ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಡೆ ಗುರುವಾರ ಅರಣ್ಯಭವನದಿಂದ ಅರಮನೆ ಪ್ರವೇಶಿಸಿದ್ದು, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಅರಣ್ಯಭವನದಲ್ಲಿ ಅಭಿಮನ್ಯು, ಧನಂಜಯ, ಕಾವೇರಿ, ಚೈತ್ರಾ, ಅಶ್ವತ್ಥಾಮ, ಲಕ್ಷ್ಮೀ, ಗೋಪಾಲಸ್ವಾಮಿ ಹಾಗೂ ವಿಕ್ರಂ ಆನೆಗಳನ್ನು ಸಿಂಗರಿಸಿ ಗಜಪಡೆಗೆ ಪೂಜಾ ಕಾರ್ಯ ನೆರವೇರಿಸಲಾಯಿತು. ನಂತರ ವಾದ್ಯ ಮೇಳದೊಂದಿಗೆ ಗಜಪಡೆ ಅರಮನೆಯತ್ತ ಹೆಜ್ಜೆ ಹಾಕಿದವು. ಅರಮನೆಯ ಜಯಮಾರ್ತಂಡ ದ್ವಾರದಲ್ಲಿ ಗಜಪಡೆಗೆ ಹೂಮಳೆಗರೆಯಲಾಯಿತು. ಸಚಿವ ಎಸ್.ಟಿ.ಸೋಮಶೇಖರ್ ಅವರು ಪೂಜೆ ನೆರವೇರಿಸಿ ಸ್ವಾಗತ ಕೋರಿದರು. ಇದೇ ವೇಳೆ ಕಬ್ಬು, ಬೆಲ್ಲ, …
Read More »ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ. ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ …
Read More »ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಆದೇಶ ರದ್ದು
ಬೆಂಗಳೂರು: 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಶೇ.70ರಷ್ಟು ಮಾತ್ರ ಶುಲ್ಕ ಸ್ವೀಕರಿಸಬೇಕು, ಶೇ.30ರಷ್ಟು ರಿಯಾಯಿತಿ ನೀಡಬೇಕೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಕರ್ನಾಟಕದಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್ ) ಸೇರಿ ಹಲವು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಆರ್.ದೇವದಾಸ್ ಅವರಿದ್ದ ಏಕಸದಸ್ಯ …
Read More »6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾಮುಕ ಆತ್ಮಹತ್ಯೆಗೆ ಶರಣು: ರೈಲ್ವೆ ಹಳಿ ಮೇಲೆ ಶವ ಪತ್ತೆ
ಹೈದರಾಬಾದ್: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಗುರುವಾರ ವರದಿಯಾಗಿದೆ. ಆರೋಪಿಯ ಮೃತದೇಹವು ಘಣಪುರ್ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ಪೊಲೀಸರು ಈ ಬಗ್ಗೆ ಮಾಹಿತಿಯನ್ನು ಖಚಿತಪಡಿಸಬೇಕಿದೆ. ಆರೋಪಿಯನ್ನು ಪಲ್ಲಕೊಂಡ ರಾಜು (30) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 9ರಂದು 6 ವರ್ಷದ ಬಾಲಕಿ ಸೈದಾಬಾದ್ನ ಸಿಂಗ್ರೌಣಿ ಕಾಲನಿಯಲ್ಲಿರುವ ತನ್ನ ನಿವಾಸದಿಂದ ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಮೃತದೇಹವು ಬೆಡ್ಶೀಟ್ನಲ್ಲಿ ಸುತ್ತಿಟ್ಟಿದ್ದ ಸ್ಥಿತಿಯಲ್ಲಿ …
Read More »‘ಮೂವರು ಹೆಂಡಿರು, ಸೊಸೆಯಂದಿರನ್ನಿಟ್ಟುಕೊಂಡಿರೋ ರಾಜು ತಾಳಿಕೋಟಿಗೆ ನನ್ನ ಬಗ್ಗೆ ಮಾತನಾಡೋ ನೈತಿಕ ಹಕ್ಕಿಲ್ಲ’
ವಿಜಯಪುರ: ಮೂವರು ಹೆಂಡಿರು, ಮೂರು ಮೂರು ಸೊಸೆಯಂದಿರನ್ನಿಟ್ಟುಕೊಂಡಿರುವ ರಾಜು ತಾಳಿಕೋಟಿಗೆ ನನ್ನ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ, ಅವನೊಬ್ಬ ಬಕೆಟ್ ಕಲಾವಿದ, ಕಲಿಯುಗದ ಕುಡುಕ ಸ್ಕ್ರಿಪ್ಟ್ ಸಹ ಕದ್ದು ಕ್ಯಾಸೆಟ್ ಮಾಡಿದವ ಎಂದು ಅವನ ಅಳಿಯ ಶೇಕ್ಹುಸೇನ ಮೋದಿ ಆರೋಪಿಸಿದ್ದಾರೆ. ಕಲಿಯುಗದ ಕುಡುಕ ಸ್ಕ್ರಿಪ್ಟ್ ರಾಜು ತಾಳಿಕೋಟಿ ಬರೆದಿದ್ದು ಅಲ್ಲ. ಪಾಪ ಅದನ್ನು ಯಾರೋ ಬರೆದದ್ದು, ಅದನ್ನಿಟ್ಟುಕೊಂಡು ಈತ ಕ್ಯಾಸೆಟ್ ಮಾಡಿದ. ಇದೀಗ ನನಗೆ ದೊಡ್ಡ ದೊಡ್ಡ ನಿರ್ಮಾಪಕರು …
Read More »ಆತ್ಮೀಯ ಗೆಳೆಯನ ಅಗಲಿಕೆ: ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ನಿನ್ನೆ ನಿಧನರಾದ ಸ್ನೇಹಿತ ಹಾಘೂ ಸಂಬಂಧಿಕರಾದ ರಾಜು ಪಾಟೀಲ್ ಮನೆಗೆ ನೇರವಾಗಿ ತೆರಳಿದ್ದಾರೆ. ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.
