Breaking News

ವಿಜಯಪುರದಲ್ಲಿ ನಡೆಷ ಪುಸ್ತಕ ಮೇಳ ಯಶಸ್ವಿ; ₹5 ಲಕ್ಷಕ್ಕೂ ಹೆಚ್ಚಿನ ವಹಿವಾಟು

ಆ್ಯಂಕರ್: ‘ಮೇ ಸಾಹಿತ್ಯ ಬಳಗದಿಂದ ಸಂಘಟಿಸಲಾಗಿದ್ದ ಪುಸ್ತಕ ಮೇಳ ಯಶಸ್ವಿಯಾಗಿದ್ದು, ₹5 ಲಕ್ಷಕ್ಕೂ ಹೆಚ್ಚಿನ ವಹಿವಾಟು ನಡೆದಿದೆ’ ಎಂದು ಮೇ ಸಾಹಿತ್ಯ ಬಳಗದ ಅನೀಲ ಹೊಸಮನಿ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬುದ್ಧ, ಬಸವ ಹಾಗೂ ಬಾಬಾಸಾಹೇಬರ ತತ್ವ ಚಿಂತನೆ, ಆಶಯಗಳ ಆಧರಿಸಿ ಸಮಾಜ ಇನ್ನೂ ನಿರ್ಮಾಣವಾಗಿಲ್ಲ. ಈ ಮಹನೀಯರ ಸಮ ಸಮಾಜದ ಕನಸು ನನಸಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕಿದೆ. ಈ ಪ್ರಯತ್ನದ ಭಾಗವಾಗಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ …

Read More »

ಕಣಬರ್ಗಿಯಲ್ಲಿ ಬುಡಾ ಯಡವಟ್ಟು: ರೈತರ ಜಮೀನಿಗೆ ಕೊಳಚೆ ನೀರು; ಉಗ್ರ ಹೋರಾಟದ ಎಚ್ಚರಿಕೆ

ಬುಡಾ ಮತ್ತು ಖಾಸಗಿ ಲೇಔಟ್’ನಿಂದಾಗಿ ರೈತರ ಜಮೀನುಗಳಿಗೆ ನಾಲೆಯ ನೀರನ್ನು ತಿರಿಗಿಸಲಾಗಿದ್ದು, ಬೆಳೆಹಾನಿಗೊಳಗಾಗುತ್ತಿರುವ ಕಣಬರ್ಗಿಯ ರೈತರು ಸಮಸ್ಯೆ ನೀಗಿಸದಿದ್ದರೇ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ. ಬೆಳಗಾವಿಯ ಕಣಬರ್ಗಿಯಲ್ಲಿ ಬುಡಾ ಮತ್ತು ಖಾಸಗಿಯವರು ಲೇಔಟ್ ನಿರ್ಮಿಸಿದ್ದಾರೆ. ಈ ವೇಳೆ ನಾಲೆಯ ನೀರು ಹರಿದು ಹೋಗಲು ಅವೈಜ್ಞಾನಿಕ ಕಾಮಗಾರಿಯನ್ನು ಕೈಗೊಂಡಿದ್ದು, ಕೊಳಚೆ ನೀರು ರೈತರ ಜಮೀನುಗಳಿಗೆ ನುಗ್ಗುತ್ತಿದೆ. ಈ ಹಿನ್ನೆಲೆ ರೈತರು ಬೆಳೆದ ಬೆಳೆ ಹಾಳಾಗುತ್ತಿದ್ದು, ಶ್ರೀ ಸಿದ್ಧೇಶ್ವರ ಶೇತಕರಿ ಸಂಘಟನೆಯೂ ಪ್ರತಿಭಟನೆಯನ್ನು …

Read More »

ಮಹಿಳಾ ಹಕ್ಕುಗಳಿಗಾಗಿ ನಮ್ಮ ಹೋರಾಟ — 33% ಮೀಸಲಾತಿ ತಕ್ಷಣ ಜಾರಿಯಾಗಲಿ!

ಚಿಕ್ಕೋಡಿ ನಗರದಲ್ಲಿ ಇಂದು ಚಿಕ್ಕೋಡಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಮೀಸಲಾತಿ ವಿಧೇಯಕವನ್ನು ತಕ್ಷಣವೇ ಜಾರಿಗೆ ತರುವಂತೆ ಒತ್ತಾಯಿಸಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಾಯಿತು. ಮಹಿಳೆಯರಿಗೆ ರಾಜಕೀಯವಾಗಿ ನ್ಯಾಯ ಸಿಗುವವರೆಗೆ ನಮ್ಮ ಧ್ವನಿ ನಿಲ್ಲದು. ಮಹಿಳೆಯರ ರಾಜಕೀಯ ಸಬಲೀಕರಣಕ್ಕಾಗಿ ಕಾಂಗ್ರೆಸ್ ಪಕ್ಷದ ಬದ್ಧತೆ ಇಂದಿನದ್ದಲ್ಲ. 33% ಮಹಿಳಾ ಮೀಸಲಾತಿಯ ಪರಿಕಲ್ಪನೆಯನ್ನು ಮೊದಲ ಬಾರಿಗೆ ಮುಂದಿಟ್ಟದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ಸ್ಥಳೀಯ ಸಂಸ್ಥೆಗಳಾದ …

Read More »

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ: ಅಪರಾಧಿ ಶಾರೀಖ್‌ಗೆ 10 ವರ್ಷ ಜೈಲು, ₹94 ಸಾವಿರ ದಂಡ..!!

