ಬೆಂಗಳೂರು: ಮಹಿಳಾ ಕಂಡಕ್ಟರ್ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ. ಇನ್ನು ಮುಂದೆ ಮಾರ್ಷಲ್ ಆಟ್ರ್ಸ್, ಕರಾಟೆಯನ್ನು ಲೇಡಿ ಕಂಡಕ್ಟರ್ಗಳು ಕಲಿಯಲಿದ್ದಾರೆ. ಬಿಎಂಟಿಸಿ ಲೇಡಿ ಕಂಡಕ್ಟರ್ ತಂಟೆಗೆ ಬರೋ ಮುನ್ನ ಹುಷಾರ್ ಆಗಿರಬೇಕು. ಬಸ್ಗಳಲ್ಲಿ ಬೇಕಾ ಬಿಟ್ಟಿಯಾಗಿ ವರ್ತಿಸುವ ಮುನ್ನ ಎಚ್ಚರಿಕೆ ವಹಿಸುವುದು ಒಳ್ಳೆಯದು. ಯಾಕೆಂದರೆ ಮಾರ್ಷಲ್ ಆಟ್ರ್ಸ್, ಕರಾಟೆ, ಸಮರ ಕಲೆಗಳಲ್ಲಿ ಬಿಎಂಟಿಸಿಯ ಲೇಡಿ ಕಂಡಕ್ಟರ್ ಎಕ್ಸ್ ಪರ್ಟ್ಸ್ ಆಗಲಿದ್ದಾರೆ. ಮಹಿಳಾ ಕಂಡಕ್ಟರ್ ಗಳಿಗೆ ಸ್ವರಕ್ಷಣೆ ತರಬೇತಿ ನೀಡಲು …
Read More »ಈ ಬಾರಿ ಆನ್ಲೈನ್ನಲ್ಲಿ ಚಿತ್ರಸಂತೆ
ಬೆಂಗಳೂರು, ನ.21- ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅನೇಕ ನಿರ್ಬಂಧ ಗಳಿರುವುದರಿಂದ 18ನೇ ಚಿತ್ರಸಂತೆಯನ್ನು ಆನ್ಲೈನ್ ಮೂಲಕ ನಡೆಸಲಾಗುವುದು ಎಂದು ಕರ್ನಾಟಕ ಚಿತ್ರಕಲಾ ಪರಿಷತ್ನ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 3ರಂದು ಆನ್ಲೈನ್ ಮೂಲಕ ಚಿತ್ರಸಂತೆ ಉದ್ಘಾಟಿಸಲಾಗುವುದು. ಚಿತ್ರಕಲಾ ಪರಿಷತ್ ಸ್ಥಾಪನೆಯಾಗಿ 60 ವರ್ಷವಾಗಿರುವ ಹಿನ್ನೆಲೆಯಲ್ಲಿ ವಜ್ರಮಹೋತ್ಸವದ ವರ್ಷಾಚರಣೆಯ ಅಂಗವಾಗಿ ಕಲೆಗೆ ಸಂಬಂಸಿದಂತೆ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು ಎಂದರು. 18ನೇ ಚಿತ್ರಸಂತೆಯನ್ನು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, …
Read More »ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಧಾರವಾಡ ಉಪನಗರ ಠಾಣೆಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ್ದ ವಿಜಯ್ ಕುಲಕರ್ಣಿ, ಸಂಜೆ 7 ಗಂಟೆಗೆ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದರು. ಈ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾದಾಗ ಕೊಲೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿ …
Read More »ಸಿಎಂ ಭೇಟಿಗಾಗಿ 80 ಕಿ.ಮೀ. ಪಾದಯಾತ್ರೆ: ರೈತರ ನಿರ್ಧಾರ
ಚಾಮರಾಜನಗರ: ಜಿಲ್ಲೆಯ ನೂರಾರು ರೈತರು ನವೆಂಬರ್ 24ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆಯಾದ ಕೊಳ್ಳೇಗಾಲ ತಾಲೂಕು ಕುಂತೂರಿನಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದು ಇದರ ಉದ್ದೇಶವಾಗಿದೆ. ನವೆಂಬರ್ 25 ಹಾಗೂ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ: ಪ್ರಹ್ಲಾದ್ ಜೋಶಿ
ಧಾರವಾಡ: ಕಾಶ್ಮೀರದಲ್ಲಿ ಉಗ್ರರ ಪಡೆಯನ್ನು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಇಂತಹ ದೇಶದ್ರೋಹಿ ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗ್ಯಾಂಗ್ ಜೊತೆಗಿರುವ ಪಕ್ಷಗಳ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ಗುಪ್ಕಾರ್ ಜೊತೆಗಿನ ಸಂಬಂಧದ ಬಗ್ಗೆ ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ಏ ರಿಸ್ತಾ ಕ್ಯಾ ಕೆಹತಾ ಹೈ ಎಂದು ಕಾಂಗ್ರೆಸ್ ಹೇಳಬೇಕು. ತಾಯಿಗೆ ಹುಷಾರಿಲ್ಲ ಎಂದು …
Read More »ಹಾವೇರಿರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ
