ಗದಗ: ಲಕ್ಷಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಡೆಂಘೆ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಶುಕ್ರವಾರ ಮೃತಪಟ್ಟಿದ್ದಾಳೆ. ವೈಶಾಲಿ ಶಿವಪ್ಪ ಲಮಾಣಿ (16) ಮೃತೆ. ಈಕೆ ಮುಳಗುಂದದ ಮುರಾರ್ಜಿ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು. ಅ.5ರಂದು ವಸತಿ ಶಾಲೆಯಲ್ಲಿಯೇ ಜ್ವರ ಕಾಣಿಸಿಕೊಂಡಿದ್ದರಿಂದ ಮನೆಗೆ ಆಗಮಿಸಿದ್ದಳು. 7ರಂದು ಲಕ್ಷೆಮೕಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾಳೆ. ಗುಣವಾಗದ್ದರಿಂದ ಅ.14ರಂದು ಧಾರವಾಡ ಎಸ್ಡಿಎಂಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಸಾವನ್ನಪ್ಪಿದ್ದಾಳೆ ಎಂದು ಪಾಲಕರು ತಿಳಿಸಿದ್ದಾರೆ.
Read More »ಅನಾಥ ಸಹೋದರಿಯರಿಗೆ ಓದಿಸುವ ಭರವಸೆ ನೀಡಿದ ಸಚಿವ ಆರ್ ಅಶೋಕ್
ಹೊನ್ನಾಳಿ ತಾಲೂಕಿನ ಕುಂದೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಅಶೋಕ್, ಸ್ಮಶಾನಕ್ಕೆ ಜಾಗ ನೀಡಿದರೆ 25-30 ಲಕ್ಷ ರೂ. ಕೊಡುತ್ತೇವೆ. ಒಂದು ಎಕರೆ ಭೂಮಿಗೆ 25-30 ಲಕ್ಷ ರೂ. ಕೊಡುತ್ತೇವೆ ಅಂತ ತಿಳಿಸಿದ್ದಾರೆ. ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಅಣಜಿ ಗ್ರಾಮದ ಇಬ್ಬರು ಸಹೋದರಿಯರು ತಂದೆ- ತಾಯಿ ಕಳೆದುಕೊಂಡು ಅನಾಥರಾಗಿದ್ದು, ಇಬ್ಬರು ಸಹೋದರಿಯರ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಕಂದಾಯ ಸಚಿವ ಆರ್.ಅಶೋಕ್ ತೆಗೆದುಕೊಂಡಿದ್ದಾರೆ. 10ನೇ ತರಗತಿಯವರೆಗೆ ಓದಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ವಿದ್ಯಾರ್ಥಿನಿಯರ …
Read More »ವಿಕಲಚೇತನರಿಗೆ ಇ-ಸ್ಕಾಲರ್ ಶಿಫ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಹಾವೇರಿ: ಪ್ರಸಕ್ತ 2021-22 ನೇ ಸಾಲಿಗೆ ಕೇಂದ್ರ ಸರ್ಕಾರದ ಇ-ಸ್ಕಾಲರ್ಶಿಪ್ ( E-Scholarship ) ಸೌಲಭ್ಯಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೀಮೆಟ್ರಿಕ್ ವಿದ್ಯಾರ್ಥಿಗಳು ನವೆಂಬರ್ 15 ರೊಳಗಾಗಿ ಹಾಗೂ ಪೋಸ್ಟ್ ಮೆಟ್ರಿಕ್ ಮತ್ತು ಟಾಪ್ಕ್ಲಾಸ್ ವಿದ್ಯಾರ್ಥಿಗಳು ನವೆಂಬರ್ 30 ರೊಳಗಾಗಿ ವೆಬ್ಸೈಟ್ https://scholarships.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾವೇರಿ ತಾ. ಲಕ್ಷ್ಮವ್ವ ಈಳಗೇರ- 9632052188, ಬ್ಯಾಡಗಿ ತಾ.ನಾಗರಾಜ ಅಗಸನಹಳ್ಳಿ- 9900554583, ಶಿಗ್ಗಾಂವ ತಾ. ಸಿದ್ದಪ್ಪ ಮಸಳಿ- …
Read More »ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಿವೃತ್ತ ಶಿಕ್ಷಕರಾಗಿದ್ದ ಶರಣ ಬಸವ ಬಿಸರಳ್ಳಿ(94) ಇಂದು ಹುಬ್ಬಳ್ಳಿಯಲ್ಲಿ ಲಿಂಗೈಕ್ಯರಾಗಿದ್ದಾರೆ.
