Breaking News

ಸಿಎಂ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: 13ಕ್ಕೂ ಅಧಿಕ ಜನರ ಜೇಬಿಗೆ ಕತ್ತರಿ

ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಗೆ ಆಗಮಿಸಿದ್ದರು, ಕಾರ್ಯಕ್ರಮದ ವೇಳೆ 13ಕ್ಕೂ ಅಧಿಕ ಜನರ ಜೇಬಿಗೆ ಖದೀಮರು ಕತ್ತರಿ ಹಾಕಿ, ಒಂದೂವರೆ ಲಕ್ಷ ರೂಪಾಯಿಗಳನ್ನು ಕದ್ದಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಸಿಎಂ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹೊನ್ನಪ್ಪ ಅವರ ಜೇಬಿನಲ್ಲಿದ್ದ 50 ಸಾವಿರ ರೂ.ಗಳಲ್ಲಿ 49 ಸಾವಿರ ರೂ. ದೋಚಿದ್ದಾರೆ. ಹೊನ್ನಪ್ಪ ಮಾತ್ರವಲ್ಲದೆ …

Read More »

ಹರ್ಯಾಣ: ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡ ರೈತ ಹೃದಯಾಘಾತದಿಂದ ಸಾವು

ಚಂಡಿಗಢ, ಅ. 29: ಕರ್ನಲ್ನಲ್ಲಿ ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡಿದ್ದ ರೈತ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಕೆಯು ಹಿರಿಯ ನಾಯಕ ಗುರ್ನಾಮ್ ಸಿಂಗ್ ಚಾದುನಿ ಹೇಳಿದ್ದಾರೆ. ಒಂದೂವರೆ ಎಕರೆ ಭೂಮಿ ಹೊಂದಿದ್ದ ರೈತ ಸುಶೀಲ್ ಕಾಜಲ್ ಕಳೆದ 9 ತಿಂಗಳಿಂದ ನಡೆಯುತ್ತಿರುವ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ನಲ್ ಟೋಲ್ ಪ್ಲಾಝಾದಲ್ಲಿ ಶನಿವಾರ ನಡೆದ ಪ್ರತಿಭಟನೆ ಸಂದರ್ಭ ಪೊಲೀಸರ ಲಾಠಿ ಪ್ರಹಾರದಿಂದ ಗಂಭೀರ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ …

Read More »

ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ 3 ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ.   ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಬೇರೆ ಎದುರಾಗಿದೆ. ಸಾಮೂಹಿಕ ಗಣೇಶ ಆಚರಣೆ ಬಗ್ಗೆ ಸರ್ಕಾರ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ರಾಜ್ಯದ ಜನ ಸಾಮೂಹಿಕವಾಗಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುಮತಿ ಇದೆಯಾ? ಇಲ್ಲವಾ ಎನ್ನುವ ಗೊಂದಲದಲ್ಲಿದ್ದಾರೆ. ಹೀಗಾಗಿ ಇಂದು ಗಣೇಶೋತ್ಸವ …

Read More »

200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆ: ಸತೀಶ ಜಾರಕಿಹೊಳಿ

ಬೆಳಗಾವಿ: 200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಅದನ್ನು ಈಗ ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಇಷ್ಟು ದಿನ ಅವರು ಏನು ಮಾಡುತ್ತಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ    ಪ್ರಶ್ನಿಸಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಡ್ ಗಳ ಮೇಲೆ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸವುದು ಹೇಳಿದಷ್ಟು ಸುಲಭವಲ್ಲ. ಮನೆಗಳ ಸಕ್ರಮವನ್ನು ಸರ್ಕಾರ …

Read More »

ಮತ ಕೇಳಲು ಯಾವ ಪಕ್ಷದ ಅಭ್ಯರ್ಥಿಯೂ ತಮ್ಮ ಗಲ್ಲಿಯಲ್ಲಿ ಬರುವಂತಿಲ್ಲ ವಾರ್ಡ್ ನಂ. 54ರ ರಹವಾಸಿಗಳ ಚುನಾವಣೆ ಬಹಿಷ್ಕರಿಸಿ, ಆಕ್ರೋಶ

ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂ. 54ರ ರಹವಾಸಿಗಳು ಚುನಾವಣೆ ಬಹಿಷ್ಕರಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 1995 ರಿಂದ ಇಲ್ಲಿನ ಚನ್ನಮ್ಮ ನಗರದ ಸ್ವಾಮಿನಾಥ್ ಕಾಲನಿ ಮತ್ತು ಸುತ್ತಲ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.1995ರಿಂದಲೂ ಮಹಾನಗರ ಪಾಲಿಕೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತ ಬರಲಾಗುತ್ತಿದೆ. ಹೀಗಿದ್ದಾಗೂ ನೀರು, ವಿದ್ಯುತ್, ರಸ್ತೆ, ಒಳಚರಂಡಿ ಸೇರಿದಂತೆ ಯಾವ ಸೌಲಭ್ಯವನ್ನು ನೀಡಲು ಪಾಲಿಕೆ ಮುಂದಾಗಿಲ್ಲ ಎಂದು ನಾಗರಿಕರು …

Read More »

ಹುಬ್ಬಳ್ಳಿ- ಧಾರವಾಡ: ಇನ್ನೊಮ್ಮೆ ಅಧಿಕಾರ ಕೊಟ್ಟರೆ ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣ ಮಾಡ್ತೇವೆ: ಪ್ರಲ್ಹಾದ್ ಜೋಶಿ

