Breaking News

ಉಪ ಚುನಾವಣೆ: ಹಾನಗಲ್ ಮತದಾರರಿಗೆ ಭಾರಿ ಭರವಸೆ ಕೊಟ್ಟ ಸಿಎಂ ಬೊಮ್ಮಾಯಿ!

ಹಾನಗಲ್, ಅ. 22: ಉಪ ಚುನಾವಣೆ ಪ್ರಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಗಲ್ ಕ್ಷೇತ್ರದ ಮತದಾರರಿಗೆ ಭಾರಿ ಭರವಸೆ ಕೊಟ್ಟಿದ್ದಾರೆ. “ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಡವರಿಗೆ ಸೂರು ಕಲ್ಪಿಸಿಕೊಡಲು ಒಟ್ಟು 7.5 ಸಾವಿರ ಮನೆಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕ್ಷೇತ್ರದ ಬೆಳಗಾಲಪೇಟೆ ಗ್ರಾಮದಲ್ಲಿ ಶುಕ್ರವಾರ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದಾರೆ. “ಘೋಷಿಸಿದ ಮನೆಗಳಿಂದ ಬಡವರ ಅಭಿವೃದ್ಧಿಯಾಗುವುದಿಲ್ಲ. ಅವರಿಗೆ ಸೂರು ಸಿಗುವುದಿಲ್ಲ. ಆದರೆ ನಾನು ಹಾನಗಲ್ ಕ್ಷೇತ್ರಕ್ಕೆ …

Read More »

ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು : ಸಚಿವ ಜಗದೀಶ ಶೆಟ್ಟರ್

ವಿಜಯಪುರ: ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು, ಒಂದೆರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಅಲ್ಲಿ ಕೂಡ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಜಾಬ್ ನಲ್ಲಿ ಒಬ್ಬ ಸಿಧು ಹಾಗೂ ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ರಾಜ್ಯದ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯದ ಫೈಟ್ ನಿಂದಾಗಿ ರಾಜ್ಯದಲ್ಲಿ ಸಹಿತ ಕಾಂಗ್ರೆಸ್ ಸಂಪೂರ್ಣವಾಗಿ ಮುಳುಗಿ ಹೋಗುತ್ತದೆ ಎಂದರು. ಐದು ವರ್ಷ ಮುಖ್ಯಮಂತ್ರಿ ಆದ ಸಿದ್ದರಾಮಯ್ಯ ತಾವೇ ಸೋಲನ್ನು ಅನುಭವಿಸಿದರು. …

Read More »

ಈ ಬಾರಿ ಕಿತ್ತೂರು ಉತ್ಸವದ complete details

ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮ ಉತ್ಸವವು ಅ.೨೩ ಹಾಗೂ ೨೪ ರಂದು ಜರುಗಲಿದೆ. ಈ ಬಾರಿ ಕಿತ್ತೂರು ಉತ್ಸವದ (೨೫ ವರ್ಷ) ಬೆಳ್ಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಿತ್ತೂರಿನ ಕೋಟೆ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅ.೨೩ ರಂದು ಕಿತ್ತೂರಿನ ಕೋಟೆ ಆವರಣದಲ್ಲಿ ಸಾಯಂಕಾಲ ೭ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ರಿಷಬ್‌ ಶೆಟ್ಟಿ

ಬೆಂಗಳೂರು: ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಹೀಗೆಂದು ಸಿನಿಮಾ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ. ಭಾಷಾ ಸೂಕ್ಷ್ಮ ಪ್ರದೇಶವಾಗಿರುವ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕೋವಿಡ್‌ ನಿಯಮಗಳಿಗೆ ಒಳಪಟ್ಟು ಆಚರಣೆ ಮಾಡಬೇಕಾಗಿ ಇತ್ತೀಚಿನ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಅವಕಾಶ ಕೋರಿ ಈಗಾಗಲೇ ಕನ್ನಡ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿವೆ. ಹೀಗಿರುವಾಗಲೇ ಟ್ವೀಟ್‌ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ನಟ, ನಿರ್ದೇಶಕ ರಿಷಬ್‌ ಶೆಟ್ಟಿ, ಕನ್ನಡ …

Read More »