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಿವೃತ್ತ ಶಿಕ್ಷಕರಾಗಿದ್ದ ಶರಣ ಬಸವ ಬಿಸರಳ್ಳಿ(94) ಇಂದು ಹುಬ್ಬಳ್ಳಿಯಲ್ಲಿ ಲಿಂಗೈಕ್ಯರಾಗಿದ್ದಾರೆ. ಮೃತರು ಐವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಶರಣ ಬಸವ ಅವರು ತಮ್ಮ ಇಳಿವಯಸ್ಸಿನಲ್ಲೂ ನಿರಂತರ ಅಧ್ಯಯನಶೀಲರಾಗಿದ್ದರು. ಹಂಪಿ ಕನ್ನಡ ವಿವಿಯಿಂದ ಪಿಹೆಚ್ಡಿ ಅಧ್ಯಯನ ಮಾಡುತ್ತಿದ್ದರು. ಶ್ರಮ ಜೀವಿಗಳಾಗಿದ್ದ ಅವರು ಟ್ರಸ್ಟ್ ರಚಿಸಿ ಅದರ ಮೂಲಕ ನಾಡಿನಲ್ಲಿ ವಿನೂತನ ಸೇವೆ ಮಾಡುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ …
Read More »ಬೇಣಚಿನ ಮರಡಿ ಗ್ರಾಮಕ್ಕೆ ಸಂತೋಷ್ ಜಾರಕಿಹೊಳಿ ಅವರ ಸೌಹಾರ್ದತೆಯ ಭೇಟಿ…
ಗೋಕಾಕ: ಜಿಲ್ಲೆಯಾದ್ಯಂತ ಎಲ್ಲ ಎಲ್ಲಾಕಡೆ ಕಬ್ಬಿನ ನುರಿಸುವ ಕಾರ್ಯಕ್ರಮ ಶುರುವಾಗಿದೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಇಂದು ಬೇಣಚಿನ ಮರಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಸದಸ್ಯರನ್ನ ಭೇಟಿ ಮಾಡಿದ್ದಾರೆ ಇದೊಂದು ಸೌಹಾರ್ದತೆಯ ಭೇಟಿ ಯಾಗಿತ್ತು ಇನ್ನು ಗ್ರಾಮಕ್ಕೆ ಆಗಮಿಸಿದ ಸಾಹು ಕಾರರಿಗೇ ಗ್ರಾಮದಲ್ಲಿ ಅತ್ಯಂತ ಸರಳ ರೀತಿಯಲ್ಲಿ ಬರಮಾಡಿ ಕೊಂಡ ಗ್ರಾಮಸ್ಥರು ಸನ್ಮಾನ ಕಾರ್ಯಕ್ರಮ ಕೂಡ ಮಾಡಿದ್ದಾರೆ. ಇನ್ನೇನು ಕಬ್ಬಿನ ಸೀಸನ್ ಪ್ರಾರಂಭ ವಾಗಿದೆ …
Read More »ವಿವಾಹಿತ ಅಕ್ಕನ ಜೊತೆ ಡಿಂಗ್ಡಾಂಗ್.. ಎಗ್ ರೈಸ್ ತಿನ್ನಿಸಿ ಖಲ್ಲಾಸ್
ಬೆಂಗಳೂರು: ವ್ಯಕ್ತಿಯೊರ್ವನನ್ನು ಕೊಲೆ ಮಾಡಿ ಮೃತದೇಹವನ್ನು ಪೊಲಿಸ್ ಠಾಣೆಗೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿದ್ದು, ತನ್ನ ಅಕ್ಕ ಅಪರಿಚತರೊಡನೆ ಸಂಬಂಧ ಹೊಂದಿದ್ದಕ್ಕಾಗಿ ಕೆರಳಿದ ತಮ್ಮ ವ್ಯಕ್ತಿಯನ್ನು ಬರ್ಬರವಾಗಿ ಕೊಂದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಎಗ್ರೈಸ್ ತಿನ್ನಿಸಿ ಪ್ರಾಣ ತೆಗೆದ ಹಂತಕರು..! ಆರೋಪಿಯ ಅಕ್ಕ ಮೃತ ಭಾಸ್ಕರ್ ನ ಜೊತೆ ಬೇರೆ ಮನೆ ಮಾಡಲು ಅಣಿಯಾಗುವ ಸುದ್ದಿ ಕೇಳಿ ಕೆರಳಿದ್ದ ಆರೋಪಿ ಮುನಿರಾಜು ಕೆಲ ಸಹಚರರೊಂದಿಗೆ ಅಕ್ಕನ …
Read More »ಪೌಷ್ಟಿಕ ಆಹಾರದಿಂದ ಆರೋಗ್ಯ ವೃದ್ಧಿ
ಮಾಗಡಿ: ತಾಲ್ಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಕಲ್ಯಾ ಗ್ರಾಮದಲ್ಲಿ ಶನಿವಾರ ವಿಶ್ವ ಆಹಾರ ದಿನ ಆಚರಿಸಲಾಯಿತು. ವಿಜ್ಞಾನಿ ಡಾ.ಸೌಜನ್ಯ ಎಸ್. ಮಾತನಾಡಿ, ವಿಶ್ವಸಂಸ್ಥೆಯು ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆಯ ಗೌರವಾರ್ಥವಾಗಿ ಈ ದಿನದಂದು ವಿಶ್ವದಾದ್ಯಂತ ವಿಶ್ವ ಆಹಾರ ದಿನವನ್ನು ಆಚರಿಸಲಾಗುತ್ತಿದೆ ಎಂದರು. ವಿಶ್ವ ಆಹಾರ ದಿನಾಚರಣೆಯು ಮುಖ್ಯವಾಗಿ ಜಾಗತಿಕ ಹಸಿವು ನಿಭಾಯಿಸಲು ಮೀಸಲಾದ ದಿನವಾಗಿದೆ. ಅಂದು ಪ್ರಪಂಚದಾದ್ಯಂತ ಜನರು …
