Breaking News

ಗೋವಾ : ಶೇ. 70 ರಷ್ಟು ಮೀನುಗಾರಿಕಾ ಬೋಟ್‍ ಗಳು ದಡದಲ್ಲಿಯೇ ಸ್ತಬ್ಧ.!

ಪಣಜಿ : ಗೋವಾದಲ್ಲಿ ಮೀನುಗಾರಿಕೆ ಪುನರಾರಂಭಗೊಂಡು 20 ದಿನಗಳು ಕಳೆದರೂ ಕೂಡ ಕಾರ್ಮಿಕರ ಕೊರತೆಯಿಂದಾಗಿ ಮತ್ತು ಹವಾಮಾನ ವೈಪರಿತ್ಯದಿಂದಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆಯೇ ಶೇ 70 ರಷ್ಟು ಮೀನುಗಾರಿಕಾ ಬೋಟ್‍ಗಳು ದಡದಲ್ಲಿಯೇ ನಿಂತಿರುವಂತಾಗಿದೆ. ರಾಜ್ಯದ ವಿವಿಧ ಜೆಟಿಗಳಲ್ಲಿ ಶೇ 70 ಕ್ಕೂ ಹೆಚ್ಚು ಮೀನುಗಾರಿಕಾ ಬೋಟ್‍ಗಳು ನಿಂತಿರುವ ದೃಶ್ಯ ಕಂಡುಬರುತ್ತಿದೆ. ಮಳೆಗಾಲದಲ್ಲಿ 61 ದಿನಗಳ ಮೀನುಗಾರಿಕಾ ನಿರ್ಬಂಧದ ನಂತರ ಅಗಷ್ಟ 1 ರಿಂದ ಮೀನುಗಾರಿಕೆ ಪುನರಾರಂಭಗೊಂಡಿದೆಯಾದರೂ ಹವಾಮಾನ ವೈಪರಿತ್ಯದಿಂದ …

Read More »

ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಾಯಚೂರು : ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಜನಾಶೀರ್ವಾದ ಸಮಾರಂಭವನ್ನು ನಡೆಸುತ್ತಿದ್ದು , ಇದಕ್ಕೂ ಪೂರ್ವದಲ್ಲಿ ಸಾರ್ವಜನಿಕರಿಗೆ ಏನನ್ನು ನೀಡಿ ಆಶೀರ್ವಾದ ಪಡೆಯಲು ಮುಂದಾಗಿರುವುದರ ಬಗ್ಗೆ ಬಿಜೆಪಿಗರು ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ . ಕೆ . ಶಿವಕುಮಾರ ಲೇವಡಿ ಮಾಡಿದ್ದಾರೆ . ಸ್ಥಳೀಯ ಖಾಸಗಿ ಹೋಟೆಲ್ ‌ ನಲ್ಲಿ ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ , ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು …

Read More »

ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿದೆ ರೆಸಿಡೆನ್ಸಿಯಲ್ ಟೌನ್ ಶಿಪ್: ಮುರುಗೇಶ್ ನಿರಾಣಿ

ಬೆಂಗಳೂರು: ಇನ್ನು ಮುಂದೆ ಕೈಗಾರಿಕಾ ಪ್ರದೇಶಗಳಲ್ಲಿ ಶೇ.10ರಿಂದ 15ರಷ್ಟು ಜಾಗವನ್ನು ವಸತಿ ಬಡಾವಣೆ (ರೆಸಿಡೆನ್ಸಿಯಲ್ ಟೌನ್‍ಶಿಪ್) ಗಳ ನಿರ್ಮಾಣದ ಉದ್ದೇಶಕ್ಕಾಗಿ ಮೀಸಲಿಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಮುರುಗೇಶ್ ನಿರಾಣಿ ಎಂದು ಹೇಳಿದ್ದಾರೆ. ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) …

Read More »

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು

ವಿದ್ಯುತ್ ಸ್ಪರ್ಶದಿಂದ ನೆಲಕ್ಕೆ ಬಿದ್ದವರನ್ನ ಲಿಂಗಸಗೂರು ತಾಲುಕು ಅಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರು: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶವಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೊಹರಂ ದೇವರನ್ನ ಹೊತ್ತಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ದೇವರನ್ನು ಹೊತ್ತಿದ್ದ ಹುಸೇನ್‌ ಸಾಬ್ (50) ಮತ್ತು ಒಬ್ಬ ಮಹಿಳೆ ಅಸುನೀಗಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆ ಕೆಲ್ಲೂರು …

