ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ನಲಪಾಡ್, ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ನಿಮಗೆ ಯಾರೂ ಸಹಾಯ ಮಾಡಿಲ್ಲ ಕಾಂಗ್ರೆಸ್ ಮಾತ್ರ ನಿಮ್ಮ ಕಷ್ಟಕ್ಕೆ ಸ್ಪಂದಿಸಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ …
Read More »80 ಲಕ್ಷ ರೂ. ವೆಚ್ಚದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ
ಗೋಕಾಕ: ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಮತಕ್ಷೇತ್ರದಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ …
Read More »ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವ ಬೆನ್ನಲ್ಲೇ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದ್ದು, ಇದೀಗ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ ಸದಾನಂದಗೌಡರು ರಾಜೀನಾಮೆ ನೀಡಿದ್ದಾರೆ. ಸದಾನಂದಗೌಡರಿಗೆ ರಾಜ್ಯ ರಾಜಕರಣದತ್ತ ಗಮನ ಹರಿಸಲು ಸೂಚಿಸಲಾಗಿದೆ ಎನ್ನಲಾಗಿದೆ. ಇನ್ನು ಸದಾನಂದಗೌಡರಿಂದ ತೆರವಾದ ಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಯ್ಕೆ …
Read More »ಸುಗಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸವಿದೆ: ಶಶಿಕಲಾ ಜೊಲ್ಲೆ
ಚಿಕ್ಕೋಡಿ: ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಸುಗಮವಾಗಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರು …
Read More »ಕೇಂದ್ರ ಸಚಿವ ಸ್ಥಾನಕ್ಕೆ `ರಮೇಶ್ ಪೋಕ್ರಿಯಾಲ್ ನಿಶಾಂಕ್’ ರಾಜೀನಾಮೆ
ನವದೆಹಲಿ : ಇಂದು (ಬುಧವಾರ) ಸಂಜೆ ಕೇಂದ್ರ ಸಚಿವರ ಪರಿಷತ್ತಿನ ಪುನರ್ರಚನೆ ಮತ್ತು ವಿಸ್ತರಣೆಯ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವ್ರು ತಮ್ಮ ಅಧಿಕೃತ ನಿವಾಸದಲ್ಲಿ ಸಚಿವ ಹುದ್ದೆಯ ಸಂಭಾವ್ಯರನ್ನ ಭೇಟಿಯಾದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಧಾನಿ ನಿವಾಸದಲ್ಲಿ ಉಪಸ್ಥಿತರಿದ್ದರು. …
Read More »ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ
ವಿಜಯನಗರ: ನಿನ್ನೆ ಸುರಿದ ಭಾರೀ ಮಳೆಗೆ ಗಂಡ ಹೆಂಡತಿಯಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಮೊತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55) ಹಾಗೂ ಅವರ ಪತ್ನಿ ಗದಗ ಜಿಲ್ಲೆಯಿಂದ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೂವಿನಹಡಗಲಿ ತಾಲೂಕಿನ ಪೂರ್ವ ಮತ್ತು ಪಶ್ಚಿಮ ಕಾಲ್ವಿ ಗ್ರಾಮಗಳ ಬಳಿ ಇರುವ ಹಳ್ಳದಲ್ಲಿ ನಿನ್ನೆ ದಂಪತಿ ಕೊಚ್ಚಿಹೋಗಿದ್ದು, ಮಲ್ಲಿಕಾರ್ಜುನ ಇಂದು …
Read More »ಕಾರು-ಆಟೋ ಮಧ್ಯೆ ಭೀಕರ ಅಪಘಾತ; ಓರ್ವ ಮಹಿಳೆ ಸ್ಥಳದಲ್ಲೇ ಸಾವು
ಹಾವೇರಿ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೌದಿಕಲ್ಲಾಪುರ ಕ್ರಾಸ್ ಬಳಿ ನಡೆದಿದೆ. ಲಕ್ಷ್ಮವ್ವ ಕಲ್ಲೇಡಿ 55 ಮೃತ ದುರ್ದೈವಿಯಾಗಿದ್ದು ಇನ್ನುಳಿದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಮಾರ್ಗವಾಗಿ ಕಾಗಿನೆಲೆಗೆ ಹೋಗುತ್ತಿದ್ದ ಕಾರು ಮತ್ತು ಹಾವೇರಿಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ. ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ …
Read More »ಸಬ್ ಇನ್ಸ್ಪೆಕ್ಟರ್ ನ್ನೇ ದರೋಡೆ ಮಾಡಲು ಯತ್ನ ; ಹೆಲ್ಮೆಟ್ ನೋಡಿ ಪರಾರಿ ; ಮೂವರ ಬಂಧನ
ಬೆಂಗಳೂರು, : ಕೊರೊನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ದರೋಡೆಕೋರರು ಫೀಲ್ಡ್ಗೆ ಇಳಿದಿದ್ದಾರೆ. ರಾತ್ರಿ ವೇಳೆ ಮನೆಗೆ ಹೋಗುತ್ತಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಡ್ಡಗಟ್ಟಿ ಮೂವರು ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಪಿಎಸ್ಐ ಧರಿಸಿದ್ದ ಪೊಲೀಸ್ ಹೆಲ್ಮೆಟ್ ನೋಡಿ ಪರಾರಿಯಾಗಿದ್ದ ಮೂವರು ದರೋಡೆಕೋರರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರವಿಕುಮಾರ್, ಬಾಲು ಮತ್ತು ಅಶೀತ್ ಗೌಡ ಬಂಧಿತ ಆರೋಪಿಗಳು. ಆರ್.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಚ್.ಎಲ್. ಕೃಷ್ಣ ಜು. 3 ರಂದು …
Read More »ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ : ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ
ನವದೆಹಲಿ: ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ ಎಂದು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಭಾವುಕರಾದರು. ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಖಚಿತವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ನಾರಾಯಣಸ್ವಾಮಿ ಆಗಮಿಸಿದ್ದರು. ನಿವಾಸದಿಂದ ಹೊರ ಬರುತ್ತಲೇ ಕೇಂದ್ರದ ಸಚಿವನಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಸ್ವಾಮಿ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಪಕ್ಷ ಅವಕಾಶ ನೀಡಿದೆ. ಸಿಕ್ಕ ಅವಕಾಶವನ್ನು …
Read More »ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್
ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು. ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …
Read More »