ಬೆಳಗಾವಿ: ಶಿಶು ಅಭಿವೃದ್ಧಿ ಇಲಾಖೆಯ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಖಾಲಿ ಇರುವ ನಗರ ಪ್ರದೇಶಗಳಲ್ಲಿ ಅದೇ ವಾರ್ಡಿನ ಇಚ್ಛೆಯುಳ್ಳ ಅಭ್ಯರ್ಥಿಗಳು ವೆಬ್ಸೈಟ್ ವಿಳಾಸ: anganwadiruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಜು.14 ರಿಂದ ಅಗಸ್ಟ್ 14 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲ ಭವನ ಕಟ್ಟಡ, …
Read More »ರಾಜಾಹುಲಿ ಯನ್ನಾ ಸಿ ಎಂ ಸ್ಥಾನದಿಂದ ಇಳಿಸಿ ಬೆಳಗಾವಿ ಯವರೆ ಆಗ್ತಾರಾ ಮುಂದಿನ ಸಿ ಎಂ..?
ಈಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಿರುಗಾಳಿ ಬೀಸುತ್ತಿದೆ.ಜುಲೈ 26 ಕ್ಕೆ ಸಿಎಂ ಬದಲಾವಣೆ ಖಚಿತ ಎಂದು ಬಿಜೆಪಿಯ ಕೆಲವು ನಾಯಕರು ತಮ್ಮ ಆಪ್ತರ ಬಳಿ ಹೇಳಿಕೊಳ್ಳುತ್ತಿದ್ದಾರೆ.ಹಾಗಾದ್ರೆ ಮುಂದಿನ ಮುಖ್ಯಮಂತ್ರಿ ಯಾರು ? ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿದೆ.ಈ ಕುರಿತು ದೃಶ್ಯಮಾದ್ಯಮಗಳಲ್ಲಿ ಕ್ಷಣಕ್ಕೊಂದು ಬ್ರೇಕಿಂಗ್ ಸುದ್ಧಿ ಪ್ರಕಟವಾಗುತ್ತಿದೆ. ಸಿಎಂ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಯಾರೂ ಬಹಿರಂಗವಾಗಿ ಹೇಳುತ್ತಿಲ್ಲ.ಆದ್ರೆ ಅವರ ಅಧಿಕಾರದ ಅವಧಿ ಜುಲೈ 26 ರರವೆಗೆ ಮಾತ್ರ ಎನ್ನುವ ಸುದ್ಧಿ ರಾಜ್ಯದ …
Read More »‘ನೀವು ಬಂದು ಲೈವ್ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್ ಕುಂದ್ರಾ ಹೀಗೆ ಹೇಳಿದ್ರು
ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್ಗಳು ವೈರಲ್ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್ಗಳು ಕೂಡ ಹರಿದಾಡಿದೆ. ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಹಾಗೂ ರಾಜ್ ಕುಂದ್ರಾ 2012ರಲ್ಲಿ ಟ್ವೀಟ್ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್ ಈಗ ಸಾಕಷ್ಟು ವೈರಲ್ …
Read More »ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ; ಬಿಜೆಪಿ ಅಧ್ಯಕ್ಷ ಕಟೀಲ್, ಹಲವು ಶಾಸಕರು ಪಾರು
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಶಾಸಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಇದ್ದ ಕಾರಣ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ರನ್ ವೇ ನಲ್ಲಿ ನೀರು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಆಗದೆ, ಮತ್ತೆ ಹಾರಾಟ ನಡೆಸಿದೆ 25 ನಿಮಿಷದ ಹಾರಾಟದ ನಂತರ ವಿಮಾನ ಲ್ಯಾಂಡಿಂಗ್ ಆಗಿದ್ದು, ಈ ವೇಳೆಯಲ್ಲಿ ಪ್ರಯಾಣಿಕರು ಆತಂಕದಿಂದ ಕಣ್ಣೀರು ಹಾಕಿದ್ದಾರೆನ್ನಲಾಗಿದೆ. …
Read More »KSRTC ಬಸ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ
ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಸಮೀಪ ಮಂಗಳವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಹಾಸನ ಮೂಲದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು …
Read More »ನದಿಯಲ್ಲಿ ಹುಚ್ಚು ಸಾಹಸ; ಸೇತುವೆ ಕೆಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್
ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯ ರಭಸಕ್ಕೆ ಸೇತುವೆಯ ಕೆಳಗೆ ಟ್ರ್ಯಾಕ್ಟರ್ ಉರುಳಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗುಂಡಕಾನಾಳ ಗ್ರಾಮದ ಮಧುಗೌಡ ಪಾಟೀಲ ಅವರ ಎಂಬುವವರಿಗೆ ಸೇರಿದ್ದ ಟ್ರ್ಯಾಕ್ಟರ್ ಹಡಗಿನಾಳ ಮಾರ್ಗದಲ್ಲಿ ಡೋಣಿ ಸೇತುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೆಲಮಟ್ಟದ ಸೇತುವೆಯ ಮೇಲೆ ವಾಹನ ಚಲಾಯಿಸುತ್ತಿರುವಾಗ ಟ್ರ್ಯಾಕ್ಟರ್ ಸೇತುವೆಯ ಕೆಳಗೆ ಉರುಳಿದೆ. ತಾಳಿಕೋಟಿ ಪಟ್ಟಣದಿಂದ ಮೂಕಿಹಾಳ ಗ್ರಾಮದತ್ತ ಹೊರಟಿದ್ದ ಟ್ರ್ಯಾಕ್ಟರ್ ಡೋಣಿ ನದಿಯ ಮೇಲೆ ಪ್ರವಾಹದ ನೀರು ಇದ್ದರೂ …
Read More »ಅಪ್ಪ ಅಮ್ಮನ ಜೊತೆಗೆ ಖುಷಿ ಖುಷಿಯಾಗಿ ಮಾತನಾಡಿದ್ದ ಯೋಧ ಮಾತನಾಡಿದ ಒಂದೇ ಗಂಟೆಯಲ್ಲಿ ಯೋಧನ ಹುತಾತ್ಮನಾದ ಸುದ್ದಿ ಬರಸಿಡಿಲಂತೆ ಬಡಿದಿದೆ.