Read More »

ಇನ್ನೂ ಬಾರದ ಜಾಮೀನು ಆದೇಶ ಪ್ರತಿ: ಇನ್ನೊಂದು ದಿನ ಜೈಲಲ್ಲೇ ವಿನಯ್ ಕುಲಕರ್ಣಿ ವಾಸ್ತವ್ಯ

ಬೆಳಗಾವಿ: ಜಿ.ಪಂ ಸದಸ್ಯನ ಕೊಲೆ‌ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಶುಕ್ರವಾರವೂ ಬಿಡುಗಡೆ ಭಾಗ್ಯ ಸಿಗಲಿಲ್ಲ. ಜಾಮೀನು ಸಿಕ್ಕರೂ ಆದೇಶ ಪ್ರತಿ ಬಾರದ ಕಾರಣ ಇನ್ನೊಂದು ದಿನ‌ ಜೈಲಿನಲ್ಲಿ ಉಳಿಯಬೇಕಾದ ಅನಿವಾರ್ಯತೆ ಒದಗಿ ಬಂದಿದೆ. ಸುಪ್ರೀಂ ಕೋರ್ಟ್ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದರೂ ಇನ್ನೊಂದು ದಿನ ಜೈಲಿನಲ್ಲಿ ಉಳಿಯಬೇಕಾಗಿದೆ.‌ ವರಮಹಾಲಕ್ಷ್ಮೀ ಹಬ್ಬದಂದು ಶುಕ್ರವಾರ ಬಿಡುಗಡೆ ಆಗಲಿಲ್ಲ. ಹಿಂಡಲಗಾ ಜೈಲಿನಿಂದ ಬಿಡುಗಡೆ …

Read More »

ಬೆಂಗಳೂರು: 18 ಕುಖ್ಯಾತ ರೌಡಿಗಳ ಸ್ಥಳಾಂತರ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 18 ರೌಡಿಗಳನ್ನು ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ವಿಲ್ಸನ್ ಗಾರ್ಡನ್ ನಾಗರಾಜ್, ಶಿವ, ಜಾರ್ಜ್ ಮೈಕಲ್, ಪ್ರದೀಪ್, ಬಾಂಬೆ ಸಲೀಂ ಸೇರಿ ಒಟ್ಟು18 ಜನ ರೌಡಿಗಳನ್ನು ಸ್ಥಳಾಂತರಿಸಲಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ರೌಡಿಗಳು, ಜೈಲಿನಲ್ಲಿದ್ದುಕೊಂಡೆ ತಮ್ಮ ಸಹಚರರ ಮೂಲಕ ನಗರದಲ್ಲಿ ರೌಡಿ ಚಟುವಟಿಕೆಗಳನ್ನು ನಡೆಸುವ ಸಂಚು ರೂಪಿಸುವ ಯತ್ನ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ …

Read More »

4 ವರ್ಷಗಳ ಬಳಿಕ ಮಾಜಿ ರೌಡಿ ಶೀಟರ್ಸ್​​ ಅಗ್ನಿ ಶ್ರೀಧರ್​​, ಬಚ್ಚನ್​​ಗೆ ವಾರ್ನಿಂಗ್​​ ಕೊಟ್ಟ ಪೊಲೀಸರು​?

ಬೆಂಗಳೂರು: ​ನಾಲ್ಕು ವರ್ಷಗಳ ಬಳಿಕ ಪತ್ರಕರ್ತ ಮತ್ತು ಮಾಜಿ ರೌಡಿ ಶೀಟರ್ ಅಗ್ನಿ ಶ್ರೀಧರ್​​ ಅವರಿಗೆ ಬೆಂಗಳೂರು ಪೊಲೀಸರು ವಾರ್ನಿಂಗ್​​ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಯಾವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ಡಿಸಿಪಿ ಹರೀಶ್​​ ಪಾಂಡೆ ಕುಮಾರಸ್ವಾಮಿ ಲೇಔಟ್ ಠಾಣೆಗೆ ಕರೆಸಿ ವಾರ್ನ್​​ ಮಾಡಿದ್ದಾರೆ. ಅಲ್ಲದೇ CRPC 110 ಅಡಿ ಮುಚ್ಚಳಿಕೆ ಬರೆಸಿಕೊಂಡು ಕಳಿಸಿದ್ದಾರೆ. ಅಗ್ನಿ ಶ್ರೀಧರ್​​​, ಬಚ್ಚನ್​​ ಸೇರಿದಂತೆ 100ಕ್ಕೂ ಹೆಚ್ಚು ರೌಡಿ ಶೀಟರ್​​​ಗಳಿಗೆ ವಾರ್ನಿಂಗ್​​ ಕೊಟ್ಟು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. …

