ಬೆಂಗಳೂರು: ಕಾಂಗ್ರೆಸ್ ಪಕ್ಷ, ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದೆಯೋ ಅಂತಹ ಯಾರೂ ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿಗೆ ಹೋದವರು ನಮ್ಮನ್ನು ಸಂಪರ್ಕಿಸಿಲ್ಲ. ಆದರೆ ಅವರೂ ಸೇರಿದಂತೆ ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಬಹುದು. ಸ್ಥಳೀಯ ನಾಯಕರು ಒಪ್ಪಿದರೆ ಅವರನ್ನು ಸೇರಿಸಿಕೊಳ್ಳಲಾಗುವುದು ಎಂದರು. ಯಾರು …
Read More »ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.
ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು . ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …
Read More »ನೌಕರಿ ತೊರೆದು ಸಾವಯವ ರೈತರಾದ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ
ಹುಬ್ಬಳ್ಳಿ: ಸಾವಯವ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಪತ್ನಿಯ ಉತ್ಸಾಹದಿಂದ ಪ್ರೇರಣೆ ಪಡೆದ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರೊಬ್ಬರು ಸಾವ ಯವ ಕೃಷಿಕರಾಗಿ ಯಶಸ್ವಿ ಹೆಜ್ಜೆಗಳನ್ನಿರಿಸಿದ್ದಾರೆ. ಸಾವಯವ ಪದ್ಧತಿಯಲ್ಲಿ ಬೆಳೆದ ತರಕಾರಿ ಇನ್ನಿತರ ಉತ್ಪನ್ನಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ಇಲ್ಲಿನ ಬಿ.ವಿ. ಭೂಮರಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ, ಗದುಗಿನ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ| ಪ್ರಕಾಶ ಹುಬ್ಬಳ್ಳಿ ಅವರು ಹುದ್ದೆ ತೊರೆದು ಕೃಷಿಯಲ್ಲಿ ತೊಡಗಿ ಸಾವಯವ ಕೃಷಿಯ …
Read More »ಕಸಾಯಿಖಾನೆಯಿಂದ ಮರಳಿದ ಎತ್ತಿಗೆ ಭರ್ಜರಿ ಬರ್ತ್ಡೇ
ಧಾರವಾಡ: ಕಸಾಯಿ ಖಾನೆಯಿಂದ ಮರಳಿ ಮನೆಗೆ ತಂದಿದ್ದ ಎತ್ತಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸುವ ಮೂಲಕ ದೇವರಹುಬ್ಬಳ್ಳಿಯ ಯುವ ರೈತ ಎಲ್ಲರ ಗಮನ ಸೆಳೆದಿದ್ದಾನೆ. 10 ಕೆಜಿ ತೂಕದ ಕೇಕ್ನಲ್ಲಿ ಮೈಲಾರಿ ಎಂದು ಎತ್ತಿನ ಹೆಸರು ಬರೆಯಿಸಿ, ಮನೆ ಮುಂದೆ ಪೆಂಡಾಲ್ ಹಾಕಿಸಿ, ಇಡೀ ಗ್ರಾಮದ ಜನರಿಗೆ ಸಿಹಿ ಊಟ ನೀಡಿದ ನಾಗಪ್ಪ ಓಮಗಣ್ಣವರ ಎತ್ತಿನ ಹುಟ್ಟುಹಬ್ಬ ಆಚರಿಸಿದ್ದಾನೆ. ಗ್ರಾಮದ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಎಲ್ಲರೂ ಬಸವನ ಹುಟ್ಟು ಹಬ್ಬದಲ್ಲಿ ಭಾಗಿಯಾಗಿ …
