Breaking News

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರು

ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ ದಿನಕ್ಕೆ ವೇತನ ಸಿಗುತ್ತಿಲ್ಲ. ಜುಲೈ ತಿಂಗಳ ವೇತನವನ್ನು ಆಗಸ್ಟ್‌ ಕೊನೆಯ ವಾರದಲ್ಲಿ ಪಾವತಿಸಲಾಗಿತ್ತು. ಆಗಸ್ಟ್‌ ತಿಂಗಳ ಶೇ.50ರಷ್ಟು ವೇತನವನ್ನು ಗೌರಿ-ಗಣೇಶ ಹಬ್ಬಕ್ಕೂ ಮುನ್ನ ಬಿಡುಗಡೆಗೊಳಿಸಲಾಗಿತ್ತು. ಈಗ ಅಕ್ಟೋಬರ್‌ ಬಂದರೂ ಆಗಸ್ಟ್‌ ತಿಂಗಳ ಬಾಕಿ ಶೇ.50ರಷ್ಟುವೇತನ ನೀಡಿಲ್ಲ. ಇದೀಗ ಮಹಾಲಯ ಅಮಾವಾಸ್ಯೆ, ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ನೌಕರರಿಗೆ ಹಣದ ಅಗತ್ಯವಿದೆ.

Read More »

ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಮಯೋಪಿಯ ಸಮಸ್ಯೆ

ಹೆಚ್ಚಾಗಿ 8- 16 ವರ್ಷದೊಳಗಿನ ಮಕ್ಕಳು ಈ ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿರುವುದಾಗಿ ಸಂಶೋಧನೆಯಿಂದ ತಿಳಿದುಬಂದಿದೆ. ಈ ಹಿಂದೆ 10- 15 ಪ್ರತಿಶತ ಮಕ್ಕಳು ಕಣ್ಣಿನ ಸಮಸ್ಯೆ ಹೇಳಿಕೊಂಡು ವೈದ್ಯರ ಬಳಿಗೆ ಬರುತ್ತಿದ್ದರು. ಈಗ ಆ ಸಂಖ್ಯೆ ಶೇ. 30- 40 ಪ್ರತಿಶತಕ್ಕೆ ಏರಿಕೆಯಾಗಿದೆ. ದೀರ್ಘ ಕಾಲ ಡಿಜಿಟಲ್ ಪರದೆಯನ್ನು ದಿಟ್ಟಿಸುವುದರಿಂದ ಕಣ್ನಲ್ಲಿನ ನೀರಿನಂಶ ಬೇಗನೆ ಒಣಗಿ ಹೋಗುತ್ತದೆ. ಇದರಿಂದ ತುರಿಕೆ ಕಂಡುಬರುತ್ತದೆ. ಆಗ ಮಕ್ಕಳು ಕಣ್ಣನ್ನು ಪದೇ ಪದೇ ಉಜ್ಜಿಕೊಳ್ಳುತ್ತಾರೆ. …

Read More »

ಟಾಪ್​​ 10 ಸುದ್ದಿಗಳ ಕ್ವಿಕ್​ರೌಂಡಪ್​ ATM ಕೇಂದ್ರದಲ್ಲಿ ಯುವತಿಯ ಭರ್ಜರಿ ಡ್ಯಾನ್ಸ್​​

1. ದೀದಿ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯ ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಭವಾನಿಪುರ ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದು, ಶೇಕಡಾ 57ರಷ್ಟು ಮತದಾನವಾಗಿತ್ತು. ‌ ಅದರಂತೆ ಇಂದು ಬೆಳಿಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶಗಳು ಟ್ರೆಂಡ್ ಆಧಾರದ ಮೇಲೆ ಸ್ಪಷ್ಟವಾಗುತ್ತವೆ. ಇನ್ನು ಭವಾನಿಪುರ …

Read More »