ಹಾವೇರಿ: ನಗರದ ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಹಾವೇರಿ ರೈಲ್ವೆ ನಿಲ್ದಾಣಕ್ಕೆ ನೂತನವಾಗಿ `ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. ಇದು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ಗುಂಡಿಗೆ ಬಲಿಯಾದ ಹುತಾತ್ಮ ಮಹದೇವಪ್ಪ ಮೈಲಾರ ಅವರು ಈ ನೆಲದ ಹೆಮ್ಮೆ. ಇಂತಹ …
Read More »ಲಸಿಕೆ ವಿತರಣೆಗೆ ಮೆಗಾ ಪ್ಲಾನ್, ಕೋವಿನ್ ಆ್ಯಪ್ ಅಭಿವೃದ್ಧಿ
ನವದೆಹಲಿ: ಇಡೀ ಮನುಕುಲವನ್ನು ಕಾಡುತ್ತಿರುವ ಹೆಮ್ಮಾರಿ ಕೊರೊನಾಗೆ ಲಸಿಕೆ ಸಿಗುವ ದಿನಗಳು ಹತ್ತಿರವಾಗುತ್ತಿರುವಂತೆಯೇ, ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಲಸಿಕೆ ಹಂಚಿಕೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಲಸಿಕೆಯ 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿರುವ ಪ್ರಧಾನಿ ಮೋದಿ, ಅಡ್ವಾನ್ಸ್ ಆಗಿ ಲಸಿಕೆ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆದಿದ್ದು, ಲಸಿಕೆ ಅಭಿವೃದ್ಧಿ, ಡಿಸಿಜಿಐನಿಂದ ಲಸಿಕೆಗೆ ತುರ್ತು ಅನುಮೋದನೆ, …
Read More »ಭದ್ರಾ ನಾಲೆಯಲ್ಲಿ ತೇಲಿ ಬಂದ ಅಪರಿಚಿತ ಮಹಿಳೆ ಶವ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನೂರಾರು ಕಿ.ಮೀ. ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸ್ನೇಹಿತರ ಜೊತೆ ಈಜಲು ಹೋದ 22 ವರ್ಷದ ಯುವಕ ಸಾವನಪ್ಪಿದ ಘಟನೆ ಮಾಸುವ ಮುನ್ನವೇ ಇಂದು ತರೀಕೆರೆ ತಾಲೂಕಿನ ದೊಡ್ಡ ಕುಂದೂರು ಗ್ರಾಮದ ಬಳಿ ಮಹಿಳೆಯ ಮೃತದೇಹ ತೇಲಿ ಬಂದಿದೆ.ಮೃತ ಮಹಿಳೆ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಆದರೆ ಸುಮಾರು 24 ವರ್ಷದ ಮಹಿಳೆ ಎಂದು ಅಂದಾಜಿಸಲಾಗಿದೆ. ಇದು …
Read More »ಪ್ರತಾಪ್ ಗೌಡ ಪಾಟೀಲ್ ಪಂದ್ಯಾವಳಿ ಉದ್ಘಾಟನೆಯ ಭಾಗವಾಗಿ ಯುವಕರೊಂದಿಗೆ ಕಬಡ್ಡಿ ಆಡಿದರು.
ರಾಯಚೂರು: ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಯುವಕರೊಂದಿಗೆ ಕಬಡ್ಡಿ ಆಡಿದ್ದಾರೆ. ರಾಯಚೂರಿನ ಮಸ್ಕಿ ಉಪಚುನಾವಣೆ ಅಖಾಡ ಸಿದ್ಧವಾಗುತ್ತಿದೆ. ಒಂದೆಡೆ ರಾಜಕಾರಣಿಗಳು ಚುನಾವಣಾ ಕಬಡ್ಡಿಗೆ ಸಿದ್ಧವಾಗುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ನೇರವಾಗಿ ಕಬಡ್ಡಿ ಮೈದಾನದಲ್ಲಿ ಆಟವಾಡಿ ಕ್ರೀಡೋತ್ಸಾಹ ತೋರಿದ್ದಾರೆ.ಮಸ್ಕಿ ತಾಲೂಕಿನ ಬಳಗಾನೂರಿನಲ್ಲಿ ದೈಹಿಕ ಶಿಕ್ಷಕ ಮಹಾದೇವಪ್ಪ ಸ್ಮರಣಾರ್ಥ ಆಯೋಜಿಸಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಪ್ರತಾಪಗೌಡ ಪಾಟೀಲ್ ಭಾಗಿಯಾಗಿದ್ದರು. ಚುನಾವಣಾ ಪ್ರಚಾರದ ಮಧ್ಯೆ …
Read More »ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಸಂಪತ್ ರಾಜ್ ಸೇರಿದ್ದು, ಜೈಲಿನಲ್ಲಿ ಆರೋಪಿಗೆ ರಾಜಾತಿಥ್ಯ
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಮತ್ತು ಬೆಂಗಳೂರು ಗಲಭೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಮಾಜಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಸೇರಿದ್ದು, ಜೈಲಿನಲ್ಲಿ ಆರೋಪಿಗೆ ರಾಜಾತಿಥ್ಯ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೊರೊನಾ ಹಿನ್ನೆಲೆ ಜೈಲು ಸೇರುವ ಹೊಸ ಆರೋಪಿ 14 ದಿನ ಕ್ವಾರಂಟೈನ್ ನಲ್ಲಿರಬೇಕು. ಆದ್ರೆ ಸಂಪತ್ ರಾಜ್ ಗಾಗಿ ನಿಯಮ ಸಡಿಲಿಕೆ ಮಾಡಿ ನೇರವಾಗಿ ಕೊಠಡಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಠಾಣೆಯೊಂದರ …
Read More »