ಲಂಡನ್: ಶಮಿ-ಬುಮ್ರಾ ಅವರ ಅಮೋಘ ಆಲ್ರೌಂಡ್ ಪ್ರದರ್ಶನ, ಸಿರಾಜ್ ಅವರ ಘಾತಕ ಬೌಲಿಂಗ್ ಸಾಹಸದಿಂದ ಇಂಗ್ಲೆಂಡ್ ಎದುರಿನ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಭಾರತ 151 ರನ್ನುಗಳ ಜಯಭೇರಿ ಮೊಳಗಿಸಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬ್ರಿಟಿಷರ ನಾಡಿನಿಂದ ಭರ್ಜರಿ ಉಡುಗೊರೆಯೊಂದನ್ನು ರವಾನಿಸಿದೆ. 272 ರನ್ನುಗಳ ಗುರಿ ಪಡೆದ ಆಂಗ್ಲರ ಪಡೆ 51.5 ಓವರ್ಗಳಲ್ಲಿ 120ಕ್ಕೆ ಕುಸಿಯಿತು. ಸಿರಾಜ್ 4, ಬುಮ್ರಾ 3, ಇಶಾಂತ್ 2 ವಿಕೆಟ್ ಉಡಾಯಿಸಿ ರೂಟ್ ಬಳಗಕ್ಕೆ …
Read More »ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಜೊಲ್ಲೆ
ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಪ್ರವಾಹ ಪೀಡಿತ ಸಿದ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನೆರೆಯಿಂದ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಗಳನ್ನು ನಾನು ಮನಗಂಡಿದ್ದೇನೆ. ಹೀಗಾಗಿ ನಿಮ್ಮೆಲ್ಲರ ಸಮಸ್ಯೆಗೆ ಶೀಘ್ರದಲ್ಲಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ಸೂಕ್ತ …
Read More »ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ
ಚಿಕ್ಕೋಡಿ: ನೆರೆ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ್ರಸ್ತರು ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹದಿಂದಾಗಿ ಬಿದ್ದಿರುವ ಮನೆಗಳ ಸರ್ವೆಕಾರ್ಯವನ್ನ ಕ್ಷೀಪ್ರಗತಿಯಲ್ಲಿ ಮುಗಿಸಬೇಕು. ಬಿದ್ದಿರುವ ಯಾವುದೇ ಮನೆಗಳು …
Read More »ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿ
ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನ. ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ. ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Read More »ಅಪ್ಘಾನಿಸ್ತಾನ ದುರಂತ: ಟೇಕಾಫ್ ಆಗಿದ್ದ ವಿಮಾನದಿಂದ ಬಿದ್ದು ಇಬ್ಬರು ದಾರುಣ ಸಾವು
ಅಪ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದುಕೊಂಡ ಬಳಿಕ ವಿವಿಧ ದೇಶಗಳು ತಮ್ಮ ನಾಗರಿಕರ ರಕ್ಷಣೆಗೆ ಮುಂದಾಗಿದೆ. ಕಾಬೂಲ್ನಿಂದ ಹೊರಡುತ್ತಿದ್ದ ವಿಮಾನಗಳನ್ನು ಹತ್ತಲು ಜನರ ದಂಡೇ ಹರಿದು ಬರ್ತಿದ್ದ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಕಾಬೂಲ್ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ನಾಗರಿಕ ವಿಮಾನಗಳನ್ನು ಸ್ಥಗಿತಗೊಳೊಸಲಾಗಿದೆ. ಇದರಿಂದ ಹತಾಶರಾಗಿದ್ದ ಇಬ್ಬರು ಪ್ರಯಾಣಿಕರು ರನ್ವೇನಿಂದ ಟೇಕಾಫ್ ಆಗುತ್ತಿದ್ದ ಮಿಲಿಟರಿ ವಿಮಾನದ ಚಕ್ರವನ್ನು ಹಿಡಿದುಕೊಂಡು ಹಾರಿದ್ದಾರೆ. ಮಿಲಿಟರಿ …
Read More »ಸಿಎಂ ಭೇಟಿ ವೇಳೆ ಮೊಬೈಲ್ ನಿಷೇಧ..!
