Breaking News

ಪೊಲೀಸರೊಂದಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಾಗ್ವಾದ

ಬಾಗಲಕೋಟೆ : ಜಿಲ್ಲೆಯ ಇಳಕಲ್ಲ ನಗರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪೊಲೀಸರೊಂದಿಗೆ ವಾಗ್ವಾದ ನಡೆದ ಪ್ರಸಂಗ ಶನಿವಾರ ಸಂಜೆ ನಡೆದಿದೆ. ಮಾಜಿ ಶಾಸಕ ಕಾಶಪ್ಪನವರ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ವಿಚಾರಣೆಗೆ ಹಾಜರಾಗುವ ಜಾಮೀನುಸಹಿತ ವಾರೆಂಟ್ ಜಾರಿಯಾಗಿದ್ದು, ಅದನ್ನು ತಲುಪಿಸಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಇದಕ್ಕೂ ಮುಂಚೆ ಕಾಶಪ್ಪನವರ ಮನೆಯಲ್ಲಿ ಕೌಟುಂಬಿಕ ಜಗಳ ನಡೆದಿದೆ ಎಂದು ಅಕ್ಕ-ಪಕ್ಕದ ಮನೆಯವರು ಫೋನ್ ಕಾಲ್ ಮಾಡಿ, ದೂರಿದ್ದರು. …

Read More »

ದಕ್ಷಿಣ ಕನ್ನಡ: ಪದವಿ ವಿದ್ಯಾರ್ಥಿಗಳಿಗೆ, ಭೋಧಕರಿಗೆ ಕೋವಿಡ್‌ ಲಸಿಕೆ ನಾಳೆಯಿಂದ

ಮಂಗಳೂರು: ಮುಂದಿನ ತಿಂಗಳಿಂದ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಸೋಮವಾರದಿಂದ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್‌, ಪ್ಯಾರಾಮೆಡಿಕಲ್‌ ಕಾಲೇಜುಗಳ 18 ವರ್ಷ ಮೇಲಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಭ್ಯತೆಗೆ ಅನುಗುಣವಾಗಿ ಲಸಿಕಾ ಶಿಬಿರ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಹೇಳಿದ್ದಾರೆ. ಜೂನ್‌ 28 ರಿಂದ ಜಿಲ್ಲೆಯ ಎಲ್ಲ …

Read More »

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

ಧಾರವಾಡ: ಕರ್ನಾಟಕ ಸರ್ಕಾರ ಕೊರೊನಾ ಲಾಕ್​ಡೌನ್​​ ಪರಿಣಾಮ ಸಂತ್ರಸ್ತರಾದ ಕೆಲ ವರ್ಗದವರಿಗೆ ಪರಿಹಾರ ಘೋಷಿಸಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುತ್ತಿಲ್ಲ ಎಂಬ ಕೂಗು ಎದ್ದಿದೆ. ಅದರಲ್ಲೂ ಆಟೋ ಚಾಲಕರಿಗೆ ಪರಿಹಾರ ಕೈಗೆ ಬಾರದೆ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಘೋಷಿಸಿದ್ದ 3 ಸಾವಿರ ರೂ. ಪರಿಹಾರ ಮೊತ್ತ ರಾಜ್ಯದ ಅನೇಕ ಕಡೆ ಆಟೋ ಚಾಲಕರಿಗೆ ಇನ್ನೂ ತಲುಪಿಲ್ಲ. ​ಧಾರವಾಡದಲ್ಲಿಯೂ ಆಟೋ ಚಾಲಕರಿಗೆ ಪರಿಹಾರ ಸಿಗದಿರುವುದರಿಂದ ಭಾರೀ ಆಕ್ರೋಶ …

Read More »

ಮನೆಗೆ ಬಂದ ಸೊಸೆಯ ಹಾಗೆ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ ,ಯಡಿಯೂರಪ್ಪ ಬಿಜೆಪಿ ಬಿಟ್ಟರೆ ಬರೋದು 40 ಸೀಟು ಮಾತ್ರ : ಸಿಎಂ.ಇಬ್ರಾಹಿಂ

ಬೆಂಗಳೂರು: ಮನೆಗೆ ಬರುವಾಗ ಸೊಸೆ ಹೊಸದಾಗಿಯೇ ಬರುವುದು. ಸೊಸೆಗೆ ನೀನು ವಲಸೆ ಬಂದವಳೆಂದು ಹೇಳಲು ಆಗುತ್ತದೆಯೇ? ಸ್ವಲ್ಪ ದಿನವಾದರೆ ಅವಳ ಕೈಗೆ ಕೀಲಿ ಕೈ ಹೋಗುತ್ತದೆ. ಹಾಗೆಯೇ ಈಗ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ. ಹಾಗಾಗಿ ವಲಸಿಗ, ಹೊಸಬ ಎನ್ನುವ ಭೇದಭಾವ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅವರು,ಸಿದ್ದರಾಮಯ್ಯನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಮುಂದೆ ತಂದವರು ಯಾರು? ಇಂತವನೊಬ್ಬ …

Read More »

