Breaking News

ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ

ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ …

Read More »

ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ …

Read More »

ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.     2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …

Read More »

ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ …

Read More »

ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ

ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ ದೊಡ್ಡ ಮೇಲಾಟವೇ ನಡೆದಿತ್ತು. ಆದ್ರೆ, ಇದೆಲ್ಲವನ್ನೂ ಮೆಟ್ಟಿ ನಿಲ್ಲೋಕೆ ಸಿಎಂ ಬಿಎಸ್​ವೈ ಸಜ್ಜಾಗಿದ್ದಾರೆ. ಇಂದು ಮಂಗಳೂರಿನಲ್ಲಿ ನಡೀತಿರೋ ರಾಜ್ಯ ಕಾರ್ಯಕಾರಿಣಿಯಲ್ಲಿ ಖಡಕ್ ಸಂದೇಶ ರವಾನಿಸೋಕೆ ರೆಡಿಯಾಗಿದ್ದಾರೆ. ನಾಯಕತ್ವ ಬದಲಾವಣೆ.. ಸಿಎಂ ಚೇಂಜ್.. ಯಡಿಯೂರಪ್ಪ ಕುರ್ಚಿಗೆ ಕಂಟಕ.. ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಇದೇ ಮಾತು. ವಿಪಕ್ಷಗಳಿಂದ ಹಿಡಿದು ಸ್ವಪಕ್ಷಿಯರವರೆಗೂ ಆಡಿದ್ದ ಮಾತು. ಆದ್ರೀಗ, …

Read More »

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …

Read More »

ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ.

ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ. ಈ ಮಧ್ಯೆ ಟ್ರಂಪ್, ಬೈಡನ್ ಹಾಗೂ ಡೆಮಾಕ್ರಟಿಕ್ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಚಲನ ಸೃಷ್ಟಿಮಾಡಿದೆ. ಜಗದ ಪಾಲಿನ ದೊಡ್ಡಣ್ಣ, ಪವರ್ ಫುಲ್ ರಾಷ್ಟ್ರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಕಳೆಗಟ್ಟಿದೆ. ಈಗಾಗ್ಲೇ ಮತದಾನ ಮುಗಿಸಿ, ಮೊದಲ ಸುತ್ತಿನ ಫಲಿತಾಂಶವನ್ನೂ ಪಡೆದಿರುವ ಅಮೆರಿಕದಲ್ಲಿ ಯಾರು …

Read More »

ನನಗೆ ದೆಹಲಿಯಿಂದ ಮಾಹಿತಿ ದೊರಕಿದೆಉಪಚುನಾವಣೆ ನಂತ್ರ ಯಡಿಯೂರಪ್ಪ ಬದಲಾಗ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಉಪಚುನಾವಣೆಯ ನಂತರ ಯಡಿಯೂರಪ್ಪ ಅವರು ಬದಲಾಗುತ್ತಾರೆಯೆಂದು ನನಗೆ ಬಹಳ ವಿಶ್ವಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ ಎಂದು ಟ್ವೀಟ್‍ನಲ್ಲಿ ಬರೆದಿದ್ದಾರೆ. …

Read More »

ಆಂಟಿ ಎಂದು ಕರೆದ ಹುಡಿಗಿಗೆ ಗೂಸಾ ಕೊಟ್ಟ ಮಹಿಳೆ

ಲಕ್ನೋ: ಶಾಪಿಂಗ್ ಮಾಡುವ ವೇಳೆ ಆಂಟಿ ಎಂದು ಕರೆದಿದ್ದ ಹುಡುಗಿಗೆ ಮಹಿಳೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ ನಡೆದಿದೆ. ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ 40 ವರ್ಷದ ಮಹಿಳೆ ತನ್ನ ಗೆಳತಿಯರೊಂದಿಗೆ ಶಾಪಿಂಗ್ ಮಾಡುತ್ತಿದ್ದಳು. ಈ ವೇಳೆ ಅಲ್ಲಿಯೆ ಶಾಪಿಂಗ್ ಮಾಡುತ್ತಿದ್ದ ಹುಡುಗಿ ಆಂಟಿ ಎಂದು ಕರೆದಿದ್ದಾಳೆ ಇದರಿಂದ ಕೋಪಗೊಂಡಿರುವ ಮಹಿಳೆ ಹುಡುಗಿಗೆ ಹಿಗ್ಗಾಮುಗ್ಗ ಥಳಿಸಿದ್ದಾಳೆ. ಹುಡುಗಿ ಆಂಟಿ ಎಂದು ಕರೆದ ನಂತರ ಮಹಿಳೆ ಮತ್ತು ಆಕೆಯ …

Read More »

ವಿದ್ಯುತ್ ದರದಲ್ಲಿ  ಪ್ರತಿ ಯೂನಿಟ್ ಗೆ  40 ಪೈಸೆಯನ್ನು  ಹೆಚ್ಚಳ

ಬೆಂಗಳೂರು:  ವಿದ್ಯುತ್ ದರದಲ್ಲಿ  ಪ್ರತಿ ಯೂನಿಟ್ ಗೆ  40 ಪೈಸೆಯನ್ನು  ಹೆಚ್ಚಳ ಮಾಡಿ ಸರ್ಕಾರ  ಕೊವೀಡ್ ನಿಂದಾಗಿ  ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ  ಜನತೆಗೆ ಶಾಕ್   ನೀಡಿದೆ. ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದಲೇ  ಅನ್ವಯವಾಗುಯತ್ತಿದೆ.  ಪ್ರತಿ ಯೂನಿಟ್ ಗೆ 1. 96 ಪೈಸೆ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸರ್ಕಾರಕ್ಕೆ ಮನವಿ ಮಾಡಿತ್ತು. ಆದ್ರೆ ಸರ್ಕಾರ ಪ್ರತಿ ಯೂನಿಟ್ …

Read More »