 93.51 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ನಿತ್ಯ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 41,322 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಹಲವಾರು ದಿನಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ದಾಟುವ ಸಾಧ್ಯತೆಗಳಿವೆ. ಅದಾಗ್ಯೂ ಚೇತರಿಕೆ ಪ್ರಮಾಣ ಶೇ.93.68ಕ್ಕೆ ಏರಿಕೆಯಾಗಿದೆ. ಇದುವರೆಗೂ 87,59,969 ಸೋಂಕಿತರು …

Read More »

ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ  ಮೋಡ ಕವಿದ ವಾತಾವರಣ ಚಳಿಯೊಂದಿಗೆ ಜಿಟಿ ಜಿಟಿ ಮಳೆ

ಬೆಳಗಾವಿ : ನಿವಾರ್ ಚಂಡಮಾರುತ ಪರಿಣಾಮದಿಂದ ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ  ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರ ಮತ್ತು ಸಾಧಾರಣ ಪ್ರಮಾಣದ ಮಳೆಯಾಗಿತ್ತಿದೆ. ಬೆಳಗಾವಿಯಲ್ಲೂ ನಿವಾರ್​ ತನ್ನ ಪ್ರಭಾವ ಬೀರಿದ್ದು, ಹಲವೆಡೆ ಬೆಳಿಗ್ಗೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಮೊಡ ಮುಸುಕಿದ ವಾತಾವರಣ, ಕೊರಿಯುವ ಚಳಿಗೆ ಜನ ಹೈರಾಣಾಗಿದ್ದಾರೆ. ಜೊತೆಗೆ ತುಂತುರು ಮಳೆ ಸೇರಿ ಜನ ಮನೆಗಳಿಂದ ಹೊರ ಬರದಂತೆ ಮಾಡಿದೆ. ಮುಂಜಾನೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೂ  ಮೋಡ ಕವಿದ …

Read More »

ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.: ಈಶ್ವರಪ್ಪ

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರನ್ನು ನಂಬಿದವರಿಗೆ ಮಂತ್ರಿ ಸ್ಥಾನ ಕೊಡಿಸಲು ಲಾಭಿ ಮಾಡುವುದರಲ್ಲಿ ರಮೇಶ್ ಜಾರಕಿಹೊಳಿ ಅವರ ತಪ್ಪಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್‍ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನಡೆಸಲು ಅವರು ಪ್ರಯತ್ನ ಮಾಡುವದರಲ್ಲಿ ತಪ್ಪಿಲ್ಲ, ಕೆಲವು ಶಾಸಕರು ಬಿಜೆಪಿಗೆ ಬಂದು ಸರ್ಕಾರ ರಚನೆಗೆ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ: ಈಶ್ವರಪ್ಪ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಾವು ಬೇಕಾದ್ರೆ ಶಂಕರಾಚಾರ್ಯ ಶಿಷ್ಯರಿಗೆ, ಚೆನ್ನಮ್ಮಳ ಶಿಷ್ಯ ಇಲ್ಲವೇ ರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಂ ಸಮಾಜಕ್ಕೆ ಬೆಳಗಾವಿಯಲ್ಲಿ ನಾವು ಟಿಕೆಟ್ ಕೊಡುವುದಿಲ್ಲ ಎಂದು ಹೇಳಿದರು. ಕುರುಬ ಸಮಾಜದ ಯಾವೊಬ್ಬ ಸಂಸದ ಇಲ್ಲ ಎಂಬ ಪ್ರಶ್ನೆಗೆ ಕಾಂಗ್ರೆಸಿನವರು ಎμÉ್ಟೂೀ ಜನರಿಗೆ …

Read More »

ಬೆಳಗಾವಿ: ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲು ಒತ್ತಾಯ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2ನೇ ಅತೀ ದೊಡ್ಡ ಮತದಾರರಾಗಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಲೋಕಸಭೆಯ ಟಿಕೆಟ್ ಕುರುಬ ಸಮುದಾಯದವರಿಗೆ ನೀಡಬೇಕು ಎಂದು ಕುರುಬ ಸಮುದಾಯದ ಮುಖಂಡ ರಾಜೇಂದ್ರ ಸಣ್ಣಕ್ಕಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಸಣ್ಣಕ್ಕಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಎರಡೂವರೆ ಲಕ್ಷ ಮತದಾರರಿದ್ದಾರೆ. …

Read More »