ಧಾರವಾಡದಿಂದ ಬೆಂಗಳೂರಿಗೆ ಯಕೃತ್ತು ರವಾನೆ:ಏರ್ ಪೋರ್ಟ್ ವರೆಗೆ ಜಿರೋಟ್ರಾಫಿಕ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಧಾರವಾಡ ಸಮೀಪದ ಎಸ್‌ಡಿಎಂ ಆಸ್ಪತ್ರೆಯಿಂದ ಲಿವರ್ (ಯಕೃತ್ತು) ಅನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಾಗಿಸಲು ಸುಮಾರು 16 ಕಿ.ಮೀ ದೂರದ ಮಾರ್ಗವನ್ನು ಪೊಲೀಸರು ಹಸಿರು ಕಾರಿಡಾರ್ ಮೂಲಕ ಅಂಬ್ಯುಲೆನ್ಸ್ ತ್ವರಿತ ತಲುಪಲು ಅನುವು ಮಾಡಿಕೊಟ್ಟರು. ಜಿರೋ ಟ್ರಾಫಿಕ್ ನಲ್ಲಿ ಯಕೃತ್ ಇದ್ದ ಅಂಬ್ಯುಲೆನ್ಸ್ ನಿಗದಿಪಡಿಸಿದ ಸಮಯಕ್ಕೆ ವಿಮಾನ ನಿಲ್ದಾಣ ತಲುಪಿತಲ್ಲದೆ, ಯಕೃತ್ ನ್ನು ವಿಮಾನದಲ್ಲಿ ಬೆಂಗಳೂರಿಗೆ ಕಳುಹಿಸಲಾಯಿತು. ಮೃತ ಮಹಿಳೆಯೊಬ್ಬರ ಕಣ್ಣು, ಕಿಡ್ನಿ ಮತ್ತು ಲಿವರ್ ಸೇರಿದಂತೆ ವಿವಿಧ …

Read More »

ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ಕಾಂಗ್ರೆಸ್ ನೆರವು

ಬೆಂಗಳೂರು, ಜೂ.26- ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಆಳುವ ಸರ್ಕಾರಕ್ಕಿಂತಲೂ ಹೆಚ್ಚಿನದಾಗಿ ಸಂಕಷ್ಟದಲ್ಲಿ ಇರುವ ಜನರಿಗೆ ನೆರವಾಗಿದೆ ಎಂದು ರಾಜ್ಯ ಸಭಾಸದಸ್ಯ ಎಲ್.ಹನುಮಂತಯ್ಯ ಅವರ ನೇತೃತ್ವದ ಸಮಿತಿ ವರದಿ ನೀಡಿದೆ. ಕೋವಿಡ್ ಸಂದರ್ಭದಲ್ಲಿನ ಕಾರ್ಯಚಟುವಟಿಕೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಧ್ಯಂತರ ವರದಿ ನೀಡಿದೆ. ಬೂತ್ ಮಟ್ಟದಿಂದಲೂ ಮಾಹಿತಿ ಕಲೆ ಹಾಕಿರುವ ಸಮಿತಿ ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಎಷ್ಟು …

Read More »

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿ ಕಡ್ಡಾಯ

ಬೆಳಗಾವಿ, – ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ(ಜೂ.26) ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.   ಒಂದು ವೇಳೆ …

Read More »

ವಾರದೊಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾಯಿಸಲಾಗುವುದು. ಎಂದ ಸತೀಶ್ ಜಾರಕಿಹೊಳಿ

ಬೆಂಗಳೂರು – ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುವುದು. ವಾರದೊಳಗೆ ಈ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಮುಖರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಕಡೆ 3 ವರ್ಷ ಪೂರ್ಣಗೊಂಡಿದೆ. ಕೆಲವು ಕಡೆ ಬದಲಾವಣೆ ಬೇಡಿಕೆ ಇದೆ. ಕೆಲವರು ಸ್ವಯಂ ಪ್ರೇರಿತರಾಗಿ ಸ್ಥಾನ ಬಿಟ್ಟುಕೊಡಲು ಮುಂದಾಗಿದ್ದಾರೆ. ಅಂತಹ ಕಡೆಗಳಲ್ಲಿ ಜಿಲ್ಲಾವಾರು ಸಭೆ ನಡೆಸಿ …

Read More »

ಪಕ್ಷ ಸಂಘಟನೆ: ಡಿ.ಕೆ. ಶಿವಕುಮಾರ್ ನೇತತ್ವದಲ್ಲಿ ಕಾರ್ಯಾಧ್ಯಕ್ಷರ ಸಭೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಂಚೂಣಿ ಘಟಕಗಳನ್ನು ಪುನರ್‌ ರಚಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ಕಾರ್ಯಾಧ್ಯಕ್ಷರ ಜತೆ ಶನಿವಾರ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂಚೂಣಿ ಘಟಕಗಳ ಪುನರ್ ರಚನೆ, ಕೆಲವು ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಬದಲಾವಣೆ, ಬ್ಲಾಕ್ ಕಾಂಗ್ರೆಸ್ ಘಟಕಗಳ ಪುನರ್ ರಚನೆ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸತೀಶ ಜಾರಕಿಹೊಳಿ, ಈಶ್ವರ್ …

Read More »

ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು …

Read More »