Breaking News

ಇಂದಿನಿಂದ ನಾಲ್ಕು ದಿನ ಮುಂದುವರಿಯಲಿದೆ ಮಳೆಯ ಅಬ್ಬರ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ನಾಲ್ಕು ದಿನ ಮಳೆ ಮುಂದುವರಿಯಲಿದೆ. ಬೆಂಗಳೂರು, ದ.ಕ,ಉ.ಕ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.

Read More »

‘ಬೈಡನ್ ಆಹ್ವಾನದ ಮೇರೆಗೆ ಅಮೆರಿಕ ಪ್ರವಾಸ, ಜಾಗತಿಕ ವಿಚಾರಗಳ ಬಗ್ಗೆ ನಮ್ಮ ಚರ್ಚೆ’ ಅಂದ್ರು ಮೋದಿ

ನವದೆಹಲಿ: ಬೈಡೆನ್ ಅಮೆರಿಕ ಅಧ್ಯಕ್ಷರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಳ್ತಿದ್ದಾರೆ. ಇಂದು ಅಮೆರಿಕಾಕ್ಕೆ ಹೊರಡಲಿರುವ ಮೋದಿ, ಕ್ವಾಡ್‌ ಶೃಂಗ ಸಮ್ಮೇ​ಳನ, ವಿಶ್ವ​ಸಂಸ್ಥೆ 76ನೇ ವಾರ್ಷಿಕ ಸಾಮಾನ್ಯ ಸಭೆ​ಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜೋ ಬೈಡೆನ್‌ ಜತೆ ದ್ವಿಪಕ್ಷೀಯ ಮಾತು​ಕತೆಯನ್ನೂ ನಡೆಸಲಿದ್ದಾರೆ. ಹೀಗಾಗಿ ಮೋದಿ-ಬೈಡೆನ್ ಭೇಟಿ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ..ಭೇಟಿ ವೇಳೆ ಗ್ಲೋಬಲ್ ಪಾರ್ಟನರ್​​ಶಿಪ್​​ ಬಗ್ಗೆ ಸಮಗ್ರವಾಗಿ …

Read More »

ಬೆಂಗಳೂರು ಬಸ್​ನಲ್ಲಿ ಗೀತ ಗೋವಿಂದಂ ಸಿನಿಮಾ ಸ್ಟೈಲ್​ನಲ್ಲಿ ಹುಡುಗಿಗೆ ಮುತ್ತು ಕೊಟ್ಟಿದ್ದ ಬಳ್ಳಾರಿಯ ಇಂಜಿನಿಯರ್​ ಬಂಧನ

ಬೆಂಗಳೂರು: ಸಿನಿಮಾ ಸ್ಟೈಲ್‌ನಲ್ಲಿ ಬಸ್‌ನಲ್ಲಿ ಯುವತಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಯುವತಿಗೆ ಕಿಸ್ ಕೊಟ್ಟಿದ್ದ ಯುವಕನನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ್ ರೆಡ್ಡಿ(25)ಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತು …

Read More »

ಬಿಎಸ್ಎಫ್ ಕ್ಯಾಂಪ್​ನಲ್ಲಿ ಕೊರೊನಾ ರಣಕೇಕೆ, ಮೇಘಾಲಯದಿಂದ ಬಂದಿದ್ದ 70 ಯೋಧರಿಗೆ ಕೊರೊನಾ ಸೋಂಕು

ದೇವನಹಳ್ಳಿ: ಬಿಎಸ್ಎಫ್ ಕ್ಯಾಂಪ್‌ನ 70 ಯೋಧರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಾರಹಳ್ಳಿಯ BSF ಕ್ಯಾಂಪ್ನಲ್ಲಿ ಮೇಘಾಲಯದಿಂದ ಬಂದಿದ್ದ 70 ಯೋಧರಿಗೆ ಕೊರೊನಾ ತಗುಲಿದೆ. ಮೊದಲು 34 ಯೋಧರಲ್ಲಿ ಸೋಂಕು ಪತ್ತೆಯಾಗಿತ್ತು. ಬಳಿಕ ಇಂದು ಮತ್ತೆ 36 ಯೋಧರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 2 ದಿನದಲ್ಲಿ 70 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿದು ಬಂದಿದೆ. ಇನ್ನು 70 ಸೋಂಕಿತರ ಪೈಕಿ …

