ಬೆಂಗಳೂರು: ರಾಜ್ಯದಲ್ಲಿ ಅನ್ಲಾಕ್ 2.O ಘೋಷಣೆ ಹಿನ್ನೆಲೆ ಅಂತರ್ ರಾಜ್ಯ ಬಸ್ ಸಂಚಾರಕ್ಕೆ ಕೆಎಸ್ಆರ್ಟಿಸಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೆಂಗಳೂರು, ಶಿವಮೊಗ್ಗ ಮತ್ತು ಮಂಗಳೂರು ಜಿಲ್ಲೆಗಳಿಂದ ಬಸ್ಗಳು ಸಂಚರಿಸಲಿದ್ದು ಮುಂಬೈ, ಪುಣೆ, ಮೀರಜ್, ಸೊಲ್ಲಾಪುರ್, ಪಂಡರಾಪುರ, ತುಳಜಾಪುರಕ್ಕೆ ಸೇವೆ ನೀಡಲಿವೆ. ಇನ್ನು ಈ ಬಸ್ಗಳಲ್ಲಿ ಶೇ 50 ರಷ್ಟು ಸಾಮರ್ಥ್ಯದಷ್ಟು ಪ್ರಯಾಣಿಕರಿಗೆ ಅವಕಾಶವಿರಲಿದೆ. ಎರಡು ಅವಧಿಗಳಲ್ಲಿ ಅಂತರ್ರಾಜ್ಯ ಕೆಎಸ್ಆರ್ಟಿಸಿ ಬಸ್ ಸಂಚಾರ ನಡೆಸಲಿವೆ. ಮುಂಗಡವಾಗಿ ಬಸ್ ಟಿಕೆಟ್ ಬುಕ್ ಮಾಡಿಕೊಳ್ಳಲು …
Read More »20 ವರ್ಷದ ಹಿಂದಿನ ಕೇಸ್ ಒಪನ್ ಮಾಡಿದ ಕೊಪ್ಪಳ ಪೊಲೀಸರು: ಆರೋಪಿ ಅಂದರ್
ಕೊಪ್ಪಳ: ಎರಡು ದಶಕಗಳ ಹಿಂದಿನ ಕೇಸ್ ಒಪನ್ ಮಾಡಿರುವ ಕೊಪ್ಪಳ ಪೊಲೀಸರು ಸುಮಾರು 175 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಕಾಯಿತಿ, ಕಳ್ಳತನ, ಹಲ್ಲೆ, ಮತ್ತು ಕೊಲೆ ಹಾಗೂ ವಂಚನೆ ಕೇಸ್ ಗಳಲ್ಲಿ ಜಾಮೀನು ಪಡೆದು ನಾಪತ್ತೆಯಾಗಿದ್ದ ರಾಮಬಾಬು ಎಂಬ ಆರೋಪಿಯನ್ನು ಜೂನ್ 21 ರಂದು ಪೊಲೀಸರು ಬಂಧಿಸಿದ್ದಾರೆ. 2003ರಲ್ಲಿ ಕೊಪ್ಪಳದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಆತನನ್ನು ಬಳ್ಳಾರಿಯ ಗಾಂಧಿನಗರದಲ್ಲಿ ಬಂಧಿಸಲಾಗಿದೆ. …
Read More »ಕಿಡಿಗೇಡಿಗಳಿಂದ ಬೆಂಕಿ; ಶಾಲಾ ಕೊಠಡಿಯಲ್ಲಿದ್ದ ಮಕ್ಕಳ ಸಮವಸ್ತ್ರ ಭಸ್ಮ
ಹೊಸನಗರ: ತಾಲ್ಲೂಕಿನ ಮಾರುತೀಪುರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲು ಸಂಗ್ರಹಿಸಿಟ್ಟಿದ್ದ ಸಮವಸ್ತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿ ತೆರೆದಾಗ ಸಮವಸ್ತ್ರದ ರಾಶಿಗೆ ಬೆಂಕಿ ಬಿದ್ದಿದ್ದು ಸುಟ್ಟು ಕರಕಲಾಗಿದ್ದವು. 2020- 21ನೇ ಸಾಲಿನ ಮಕ್ಕಳಿಗೆ ವಿತರಿಸಲು ಶಾಲಾಡಳಿತ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿತ್ತು. ಶನಿವಾರ ಸಂಜೆಯವರೆಗೂ ಸುಸ್ಥಿತಿಯಲ್ಲಿದ್ದವು. ಕೊಠಡಿಯ ಒಂದು ಕಿಟಕಿಯ ಬಾಗಿಲು ಪೂರ್ಣವಾಗಿ ಮುಚ್ಚಲು ಬರುತ್ತಿರಲಿಲ್ಲ. ಇದನ್ನು ಬಳಸಿ ಕಿಡಿಗೇಡಿಗಳು ಹೊರಗಿನಿಂದ ಬಟ್ಟೆಗೆ ಬೆಂಕಿ ಹಚ್ಚಿದ್ದಾರೆ ಎಂದು ಶಾಲಾಡಳಿತ …
