ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ನಾಯಕತ್ವ ವಿಚಾರಕ್ಕೆಸಂಬಂಧಿಸಿ ಅರುಣ್ ಸಿಂಗ್ ಅವರು ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಸುಮಾರು 53 ಮಂದಿ ಶಾಸಕರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದಾರೆ. ಆದರೆ ಇದಾದ ಬಳಿಕ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಚರ್ಚೆ ನಡೆಸಿದ್ದಾರೆ. ಈ ವೇಳೆ …
Read More »ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ
ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ. ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …
Read More »ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ
ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ …
Read More »ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ
ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ …
Read More »ಅರುಣ್ ಸಿಂಗ್ ಭೇಟಿ ಮಾಡುವವರ ಲಿಸ್ಟ್ ನ್ನು ಹಂಚಿಕೊಂಡ ಯತ್ನಾಳ್
ವಿಜಯಪುರ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಸಿಎಂ ಬದಲಾವಣೆಯ ಕುರಿತು ಪರ, ವಿರೋಧ ಚರ್ಚೆ ಕೂಡ ನಡೆದಿದೆ. ಇದರ ಮಧ್ಯೆ ನಾಯಕತ್ವ ಬದಲಾವಣೆ ಕುರಿತು ಮಾತನಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೈಲೆಂಟಾಗಿದ್ದು, ಯಾರ ಕೈಗೂ ಸಿಗುತ್ತಿಲ್ಲ. ಇದೆಲ್ಲದರ ಮಧ್ಯೆ ಇಂದು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಅರುಣ್ ಸಿಂಗ್ ಭೇಟಿಗೆ ಅವಕಾಶ ಕೇಳಿಲ್ಲ ಎಂದಿದ್ದಾರೆ. ಈ ಕುರಿತು ಫೆಸ್ಬುಕ್ನಲ್ಲಿ ಪೋಸ್ಟ್ …
Read More »ಗೃಹಿಣಿಯರಿಗೆ ಗುಡ್ ನ್ಯೂಸ್: ಇಳಿಕೆಯಾಗಿದೆ ಅಡುಗೆ ಎಣ್ಣೆ ಬೆಲೆ
ಕಳೆದ ಒಂದು ತಿಂಗಳಿನಿಂದ ಅಡುಗೆ ಎಣ್ಣೆ ಬೆಲೆಗಳು ಕುಸಿಯುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಲವೆಡೆ ಅಡುಗೆ ಎಣ್ಣೆ ಬೆಲೆಗಳಲ್ಲಿ 20%ನಷ್ಟು ಇಳಿಕೆ ಕಂಡುಬಂದಿದೆ. ಅಡುಗೆ ಎಣ್ಣೆ ಬೆಲೆಗಳ ಇಳಿಕೆಯ ವಿವರ ಇಂತಿದೆ 1. ಪಾಮ್ ಎಣ್ಣೆಯ ಬೆಲೆ ಮೇ 7ರಂದು ರೂ.142/ಕೆಜಿ ಇದ್ದಿದ್ದು ಇಂದಿಗೆ 115 ರೂ./ಕೆಜಿಗೆ ಇಳಿದಿದೆ. 2. ಸೂರ್ಯಕಾಂತಿ ಎಣ್ಣೆಯ ಬೆಲೆಯು ಮೇ 5ರಂದು 188ರೂ./ಕೆಜಿ ಇಂದ 157 ರೂ./ಕೆಜಿಗೆ ಇಳಿದಿದೆ. 3. ಸೋಯಾ …
Read More »ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು
ಮಹಾಲಿಂಗಪುರ: ಬಾಗಲಕೋಟ ಜಿಲ್ಲೆಯ ಮುಧೋಳ ಮತ್ತು ನೂತನ ರಬಕ” ಬನಹಟ್ಟಿ ತಾಲೂಕಿನಲ್ಲಿ ಪ್ರಸಕ್ತ ವರ್ಷ ನೀರಿಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ಆದರೂ ಈ ಭಾಗದ ಜನತೆಗೆ ಪ್ರವಾಹದ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಂದಾಗಿ “ರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಗುರುವಾರ “ಡಕಲ್ ಜಲಾಶಯಕ್ಕೆ ಸುಮಾರು 17114 ಕ್ಯೂಸೆಕ್ ಒಳಹರಿವು ಇದೆ. “ಡಕಲ್ ಜಲಾಶಯದಿಂದ …
Read More »ತೈಲ ಬೆಲೆ ಏರಿಕೆ ಎಫೆಕ್ಟ್: ಅಕ್ಕಿ ದರದಲ್ಲಿ ಕ್ವಿಂಟಲ್ಗೆ ದಿಢೀರ್ 200 ರೂ. ಹೆಚ್ಚಳ
ಬೆಂಗಳೂರು: ತೈಲಬೆಲೆಯ ಏರಿಕೆ ಎಫೆಕ್ಟ್ ಈಗ ಅಕ್ಕಿ ವ್ಯಾಪಾರದ ಮೇಲೆ ಬೀರಿದೆ.ಕಳೆದ ಕೆಲವು ದಿನಗಳಿಂದ ಪೆಟ್ರೋಲ್, ಡಿಸೇಲ್ ಸೇರಿದಂತೆ ತೈಲ ಬೆಲೆ ಗಗನ ಮುಖವಾಗಿದ್ದು ಆ ಹಿನ್ನೆಲೆಯಲ್ಲಿ ಭಿನ್ನ ತಳಿಯ ಅಕ್ಕಿಯ ಬೆಲೆ ಪ್ರತಿ ಕ್ವಿಂಟಾಲ್ನ ನಿಗದಿತ ಬೆಲೆಗಿಂತ ದಿಢೀರ್ ಆಗಿ 200ರೂ. ಏರಿಕೆಯಾಗಿದೆ. ಜನತಾ ಕರ್ಫ್ಯೂ ಮಾರ್ಗಸೂಚಿ ತೆರವಾಗುತ್ತಿದಂತೆ ಇದರ ಬಿಸಿ ಶ್ರೀಸಾಮಾನ್ಯರಿಗೆ ತಟ್ಟಿದೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಈ ಹಿಂದೆ ಕೋಲಂ (ಬುಲೆಟ್ ರೈಸ್ )ಅಕ್ಕಿ …
Read More »ಸಂತೋಷ್ ಹೆಗ್ಡೆಗೂ ಸೈಬರ್ ವಂಚಕರ ಕರೆ: ಪ್ರಕರಣ ದಾಖಲು
ಬೆಂಗಳೂರು: ದಿನೇ ದಿನೇ ಸೈಬರ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದರ ನಡುವೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರಿಗೂ ವಂಚಿಸಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ದೂರವಾಣಿ ಕರೆ ಮಾಡಿ ಕ್ರೆಡಿಟ್ ಕಾರ್ಡ್ ಮಾಹಿತಿ ಪಡೆದು ವಂಚನೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಈ ಸಂಬಂಧ ಸ್ವತಃ ಸಂತೋಷ್ ಹೆಗ್ಡೆ ಅವರು ದೂರು ನೀಡಿದ್ದಾರೆ. ದೂರು ಏನು?: ಜೂ.14ರ ಸಂಜೆ 6 ಗಂಟೆಗೆ ಸಂತೋಷ್ ಹೆಗ್ಡೆ ಅವರ ಮೊಬೈಲ್ಗೆ ಕರೆ …
Read More »ಜುಲೈ ತಿಂಗಳಾಂತ್ಯಕ್ಕೆ ಬೆಂಗಳೂರು ನಗರಕ್ಕೆ ಹೊಸ ಕಮೀಷನರ್ ನೇಮಕ?
ಬೆಂಗಳೂರು,: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನ ಪೊಲೀಸ್ ಆಯುಕ್ತರು ಕೂಡ ಬದಲಾಗುವ ಮಾಹಿತಿ ಚರ್ಚೆಗೆ ನಾಂದಿ ಹಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗಾಗಿ ಪೈಪೋಟಿ ಶುರುವಾಗಿದೆ. ನೂತನ ನಗರ ಪೊಲೀಸ್ ಆಯುಕ್ತರು ಯಾರಾಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಎರಡನೇ ಸಲ ಸದ್ದು ಮಾಡುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ …
Read More »