ಆಗಸ್ಟ್‌ನಲ್ಲಿ 20 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ್ದ ವಾಟ್ಸಾಪ್

ನವದೆಹಲಿ, ಅಕ್ಟೋಬರ್ 02: ಒಂದೇ ತಿಂಗಳಲ್ಲಿ 20 ಲಕ್ಷ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿರುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್‌ನಲ್ಲಿ ತಿಂಗಳಲ್ಲಿ ವಾಟ್ಸ್​​ಆಯಪ್​ ಕುರಿತಾಗಿ ಖಾತೆ ಬೆಂಬಲ (105), ನಿಷೇಧ ಮನವಿ (222), ಇತರ ಬೆಂಬಲ (34), ಉತ್ಪನ್ನ ಬೆಂಬಲ (42) ಮತ್ತು ಸುರಕ್ಷತೆ (17) ಗಳ ವಿಚಾರವಾಗಿ 420 ಬಳಕೆದಾರರ ವರದಿಗಳನ್ನು ಸ್ವೀಕರಿಸಲಾಗಿದೆ ಎಂದು ವಾಟ್ಸಾಪ್ ಅನುಸರಣೆ ಡೇಟಾ ತೋರಿಸಿದೆ. ಆದಾಗ್ಯೂ, 421 ವರದಿಗಳ ಪೈಕಿ, ವಾಟ್ಸಾಪ್ 41 ಖಾತೆಗಳ ವಿರುದ್ಧ …

Read More »

. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಪವಾಡವೇ ಸರಿ…

ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಅಚ್ಚರಿಯ ಘಟನೆ ನಡೆದಿದೆ. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಅಗ್ನಿ ಶಾಮಕ ದಳದ ಸಿಬ್ಬಂಧಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. https://youtu.be/GAPJHEFf7mM ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಯುವಕ ಸೆಲ್ಫೀ ತೆಗೆಯಲು ಹೋಗಿ ಗೋಕಾಕ್ ಫಾಲ್ಸ್ ನಲ್ಲಿ ಜಾರಿ ಬಿದ್ದಿದ್ದ,ರಾತ್ರಿಹೊತ್ತು ಅಗ್ನಿ ಶಾಮಕದಳದ ಸಿಬ್ಬಂಧಿ ಮತ್ತು ಪೋಲೀಸರು ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆ ಆಗಿರಲಿಲ್ಲ, ಮದ್ಯರಾತ್ರಿ 3 …

Read More »

ದೀದಿ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ

ಕೋಲ್ಕತ್ತಾ: ಭವಾನಿಪುರದಲ್ಲಿ ದೀದಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದ ಆರಂಭವಾಗಿದೆ. ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ. ಬೆಳಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್​​ ವಿಂಗ್​​​ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದಾರೆ. …

Read More »

ಪೊಲೀಸರೆಂದು ಹೆದರಿಸಿ ಹಣ ವಸೂಲಿ! ಕೊಪ್ಪಳದಲ್ಲಿ ಇಬ್ಬರು ಬಂಧನ

ಕೊಪ್ಪಳ: ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಮೂಲದ ಸಂಜಯ ಕೊಪ್ಪದ ಮತ್ತು ನರಗುಂದ ಮೂಲದ ಸಂಜು ಛಲವಾದಿ ಬಂಧಿತ ಆರೋಪಿಗಳು. ಬಂಧಿತರು ಆಗಸ್ಟ್ 15ರಂದು ಭೀಮೇಶ್ ಎಂಬುವವರ ಬೈಕ್ ತಡೆದು 1,000 ರೂ. ವಸೂಲಿ ಮಾಡಿದ್ದರು. ಈ ಘಟನೆ ಕೊಪ್ಪಳ ಹೊರವಲಯದಲ್ಲಿ ನಡೆದಿತ್ತು. ಭೀಮೇಶ್ ಬೈಕ್ನಲ್ಲಿ ಮುನಿರಾಬಾದ್ಗೆ ಹೊರಟಾಗ ಹಣ ವಸೂಲಿ ಮಾಡಿದ್ದರು. ಜೊತೆಗೆ ಎಟಿಎಂ ಪಿನ್ ಪಡೆದು 1,500 ರೂ. ಡ್ರಾ …

Read More »