Read More »

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ

ಬೆಳಗಾವಿ: ಗಣೇಶ ವಿಸರ್ಜನೆಯ ಮೆರವಣಿಗೆ ನೋಡಲು ಬಂದ ಮಹಾರಾಷ್ಟ್ರದ ಮೂಲದ ಯುವಕನಿಗೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ನಡದಿದೆ. ಕೊಲ್ಹಾಪುರ ಮೂಲದ ವಿಶಾಲ್ ಶಿವಡೆ (27) ಚಾಕು ಇರಿತಕ್ಕೊಳಗಾದ ಯುವಕ. ಅಪರಿಚಿತ ಯುವಕರ ಗ್ಯಾಂಗ್ ನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಚಾಕು ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಯುವಕ ಆತನ ಸ್ನೇಹಿತರು ಪಟ್ಟಣಕ್ಕೆ ಬಂದಿದ್ದು ಈ ವೇಳೆ ವೈಯಕ್ತಿಕ …

Read More »

ಅಪಾರ್ಟ್ಮೆಂಟ್​ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?

ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್‌ಮೆಂಟ್​ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ‌ ಸಿಲಿಕಾನ್ ಸಿಟಿ ಜನರನ್ನೇ ಶಾಕ್​ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್‌ಮೆಂಟ್​ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್​ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …

Read More »

ಸನ್ ‘ರೈಸಿಂಗ್’ ಆಗಲು ಮಾಡ್ಬೇಕಿದೆ ಮ್ಯಾಜಿಕ್; ಲಯಕ್ಕೆ ಮರಳುತ್ತಾ ಡೆಲ್ಲಿ ಕ್ಯಾಪಿಟಲ್ಸ್..?

ಮತ್ತೊಂದು ಮೋಸ್ಟ್​​​ ಎಕ್ಸೈಟೆಡ್​​ ಮ್ಯಾಚ್​​ಗೆ ಸಾಕ್ಷಿಯಾಗಲು ದುಬೈ ಮೈದಾನ ಸಜ್ಜಾಗಿದೆ. ಮೊದಲ ಹಂತದ ದರ್ಬಾರ್ ಮುಂದುವರೆಸಲು ಡೆಲ್ಲಿ ರೆಡಿಯಾಗಿದ್ರೆ, ಪಂತ್​ ಪಡೆಗೆ ಬ್ರೇಕ್​ ಹಾಕಲು ವಿಲಿಯಮ್​ಸನ್​ ನೇತೃತ್ವದ ಸನ್​​ ರೈಸರ್ಸ್ ಗೇಮ್​ಪ್ಲಾನ್ ಮಾಡಿಕೊಂಡಿದೆ. ದಿನದಿಂದ ದಿನಕ್ಕೆ ಐಪಿಎಲ್ ಸೆಕೆಂಡ್​ ಹಾಫ್ ರಂಗೇರುತ್ತಿದೆ. ಇಂದು ಮತ್ತೊಂದು ಹೈವೋಲ್ಟೇಜ್​ ಮ್ಯಾಚ್​ಗೆ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂ ಸಜ್ಜಾಗಿದೆ. ಇಂದಿನ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ & ಸನ್ ರೈಸರ್ಸ್ ಹೈದ್ರಾಬಾದ್ ಮುಖಾಮುಖಿಯಾಗ್ತಿದೆ. ಯಂಗ್ vs …

Read More »

ತಾಲಿಬಾನ್​ ಪ್ರತಿನಿಧಿಸಲು ಪಾಕ್ ಅನುಮತಿ ಕೇಳಿದ ಬೆನ್ನಲ್ಲೇ SAARC ಸಭೆಯೇ ರದ್ದು..!