Read More »

ವರಮಹಾಲಕ್ಷ್ಮೀ ಹಬ್ಬಕ್ಕಿಲ್ಲ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನ

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ವರಮಹಾಲಕ್ಷ್ಮಿ ದರ್ಶನ ಪಡೆಯಬೇಕು ಎಂದುಕೊಂಡಿದ್ದ ಭಕ್ತರಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರಿಗೆ ಅವಕಾಶ ನೀಡದೆ ದೇವಾಲಯ ಬಂದ್ ಮಾಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲಾಡಳಿತ ಸೂಚನೆ ಹಿನ್ನೆಲೆಯಲ್ಲಿ ದೇವಾಲಯ ಬಂದ್ ಮಾಡಿ ಆಡಳಿತ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯದ ಅರ್ಚಕರಿಂದ …

Read More »

ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಜಾನ್ಸ್‌ನ್ ಅಂಡ್ ಜಾನ್ಸ್‌ನ್ ನಿಂದ ಮನವಿ

ನವದೆಹಲಿ,ಆ.20- ಕೊರೊನಾ ವಿರುದ್ಧ ಹೋರಾಟದ ಭ್ರಹ್ಮಾಸ್ತ್ರವಾಗಿರುವ ಲಸಿಕೆ ಅವಿಷ್ಕಾರಗಳು ದಿನೇ ದಿನೇ ಪ್ರಗತಿ ಸ್ವರೂಪದಲ್ಲಿದ್ದು, ಹೊಸದಾಗಿ ಜಾನ್ಸನ್ ಅಂಡ್ ಜಾನ್ಸ್‍ನ್ ಸಂಸ್ಥೆ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಧ್ಯಯನ ನಡೆಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‍ಸಿಒ)ಗೆ ಅರ್ಜಿ ಸಲ್ಲಿಸಿದ್ದು, ಪ್ರಾಯೋಗಿಗ ಪರೀಕ್ಷೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದ್ದಾದರೆ ಜಾನ್ಸನ್ ಅಂಡ್ ಜಾನ್ಸನ್ ಮಕ್ಕಳಿಗೆ …

Read More »

NASA ಪ್ರಶಸ್ತಿಗೆ ಭಾಜನರಾದ ಕನ್ನಡಿಗ -ಬರೋಬ್ಬರಿ ₹1.41 ಕೋಟಿ ವಿದ್ಯಾರ್ಥಿ ವೇತನ

ಶಿರಸಿ: ಹಂಟ್ಸ್‌ವಿಲ್​​​ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ (UAH) ಇಬ್ಬರು ಡಾಕ್ಟರೇಟ್ ವಿದ್ಯಾರ್ಥಿಗಳು ಸಲ್ಲಿಸಿರುವ ಸಂಶೋಧನಾ ಪ್ರಸ್ತಾವನೆಯನ್ನು​ ಬಾಹ್ಯಾಕಾಶ ವಿಜ್ಞಾನ ವಿಭಾಗವು ನಾಸಾ ಅರ್ಥ್ ಮತ್ತು ಸ್ಪೇಸ್ ಸೈನ್ಸ್ ಮತ್ತು ಟೆಕ್ನಾಲಜಿ (FINESST) ಅನುದಾನದಲ್ಲಿ NASA ಫ್ಯೂಚರ್​ ಇನ್​ವೆಸ್ಟಿಗೇಟರ್​ ಪ್ರಶಸ್ತಿಗೆ ಭಾಜನವಾಗಿದೆ. ಕ್ಯಾಥರೀನ್ ಡೇವಿಡ್ಸನ್ ಮತ್ತು ದಿನೇಶ (ದಿನೇಶ್) ವಸಂತ ಹೆಗಡೆ ತಲಾ 1,35,000 ಅಮೆರಿಕನ್​ ಡಾಲರ್ ಅನ್ನು ​ಸ್ಟೈಫಂಡ್, ಟ್ಯೂಷನ್, ಸಂಶೋಧನಾ ಚಟುವಟಿಕೆಗಳು ಮತ್ತು ಪ್ರಯಾಣ ವೆಚ್ಚಗಳನ್ನು ಭರಿಸಲು, ಕಾರ್ಯಾಗಾರಗಳು ಮತ್ತು …

Read More »