Breaking News

ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್‌

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್  ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಭೀತಿಯಿದೆ.  ಈ ವರ್ಷ ಕೆಆರ್‌ಎಸ್ ಅಣೆಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗುವ ಮೂಲಕ ದಾಖಲೆ ಬರೆದಿತ್ತು. ಇದೀಗ 124.80 ಗರಿಷ್ಠ ಮಟ್ಟ ಸಂಗ್ರಹ …

Read More »

ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ಚಿಕ್ಕಮಗಳೂರು: ಎನ್‌ಆರ್‌ ಪುರದ  ಸಿದ್ದರಾಮಯ್ಯ ಸೇತುವೆ  ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆಯಾಗಿದ್ದು, ನೀರಿನಲ್ಲಿ ಮುಳುಗಿ ಸಾವನಪ್ಪಿದ ಶಂಕೆ ವ್ಯಕ್ತವಾಗಿದೆ. ಸಿದ್ದರಾಮಯ್ಯ ಸೇತುವೆ ಕೆಳಭಾಗದ ಭದ್ರಾ ನದಿಯ ಹಿನ್ನೀರಿನಲ್ಲಿ ಎನ್.ಆರ್.ಪುರದ ಸಿಗುವಾನಿ ಗ್ರಾಮದ ಮೂವರು ಯುವಕರು ಈಜಲು ತೆರಳಿದ್ದರು. ಇಬ್ಬರು ಮೇಲೆ ಬಂದರೂ ಮತ್ತೋರ್ವ ಮಾತ್ರ ನಾಪತ್ತೆಯಾಗಿದ್ದು, ಆತನ ಸುಳಿವು ಸಿಕ್ಕಿಲ್ಲ. ಆತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರು ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ತಂಡಗಳು ಶವಕ್ಕಾಗಿ ಹುಡುಕಾಟ ನಡೆಸುತ್ತಿವೆ. ಅಗ್ನಿಶಾಮಕದಳದ …

Read More »

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಧಾರವಾಡ: ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ. ಮೈನುದ್ದಿನ್ ನದಾಫ್, ಸಾಗರ ಕಲಾಲ್ ಮತ್ತು ಅಲಾವುದ್ದೀನ್ ಉರ್ಫ್ ರಹೀಂ ಬಂಧಿತ ಆರೋಪಿಗಳು. ಈ ಮೂಲಕ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಈ ಮೊದಲು 9 ಮಂದಿಯನ್ನು ಬಂಧಿಸಿದ್ದೆವು. ಈಗ ಮತ್ತೆ ಮೂವರನ್ನು ಬಂಧನ …

Read More »

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

ಬೆಂಗಳೂರು: ಜನಗಣತಿಗೆ  ಗೈರಾದ್ರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಬಿಎ ಖಡಕ್ ಎಚ್ಚರಿಕೆ ನೀಡಿದೆ. ಗೈರುಹಾಜರಾತಿಗೆ ಜಿಬಿಎಯಿಂದ 1,000 ರೂ ದಂಡ ಜೊತೆಗೆ 3 ವರ್ಷ ಕಾರಾಗೃಹ ಶಿಕ್ಷೆ ಎಂದು ಎಚ್ಚರಿಸಿದೆ. ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಧಿಕಾರಿಗಳಿಗೆ ಆಯುಕ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಗಣತಿಗೆ ನಿಯೋಜಿಸಲ್ಪಟ್ಟಿರುವ ಗಣತಿ ಬ್ಲಾಕ್ ಹಾಗೂ ಸೂಪರ್ವೈಸರ್ ಸರ್ಕಲ್ ಗಳಲ್ಲಿ ಕರ್ತವ್ಯಕ್ಕೆ ಹಾಜರಾಗದ ಗಣತಿದಾರರು ಮತ್ತು ಸೂಪರ್ವೈಸರ್ಗಳ ವಿರುದ್ಧ ಜನಗಣತಿ ಕಾಯ್ದೆಯ 1948ರ ಸೆಕ್ಷನ್ …

Read More »

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

ಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ (GKVK) ನಡೆದ ದ್ವೈವಾರ್ಷಿಕ 22ನೇ ರಾಜ್ಯ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನ ಉದ್ಘಾಟನೆ ಮಾಡಿ, ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಅವಶ್ಯಕತೆ ಇದೆ ಅಂತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರತಿಪಾದಿಸಿದರು. ಸಮ್ಮೇಳನದಲ್ಲಿ ಮಾತಾಡಿದ ಅವರು, ಜಗತ್ತಿನ ಸಂಸ್ಥೆಗಳು ತಾಂತ್ರಿಕ ಬದಲಾವಣೆಗಳಿಂದ ರೂಪಾಂತರಗೊಳ್ಳುತ್ತಿರುವ ಈ ಸಮಯದಲ್ಲಿ, ಕೃತಕ …

Read More »

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

ಹಾಸನ: ಸುಮಾರು 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯನ್ನು ಹಾಸನ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಕಲೇಶಪುರ  ತಾಲೂಕಿನ, ನಲ್ಲುಲ್ಲಿ ಗ್ರಾಮದ ಚನ್ನಕೇಶವ ಎಂದು ಗುರುತಿಸಲಾಗಿದೆ. ಈತ ಕೊಲೆ ಯತ್ನ, ಲೈಂಗಿಕ ದೌರ್ಜನ್ಯ ಹಾಗೂ ದರೋಡೆ ಪ್ರಕರಣದಲ್ಲಿ ಸಕಲೇಶಪುರ ಜೈಲು ಸೇರಿದ್ದ. 2011ರಲ್ಲಿ ಜೈಲಿಂದ ಪರಾರಿಯಾಗಿ ಸುಮಾರು 15 ವರ್ಷ ತಲೆಮರೆಸಿಕೊಂಡಿದ್ದ. ಆರೋಪಿ ಗೋವಾದಲ್ಲಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆತನನ್ನು ಬಂಧಿಸಿದ್ದಾರೆ. ಈತ …