ಸೆಪ್ಟಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್​​ರಿಂದ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಹುಬ್ಬಳ್ಳಿ: ಕಳೆದ ಬಾರಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಇನ್ನೊಮ್ಮೆ ಅಧಿಕಾರ ಕೊಟ್ಟರೆ ಕಾಮಗಾರಿಗಳು ಪೂರ್ಣ ಆಗಲಿವೆ. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣ ಮಾಡ್ತೇವೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ …

Read More »

ಹುಬ್ಬಳ್ಳಿ ಪಾಲಿಕೆ ಚುನಾವಣಾ ಪ್ರಚಾರದ ವೇಳೆ‌ ಸಚಿವ ಶ್ರೀರಾಮುಲುರವರಿಂದ ಕರೋನಾ ನಿಯಮ ಉಲ್ಲಂಘನೆ

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಪಾಲಿಕೆ ಚುನಾವಣಾ ಪ್ರಚಾರ ರಂಗೇರಿದೆ. ರಾಜಕಾರಣಿಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.ಆಡಳಿತ ಪಕ್ಷದ ಸಚಿವ ಶ್ರೀರಾಮುಲು ತಮ್ಮ ಚುನಾವಣಾ ಪ್ರಚಾರದ ವೇಳೆ ಕರೋನ ನಿಯಮಗಳನ್ನು ಉಲ್ಲಂಘಿಸಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆದ ಪಾಲಿಕೆ ಚುನಾವಣಾ ಪ್ರಚಾರದ ವೇಳೆ ತಮ್ಮ ಅಭ್ಯರ್ಥಿಯ ಪರ ಬೃಹತ್ ಪ್ರಚಾರದ ಸಭೆ ವೇಳೆ ಕಿಕ್ಕಿರಿದು ಜನ ಸೇರಿದ್ದರು. ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿ ಶ್ರೀರಾಮುಲುಗೆ ಬೃಹತ್ ಹೂವಿನ ಹಾರ ಹಾಕಿದ್ದಾರೆ.ನಿಯಮಗಳು ಕೇವಲ ಸಾಮಾನ್ಯ ಜನರಿಗಷ್ಟೇನಾ …

Read More »

ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿಗಳು

ಮೈಸೂರು : ರಾಜ್ಯದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದ್ದಂತ ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಂತ ಸಂದರ್ಭದಲ್ಲಿ, ತಾವೇ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾರೆ.   ಇಂದು ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳನ್ನು ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಹಣಕ್ಕೆ ಬೇಡಿಕೆ …

Read More »

ರೇಪ್ ಕೇಸ್ ಬಗ್ಗೆ ಮಾತಾಡದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಣ್ಣಲ್ಲವೇ?: ಹೆಚ್.ಎಂ. ರೇವಣ್ಣ ಆಕ್ರೋಶ

ಬೆಂಗಳೂರು : ಶೋಭಾ ಕರಂದ್ಲಾಜೆ ನಾನು ಕೇಂದ್ರ ಸಚಿವೆ ಮೈಸೂರು ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಲ್ಲ ಅಂತಾರೆ. ಸಚಿವೆ ಆದರೂ ಹೆಣ್ಣು ಹೆಣ್ಣೇ ಅಲ್ವಾ? ಅವರ ಮನೆಯಲ್ಲೇ ಆದರೆ ನಮ್ಮ ಮನೆಯಲ್ಲಿ ಆದರೆ ಹೀಗೆ ಮಾತಾಡೋದ? ಎಂದು ಮಾಜಿ ಸಚಿವ ಹೆಚ್.ಎಂ. ರೇವಣ್ಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದಾರೆ. ಸದಾಶಿವನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು ಅತ್ಯಾಚಾರ ನಡೆದಿದೆ ಅಂತಾರೆ. ಪೊಲೀಸರು ದರೋಡೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 4 ಅಂಶಗಳ ಪ್ರಣಾಳಿಕೆ ಘೋಷಣೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 4 ಅಂಶಗಳ ಪ್ರಣಾಳಿಕೆ ಘೋಷಣೆ ಮಾಡಿದೆ. ಉದ್ಯೋಗ ಸೃಷ್ಟಿ ಶೇ.50 ತೆರಿಗೆ ವಿನಾಯಿತಿ ಬೆಂಗಳೂರು ಮಟ್ಟದ ನಗರ ಸೌಲಭ್ಯ ನಗರದಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆ ಮುಕ್ತ ಆಡಳಿತ ವ್ಯವಸ್ಥೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಳಗಾವಿ ಮಹಾನಗರಪಾಲಿಕೆ ಚುನಾವಣೆಗೆ ಪಕ್ಷದ ಚಿನ್ಹೆಯ ಮೇಲೆ ಸ್ಪರ್ಧಿಸುವುದಾಗಿ ಮೊದಲು ಘೋಷಿಸಿದ್ದೇನೆ ನಾನು ಎಂದು ತಿಳಿಸಿದರು. ನಾವು ನೂರಾರು ಆಶ್ವಾಸನೆ ನೀಡುವುದಿಲ್ಲ. ಆದರೆ ಜನರಿಗೆ ನೆಮ್ಮದಿಯ …

Read More »