ಮಂಡ್ಯ: 2028ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ಹೊರತು ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಾಳೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಶ್ರೀಕ್ಷೇತ್ರಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಸಿದ್ಧತೆ …
Read More »ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ
ಬೆಂಗಳೂರು: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಶಿಸ್ತು ಪಾಲಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಆದರೆ ಜಮೀರ್ ಅಹ್ಮದ್ ಪಕ್ಷದ ಶಿಸ್ತನ್ನು ಪಾಲಿಸಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ …
Read More »ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ
ಬೆಂಗಳೂರು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಮೋಟಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀವಿತಾ (35) ಮೃತ ಗೃಹಿಣಿ. ಮನೆಯ ಕೋಣೆಯ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಜೀವಿತಾ ಶವ ಪತ್ತೆಯಾಗಿದೆ. ಆರು ವರ್ಷಗಳ ಹಿಂದೆ ವಿನಯ್ ಕುಮಾರ್ ಎಂಬವರ ಜೊತೆಗೆ ಜೀವಿತಾ ಮದುವೆಯಾಗಿದ್ದರು. ವಿನಯ್ ಕುಮಾರ್ಗೆ ಮೊದಲ ಹೆಂಡತಿ ಇಲ್ಲದ ಕಾರಣ ಕುಟುಂಬಸ್ಥರು ಎರಡನೇ ಮದುವೆ ಮಾಡಿದ್ದರು. ಇಬ್ಬರ ಸಂಬಂಧಕ್ಕೆ ಒಂದೂವರೆ ವರ್ಷದ …
Read More »ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್ ಶಾಸಕರು
ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ? ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.
Read More »ಬೆಳಗಾವಿಯಲ್ಲಿ ಮರ್ಯಾದಾ ಹತ್ಯೆ ಪ್ರಕರಣ !!! ಬೇರೆ ರಾಜ್ಯದಲ್ಲಿ ಶವ ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪ್ರಕರಣವನ್ನು ಬೇಧಿಸಿದ ಸಿಪಿಐ ಜಾವೀದ್ ಮುಶಾಪುರೆ
ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆಂಬ ಕಾರಣಕ್ಕೆ ಸ್ವಂತ ಕುಟುಂಬದವರೇ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣವನ್ನು ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ಅವರು ಬೇಧಿಸಿದ್ದಾರೆ. ಪ್ರೀತಿ ಹಾಗೂ ಕುಟುಂಬದ ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಂತಾಗಿದೆ. ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ …
Read More »ಪವರ್ ಪ್ಲಾಂಟ್ ದುರಂತ: ಬಾಯಿಲರ್ ಸ್ಫೋಟಕ್ಕೆ 10 ಕಾರ್ಮಿಕರು ಬಲಿ