Read More »ನಾಗರಹಾವು ಕಚ್ಚಿದ್ದರಿಂದ ಮೃತಪಟ್ಟ ಉರಗ ತಜ್ಞ
ಬಾಗಲಕೋಟೆ: ಹಾವುಗಳನ್ನ ಹಿಡಿಯುವಲ್ಲಿ ಪರಿಣಿತಿ ಪಡೆದಿದ್ದ ಬಾದಾಮಿ ತಾಲೂಕಿನ ಕಳಸಕೊಪ್ಪ ಗ್ರಾಮದ ಉರಗ ತಜ್ಞ ಸದಾಶಿವ ಕರಣಿ (30) ಅವರಿಗೆ ನಾಗರಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದಾರೆ. ಸದಾಶಿವ ಕರಣಿ ಸ್ವಯಂ ಆಸಕ್ತಿಯಿಂದ ಹಾವು ಹಿಡಿಯುವುದನ್ನು ಅಭ್ಯಾಸ ಮಾಡಿಕೊಂಡಿದ್ದರು. ಹೀಗಾಗಿ ಬಾದಾಮಿ ಪಟ್ಟಣ ಸೇರಿದಂತೆ ಕಳಸಕೊಪ್ಪದ ಸುತ್ತಲಿನ ಹಳ್ಳಿಗಳಲ್ಲಿ ಹಾವು ಕಂಡರೆ ಹಿಡಿಯಲು ಜನರು ಸದಾಶಿವ ಅವರಿಗೆ ಕರೆ ಮಾಡುತ್ತಿದ್ದರು. ಹಿಡಿದ ಹಾವನ್ನು ನಂತರ ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬರುತ್ತಿದ್ದರು. ಕಳಸಕೊಪ್ಪದ ಹೊಲವೊಂದರಲ್ಲಿ …
Read More »ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮುರುಘರಾಜೇಂದ್ರ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿ ಆಶೀರ್ವಾದ ಪಡೆದರು.
ಗೋಕಾಕ: ಇಲ್ಲಿನ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಶುಭ ಕೋರಿ, ಆಶೀರ್ವಾದ ಪಡೆದರು. ಪ್ರಿಯಾಂಕಾ ಅವರು ಜನ್ಮದಿನದ ಅಂಗವಾಗಿ ಸ್ವಾಮೀಜಿಗಳನ್ನು ಸತ್ಕರಿಸಿ, ಗೌರವ ಸಲ್ಲಿಸಿದರು. ಸ್ವಾಮೀಜಿಗಳು ಕೂಡ ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಮುಖಂಡರಾದ ವಿವೇಕ ಜತ್ತಿ, ಶಿವಾನಂದ ಕಿಲಾರಿ, ಪಾಂಡು ರಂಗಸುಬೆ ಸೇರಿ ಇನ್ನಿತರರು …
Read More »ಗಾಳಿಪಟದ ದಾರದಿಂದ ವ್ಯಕ್ತಿಗೆ ಗಾಯ, ನೆಲಕ್ಕೆ ಚಿಮ್ಮಿದ ನೆತ್ತರು
ಗದಗ: ಗಾಳಿಪಟದ ದಾರ ಸಿಲುಕಿ ವ್ಯಕ್ತಿಯೋರ್ವನ ಕೈ ಬೆರಳು ಹಾಗೂ ಕುತ್ತಿಗೆಗೆ ಗಾಯವಾದ ಘಟನೆ ನಗರದ ಟಾಂಗಾ ಕೂಟ ಬಳಿ ನಡೆದಿದೆ. ಕಾರಹುಣ್ಣಿಮೆ ನಿಮಿತ್ತ ಮಕ್ಕಳು, ಯುವಕರು ಗಾಳಿಪಟ ಹಾರಿಸುವುದೇ ಒಂದು ಸಂಭ್ರಮ. ಇಂದು ಸಾಕಷ್ಟು ಬ್ರಹತ್ ಗಾತ್ರದ ಬಣ್ಣ ಬಣ್ಣದ ಪಟಗಳು ಬಾನಂಗಳದಲ್ಲಿ ಹಾರಾಡುತ್ತವೆ. ಅನೇಕ ಪಟಗಳು ಹರಿದು ಎಲ್ಲಂದರಲ್ಲಿ ಬಿದ್ದು ಸಾಕಷ್ಟು ಅವಾಂತರ ಸೃಷ್ಟಿಸುತ್ತಿವೆ. ಇಂದು ಸಹ ಗಾಳಿಪಟವೊಂದು ಹರಿದು ವೇಗವಾಗಿ ಬಂದಿದೆ. ಅದನ್ನು ಗಮನಿಸದ ಬೈಕ್ …