ಬೆಂಗಳೂರು,ಆ.16- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುವ ಸಾರ್ವಜನಿಕರ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆರ್ಟಿನಗರದಲ್ಲಿರುವ ಅವರ ನಿವಾಸದ ಮುಂದೆ ಫಲಕವನ್ನು ಹಾಕಲಾಗಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು ಮೊಬೈಲ್ಗಳನ್ನು ಬಳಸಬಾರದೆಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಮೊಬೈಲ್ ಬಳಕೆ ಮಾಡಿದರೆ ಅಂಥವರಿಗೆ ಭೇಟಿಗೆ ಅವಕಾಶವನ್ನೇ ಕೊಡುವುದಿಲ್ಲ ಎಂದು ಎಚ್ಚರಿಸಲಾಗಿದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ತಮ್ಮ ಕೆಲಸ ಮುಗಿಸಿಕೊಂಡು ಹೋಗುವ ಬದಲು ಸೆಲ್ಫಿಗೆ ಮುಗಿಬೀಳುವುದು, …
Read More »ಷ್ಟ್ರಗೀತೆ ಬಗ್ಗೆ ಕಾಮನ್ ಸೆನ್ಸ್ ಇಲ್ವಾ?’; ಸುದೀಪ್ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್
ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್ ಒಳಗೆ ಹಾಡಬೇಕು. ಆದರೆ ಸುದೀಪ್ ಅವರು ಅಂದಾಜು 65 ಸೆಕೆಂಡ್ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್ ಮಾಡಿದ್ದಾರೆ. ಆ.15ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು (75th Independence Day) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ (National Anthem) ಹಾಡಿ, ಸಿಹಿ ಹಂಚುವ ಮೂಲಕ ಆಚರಣೆ ಜೋರಾಗಿತ್ತು. ಅನೇಕ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್ (Kichcha …
Read More »ಪ್ರಯಾಣಿಕರಿಗೆ ನೆಕ್ಲೇಸ್ ಮರಳಿಸಿದ ಸಾರಿಗೆ ಸಿಬ್ಬಂದಿ
ಕಲಬುರ್ಗಿ: ವಿಜಯಪುರ ಜಿಲ್ಲೆಯ ಗಬಸಾವಳಗಿ ಗ್ರಾಮದಿಂದ ಕಲಬುರ್ಗಿಗೆ ಬಂದ ಪ್ರಯಾಣಿಕರೊಬ್ಬರು ಚಿನ್ನದ ಸರವಿದ್ದ ಬ್ಯಾಗ್ ಬಿಟ್ಟು ಹೋಗಿದ್ದನ್ನು ಗಮನಿಸಿದ ಸಾರಿಗೆ ಸಂಸ್ಥೆ ಸಿಬ್ಬಂದಿ ಅದನ್ನು ಪ್ರಯಾಣಿಕರಿಗೆ ವಾಪಸ್ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ವಿಜಯಪುರದ ಯರಗಲ್ ಗ್ರಾಮದ ಮಹೇಶ ಬಡಿಗೇರ ಅವರು ಭಾನುವಾರ ವಿಜಯಪುರ-ಕಲಬುರ್ಗಿ ಮಧ್ಯೆ ಸಂಚರಿಸುತ್ತಿದ್ದ ಬಸ್ನಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ಬಸ್ ಕಾರ್ಯಾಚರಣೆ ಮುಗಿಸಿ ಘಟಕ 1ಕ್ಕೆ ವಾಪಸಾದಾಗ ಚಾಲಕ ರಾಘವೇಂದ್ರ ಹಾಗೂ ನಿರ್ವಾಹಕ ಖಂಡೋಬಾ ಅವರು ಆ …
Read More »ಕಾರ್ ಮೇಲೆ ಒಂಟಿ ಸಲಗ ದಾಳಿ, ನಾಲ್ವರಿಗೆ ಗಾಯ, ಓರ್ವ ಗಂಭೀರ
ಬೆಂಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಬಳಿ ಒಂಟಿ ಸಲಗ ದಾಳಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಒಂಟಿ …
Read More »ಶಾಲೆ ಆರಂಭಕ್ಕೆ ಹೊಸ ಗೈಡ್ ಲೈನ್ ಪ್ರಕಟ
ಬೆಂಗಳೂರು: ಆಗಸ್ಟ್ 23ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್ 23ರಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಗೈಡ್ ಲೈನ್ ಪ್ರಮುಖಾಂಶಗಳು: ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10-1:30 ಗಂಟೆಯವರೆಗೆ ತರಗತಿಗಳು ನಡೆಯಲಿವೆ ಶನಿವಾರ ಬೆಳಿಗ್ಗೆ 10ರಿಂದ 12:30ವರೆಗೆ ತರಗತಿಗಳು ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ …
Read More »