Breaking News

ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು.

ಬೆಳಗಾವಿ: ‘ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು. ಅದರ ಭರದಲ್ಲಿ ‘ಆ ಪದ’ ಬಳಸಿದ್ದು ತಪ್ಪೇ. ಕೂಡಲೇ ಆ ಮಾತನ್ನು ಹಿಂಪಡೆದಿದ್ದೇನೆ’ ಎಂದು ಪಂಚಾಯತ್‌ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.   ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹರಿಪ್ರಸಾದ್ ಹೇಳಿಕೆಯನ್ನು ಕಾಂಗ್ರೆಸ್‌ನವರು ಒಪ್ಪುತ್ತಾರೆಯೇ?’ ಎಂದು ಕೇಳಿದರು.   ‘ನನ್ನ …

Read More »

ಜಿಲ್ಲೆಯಲ್ಲಿ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಸುರಿದ ಮಳೆಯಿಂದಾಗಿ 506 ಶಾಲೆಗಳ 1,373 ಕೊಠಡಿಗಳು ಹಾಳಾಗಿವೆ.

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಸುರಿದ ಮಳೆಯಿಂದಾಗಿ 506 ಶಾಲೆಗಳ 1,373 ಕೊಠಡಿಗಳು ಹಾಳಾಗಿವೆ. ನವಲಗುಂದ ತಾಲ್ಲೂಕಿನಲ್ಲಿ ಹಾನಿ ಪ್ರಮಾಣ ಹೆಚ್ಚಿದೆ. 2019ರಲ್ಲಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿತ್ತು. ಮನೆ ಹಾಗೂ ಕೆಲ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ನೀರು ನುಗ್ಗಿತು. ಮೇಲಿಂದ ಮೇಲೆ ಸುರಿದ ಮಳೆಯಿಂದಾಗಿ ಹಳೇ ಶಾಲೆಗಳ ಕೊಠಡಿಗಳು ಬಿರುಕು ಬಿಟ್ಟು ಬಿದ್ದಿದ್ದವು. ಆ ವರ್ಷ 199 ಶಾಲೆಗಳ 444 ಕೊಠಡಿಗಳಿಗೆ ಹಾನಿಯಾಗಿತ್ತು. ದುರಸ್ತಿಗೆ ಕಾದಿದ್ದ ಎಲ್ಲ 444 …

Read More »

ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು.

ಬೆಂಗಳೂರು: ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್‌ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು …

Read More »

ಲಾರಿಯಲ್ಲಿ ಸಿಕ್ಕಿಕೊಂಡಿದ್ದವರನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಿಸಿದೆ

ಕೊಪ್ಪಳ: ಎರಡು ಲಾರಿಗಳ (Lorry) ನಡುವೆ ಅಪಘಾತ (Accident)ನಡೆದಿರುವ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಬಳಿ ತಡರಾತ್ರಿ ನಡೆದಿದೆ. ಅಪಘಾತಕ್ಕೆ ಎರಡು ಲಾರಿಗಳು ನುಜ್ಜು ಗುಜ್ಜಾಗಿವೆ. ಅಪಘಾತದ ರಭಸಕ್ಕೆ ಎರಡು ಲಾರಿಗಳ ನಡುವೆ ನಾಲ್ವರು ಸಿಕ್ಕಿಹಾಕಿಕೊಂಡಿದ್ದು, ಸತತ ಒಂದು ಗಂಟೆಗಳ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಆ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಒಂದು ಲಾರಿಯಲ್ಲಿ ಮೂರು ಜನ, ಇನ್ನೊಂದು ಲಾರಿಯಲ್ಲಿ ಓರ್ವ ಚಾಲಕ ಸಿಕ್ಕಿಹಾಕಿಕೊಂಡಿದ್ದ. ಲಾರಿಗಳು ಮಧ್ಯಪ್ರದೇಶ ಹಾಗೂ …

Read More »

ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ.

ರಾಯಚೂರು: ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಯುನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿ, ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕವಾಗಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.   ಕೇಂದ್ರ ಸರ್ಕಾರ ನೂತನ ವಿದ್ಯುತ್‌ಶಕ್ತಿ ತಿದ್ದುಪಡಿ …

Read More »

ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ.

