Breaking News

ಐಟಿ ಸಿಟಿ ಬೆಂಗಳೂರು.. ಟೆರರಿಸ್ಟ್​ ಸಿಟಿಯಾಗಿ ಬದಲು! ರಾಜಧಾನಿಯಲ್ಲಿ ಉಗ್ರರಿಗೆ ತರಬೇತಿ

ಬೆಂಗಳೂರು: ರಾಜಧಾನಿ ಜನರು ಬೆಚ್ಚಿಬೀಳುವಂತಹ ಅತ್ಯಂತ ಭಯಾನಕ ಸುದ್ದಿಯೊಂದು ಹೊರ ಬಿದ್ದಿದೆ. ನಗರದ ಹೊರವಲಯದಲ್ಲೇ ಐಸಿಸ್ ಉಗ್ರರ ಕ್ಯಾಂಪ್​ಗಳಿವೆಯಂತೆ. ಈ ಕ್ರಿಮಿಗಳು ಕ್ಯಾಂಪ್ ಮಾಡಿ ವಿಧ್ವಂಸಕ ಕೃತ್ಯ ಸಂಚು ರೂಪಿಸುತ್ತಿದ್ರಂತೆ. ಓಲ್ಡ್ ಮದ್ರಾಸ್ ರಸ್ತೆಯ ಸುತ್ತಮುತ್ತ ಉಗ್ರರಿಗೆ ಟ್ರೇನಿಂಗ್ ನೀಡಲಾಗುತ್ತಿದೆಯಂತೆ. ಕುರಾನ್ ಸರ್ಕಲ್ ಗ್ರೂಪ್ ಮಾಡಿ ಯುವಕರನ್ನ ಕರೆಸಿಕೊಳ್ತಿದ್ರು ನಂತರ ಅವರಿಗೆ ಟ್ರೇನಿಂಗ್ ಕೊಟ್ಟು ಉಗ್ರರನ್ನಾಗಿ ಮಾಡ್ತಿದ್ರು ಎಂಬ ಭಯಾನಕ ಸುದ್ದಿ ಬಹಿರಂಗಗೊಂಡಿದೆ. ಮೇಕಿಂಗ್ ಆಫ್ ಫ್ಯೂಚರ್ ಇಸ್ಲಾಮಿಕ್ ಸ್ಟೇಟ್: ಇಕ್ಬಾಲ್ …

Read More »

ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ.. ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ …

Read More »

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು

ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ. ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ …

Read More »

ಅಮ್ಮ ಏಳಮ್ಮ, ಮಾತಾಡಮ್ಮ.. ಮೃತ ತಾಯಿಯನ್ನು ಎಬ್ಬಿಸಲು ಮರಿ ಕೋತಿ ಯತ್ನ

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಮೃತಪಟ್ಟಿದ್ದು, ಅದರ ಮುಂದೆ ಕೂತು ಮರಿ ಮಂಗ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವಾಗ ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಸಾವನ್ನಪ್ಪಿದೆ. ಅಮ್ಮನನ್ನು ಕಳೆದು ಕೊಂಡು ಮರಿ ಕೋತಿ ರೋದಿಸುತ್ತಿರುವ ದೃಶ್ಯ ಕರುಳು ಸಹ ಕಿತ್ತು ಬರುವ ಹಾಗಿದೆ. ತಾಯಿ ಪ್ರೀತಿಯೇ ಅಂತಹದ್ದು. ಅದು ಮನುಷ್ಯರಾಗಲಿ ಅಥವಾ ಪ್ರಾಣಿಗಳಾಗಲಿ. ತಾಯಿಯ ಆಶ್ರಯದಲ್ಲಿದ್ದ ಮರಿ …

Read More »