ಅಕ್ಕಿನೇನಿ ನಾಗಾರ್ಜುನಗೆ ಕಿಸ್ ಮಾಡೋಕೆ ದೊಡ್ಡ ಮೊತ್ತದ ಬೇಡಿಕೆ ಇಟ್ಟ ಅಮಲಾ ಪೌಲ್​

ಕಾಜಲ್​ ಗರ್ಭಿಣಿ ಎನ್ನುವ ಮಾತಿದೆ. ಈ ಕಾರಣಕ್ಕೆ ಅವರು ಒಂದಾದಮೇಲೆ ಒಂದು ಸಿನಿಮಾದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಗೋಸ್ಟ್​’ ಸಿನಿಮಾಗೆ ಗುಡ್​ಬೈ ಹೇಳಿದ್ದರು. ಅಕ್ಕಿನೇನಿ ನಾಗಾರ್ಜುನ ವಯಸ್ಸು 60 ದಾಟಿದೆ. ಆದರೆ, ಇನ್ನೂ ಅವರು ಯಂಗ್​ ಆಗಿದ್ದಾರೆ. ತೆರೆಮೇಲೆ ಯುವ ಕಲಾವಿದರನ್ನೂ ನಾಚಿಸುವಂತೆ ನಟಿಸುತ್ತಾರೆ. ಅವರ ಸಿನಿಮಾದಲ್ಲಿ ಹೀರೋಯಿನ್​ ಆಯ್ಕೆಗೂ ಮಹತ್ವ ನೀಡಲಾಗುತ್ತದೆ. ಈಗ ‘ಗೋಸ್ಟ್​’​ ಸಿನಿಮಾದಿಂದ ಕಾಜಲ್​ ಅಗರ್​ವಾಲ್​ ಹಿಂದೆ ಸರಿದಿದ್ದಾರೆ. ಇದಕ್ಕೆ ಈಗ ಅಮಲಾ ಪೌಲ್​ ಎಂಟ್ರಿ …

Read More »

ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ

ಗೋಕಾಕ: ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಮಹಾಂತಯ್ಯ ಮಲ್ಲಿಕಾರ್ಜುನ ಮಠದ ಇವರು ಇದೆ ತಿಂಗಳು 29ರಂದು ಹರಿಯಾಣ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಯನ್ನು ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ಬಿ ಮನ್ನಿಕೇರಿ, ಡಿಪಿಇಒ ಸಾಂಗಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ …

Read More »

90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ರಮೇಶ ಜಾರಕಿಹೊಳಿ

ಗೋಕಾಕ: ಕೊರೋನಾ ಆಘಾತದಿಂದ ಸಹಜ ಸ್ಥಿತಿಯತ್ತ ಶಾಲೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಹಾಗೂ ಕಠೀಣ ಪರಿಶ್ರಮದಿಂದ ಶೈಕ್ಷಣಿಕವಾಗಿ ಪ್ರಗತಿಸಾಧಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಸರ್ವಶಿಕ್ಷಣ ಅಭಿಯಾನದಲ್ಲಿ 90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಾಲೆಗಳಲ್ಲಿ ಕೊರೋನಾ ವೈರಸ್ ನಿಯಂತ್ರಣ ನಿರ್ದೇಶನಗಳನ್ನು …

Read More »

ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ

ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ ಮಾಡಿದ ವೈದ್ಯರಿಗೆ,ದಾದಿಯರಿಗೆ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಶಾಸಕ ರಮೇಶ ಜಾರಕಿಹೋಳಿಯವರು ಧನ್ಯವಾದ ಭಾರತ ಧನ್ಯವಾದ ಮೋದಿಜಿ ಸಂಬ್ರಮಾಚರಣೆ ಕಾರ್ಯಕ್ರಮದಲ್ಲಿ ಸತ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ನಂತರ ಸರಕಾರಿ ಎಕ್ಸ್ ಮುನಿಸಪಲ್ ಪದವಿ ಪೂರ್ವ ಕಾಲೇಜ ಗೋಕಾಕ ಆವರಣದಲ್ಲಿ 90ಲಕ್ಷ ಅನುದಾನದಡಿಯಲ್ಲಿ ನೂತನ ಶಾಲಾ ಕೊಠಡಿಯನ್ನು …

Read More »

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ. ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ. ಗೋಲಿಬಾರ್ ಘಟನೆ ಸಂಬಂಧ ‌ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ …

Read More »

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

ಹಾವೇರಿ: ‘ನಾನು ಬಿಜೆಪಿಗೆ ಬರಲು, ಶಾಸಕನಾಗಲು, ಸಚಿವನಾಗಲು ಮತ್ತು ಮುಖ್ಯಮಂತ್ರಿಯಾಗಲು ಯಡಿಯೂರಪ್ಪ ಅವರು ಕಾರಣ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಬೊಮ್ಮನಹಳ್ಳಿಯಲ್ಲಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ , ‘ನಮ್ಮ ನಾಯಕ ಯಡಿಯೂರಪ್ಪ ಅವರು ಇಲ್ಲಿಗೆ ನೂರು ಬಾರಿ ಬಂದಿದ್ದಾರೆ, ಅವರು ಹಾಗೂ ಸಿಎಂ ಉದಾಸಿ ಅವರ ಚಿಂತನೆಯನ್ನು ಇಡಿ ನಾಡು ನೋಡಿದೆ. ರೈತರ ವಿಚಾರದಲ್ಲಿ ಯಡಿಯೂರಪ್ಪ ಎಂದು ರಾಜಿ‌ ಮಾಡಿಕೊಂಡಿಲ್ಲ. ಬಿಜೆಪಿ ಮಾಡಿರುವ ಯೋಜನೆಗಳು …

Read More »