Breaking News

ಹುಬ್ಬಳ್ಳಿ : ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಶವವಾಗಿ ಪತ್ತೆ

ಹುಬ್ಬಳ್ಳಿ: ಇಲ್ಲಿನ ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು ಸೇರಿ ಕುರಿಗಾಹಿಗಳನ್ನು ಕೊಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ 2014 ರಿಂದ ಇಲ್ಲಿನ ಉಪಕಾರಾಗೃದಲ್ಲಿದ್ದ ವಿಜಯಾನಂದ ಆಗಸ್ಟ್ …

Read More »

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಬನಹಟ್ಟಿ : ಮಹಾರಾಷ್ಟ್ರ ರಾಜ್ಯದಲ್ಲಿನ ಹಾಗೂ ಪಶ್ಚಿಮ ಘಟ್ಟಗಳಲ್ಲಿನ ಮಹಾಮಳೆಯ ಪರಿಣಾಮ ಉಂಟಾದ ಪ್ರವಾಹದಿಂದಾಗಿ ಕಳೆದ 13 ದಿನಗಳಿಂದ ಕೃಷ್ಣಾನದಿ ಹಾಗೂ ಘಟಪ್ರಭಾ ನದಿಯು ಉಕ್ಕಿ ಹರಿದ ಪರಿಣಾಮ ರಬಕವಿ-ಬನಹಟ್ಟಿ ತಾಲೂಕಿನ ನದಿಪಾತ್ರದ ಗ್ರಾಮಗಳು ಜಲಾವೃತವಾಗಿ ಸಾಕಷ್ಟು ಆವಾಂತರಗಳನ್ನು ಸೃಷ್ಠಿಸಿತ್ತು. ಕಳೆದ 3-4 ದಿನಗಳಿಂದ ಕೃಷ್ಣಾ ಹಾಗೂ ಘಟಪ್ರಭಾ ಎರಡು ನದಿಗಳ ನೀರಿನ ಪ್ರಮಾಣ ನದಿಯ ನೀರಿನ ಹರಿವು ಕಡಿಮೆಯಾಗುತ್ತಿದೆ. ಮುಚ್ಚಿಕೊಂಡ ಬಹುತೇಕ ಸೇತುವೆ ಹಾಗೂ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ. …

Read More »

ಬಿಜೆಪಿ ಭಿನ್ನಮತ ನೋಡಿದರೆ ಶೀಘ್ರದಲ್ಲೇ ಮಧ್ಯಂತರ ಚುನಾವಣೆ? ಸಿಎಂ ಬೆಟ್ಟ ಅಗೆದು ಇಲಿ ಹಿಡಿದಂತಿದೆ, ಸಂಪುಟ :ಸಿದ್ದರಾಮಯ್ಯ ಭವಿಷ್ಯ

ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲೀಗ 29 ಸಚಿವರು ಸೇರ್ಪಡೆಯಾಗಿದ್ದಾರೆ. ಆದರೆ ಈ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಭಿನ್ನಮತ ನೋಡಿದರೆ ಶೀಘ್ರದಲ್ಲೇ ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ ಎಂದು ಸಿಎಂ ಬೊಮ್ಮಾಯಿ ಸಂಪುಟ ರಚನೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ …

Read More »

ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ:ಶಾಸಕ ಸಿದ್ದು ಸವದಿ ಹೇಳಿಕೆ

ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಹಿನ್ನಲೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭಾರಿ ಬೇಸರವುಂಟಾಗಿದೆ. ಅವರಲ್ಲಿ ಶಾಸಕ ಸಿದ್ದು ಸವದಿ ಸಹ ಇದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ತೇರದಾಳದ ಶಾಸಕ ಸಿದ್ದು ಸವದಿ ಸಹ ಇದ್ದರು. ಸಚಿವ ಸ್ಥಾನದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಹಾಗಾಗಿ ಆಕ್ರೋಶ ಹೊರಹಾಕಿದ ಅವರು ಬಕೆಟ್ ಹಿಡಿದವರಿಗೆ, ಲಾಬಿ ಮಾಡಿದವರಿಗೆ ಮಂತ್ರಿ …

Read More »

ಸಂಪುಟದಿಂದ ಹೊರಬಿದ್ದವರು..

ಲಕ್ಷ್ಮಣ ಸವದಿ: ಉಪ ಮುಖ್ಯಮಂತ್ರಿಯಾಗಿದ್ದವರು ಹಾಗೂ ಪ್ರಬಲ ಸಮುದಾಯ (ಲಿಂಗಾಯತ)ಕ್ಕೆ ಸೇರಿದವರೂ ಆಗಿದ್ದರು. ಉತ್ತಮ ಪ್ರದರ್ಶನ ತೋರುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ವಿಶ್ವಾಸ ಉಳಿಸಿಕೊಂಡಿದ್ದರೆ, ಮುಖ್ಯಮಂತ್ರಿಯಾಗಿ ಹೊರಹೊಮ್ಮಬಹು ದಿತ್ತು. ಆದರೆ, ಖಾತೆ ನಿರ್ವಹಣೆಯಲ್ಲಿ ಎಡವಿದರು. ಸಾರಿಗೆ ನೌಕರರ ಮುಷ್ಕರ ನಿರ್ವಹಿಸಿದ ರೀತಿ, ನಷ್ಟದಿಂದ ಹೊರಬರದ ಸಾರಿಗೆ ನಿಗಮಗಳು, ಸಾರಿಗೆ ಇಲಾಖೆಯಲ್ಲಿ ಕೂಡ ಹೇಳಿಕೊಳ್ಳುವಂತಹ ಯಾವುದೇ ಕಾರ್ಯಕ್ರಮಗಳು ಆಗದಿರುವುದು ಮುಳುವಾಯಿತು. ಇದೆಲ್ಲ ದರ ಜತೆಗೆ ಪಕ್ಷದಲ್ಲಿ ಯಡಿಯೂರಪ್ಪ …