Read More »ಒಂದೇ ಸೆಟ್ನಲ್ಲಿ ಡ್ಯಾನ್ಸ್ ಕಿಂಗ್ & ಪವರ್ ಸ್ಟಾರ್ -ಏನ್ ಹೊಸ ಸಮಾಚಾರ..?
ಮನಸೆಲ್ಲಾ ನೀನೇ’ ಖ್ಯಾತಿಯ ನಾಗೇಂದ್ರ ಪ್ರಸಾದ್ ಫಸ್ಟ್ ಟೈಮ್ ಡೈರೆಕ್ಷನ್ ಮಾಡ್ತಿರೋ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಹೀರೊ ಆಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡೊಂದಕ್ಕೆ ಇಂಡಿಯನ್ ಡ್ಯಾನ್ಸ್ ಕಿಂಗ್ ಪ್ರಭುದೇವ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆಯಾಗಿ ಹೆಜ್ಜೆ ಹಾಕುತ್ತಿದ್ದಾರೆ ಎಂದು ನಾವು ಮೊದಲೇ ಹೇಳಿದ್ವಿ. ಅದರಂತೇ ಇದೀಗ ಪ್ರಭುದೇವ ಹಾಗೂ ಪುನೀತ್ ಜೊತೆಗಿರುವ ಫೋಟೋಗಳು ವೈರಲ್ ಆಗುತ್ತಿವೆ. ಹೌದು, ಚಿತ್ರದ ಸೆಟ್ನಲ್ಲಿ ಪ್ರಭುದೇವ ಹಾಗ ಪುನೀತ್ …
Read More »ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಉಡುಪಿ, ಸೆ.15: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸರು ಎಸಗಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣವನ್ನ್ನು ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್ಐ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಕುಂದಾಪುರದಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಎಫ್ಐ ಉಡುಪಿ ಜಿಲ್ಲಾ ಮುಖಂಡ ನವಾಝ್ ಶೇಖ್, ಲಾಠಿ ಏಟಿನ ಮೂಲಕ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕುವ ಫ್ಯಾಶಿಸ್ಟ್ ಸರಕಾರದ …
Read More »ಬೆಳಗಾವಿ :ಆಹಾರ ಕಿಟ್ ಅನ್ನು ಬಿಜೆಪಿ ನಾಯಕರ ಮನೆಗಳಿಗೆ ಸಾಗಾಟ ಮಾಡಲಾಗುತ್ತಿದೆ.: ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ
ಬೆಳಗಾವಿ: ಕೊವೀಡ್ನಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೀಡಾದ ಬಡ ಕೂಲಿ ಕಾರ್ಮಿಕರಿಗೆ ಒಂದಿಷ್ಟು ಅನುಕೂಲವಾಗಲೇಂದು ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಎಲ್ಲಾ ಕಾರ್ಮಿಕರಿಗೆ ಆಹಾರ ಕಿಟ್ ಅನ್ನು ವಿತರಣೆ ಮಾಡಲಾಗುತ್ತಿದೆ. ಆದರೆ ಇಂತಹ ಕಿಟ್ಗಳು ಬಡ ಕೂಲಿ ಕಾರ್ಮಿಕರ ಕೈ ಸೇರುವ ಬದಲು ಪ್ರಭಾವಿ ಬಿಜೆಪಿ ನಾಯಕರ ಮನೆಗಳನ್ನು ಸೇರುತ್ತಿವೆ ಎಂಬ ಆರೋಪ ಕೇಳಿ ಬಂದಿವೆ. ಹೌದು, ಬೆಳಗಾವಿ ದಕ್ಷಿಣ ವುಧಾನಸಭಾ ಕ್ಷೇತ್ರದಲ್ಲಿನ ನೋಂದಾಯಿತ ಕಾರ್ಮಿಕರಿಗಾಗಿ ಹಲವು ತಿಂಗಳ …
Read More »ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರ ದಾಖಲೆ
2020ರಲ್ಲಿ ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರಗಳು ನಡೆದಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ವರದಿ ನೀಡಿದೆ. 2020ಯಲ್ಲಿ ಒಟ್ಟು 29,193 ಕೊಲೆಯಾಗಿದ್ದು, ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಕೊಲೆಯಾಗಿದೆ. ಉತ್ತರ ಪ್ರದೇಶದಲ್ಲಿ 3,779 ಹತ್ಯೆಗಳು, ಬಿಹಾರದಲ್ಲಿ 3,150, ಮಹಾರಾಷ್ಟ್ರದಲ್ಲಿ 2,163 , ಮಧ್ಯಪ್ರದೇಶ 2,101 ಮತ್ತು ಪಶ್ಚಿಮ ಬಂಗಾಳದಲ್ಲಿ 1,948 ಕೊಲೆಗಳು ನಡೆದಿವೆ. 2020ರಲ್ಲಿ ಒಟ್ಟು 28,246 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ರಾಜಸ್ಥಾನದಲ್ಲಿ ಅತಿ ಹೆಚ್ಚು …
Read More »
Laxmi News 24×7