Read More »

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು: ಮೈಸೂರಿನ  ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್  ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿರತೆಯಿಂದ  ಅತ್ತೆ ಕಾಪಾಡಿದ ಸೊಸೆ ಪವಿತ್ರಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆಯನ್ನೂ ನೀಡಿದ್ದಾರೆ. ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ …

Read More »

ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

ನವದೆಹಲಿ: ʻಇಂದು ನನ್ನ ಗಂಡನ ಹುಟ್ಟುಹಬ್ಬ, ನಿಮ್ಮ ಪ್ರಶ್ನೆಗಳನ್ನ ಸ್ಬಲ್ಪ ಚಿಕ್ಕದಾಗಿ ಕೇಳಿʼ ಎಂದು ಸಂಸದೆ ಪ್ರಿಯಾಂಕಾ ಗಾಂಧಿ  ಹಾಸ್ಯ ಮಾಡಿದ ಪ್ರಸಂಗ ನಡೆದಿದೆ. ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ  ಲೋಕಸಭೆಯಲ್ಲಿ ಸೋಲಾದ ಒಂದು ದಿನದ ನಂತರ ದೆಹಲಿಯ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ರು. ಈ ವೇಳೆ ಪತ್ರಕರ್ತರೊಬ್ಬರು  ಇನ್ನಷ್ಟು ಪ್ರಶ್ನೆಗಳಿವೆ ನಿಮ್ಮ ಬಳಿ ಸಮಯ ಇದೆಯೇ? ಅಂತ ಪ್ರಶ್ನೆ ಮಾಡಿದ್ರು, ಇದಕ್ಕೆ ಮುಗುಳು ನಕ್ಕ ಪ್ರಿಯಾಂಕಾ, …

Read More »

ಗಂಡನ ಜೊತೆ ಜಗಳ – ಸಿಟ್ಟಿನಲ್ಲಿ ಮೇಲಿನಿಂದ 1.5 ಕೋಟಿ ಎಸೆದ ಪತ್ನಿ

ಬೀಜಿಂಗ್‌: ಪತಿ ಜೊತೆ ಜಗಳವಾಡಿ ಸಿಟ್ಟಾದ ಪತ್ನಿಯೊಬ್ಬಳು ಅಪಾರ್ಟ್‌ಮೆಂಟ್‌ನಿಂದ 1.5 ಕೋಟಿ ರೂ. ಎಸೆದ ಘಟನೆ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದ ಶಾಂಟೌ ನಗರದಲ್ಲಿ ನಡೆದಿದೆ. ವರದಿಗಳ ಪ್ರಕಾರ,ಪತಿ ಮತ್ತು ಪತ್ನಿಯ ನಡುವೆ ತೀವ್ರ ಜಗಳ ನಡೆದಿದೆ. ಜಗಳದ ಆ ಕೋಪದಲ್ಲಿ ಆಕೆ ತನ್ನ ಕೈಯಲ್ಲಿದ್ದ ನೋಟುಗಳ ಕಂತೆಗಳನ್ನು ಬಾಲ್ಕನಿಯಿಂದ ಕೆಳಕ್ಕೆ ಎಸೆದಿದ್ದಾಳೆ. ಹಾಂಕಾಂಗ್ ಕರೆನ್ಸಿಯ 1,000 ಮುಖಬೆಲೆಯ ನೋಟುಗಳನ್ನು ಆಕೆ ಎಸೆದಿದ್ದು ಅದರ ಒಟ್ಟು ಮೌಲ್ಯ ಸುಮಾರು 1.5 ಕೋಟಿ …

Read More »

ಝುಂಜರವಾಡ ಪ್ರೌಢ ಶಾಲೆಯ ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ

ಅಥಣಿ ಮತಕ್ಷೇತ್ರದ ಝುಂಜರವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಎಸ್,ಎಸ್,ಎಲ್,ಸಿ, ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಪ.ಪೂ.ಶ್ರೀ ಆನಂದ ದೇವರು, ಓಲೆಮಠ ಜಮಖಂಡಿ.ಪ.ಪೂ.ಶ್ರೀ ವೀರಬಸವ ದೇವರು,ಪ.ಪೂ.ಶ್ರೀ ಗುರುದೇವ ದೇವರು,ಶ್ರೀ ಅಕ್ಷಯ ಉಪಾಧ್ಯೆ,ಶ್ರೀ ಸದಾಶಿವ ಮಠಪತಿ,ಶ್ರೀ ಶಿವಾನಂದ ಮಲೆವಾಡಿ, ಅಧ್ಯಕ್ಷರು SDMC ಝುಂಜರವಾಡ,ಶ್ರೀ ಅಣ್ಣಾಸಾಬ ಸಂಕೋನಟ್ಟಿ, ಉಪಾಧ್ಯಕ್ಷರು SDMC ಝುಂಜರವಾಡ,ಶ್ರೀ …

Read More »