ಮಂಗಳೂರು: 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ನಡೆದ ಕುಕ್ಕರ್ ಬ್ಲಾ*ಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದೆ. ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಖ್‌ಗೆ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯ ಜೊತೆಗೆ ₹94 ಸಾವಿರ ದಂಡ ವಿಧಿಸಿದೆ. ಕೋರ್ಟ್ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಶಾರೀಖ್, ಕದ್ರಿ ಮಂಜುನಾಥ ದೇವಾಲಯಕ್ಕೆ ಬಾಂಬ್ ಇಡಲು ತೆರಳುತ್ತಿದ್ದಾಗ ಮಾರ್ಗಮಧ್ಯೆಯೇ ಸ್ಫೋಟ ಸಂಭವಿಸಿತ್ತು. ಪರಿಣಾಮ ದೊಡ್ಡ ಅನಾಹುತ …

Read More »

ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ

ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದ ಖಾಸಗಿ ಬಸ್ ಮತ್ತು ಲಾರಿ ನಡುವಿನ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ಆಘಾತ ಮತ್ತು ನೋವುಂಟಾಗಿದೆ. ಈ ದುರ್ಘಟನೆಯಲ್ಲಿ ನಮ್ಮ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅವಾಂತರ ಸಂಭವಿಸಿರುವುದು ದುರದೃಷ್ಟಕರ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ …

Read More »

ಪ್ರತಿಷ್ಠಿತ ಕಂಪನಿಯ ಉದ್ಯೋಗಿ ಪೂಜಾ ದತ್ತ ಅನುಮಾನಾಸ್ಪದ ಸಾವು; ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

ಬೆಂಗಳೂರಿನ ಆಡುಗೋಡಿಯಲ್ಲಿ 34 ವರ್ಷದ ಖಾಸಗಿ ಕಂಪೆನಿ ಉದ್ಯೋಗಿ ಪೂಜಾ ದತ್ತ ಅವರ ಮೃತದೇಹ ಬಾಡಿಗೆ ಮನೆಯಲ್ಲಿ ಬೆತ್ತಲೆ ಮತ್ತು ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನವಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ. ಬೆಂಗಳೂರು, ಏ.27: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ …

Read More »

ಉನ್ನತ ವ್ಯಾಸಂಗಕ್ಕಾಗಿ ದೀರ್ಘಕಾಲದ ರಜೆ ಮೇಲೆ ತೆರಳಿದ್ದಂತಹ ಐಪಿಎಸ್ ಅಧಿಕಾರಿ.. ಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆ

ಬಳ್ಳಾರಿ: ಕುವೆಂಪು ವಿಶ್ವವಿದ್ಯಾನಿಲಯವು ಬಳ್ಳಾರಿ ವಲಯ ಪೊಲೀಸ್ ಉಪಮಹಾನಿರೀಕ್ಷಕ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದ್ದು, ಮೇ 06 ರಂದು ಪಿ.ಹೆಚ್.ಡಿ. ಪ್ರದಾನ ಮಾಡಲಿದೆ. ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. “ನಾಗರಹೊಳೆ, …

Read More »

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ.!

ಹಾವೇರಿ: ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯಲ್ಲಿ ಯುವತಿಯೊಬ್ಬಳು ತನ್ನ ನಿಶ್ಚಿತಾರ್ಥದ ಹಿಂದಿನ ದಿನವೇ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮುಸ್ಲಿಂ ಯುವಕನೊಬ್ಬ ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದ ವಿವರ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಶಂಕರಮ್ಮ ಕೆರಿಮೆತ್ತಿಹಳ್ಳಿ (24) ಎಂಬ ಯುವತಿ ಕಳೆದ ರಾತ್ರಿ ಮನೆಯಿಂದ ಕಾಣೆಯಾಗಿದ್ದಾಳೆ. ಆಡೂರು ಪೊಲೀಸ್ …

Read More »

ಮಗನ ಏಳಿಗೆ ಕಂಡು ಭಾವುಕರಾದ ಆಮಿರ್ ಖಾನ್: ‘ಏಕ್ ದಿನ್’ ಸಂಗೀತ ಸಂಜೆಯಲ್ಲಿ ಕಣ್ಣೀರು

ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಅವರು ತಮ್ಮ ಮಗ ಜುನೈದ್ ಖಾನ್ ಅವರ ಸಿನಿ ಪಯಣ ಮತ್ತು ಸಾಧನೆಯನ್ನು ಕಂಡು ಬಹಿರಂಗವಾಗಿ ಕಣ್ಣೀರು ಹಾಕಿದ್ದಾರೆ. ಜುನೈದ್ ಅಭಿನಯದ ಮೂರನೇ ಚಿತ್ರ ‘ಏಕ್ ದಿನ್’ ಮೇ 1 ರಂದು ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರದ ಮೂಲಕ ದಕ್ಷಿಣದ ಖ್ಯಾತ ನಟಿ ಸಾಯಿ ಪಲ್ಲವಿ ಬಾಲಿವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಮುಂಬೈನಲ್ಲಿ ನಡೆದ ‘ಏಕ್ ದಿನ್ ಕಿ ಮೆಹಫಿಲ್’ ಎಂಬ ಸಂಗೀತ ಸಂಜೆ …

Read More »

ನಿಪ್ಪಾಣಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ

ನಿಪ್ಪಾಣಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಹಿಳಾ ಮೀಸಲಾತಿ ಮಸೂದೆ ನಾರಿ ಶಕ್ತಿ ವಂದನಾ ಅಧಿನಿಯಮ ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟದ ವಿರುದ್ಧ ಇಂದು ಕ್ಷೇತ್ರದ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ದೇಶದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯತೆ ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಜಾರಿಯಾಗದಂತೆ ತಡೆದ ಕಾಂಗ್ರೆಸ್‌ ಹಾಗೂ ಮಿತ್ರ ಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ದೇಶದ ಮಹಿಳೆಯರಿಗೆ …

Read More »