Read More »ಮಂಗಳೂರು ಮಾಲ್ಗಳಿಗೆ , ಚಿತ್ರ ಮಂದಿರಗಳಿಗೆ ಭೇಟಿ ನೀಡಲು ಲಸಿಕೆಯ ಎರಡೂ ಲಸಿಕೆ ಕಡ್ಡಾಯ
ಮಂಗಳೂರು,: ನಗರ ಮತ್ತು ದಕ್ಷಿಣ ಕನ್ನಡದ ಇತರೆಡೆ ಜನರು ಕೋವಿಡ್ ವಿರೋಧಿ ಲಸಿಕೆಯನ್ನು ಎರಡು ಡೋಸ್ಗಳನ್ನು ತಪ್ಪದೇ ಪಡೆಯಬೇಕು. ಲಸಿಕೆ ಇಲ್ಲದವರು ಮಾಲ್ಗಳು ಅಥವಾ ಚಿತ್ರಮಂದಿರಗಳಿಗೆ ಪ್ರವೇಶಿಸಲು ಸಾಧ್ಯವಿಲ್ಲ. ಈ ನಿರ್ಧಾರವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಮತ್ತು ಅಧಿಕಾರಿಗಳು ಲಸಿಕೆ ಹಾಕದೆ ಜನರ ಮೇಲೆ ಕಣ್ಣಿಡುತ್ತಾರೆ ಮತ್ತು ಅವರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಆರಂಭದಲ್ಲಿ, ತಪ್ಪು ಕಲ್ಪನೆಗಳಿಂದಾಗಿ, ಅನೇಕರು ಲಸಿಕೆ ಹಾಕುವುದನ್ನು ಬಿಟ್ಟುಬಿಟ್ಟರು.ಕರೋನವೈರಸ್ ಎರಡನೇ ತರಂಗದ ಸಮಯದಲ್ಲಿ, ಹೆಚ್ಚಿನವರು ಲಸಿಕೆ …
Read More »ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ವರಿಗೆ ಮತ ಹಾಕ್ತೀರಾ: ಸಿದ್ದರಾಮಯ್ಯ
ಬೆಂಗಳೂರು: ನಗರದ ಬಿನ್ನಿಪೇಟೆಯಲ್ಲಿ ನಿರ್ಮಿಸಲಾದ ಏಳು ಅಂತಸ್ತಿನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ಶನಿವಾರ ಬಿರುಕಿನಿಂದಾಗಿ 1.5 ಅಡಿಗಳಷ್ಟು ಅಪಾಯಕಾರಿಯಾಗಿ ವಾಲಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕಟ್ಟಡಗಳ ಕುಸಿತ ಹೆಚ್ಚಾಗುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ, ಕುಸಿದ ಮನೆಗಳಿಂದ ಕುಟುಂಬಗಳನ್ನು ಸ್ಥಳಾಂತರಿಸುವಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರೇ ಈಗ ಸ್ಥಳಾಂತರಗೊಳ್ಳಬೇಕಾದ ದುಸ್ಥಿತಿ ಬಂದೊದಗಿದೆ. ವಾಲಿದ ‘ಬಿ’ ಬ್ಲಾಕ್ ಕಟ್ಟಡದಲ್ಲಿ ವಾಸಿಸುತ್ತಿರುವ 38 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಲ್ಲಿ ಪಕ್ಕದಲ್ಲಿರುವ ‘ಸಿ’ ಬ್ಲಾಕ್ ಕಟ್ಟಡದಿಂದಲೂ ಸ್ಥಳಾಂತರಿಸಲು ಚಿಂತನೆ …
Read More »ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ H.D.K. ಆರ್ಎಸ್ಎಸ್ ವಿರುದ್ಧ ಟೀಕೆ: ಜೋಶಿ
ಧಾರವಾಡ: ‘ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಆರ್ಎಸ್ಎಸ್ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ನಾವು ಮುಸ್ಲಿಂ ಸೇರಿದಂತೆ ಯಾವುದೇ ಸಮುದಾಯದ ವಿರೋಧಿಗಳಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸಾಂದ್ರಕ ಘಟಕಕ್ಕೆ ಶನಿವಾರ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಮುಗ್ಧ ಮುಸ್ಲಿಮರ ಮತಕ್ಕಾಗಿ ಆರ್ಎಸ್ಎಸ್ ಹಾಗೂ ಬಿಜೆಪಿಯನ್ನು ಭೂತದಂತೆ ಇವರು ತೋರಿಸುತ್ತಿದ್ದಾರೆ. …
Read More »
Laxmi News 24×7