Breaking News

ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ

ಹಾವೇರಿ: ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಮಹೇಶ್ ಪರಸಳ್ಳಿ(38) ಮತ್ತು ಮಂಜಪ್ಪ ಕರಿಯಪ್ಪನವರ (44) ಆತ್ಮಹತ್ಯೆ ಮಾಡಿಕೊಂಡ ರೈತರು. ಒಂದೂವರೆ ಎಕರೆ ಜಮೀನು ಹೊಂದಿದ್ದ ಮಹೇಶ್, ಬ್ಯಾಂಕ್ ಮತ್ತು ಕೈ ಸಾಲ ಸೇರಿ ಸುಮಾರು ನಾಲ್ಕೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದನು. ಇವರು ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಯನ್ನು ಬೆಳೆದಿದ್ದರು. ಆದರೆ ಈ …

Read More »

ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ:ಈಶ್ವರಪ್ಪ

ಮಂಗಳೂರು: ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದರೆ. ನಗರದಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಸಿಬಿಐಯ ಕ್ರಮವನ್ನು ಸ್ವಾಗತಿಸುತ್ತೇನೆ. ಸಿಬಿಐ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ. ಅದೇ ರೀತಿ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿ ಪಡುತ್ತೇನೆ ಎಂದು ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಿಬಿಐ ವಶಪಡಿಸಿಕೊಂಡಿರುವ …

Read More »

ಆರಂಭದಲ್ಲಿ ಹಿನ್ನಡೆ, ಕೊನೆಗೆ ಟ್ರಂಪ್‌ ಮುನ್ನಡೆ – ಯಾರಾಗ್ತಾರೆ ಅಮೆರಿಕದ ಅಧ್ಯಕ್ಷ?

ವಾಷಿಂಗ್ಟನ್‌: ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಿಪಬ್ಲಿಕನ್ ಪಕ್ಷದ ಡೋನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ವಿಜೇತರನ್ನು ನಿರ್ಣಯಿಸುವ ಎಲೆಕ್ಟೋರಲ್ ಮತಗಳಲ್ಲಿ ಬೈಡೆನ್ ಮುನ್ನಡೆ ಸಾಧಿಸಿದ್ದಾರೆ. ಬೆಳಗ್ಗೆ ತೀರಾ ಹಿಂದಿದ್ದ ಟ್ರಂಪ್ ಸಂಜೆ ಹೊತ್ತಿಗೆ ಭಾರೀ ಪೈಪೋಟಿ ನೀಡಿದ್ದಾರೆ. ಯಾವುದೇ ಕ್ಷಣದಲ್ಲೂ ಜೋ ಬೈಡನ್‍ರನ್ನು ಹಿಂದಿಕ್ಕುವ ಸಾಧ್ಯತೆಗಳೂ ಇವೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

ಧಾರವಾಡ : ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳು ಇಂದು ವಶಕ್ಕೆ ಪಡೆದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ಉಪನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ …

Read More »

ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.

ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …

Read More »

ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ …

Read More »

ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ

ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ …

Read More »

ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ …

Read More »

ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.     2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …

Read More »

ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ …

Read More »