ಛತ್ತೀಸ್ಗಢದ ಶಕ್ತಿ ಜಿಲ್ಲೆಯ ಸಿಂಗಿತಾರಿ ಗ್ರಾಮದಲ್ಲಿರುವ ವೇದಾಂತ ಪವರ್ ಪ್ಲಾಂಟ್ನಲ್ಲಿ ಇಂದು (ಏಪ್ರಿಲ್ 14) ಮಧ್ಯಾಹ್ನ ಭೀಕರ ಬಾಯಿಲರ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಉಂಟಾದ ಆತಂಕ ಮತ್ತು ಕಾಲ್ತುಳಿತದಲ್ಲಿ ಸುಮಾರು 30-40 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ರಾಯಗಢದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Read More »ಕೆರೂರ ಗ್ರಾಮದಲ್ಲಿ 110 ಕೆ.ವಿ. ಸ್ಟೇಶನ್ ಕಾಮಗಾರಿಗೆ 19 ಕೋಟಿ ರೂ. ಮಂಜೂರು – ಪ್ರಕಾಶ ಹುಕ್ಕೇರಿ
ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಮತ್ತು ಶಾಸಕರಾದ ಗಣೇಶ ಹುಕ್ಕೇರಿ ಅವರು ಗ್ರಾಮದ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಕೆರೂರ ಗ್ರಾಮದಲ್ಲಿ ಸುಸಜ್ಜಿತ 110 ಕೆ.ವಿ. ವಿದ್ಯುತ್ ಉಪಕೇಂದ್ರದ ಕಾಮಗಾರಿಗಾಗಿ ಬರೋಬ್ಬರಿ 19 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿಸುವಲ್ಲಿ ತಂದೆ ಹಾಗೂ ಮಗನ ಜೋಡಿ ಯಶಸ್ವಿಯಾಗಿದೆ. ಈ ಮಹತ್ವದ ಯೋಜನೆಯ ಅಧಿಕೃತ ಕಾಮಗಾರಿ …
Read More »ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಶಾಸಕ ಯತ್ನಾಳ್ ಕಿಡಿ
ವಿಜಯಪುರ: ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ದಾವಣಗೆರೆ ಪಂಚಮಸಾಲಿ ಪೀಠದ ಬಗ್ಗೆ ಮಾತನಾಡಿದ ಅವರು, ಎರಡು ಪೀಠದ ಟ್ರಸ್ಟ್ಗಳು ನಂಬಿಕೆ ಕಳೆದುಕೊಂಡಿವೆ. ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ. ಎರಡು ಕಡೆ ಇದೇ ನಡೆಯುತ್ತಿದೆ. ಇದನ್ನ ಖಾಸಗಿ ಆಸ್ತಿ ಮಾಡಿಕೊಂಡವರಿದ್ದಾರೆ. ಇವರಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ. ಪ್ರಾಮಾಣಿಕರು, ಸಮಾಜಕ್ಕಾಗಿ ಕೆಲಸ ಮಾಡುವವರು ಯಾರು ಟ್ರಸ್ಟ್ನಲ್ಲಿ …
Read More »ತರುಣ ಭಾರತ ದಿನಪತ್ರಿಕೆ ವಿರುದ್ಧ ಅಂಬೇಡ್ಕರ ಅಭಿಮಾನಿಗಳ ಆಕ್ರೋಶ
ತರುಣ ಭಾರತ ದಿನಪತ್ರಿಕೆ ಬೆಳಗಾವಿ ಈ ಪತ್ರಿಕೆಯಲ್ಲಿ ಇವತ್ತು ಬಾಬಾ ಸಾಹೇಬ ಅಂಬೇಡ್ಕರ ರವರಿಗೆ ಜಯಂತಿ ಶುಭಾಶಯ ಕೋರುವ ಬದಲು ಶ್ರದ್ಧಾಂಜಲಿ ಅಂತ ತರುಣ ಭಾರತ ಪತ್ರಿಕೆಯ ಮುಂಗಡ ಪೇಜ್ ನಲ್ಲಿ ಹಾಕಿದ್ದು ಇವತ್ತು ಬಾಬಾ ಸಾಹೇಬರ ಎಲ್ಲಾ ಅನುಯಾಯಿಗಳಿಗೆ ಹಾಗೂ ಅಭಿಮಾನಿಗಳಿಗೆ ದೇಶ ಪ್ರೇಮಿಗಳಿಗೆ ಅಗೌರವ ತೋರಿ ಅವಮಾನಿಸುವ ಪ್ರಯತ್ನ ಮಾಡಿದ್ದನ್ನು ಖಂಡಿಸಿ ಇವತ್ತು ತರುಣ ಭಾರತ ದಿನಪತ್ರಿಕೆ ಕಚೇರಿಗೆ ನುಗ್ಗಿ ಪತ್ರಿಕೆಯ ಸಂಪಾದಕರಿಗೆ ಮಾಲೀಕನಾದ ಕಿರಣ್ ಠಾಕೂರ್ …
Read More »25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ
ಕೊಪ್ಪಳ: ಈಗಿರುವ 25 ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡಿದರೆ ಅನುಭವ ಬರುತ್ತದೆ. ಖಾಯಂ ಇವರೇ ಇರಬೇಕೆಂದರೆ ಹೇಗೆ ಎಂದು ಪ್ರಶ್ನಿಸುವ ಮೂಲಕ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ. ಕೊಪ್ಪಳ(Koppala) ಜಿಲ್ಲೆಯ ಕುಕನೂರುನಲ್ಲಿ ಮಾತನಾಡಿದ ಅವರು, ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಸಿಎಂ ಸ್ಥಾನ ಕೇಳುವುದರಲ್ಲೂ ತಪ್ಪಿಲ್ಲ. ಶಾಸಕರ ದೆಹಲಿ ಪ್ರವಾಸ ಕೈಗೊಂಡರೆ ತಪ್ಪೇನಿದೆ ಎಂದು ಕೇಳಿದರು. ನನ್ನನ್ನು ಮಂತ್ರಿ, ಸಿಎಂ …
Read More »
Laxmi News 24×7