Read More »ಹುಬ್ಬಳ್ಳಿಯಲ್ಲಿ ಸಹೋದರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಆತನ ಚಿಕ್ಕಪ್ಪನ ಮಗನೇ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಇಲ್ಲಿನ ಗಾರ್ಡನ್ ಪೇಟೆಯಲ್ಲಿ ಇಂದು ರಾತ್ರಿ ( ಜುಲೈ.2) ನಡೆದಿದೆ. ಇಲ್ಲಿನ ಗಾರ್ಡನ್ ಪೇಟೆಯಲ್ಲಿ ಕೌಟುಂಬಿಕ ವಿಷಯವಾಗಿ ಚಿಕ್ಕಪ್ಪನ ಮಗನು ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕಿಮ್ಸ್ ಗೆ ದಾಖಲಿಸಲಾಗಿದೆ. ಸಾದೀಕ್ ಬೆಕ್ಕಿನಬಾಯಿ ಎಂಬುವನಿಗೆ ಅವರ ಚಿಕ್ಕಪ್ಪ ನ ಮಗ ಸೈಯದ್ ಬೆಕ್ಕಿನಬಾಯಿ ಮಚ್ಚಿನಿಂದ ತಲೆಗೆ …
Read More »ಮಗನ ಮೇಲೆಯೇ ತಾಯಿಯ ಲೈಂಗಿಕ ದೌರ್ಜನ್ಯ: ಪೊಲೀಸರು ಇಂತಹ ಕೀಳು ಮಟ್ಟಕ್ಕೆ ಇಳಿದರಾ?
ತಿರುವನಂತಪುರಂ: ಕಡಕ್ಕವೂರ್ ಪೊಕ್ಸೊ ಪ್ರಕರಣದಲ್ಲಿ ತಾಯಿಯೊಬ್ಬಳು ತನ್ನ ಮಗನ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆಂದು ತಪ್ಪಾಗಿ ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಪೊಲೀಸ್ ವರದಿ ಮೇಲೆಯೇ ಅನುಮಾನ ಮೂಡಿದೆ. ಸಂತ್ರಸ್ತ ಮಹಿಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕರಣದಿಂದ ನನ್ನನ್ನು ಖುಲಾಸೆಗೊಳಿಸಲಾಗಿದೆ. ಆದರೆ, ನನ್ನ ಮಗನನ್ನು ಅಪರಾಧಿ ಎಂಬಂತೆ ವರದಿಯಲ್ಲಿ ಬಿಂಬಿಸಲಾಗಿದೆ ಎಂದು ತಿಳಿಸಿದ್ದಾರೆ. ನನ್ನ ವಿರುದ್ಧ ನಕಲಿ ಪ್ರಕರಣ ದಾಖಲಿಸಿದವರ ಬಗ್ಗೆ ವರದಿಯಲ್ಲಿ ಯಾವುದೇ ಉಲ್ಲೇಖ ಇರಲಿಲ್ಲ. ಹೀಗಾಗಿ ಕಡಕ್ಕವೂರ್ ಪೊಲೀಸರ ವಿರುದ್ಧ …
Read More »ಬಾಂಬೆ ಟೀಂಗೆ ಆಹ್ವಾನ; ಕಾಂಗ್ರೆಸ್ – ಬಿಜೆಪಿಯಲ್ಲಿ ಭಾರಿ ಸಂಚಲನ ತಂದ ಡಿಕೆಶಿ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷ ಸಂದೇಶ ರವಾನಿಸಿ ಪಕ್ಷಕ್ಕೆ ಸೇರಲು ಆಹ್ವಾನಿಸಿದ್ದಾರೆ. ವಲಸಿಗರು ಕೂಡ ಅರ್ಜಿ ಹಾಕಬಹುದು ಎಂದು ಅವರು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆ ಕಾಂಗ್ರೆಸ್ ಮತ್ತು ಬಿಜೆಪಿ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಮುಂಬೈ ಟೀಮ್ ಗೆ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ. …