ಮಂಗಳೂರು, (ಆ.10): ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ. ಅಚ್ಚರಿ ಎನ್ನಿಸಿದರೂ ಸತ್ಯ.   ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ.   ಒಂದೇ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ …

Read More »

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ

ಬೆಳಗಾವಿ: ನವದೆಹಲಿಯ ದ್ವಾರಕಾ ನಗರದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ ಅಂಗಡಿ ಅವರ ಪ್ರತಿಮೆಯನ್ನು ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಂಗಳವಾರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ನಮನ ಸಲ್ಲಿಸಿದರು. ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಎಲ್ಲ ರೀತಿಯ ಸಹಕಾರ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ …

Read More »

ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ ಪ್ರಕಾಶ್ ರೈ

ಹೈದರಾಬಾದ್: ನಟ ಪ್ರಕಾಶ್ ರೈ ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಗಾಗಿ ಹೈದರಾಬಾದ್‍ಗೆ ತೆರಳುತ್ತಿದ್ದಾರೆ. ತಮಿಳು ನಟ ಧನುಷ್ ಅಭಿನಯದ ಚಿತ್ರದಲ್ಲಿ ಪ್ರಕಾಶ್ ರೈ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ತಿರುಚಿತ್ರಾಂಬಲಂ’ ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿದೆ. ಕಳೆದ ವಾರದಿಂದ ಚಿತ್ರೀಕರಣದಲ್ಲಿ ಪ್ರಕಾಶ್ ರೈ ಪಾಲ್ಗೊಂಡಿದ್ದಾರೆ. ಇಂದು ಚಿತ್ರೀಕರಣದ ವೇಳೆ ಆಯಾತಪ್ಪಿ ಬಿದ್ದ ಪ್ರಕಾಶ್ ರೈ ಗಾಯಗೊಂಡರು. ಕೂಡಲೆ ಚೆನ್ನೈನ ಆಸ್ಪತ್ರೆಯಲ್ಲಿ …

Read More »

ಮರೆಯದೆ ಕ್ಷಮಿಸು” ಚಿತ್ರದ ಹಾಡುಗಳ ಮೆರವಣಿಗೆ ಆರಂಭ!

ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, “ಮರೆಯದೆ ಕ್ಷಮಿಸು” ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು. ನಟ ಶ್ರೀನಗರ ಕಿಟ್ಟಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಆಡಿಯೋ ರಿಲೀಸ್ ಮಾಡಿದರು. ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಡಿಸಿಪಿ ಮಂಜುನಾಥ್ …

Read More »

ಕಲರ್ಸ್ ಕನ್ನಡದಲ್ಲಿ ಆ.14ರಿಂದ ‘ಎದೆ ತುಂಬಿ ಹಾಡುವೆನು’ ಪ್ರಸಾರ

ಬೆಂಗಳೂರು: ಹಲವಾರು ವರ್ಷಗಳಿಂದ ಈಟಿವಿಯಲ್ಲಿ ಪ್ರಸಾರ ಆಗುತ್ತಿದ್ದ ಜನಪ್ರಿಯ ಸಂಗೀತ ಸ್ಪರ್ಧಾ ಸರಣಿ ‘ಎದೆತುಂಬಿ ಹಾಡುವೆನು’ ಕಲರ್ಸ್ ಕನ್ನಡದಲ್ಲಿ ಆಗಸ್ಟ್ 14ರಿಂದ ಪ್ರಸಾರ ಆಗಲಿದೆ. ಈಟಿವಿಯಲ್ಲಿ ಅಂದು ಎಸ್.ಪಿ. ಬಾಲಸುಬ್ರಮಣ್ಯಂ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಇದು. ಈಗ ದಿವಂಗತ ಎಸ್.ಪಿ.ಬಿ. ಅವರ ಜಾಗದಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಈ ಕಾರ್ಯಕ್ರಮದ ತೀರ್ಪುಗಾರರಾಗಿ ಇರುತ್ತಾರೆ. ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇರುತ್ತಾರೆ. ಈಗಾಗಲೇ …

Read More »