Read More »

ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ.

ಬೆಂಗಳೂರು: ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ. ಈ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಮಂದಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರು. ಈ ಎರಡೂ ಸಮುದಾಯಗಳಿಗೆ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ದೊರಕಿದೆ. ಮುಖ್ಯಮಂತ್ರಿಯೂ ಸೇರಿದಂತೆ ಲಿಂಗಾಯತ ಸಮುದಾಯದ ಹತ್ತು ಜನರು ಸಂಪುಟದಲ್ಲಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯದ ಮೂವರು, ವೀರಶೈವ ಸಾದರ ಲಿಂಗಾಯತ ಸಮುದಾಯದ ಇಬ್ಬರು, ವೀರಶೈವ ಲಿಂಗಾಯತರ ಬಣಜಿಗ ಮತ್ತು ಚತುರ್ಥ ಉಪ ಪಂಗಡಗಳ ತಲಾ …

Read More »

ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ

ಬೆಂಗಳೂರು : ಕರ್ನಾಟಕದ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ರಚನೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಜೆಪಿ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಜಾತಿಯ ಸುಳ್ಳು ಮಾಹಿತಿ ನೀಡಿದ್ದಾರೆ. 30 ಜನರ ಸಚಿವ ಸಂಪುಟದಲ್ಲಿ 10 ಜನ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಮೂರನೇ ಒಂದು ಭಾಗ ಒಂದೇ ಸಮುದಾಯಕ್ಕೆ …

Read More »

KPSC : ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.   24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 …

Read More »

ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ.

ಬೆಳಗಾವಿ – ಪಕ್ಷ ಯಾವುದೇ ಇರಲಿ, ಸರಕಾರ ಯಾವುದೇ ಬರಲಿ. ಆದರೆ ಗೋಕಾಕದ ಜಾರಕಿಹೊಳಿ ಸಹೋದರರಲ್ಲಿ ಒಬ್ಬರು ಸಂಪುಟದಲ್ಲಿರಲೇಬೇಕು. ಇದು ಕಳೆದ ಸುಮಾರು 2 ದಶಕದಿಂದಲೂ ನಡೆದು ಬಂದ ಪದ್ಧತಿ. ಆದರೆ 2004ರಿಂದೀಚೆಗೆ ಇದೇ ಮೊದಲ ಬಾರಿಗೆ ಕುಟುಂಬದ ಮೂವರು ಶಾಸಕರಿದ್ದರೂ, ಬಿಜೆಪಿಯವರೇ ಇಬ್ಬರಿದ್ದರೂ ಯಾರೊಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳದೆ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ. 2004ರಿಂದ ಅಧಿಕಾರಕ್ಕೆ ಬಂದ …

Read More »

ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಧರ್ಮದೇಟು,ನರ್ಸ್ ಗೆ ಅಶ್ಲೀಲ ಮೆಸೇಜ್ ಮಾಡಿದ ಮಾಸ್ತರ್…

ಕಿತ್ತೂರು : ಕಿತ್ತೂರು ಚೆನ್ನಮ್ಮನ ನಾಡು ಚೆನ್ನಮ್ಮನ ನಾಡಿನಲ್ಲಿ ಹೆಣ್ಣಿಗೆ ಸಿಗಬೇಕಾದ ಮರ್ಯಾದೆಯನ್ನು ಇಂದು ಒಬ್ಬ ಶಿಕ್ಷಕ ಅವರ್ ಮರ್ಯಾದೆ ತೆಗೆಯೋಅಂತ ಕೆಲಸವನ್ನ ಮಾಡಿದ್ದಾನೆ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ಇಂತದೊಂದು ಘಟನೆ ಶಿಕ್ಷಕನಿಂದ ನಡೆದಿದೆ . ಹೌದು ಕಿತ್ತೂರು ತಾಲೂಕಿನ ದೇವಾಂಗ ಸರಕಾರಿ ಪ್ರಾಥಮಿಕ ಶಾಲೆಯ ಪ್ರಧಾನ ಶಿಕ್ಷಕ ಸುರೇಶ್ ಚವಲಗಿ ಎಂಬ ಕಾಮುಕ ಶಿಕ್ಷಕ ಕಿತ್ತೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಲಸ ಮಾಡುವ ನರ್ಸ್ ಗೆ ಅಶ್ಲೀಲ …

Read More »