Read More »ಚಿತ್ರಮಂದಿರ, ಮಾಲ್ ಓಪನ್ ಗೆ ಸಿಎಂ ನೇತೃತ್ವದಲ್ಲಿ ಅನ್ಲಾಕ್ 3.0 ಬಗ್ಗೆ ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ಮತ್ತಷ್ಟು ಅನ್ಲಾಕ್ ಮಾಡುವ ಕುರಿತಂತೆ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ. ಸಂಜೆ 5.30 ಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಮೂರನೇ ಹಂತದ ಪ್ರಕ್ರಿಯೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಅನ್ಲಾಕ್ ಬಳಿಕ ರಾಜ್ಯದಲ್ಲಿ ವಿವಿಧ ಚಟುವಟಿಕೆಗಳು ಆರಂಭವಾಗಿದೆ. ಇದರ ಮುಂದುವರೆದ ಭಾಗವಾಗಿ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು. ಬಾರ್ ಅಂಡ್ ರೆಸ್ಟೋರೆಂಟ್, ಸ್ವಿಮ್ಮಿಂಗ್ ಪೂಲ್, …
Read More »ಮಂಗಳೂರು; ಗುಂಡು ಹಾರಿಸಿ ಬೀದಿ ನಾಯಿ ಹತ್ಯೆ
ಮಂಗಳೂರು, ಜುಲೈ 02; ಬೀದಿ ನಾಯಿಗೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಕದ್ರಿ ಶಿವಭಾಗ್ ಎಂಬಲ್ಲಿ ನಡೆದಿದೆ. ನಾಯಿಯ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ಪತ್ತೆಯಾಗಿದ್ದು, ಸ್ಥಳೀಯ ವ್ಯಕ್ತಿಯ ಮೇಲೆ ಸಂಶಯ ವ್ಯಕ್ತಪಡಿಸಲಾಗಿದೆ. ಗುಂಡೇಟು ತಿಂದ ನಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಜನರು ಶಕ್ತಿನಗರದ ಆನಿಮಲ್ ಕೇರ್ ಟ್ರಸ್ಟ್ಗೆ ಮಾಹಿತಿ ನೀಡಿದ್ದಾರೆ. ಆನಿಮಲ್ ಕೇರ್ ಟ್ರಸ್ಟ್ನ ಸದಸ್ಯರು ಸ್ಥಳಕ್ಕೆ ಬಂದ ಸಂದರ್ಭದಲ್ಲಿ ಬುಲೆಟ್ ಗಾಯ ನಾಯಿಯ ಬೆನ್ನ …
Read More »18 ಮೀ. ಆಳಕ್ಕೆ ಕುಸಿದ ಮಣ್ಣು; ತಪ್ಪಿದ ಅವಘಡ
ಹುಬ್ಬಳ್ಳಿ: ಕೋರ್ಟ್ ವೃತ್ತದ ಸಾಯಿ ಮಂದಿರದ ಎದುರು ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಾರ್ ಪಾರ್ಕಿಂಗ್ ಕಟ್ಟಡದ ನಿರ್ಮಾಣ ಹಂತದ ತಡೆಗೋಡೆ ಮೇಲೆ ಗುರುವಾರ ರಾತ್ರಿ 18 ಮೀಟರ್ ಎತ್ತರದಿಂದ ಮಣ್ಣು ಕುಸಿದಿದ್ದು, ಅವಘಡವೊಂದು ತಪ್ಪಿದಂತಾಗಿದೆ. ಮಣ್ಣು ಕುಸಿಯದಂತೆ 50 ಮೀಟರ್ ಅಗಲ ಪ್ಲಾಸ್ಟರ್ ಮಾಡಲಾಗಿತ್ತು. 30 ಮೀಟರ್ ಅಗಲದ ಪ್ಲಾಸ್ಟರ್ ಸಮೇತ ಮಣ್ಣು ತಡೆಗೋಡೆ ಮೇಲೆ ಬಿದ್ದಿದೆ. ಮಧ್ಯರಾತ್ರಿ ಘಟನೆ ನಡೆದಿರುವುದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಶುಕ್ರವಾರ ಬೆಳಿಗ್ಗೆ ಸ್ಮಾರ್ಟ್ ಸಿಟಿ …
Read More »