ಗಡಿ ನಿಯಂತ್ರಣ ರೇಖೆ ಬಳಿ 60 ಸಾವಿರ ಸೈನಿಕರನ್ನು ನೇಮಿಸಿದ ಚೀನಾ

ದೆಹಲಿ: ಭಾರತ ಚೀನಾ ನಡುವೆ ಸಂಘರ್ಷ ಯುದ್ಧ ಭೀತಿ ಸೃಷ್ಟಿಸುತ್ತಿದೆ. ಹೀಗಾಗಿ ಎರಡು ದೇಶಗಳು ಸೈಲೆಂಟಾಗಿ ತಾಲೀಮನ್ನ ಆರಂಭಿಸಿದ್ದು, ಚೀನಾ 60 ಸಾವಿರ ಸೈನಿಕರನ್ನು ಗಡಿಗೆ ಕಳುಹಿಸಿದೆ. ‘ಎಲ್‌ಎಸಿ’ಯಿಂದ ಕಾಲ್ಕೀಳಲು ಚೀನಾ ಸೈನಿಕರು ಮೀನಮೇಷ ಎಣಿಸುತ್ತಿದ್ದಾರೆ. ಈ ಹೊತ್ತಲ್ಲೇ ಭಾರತ ದಿಟ್ಟ ನಿರ್ಧಾರ ಕೈಗೊಂಡಿದೆ. ಭಾರತ ಚೀನಾ ಗಡಿ ವಿವಾದ ಸದ್ಯಕ್ಕೆ ಬಗೆಹರಿಯುವಂತೆ ಕಾಣುತ್ತಿಲ್ಲ. ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಸುಮಾರು 60 ಸಾವಿರ ಸೈನಿಕರನ್ನು ಚೀನಾ ನೇಮಿಸಿದೆ …

Read More »

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್​ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ …

Read More »

ATM ನಿಂದ ದೋಚಿದ ಹಣ.. ಬ್ಯಾಂಕ್‌​ನಲ್ಲಿ ಡೆಪಾಸಿಟ್​ -ಇದು ಕಿಲಾಡಿ ಖದೀಮರ ಇಂಟರೆಸ್ಟಿಂಗ್ ಕಹಾನಿ

ಮೈಸೂರು: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಿ ಬಂದ ಹಣವನ್ನು ಬೇರೆ ಬೇರೆ ಕಾರಣಗಳಿಗೆ ಖರ್ಚು ಮಾಡುವುದನ್ನು ನೋಡಿರುತ್ತೇವೆ.‌ ಆದ್ರೆ ಅಂತರರಾಜ್ಯ ಕಳ್ಳರ ಖತರ್​ನಾಕ್ ಗ್ಯಾಂಗ್​ ಒಂದು ATMನಲ್ಲಿ ಲೂಟಿ ಮಾಡಿದ ಹಣವನ್ನು ಬ್ಯಾಂಕ್‌ನಲ್ಲಿ ಡೆಪಾಸಿಟ್ ಮಾಡಿರುವ ಸ್ವಾರಸ್ಯಕರ ಪ್ರಸಂಗ ನಗರದಲ್ಲಿ ನಡೆದಿದೆ. ಅಂದ ಹಾಗೆ, ಈ ದರೋಡೆಕೋರರು ಈಗ ಕಂಬಿ ಎಣಿಸುತ್ತಿದ್ದಾರೆ.   ಇದು ನಂಬಲು ಸ್ವಲ್ಪ ಕಷ್ಟವಾದರೂ ರಿಯಲ್​ ಸ್ಟೋರಿ. ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಹೂಟಗಳ್ಳಿ ಕೈಗಾರಿಕಾ …

Read More »

ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ …

Read More »

100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ನರೇಂದ್ರ ಮೋದಿ

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಹ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರನ್ನು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರಾಗಿದ್ದಾರೆ. ವಿಜಯರಾಜೇ ಸಿಂಧಿಯಾ ಅವರ ಜನ್ಮ …

Read More »

ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪರೀಕ್ಷೆ ಒಳಪಡಿಸಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಕೂಡಲೇ ಅವರನ್ನು ಸಾಗರಿದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More »