ನವದೆಹಲಿ: ಸೆಪ್ಟೆಂಬರ್ 25ರಂದು ನಿಗದಿಯಾಗಿದ್ದ ವಾರ್ಷಿಕ ಸಾರ್ಕ್ ವಿದೇಶಾಂಗ ಮಂತ್ರಿಗಳ ಸಭೆ ರದ್ದುಗೊಂಡಿದೆ. ಅಫ್ಘಾನಿಸ್ತಾನ ಪ್ರತಿನಿಧಿಸಲು ತಾಲಿಬಾನ್​ಗೆ ಅನುಮತಿ ನೀಡುವಂತೆ ಪಾಕಿಸ್ತಾನ ಮನವಿ ಸಲ್ಲಿಸಿದ್ದ ಬೆನ್ನಲ್ಲೇ ಸಾರ್ಕ್​ ವಿದೇಶಾಂಗ ಮಂತ್ರಿಗಳ ಸಭೆಯನ್ನೇ ರದ್ದುಗೊಳಿಸಲಾಗಿದೆ ಎಂದು ನೇಪಾಳ ವಿದೇಶಾಂಗ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಸೆಪ್ಟೆಂಬರ್ 25ರಂದು ನ್ಯೂಯಾರ್ಕ್​ನಲ್ಲಿ ಯುಎನ್ ಜನರಲ್ ಅಸೆಂಬ್ಲಿಯ 76ನೇ ಅಧಿವೇಶನದಲ್ಲಿ ಭಾಗವಹಿಸಬೇಕಿತ್ತು. ಆದರೆ ಎಲ್ಲಾ ಸದಸ್ಯ ರಾಷ್ಟ್ರಗಳ ಒಪ್ಪಿಗೆಯ ಕೊರತೆಯಿಂದ ಸಭೆ ರದ್ದುಗೊಂಡಿದೆ ಎಂದು ನೇಪಾಳದ …

Read More »

ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ

ಬೆಂಗಳೂರು : ಇದೀಗ ತಬ್ರೇಜ್​ನನ್ನು ಬಂಧಿಸಲಾಗಿದೆ. ಎಸ್​ಡಿಪಿಐ, ಪಿಎಫ್​ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್​, ವಾಟ್ಸಪ್​ ಗ್ರೂಪ್​ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್​ ಮೇಲಿತ್ತು.

Read More »

ಐವರ ಅಸಹಜ ಸಾವು ಕೇಸ್: ಅಬಕಾರಿ ಅಧಿಕಾರಿಗಳ ಸುಲಿಗೆಗೆ ಇಳಿದಿದ್ದನಂತೆ ಶಂಕರ್..!

ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಅಸಹಜ ಸಾವು ಕಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನ ಕಳೆದಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ ಬೆನ್ನಲ್ಲೇ ಆರೋಪಿ ಶಂಕರ್ ವಿರುದ್ಧ  ಮಾಹಿತಿ ಹಕ್ಕು ಕಾಯ್ದೆ (RTI) ಯನ್ನು ದುರುಪಯೋಗ ಪಡಿಸಿಕೊಂಡು ಹಣ ಪೀಕಿರುವ ಆರೋಪ ಕೇಳಿ ಬಂದಿದೆ. ಅಬಕಾರಿ ಇಲಾಖೆಯಲ್ಲಿ ಗಾರ್ಡ್​ ಆಗಿದ್ದ ಶಂಕರ್..! ರಾಜ್ಯದ ವಿವಿಧ ಅಬಕಾರಿ ಅಧಿಕಾರಿಗಳೇ ಈತನ ಟಾರ್ಗೆಟ್..! ಶಂಕರ್ …

Read More »