Read More »ಮಳೆ ಬಿಡುವು: ತಗ್ಗಿದ ಜಲಾಶಯಗಳ ಒಳಹರಿವು
ಶಿವಮೊಗ್ಗ: ಜಿಲ್ಲೆಯಲ್ಲಿ ಮೂರು ದಿನದಿಂದ ಮಳೆ ಕ್ಷೀಣಿಸಿದ್ದು, ಜಲಾಶಯಗಳ ಒಳಹರಿವು ಪ್ರಮಾಣವೂ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯುಸೆಕ್ಗೆ ಇಳಿಕೆಯಾಗಿದೆ. ಜಲಾಶಯ ಈಗಾಗಲೇ ಭರ್ತಿ ಆಗಿರುವುದರಿಂದ, ಒಳ ಹರಿವಿನ ಪ್ರಮಾಣದಷ್ಟೇ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಪ್ರಸ್ತುತ 9,581 ಕ್ಯುಸೆಕ್ ಒಳಹರಿವು ಇದೆ. ಹಾಗಾಗಿ, ಜಲಾಶಯದ ನೀರಿನ ಮಟ್ಟ 152.6 ಅಡಿಗೆ ಏರಿಕೆಯಾಗಿದೆ. ಲಿಂಗನಮಕ್ಕಿ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಜಲಾಶಯಕ್ಕೆ 10,827 ಕ್ಯುಸೆಕ್ …
Read More »ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ
ಅಥಣಿ: ರಮೇಶ್ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ …
Read More »ಮಾಜಿ ಕರ್ಪೊರೇಟರ್ ರೇಖಾ ಕದಿರೇಶ್ ಕೊಲೆ -ಜಮೀರ್ ಆಪ್ತನತ್ತ ಬೆಟ್ಟು ಮಾಡಿದ ಎನ್.ಆರ್.ರಮೇಶ್
ಬೆಂಗಳೂರು: ನಗರದ ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಚಾಮರಾಜಪೇಟೆ ಶಾಸಕ ಜಮೀರ್ ಆಪ್ತ ಎಂದೇ ಗುರುತಿಸಿಕೊಂಡಿರುವ ಅತೂಶ್ ಎಂಬಾನತ್ತ ಬೆಟ್ಟು ಮಾಡಿ ಅರೋಪ ಮಾಡಿದ್ದಾರೆ. ಕೊಲೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಎನ್.ಆರ್.ರಮೇಶ್ ಅವರು, ರೇಖಾ ಕಳೆದ ಎರಡು ವರ್ಷದ ಹಿಂದೆ ಪತಿ ಕಳೆದು ಕೊಂಡಿದ್ದರು. ಅದು ಆದಾ ನಂತರ ಸಹ ರೇಖಾ ಸಾರ್ವಜನಿಕವಾಗಿ ಬಹಳ ಕೆಲಸ …
Read More »ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಸಕ್ರಿಯವಾಗಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ದಿಢೀರನೆ ದೂರವಾಣಿ ಕದ್ದಾಲಿಕೆ ಆರೋಪ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆಯೂ ಆಲೋಚನೆ ನಡೆಸಿದ್ದಾರೆ. ಆದರೆ ಪ್ರಕರಣ ರಾಜಕೀಯವಾಗಿ ಸೂಕ್ಷವಾಗಿರುವುದರಿಂದ ತನಿಖಾ ಸಂಸ್ಥೆಗಳು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳಲು ನಿರ್ಧರಿಸಿವೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ …
Read More »