Breaking News

ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿರುತ್ತದೆ:ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರಗತಿ ಪರಿಶೀನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ  ಇದುವರೆಗೆ ಅತಿವೃಷ್ಟಿಯಿಂದ 4 ಜನರು 13 ಜಾನುವಾರಗಳ ಜೀವಹಾನಿಯಾಗಿದ್ದು, ಸಂಬಂಧಿಸಿದ ಕುಟುಂಬದವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ ಪೂರ್ಣ ಹಾಗೂ ಭಾಗಶಃ ಸೇರಿದಂತೆ ಒಟ್ಟಾರೆ 4619 ಮನೆಗಳ ಹಾನಿಯಾಗಿದೆ. ಅದೇ ರೀತಿ …

Read More »

ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು.

ಬಾಗಲಕೋಟೆ: ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು. ತಮಗೊಂದು ಸೂರಿಗಾಗಿ ಸಿದ್ದರಾಮಯ್ಯ ಕಚೇರಿಗೆ ಅರ್ಜಿ ಸಲ್ಲಿಸಲು ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದ ಯಲ್ಲವ್ವ ಹನಮಂತಪ್ಪ ಗಾರವಾಡ ಬಂದಿದ್ದರು. ಆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದರು.    ಇದ್ದವರು ಸರ್ಕಾರದಿಂದ ಎರಡೆರಡು ಮನೆ ಹಾಕಿಸಿಕೊಂಡಾರ. …

Read More »

ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ಸಿದ್ದರಾಮಯ್ಯ

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ …

Read More »

ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ: ನರೇಂದ್ರ ಮೋದಿ

ಹೊಸದಿಲ್ಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನರೇಂದ್ರ ಮೋದಿ ಭಾಷಣ ದೇಶಾದ್ಯಂತ ಕುತೂಹವನ್ನು ಮೂಡಿಸಿದೆ. ಮಂಗಳವಾರ ಮಧ್ಯಾಹ್ನ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ. ನವರಾತ್ರಿಯ ಸಂದರ್ಭದಲ್ಲಿ ಮೋದಿ ಭಾಷಣ ಮಾಡುತ್ತಿದ್ದಾರೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಅನ್ ಲಾಕ್ 3.0 ಜಾರಿಗೆ ಬಂದ …

Read More »

B.S.Y.ಇವರು ಶಿವಮೊಗ್ಗ ಮುಖ್ಯಮಂತ್ರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ?: ಉಮೇಶ ಕತ್ತಿ

ಬೆಂಗಳೂರು : ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಇದೆ ಎಂಬುವುದು ಪುಃನ ಪುನಹ ಸಾಭಿತಾಗುತ್ತಿದೆ. ಬಿಜೆಪಿ ಶಾಸಕರೇ ಸಿಎಂ ಬಿ.ಎಸ್.ಯಡಿಯೂರಪ್ಪನ ವಿರುದ್ಧ ಅಸಮಾಧಾನ ಹೊರ  ಹಾಕುತ್ತಿದ್ದಾರೆ. ವಿಜಯಪುರದಲ್ಲಿ  ಬಿಜೆಪಿ ಶಾಸಕ ಬಸವರಾಜ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಬಿಎಸ್.ಯಡಿಯೂರಪ್ಪ ಕೇಂದ್ರಕ್ಕೂ ಸಾಕಾಗಿದ್ದಾರೆ. ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಜತೆಗೆ ಕ್ಷೇತ್ರಕ್ಕೆ ನೀಡಿದ ಅನುದಾನ ವಾಪಾಸ ಪಡೆದಿರುವುದಕ್ಕೆ ಆಕ್ರೋಶ ವ್ಯಕ್ತ ಪಡಿಸಿದ ಅವರು, ಅನುದಾನ …

Read More »

ರಾಗಿಣಿ, ಸಂಜನಾ ಜಾಮೀನಿಗಾಗಿ ಬೆದರಿಕೆ ಪತ್ರ – ನಾಲ್ವರು ಪೊಲೀಸರ ವಶಕ್ಕೆ

ಬೆಂಗಳೂರು: ರಾಗಿಣಿ ಮತ್ತು ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಕೇಸಿನಲ್ಲಿ ಅರೆಸ್ಟ್ ಆಗಿರುವ ನಟಿಯಾರ ರಾಗಿಣಿ ಮತ್ತು ಸಂಜಾನ ಅವರಿಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂದು ನಿನ್ನೆ ಬೆದರಿಕೆ ಪತ್ರವನ್ನು ಬರೆಯಲಾಗಿತ್ತು. ಜೊತೆಗೆ ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, …

Read More »

ಭೀಮಾ ನದಿ ಪ್ರವಾಹ ಮುಂದುವರೆದಿದೆ.

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಮನೆಗಳ ಹಾನಿಯ ಜೊತೆ ಅಂಗಡಿಗಳಲ್ಲಿಯೂ ಅಪಾರ ಹಾನಿ ಸಂಭವಿಸಿದೆ. ಭೀಮಾ ನದಿ ಪ್ರವಾಹಕ್ಕೆ ಕಲಬುರ್ಗಿ ಜಿಲ್ಲೆ ಜನತೆ ತತ್ತರಿಸಿ ಹೋಗಿದ್ದಾರೆ. ಅಫಜಲಪುರ ತಾಲೂಕಿನಲ್ಲಿ ಪ್ರವಾಹ ಒಂದಷ್ಟು ಇಳಿಮುಖವಾಗಿದೆ. ಆದರೆ ಕಲಬುರ್ಗಿ, ಜೇವರ್ಗಿ, ಶಹಾಬಾದ್ ಹಾಗು ಚಿತ್ತಾಪುರ ತಾಲೂಕುಗಳಲ್ಲಿ ಪ್ರವಾಹ ಮುಂದುವರಿದಿದೆ. ಭಾರಿ ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಕಲಬುರ್ಗಿ ತಾಲೂಕಿನ ಸರಡಗಿ …

Read More »

ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ.

ಬೆಂಗಳೂರು,- ಕೋವಿಡ್ -19 ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಇಲ್ಲವೇ ಅಪಘಾತಕ್ಕೆ ತುತ್ತಾದ ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆಯ ಸೌಲಭ್ಯ ಒದಗಿಸಲಾಗಿದ್ದು, ಮತ್ತೆ ಈ ಸೌಲಭ್ಯವನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ರೋಗಿಗಳೊಂದಿಗೆ ನೇರ ಸಂಪರ್ಕ …

Read More »

ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್‌ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್‌ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …

Read More »

ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಬೆಳಗಾವಿ : ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಸುಮಾರು 3000 ಕೋಟಿ ರು. ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, ಸುಮಾರು 8 ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊರೋನಾ ಇರುವುದರಿಂದ ಅಲ್ಲಿರುವವರಿಗೆ ಮಾಸ್ಕ್‌, ಸ್ಯಾನಿಟೈಸರ್‌ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೊರೋನಾ ಹಾಗೂ ಪ್ರವಾಹ …

Read More »