Breaking News

ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದ ವ್ಯಕ್ತಿ

ಮಂಗಳೂರು: ಕೊರೊನಾ ವೈರಸ್‌ ಸೋಂಕು ತಡೆಯಲು ನೀಡಲಾಗುತ್ತಿರುವ ಲಸಿಕೆಗಳ ಪೈಕಿ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ನಡುವೆ 84 ದಿನಗಳ ಅಂತರ ನಿಗದಿಪಡಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲಿ ಬುಧವಾರ 19 ವರ್ಷದ ದಿನಗೂಲಿ ಕಾರ್ಮಿಕರೊಬ್ಬರಿಗೆ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ನೀಡಲಾಗಿದೆ. ಎರಡು ಡೋಸ್ ಲಸಿಕೆ ನೀಡುವುದರ ಪರಿಣಾಮ ಏನಾಗಬಹುದು ಎನ್ನುವುದು ಆರೋಗ್ಯಾಧಿಕಾರಿಗಳು ಊಹಿಸುವುದು ಕಷ್ಟ. ಹೀಗಾಗಿ ಲಸಿಕೆ ಪಡೆದ ವ್ಯಕ್ತಿಯನ್ನು ನಿಗಾದಲ್ಲಿ ಇರಿಸಲಾಗಿದೆ. …

Read More »

ದೇವಸ್ಥಾನಗಳಲ್ಲಿ‌ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆ: ಕಮಲ್‌ಪಂತ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು‌ ಪೊಲೀಸ್ ‌ಕಮಿಷನರ್ ಕಮಲ್ ಪಂತ್ ಹೇಳಿದರು. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ‌ ಸರ್ಕಾರದ ನಿಯಮಗಳನ್ವಯ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಉಳಿದಂತೆ‌, ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿವೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ದೇವಸ್ಥಾನದಲ್ಲಿ‌ ಮೂರ್ತಿ ಪ್ರತಿಷ್ಠಾಪನೆಗೂ‌ ಮುನ್ನ ಪೊಲೀಸರು ಹಾಗೂ‌ ಬಿಬಿಎಂಪಿ ಅವರಿಂದ ಅನುಮತಿ‌ …

Read More »

ಯಡಿಯೂರಪ್ಪ, ಶೆಟ್ಟರ್ ಅನುಭವ ಪಕ್ಷ ಬಳಸಿಕೊಳ್ಳಲಿದೆ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಮುಂಬರುವ ದಿನಗಳಲ್ಲಿ ಪಕ್ಷ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು …

Read More »

ಯಾವ ಹಿರಿಯರನ್ನೂ ಬಿಜೆಪಿ ಕಡೆಗಣಿಸಿಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಬಿಜೆಪಿ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು, ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು …

Read More »

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ.

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಡುವುದಿದ್ದರೆ ಬಿಡಲಿ, ಇನ್ನು ಮುಂದೆ ಮನೆ ಹಂಚಿಕೆ ಮಾಡುವಂತೆ ಕೇಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಅವರು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಮನೆ …

Read More »

ಮಾಸ್ಕ್ ಹಾಕದೆ ಇದ್ರೆ ಮತ ಹಾಕಲು ಅವಕಾಶ ಇಲ್ಲ.!

ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶ, ಎಲ್ಲರೂ ಜನಪರ ಕೆಲಸ ಮಾಡಬೇಕು. ಜೋಶಿ ಪುತ್ರಿಯ ಮದುವೆಗೆ …

Read More »

ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಮತದಾನ ನಡೆಯಲಿದ್ದು, ಸೆಪ್ಟಂಬರ್ 6 ರಂದು ಚುನಾವಣೆಯ ಫಲಿತಾಂಶ ಪ್ರಕಟಿಸಲಾಗುವುದು. ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 4,28,364 ಮತದಾರರು ಮತ ಚಲಾವಣೆ ಮಾಡಲಿದ್ದು, 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 …

Read More »

SSLC ಪಾಸಾದವರಿಗೆ ಗುಡ್ ನ್ಯೂಸ್: ಡಿಪ್ಲೊಮಾ ಪ್ರವೇಶಕ್ಕೆ ಸೆ. 20 ರವರೆಗೆ ಕಾಲಾವಕಾಶ

2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20 ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20 ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ತಿಳಿಸಿದ್ದಾರೆ. ಪ್ರವೇಶಾವಧಿಯನ್ನು …

Read More »

4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಸರ್ಕಾರಕ್ಕೆ ಮೊದಲು ರಾಜ್ಯದಲ್ಲಿ 33,000 ಪೊಲೀಸ್ ಹುದ್ದೆಗಳು ಖಾಲಿ ಉಳಿದಿದ್ದವು. ಹೊದ್ದೆ ಕೊರತೆ ನೀಗಿಸುವ ಜೊತೆಗೆ ಇದರೊಂದಿಗೆ ಇನ್ನೂ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಹೆಚ್ಚುತ್ತಿರುವ ಸೈಬರ್ ಕ್ರೈಂ ಸೇರಿ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಅತ್ಯಾಧುನಿಕ ತಂತ್ರಜ್ಞಾನ, ಉಪಕರಣಗಳನ್ನು ಒದಗಿಸಿ …

Read More »

ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ : ಎಸ್.ಜಿ.ನಂಜಯ್ಯನಮಠ

ಬಾಗಲಕೋಟೆ : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನ ಸಾಮಾನ್ಯರು ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಅಡುಗೆ ಅನೀಲ, ಇಂಧನ, ದಿನ ಬಳಕೆ ವಸ್ತುಗಳ ಬಳಕೆ ದುಪ್ಪಟ್ಟಾಗುತ್ತಿದೆ. ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಆಕ್ರೋಶ ವ್ಯಕ್ತಪಡಿಸಿದರು.

Read More »