ಗದಗ: ಆತ 12 ವರ್ಷಗಳಿಂದ ಸೈನಿಕನಾಗಿ ದೇಶ ಕಾಯ್ತಿದ್ದ. ಒಂದು ತಿಂಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದ. ಬಳಿಕ ಮೇಲಾಧಿಕಾರಿಗಳ ಕರೆ ಮೇಲೆ ಮತ್ತೆ ಸೇವೆಗೆ ಹಾಜರಾದ. ಆದ್ರೆ ಬೆಳಿಗ್ಗೆ ಅಪ್ಪ ಅಮ್ಮನ ಜೊತೆಗೆ ಖುಷಿ ಖುಷಿಯಾಗಿ ಮಾತನಾಡಿದ್ದ ಯೋಧ ಮಾತನಾಡಿದ ಒಂದೇ ಗಂಟೆಯಲ್ಲಿ ಯೋಧನ ಹುತಾತ್ಮನಾದ ಸುದ್ದಿ ಬರಸಿಡಿಲಂತೆ ಬಡಿದಿದೆ. ಇಂದು ಛತ್ತೀಸ್ಘಡದಲ್ಲಿ ಗದಗ ಮೂಲದ ಯೋಧ ಹುತಾತ್ಮನಾಗಿರೋ ಸುದ್ದಿ ತಿಳಿದು ಗೊಜನೂರು ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. …
Read More »ಹಾವೇರಿ: ಇನ್ನೂ ಕೈಸೇರದ ‘ಕೋವಿಡ್ ರಿಸ್ಕ್ ಭತ್ಯೆ’
ಹಾವೇರಿ: ಕೋವಿಡ್ ಸೇವೆಯಲ್ಲಿ ಜೀವ ಒತ್ತೆಯಿಟ್ಟು ಕರ್ತವ್ಯ ನಿರ್ವಹಿಸಿದ ‘ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ’ಗಳಿಗೆ (ಲ್ಯಾಬ್ ಟೆಕ್ನಿಷಿಯನ್) ರಾಜ್ಯ ಸರ್ಕಾರ ಘೋಷಿಸಿದ ‘ಕೋವಿಡ್ ರಿಸ್ಕ್ ಭತ್ಯೆ’ ಕಾಗದದಲ್ಲೇ ಉಳಿದಿದ್ದು, ಸಿಬ್ಬಂದಿಗಳಿಗೆ ಇನ್ನೂ ದೊರೆತಿಲ್ಲ. ಕೋವಿಡ್ ಸೇವೆಯಲ್ಲಿ ಕರ್ತವ್ಯ ನಿರ್ವಹಿಸಿದ ವೈದ್ಯರಿಗೆ ₹10 ಸಾವಿರ, ಶುಶ್ರೂಷಕ ಅಧಿಕಾರಿಗಳಿಗೆ ₹8 ಸಾವಿರ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಕರ್ತವ್ಯ ನಿರ್ವಹಿಸುವ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳಿಗೆ ₹5 ಸಾವಿರ ‘ಕೋವಿಡ್ ರಿಸ್ಕ್ ಭತ್ಯೆ’ಯನ್ನು 2021ರ …
Read More »ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಆದೇಶ: B.S.Y.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ತಕ್ಷಣ ಹಿಂದಿನ ಬಾಕಿಯೂ ಸೇರಿ ಶೇ.11 ತುಟ್ಟಿ ಭತ್ಯೆಯನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶದಿಂದ 6 ಲಕ್ಷ …
Read More »ವಿಶೇಷ ಜಿಲ್ಲಾಧಿಕಾರಿ: ಐಎಎಸ್ ಅಧಿಕಾರಿ ನೇಮಕಕ್ಕೆ ಸೂಚನೆ
ಕೆಎಎಸ್ ಅಧಿಕಾರಿಗಳಾದ ಎಂ. ಕೆ.ಜಗದೀಶ್ ಮತ್ತು ಬಸವರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಗರದ ವಕೀಲ ವಾಸುದೇವ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಐಎಎಸ್ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ. ‘ಕರ್ನಾಟಕ ಭೂಕಂದಾಯ …
Read More »