ಶಾರುಖ್ ಖಾನ್ ಪುತ್ರನ ಮಾದಕ ನಂಟು: ಎನ್ ಸಿಬಿ ಬಲೆಗೆ ಬಿದ್ದ ಆರ್ಯನ್ ಖಾನ್

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ದೂರದ ಸಮುದ್ರ ಮಧ್ಯದಲ್ಲಿ ವಿಲಾಸಿ ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ ನಡೆದಿದೆ. ಈ ಬಗ್ಗೆ ಸುಳಿವು ಸಿಕ್ಕ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್‌ಸಿಬಿ) ಅಧಿಕಾರಿಗಳು ಹತ್ತು ಮಂದಿಯನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರ ಕೂಡಾ ಈ ರೇವ್ ಪಾರ್ಟಿಯಲ್ಲಿದ್ದ ಎನ್ನಲಾಗಿದೆ. ಆರ್ಯನ್ ಖಾನ್ ಸೇರಿ 10 ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು …

Read More »

ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಗಾಂಜಾ ಪೂರೈಕೆ: ಸಿನಿಮೀಯ ರೀತಿಯಲ್ಲಿ ಏಳು ಮಂದಿಯ ಬಂಧನ

ಬೆಂಗಳೂರು: ಸ್ವಿಗ್ಗಿ ಫುಡ್‌ ಡೆಲಿವರಿ ಮತ್ತು ಕೊರಿಯರ್‌ ಮೂಲಕ ಉನ್ನತ ಮಟ್ಟದ ಗಾಂಜಾವನ್ನು ಮನೆ ಬಾಗಿಲಿಗೆ ಪೂರೈಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್‌ ಸೇರಿ ಏಳು ಮಂದಿಯನ್ನು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಹಿಂಬಾಲಿಸಿ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕಿಂಗ್‌ಪಿನ್‌ ಸೇರಿ ಆರು ಮಂದಿ ಮತ್ತು ಹೈದರಾಬಾದ್‌ನ ಒಬ್ಬ ಪೂರೈಕೆದಾರ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ 140 ಕೆ.ಜಿ. ಉನ್ನತ ಮಟ್ಟದ ಗಾಂಜಾ, 5.20 …

Read More »

ಪತಿ, ಪುತ್ರಿಯೊಂದಿಗೆ ಪ್ಯಾರಿಸ್‌ಗೆ ಹಾರಿದ ನಟಿ ಐಶ್ವರ್ಯ ರೈ ಬಚ್ಚನ್‌

ಹೊಸದಿಲ್ಲಿ: ಬಾಲಿವುಡ್‌ ನಟಿ ಐಶ್ವರ್ಯ ರೈ ಬಚ್ಚನ್‌ ಎರಡು ವರ್ಷಗಳ ನಂತರ ಪತಿ ಅಭಿಶೇಕ್‌ ಬಚ್ಚನ್‌ ಹಾಗೂ ಪುತ್ರಿ ಆರಾಧ್ಯರೊಂದಿಗೆ ಪ್ಯಾರಿಸ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ‌ ಶುಕ್ರವಾರ ರಾತ್ರಿ ಐಶ್ವರ್ಯ ರೈ ತನ್ನ ಪತಿ ಹಾಗೂ ಪುತ್ರಿಯೊಂದಿಗೆ ಮುಂಬೈ ಏರ್‌ಪೋರ್ಟ್‌ನಿಂದ ವಿದೇಶಕ್ಕೆ ಹಾರಿದರು. ಐಶ್ವರ್ಯ ಅವರಿಗೆ ಎರಡು ವರ್ಷಗಳ ನಂತರ ಮೊದಲ ವಿದೇಶ ಪ್ರವಾಸವಾಗಿದೆ. ʻಐಶ್ವರ್ಯ ಅವರು ಲಿ ಡೆಫಿಲಿ ಓರೆಲ್‌ ನಾಲ್ಕನೇ ಆವೃತ್ತಿಯ ಫ್ಯಾಷನ್‌ ಶೋಗಾಗಿ ಪ್ಯಾರಿಸ್‌ …

Read More »