ಭಾನುವಾರ ರಾತ್ರಿಯಿಂದಲೇ ನಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ರಚನೆಯ ಕಸರತ್ತು ಮಂಗಳವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಇವತ್ತೇ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವುದು ಖಾತರಿಯಾಗಿದೆ. ಇಂದು ಮಧ್ಯಾಹ್ನದ ನಂತರ 29 ಜನ ಸಚಿವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಕಿರಿಯ ಮಗ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಆಯಕಟ್ಟಿನ ಖಾತೆಯೇ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »ಅಂತಿಮವಾಗಿ ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಸ್ಥಾನ ನೀಡಿದಂತಾಗಿದೆ.
ಬೆಳಗಾವಿ – ಯಡಿಯೂರಪ್ಪ ಸಚಿವಸಂಪುಟದಲ್ಲಿ ಉಪಮುಖ್ಯಮಂತ್ರಿ ಸೇರಿ ನಾಲ್ಕು ಸಚಿವಸ್ಥಾನ ಪಡೆದಿದ್ದ ಬೆಳಗಾವಿ ಬೊಮ್ಮಾಯಿ ಸಂಪುಟದಲ್ಲಿ ಕೇವಲ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಕೊನೆಯ ಕ್ಷಣದಲ್ಲಿ ಸ್ಥಾನ ಪಡೆದಿದ್ದ ಉಮೇಶ ಕತ್ತಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಯಡಿಯೂರಪ್ಪ ಸಂಪುಟದಲ್ಲಿ ಆರಂಭದಿಂದಲೂ ಸ್ಥಾನ ಪಡೆದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಯೋಜನೆಗಳನ್ನು ರೂಪಿಸಿದ್ದ ಶಶಿಕಲಾ ಜೊಲ್ಲೆ ಕೂಡ ಮತ್ತೆ ಸ್ಥಾನ ಪಡೆದಿದ್ದಾರೆ. ಜೊಲ್ಲೆ ದಂಪತಿ …
Read More »ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ನಡೆಯಲಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 29 ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣೆ ಆರಂಭವಾಗಿದೆ. ಪ್ರಮಾಣ ವಚನ ಸ್ವೀಕರಿಸಲಿರುವವರು – 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- …
Read More »ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿ
ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …
Read More »ನನಗೆ ಕಾಲ್ ಬಂದಿಲ್ಲ ಸಚಿವ ಸ್ಥಾನ ಸಿಗದಿದ್ದರೆ ಬಂಡಾಯ : ಆನಂದ ಮಾಮನಿ
ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು …
Read More »ಓಲಂಪಿಕ್ ನ ಪುರುಷರ ಹೈಜಂಪ್ ಫೈನಲ್ಲಿನ ದೃಶ್ಯ.
ಈ ದೃಶ್ಯ ಟೋಕಿಯೊ ೨೦೨೦ರ ಓಲಂಪಿಕ್ ನ ಪುರುಷರ ಹೈಜಂಪ್ ಫೈನಲ್ಲಿನ ದೃಶ್ಯ. ಪುರುಷರ ಹೈಜಂಪ್ ಫೈನಲ್ಲಿನಲ್ಲಿ ಇಟಲಿಯ ಜಿಯಾನ್ ಮಾರ್ಕೊ ತಂಬರಿ ಸ್ಪರ್ಧೆಯು ಕತಾರ್ ದೇಶದ ಮುತಾಜ್ ಈಸಾ ಬಾರ್ಶಿಮ್ ಜೊತೆಗಿತ್ತು. ಇಬ್ಬರು ಸ್ಪರ್ಧಿಗಳೂ 2.37 ಮೀಟರ್ ಎತ್ತರ ಹಾರಿದ್ದರಿಂದ ರಿಸಲ್ಟ್ ಸಮ ಬಂದಿತು. ನಂತರದಲ್ಲಿ ಓಲಂಪಿಕ್ ಅಧಿಕಾರಿಗಳು ಇಬ್ಬರೂ ಸ್ಪರ್ಧಿಗಳಿಗೆ ತಲಾ ಮೂರು ಅವಕಾಶಗಳನ್ನು ನೀಡಿದರು. ಮೂರು ಬಾರಿಯೂ ಇವರಿಬ್ಬರು 2.37 ಮೀ.ಗಿಂತ ಹೆಚ್ಚಿನ ಎತ್ತರ ಹಾರಲಿಲ್ಲ. …
Read More »ದೇಶದಲ್ಲಿ ಮತ್ತೆ ಕೊರೊನಾ ಭೀತಿ: ಆರ್-ನಾಟ್ ವ್ಯಾಲ್ಯೂ ಹೆಚ್ಚಿದರೆ ಏನಾಗುತ್ತೆ ಗೊತ್ತಾ?
ಇನ್ನು ಅದೆಷ್ಟು ಸಂಕಟ ನೀಡುತ್ತೋ ಈ ವೈರಸ್ ಗೊತ್ತಿಲ್ಲ. ಇದೆ ವರ್ಷ 2 ತಿಂಗಳ ಹಿಂದೆ, ದೇಶ ತಲ್ಲಣಿಸಿ ಹೋಗಿತ್ತು. ಕಾರಣ 2ನೇ ಅಲೆ. ಅದು ಮೊದಲ ಅಲೆ ರೀತಿ ಹೀಗೆ ಬಂದು ಹಾಗೆ ಹೋಗ್ಲೆ ಇಲ್ಲ. ಬಂದು ತನ್ನ ಬತ್ತಳಿಕೆಗೆ ಅದೆಷ್ಟೋ ಜನರನ್ನು ತನ್ನ ಜೊತೆ ಕರೆದೊಯ್ತು. ಈಗ ಮತ್ತೆ ಇದೆ ವೈರಸ್ ಹೊಸ ಸದ್ದು ಮಾಡ್ತಾ ಇದೆ. ಒಬ್ಬನಿಂದ ಎಷ್ಟು ಜನರಿಗೆ ಈ ವೈರಸ್ ಹರಡುತ್ತೆ ಅನ್ನೋ …
Read More »ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಉಗ್ರರ ದಾಳಿ; ಕನ್ನಡಿಗ ಸೇರಿ ಇಬ್ಬರು ಯೋಧರು ಹುತಾತ್ಮ
ಕಲಬುರಗಿ: ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ ಪರಿಣಾಮ ರಾಜ್ಯದ ಓರ್ವ ಸೈನಿಕ ಸೇರಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ತ್ರಿಪುರದ ಧಲೈ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಗೆ ನಮ್ಮ ಸೈನಿಕರಿಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದ ಯೋಧ ರಾಜಕುಮಾರ ಎಂ ಮಾವಿನ್ ಹುತಾತ್ಮ ಯೋಧ. ಯೋಧ ಸಾವನ್ನಪ್ಪಿರುವ ಮಾಹಿತಿ ತಿಳಿಯುತ್ತಿದ್ದಂತೆ ಚಿಂಚನಸೂರು ಗ್ರಾಮ ನೀರವ ಮೌನಕ್ಕೆ ಜಾರಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು …
Read More »ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ.
ಹುಬ್ಬಳ್ಳಿ – ಆದರ್ಶ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ. ವಿಜಯ ಸಂಕೇಶ್ವರ ಅವರ ಜಾವನ ಮತ್ತು ಸಾಧನೆ ಕುರಿತು ಚಲನಚಿತ್ರವೊಂದು ಸಿದ್ಧವಾಗುತ್ತಿದೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ …
Read More »ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಅವರ ಹುದ್ದೆ ರದ್ದುಪಡಿಸಲಾಗಿದೆ. ಅಲ್ಲದೇ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್.ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್.ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಸೇರಿದಂತೆ …
Read More »