ನವದೆಹಲಿ: ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳು ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ ಎಂದರು. ಪುಣೆಯಲ್ಲಿರುವ ನನ್ನ …
Read More »ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅತ್ಯಾಚಾರಿಗೆ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ನಿವಾಸಿ ಸಂಜಯ ವಿಠ್ಠಲ ಬೈಲೂರ(೩೬) ಎಂಬುವ ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ೧ ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ. ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ಪುಸಲಾಯಿಸಿ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರವೆಸಗಿದ್ದ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದೂರು …
Read More »ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್
ಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ ರಾತ್ರಿ ಆರೋಪಿ ಹಾಸ್ಟೆಲ್ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಮೇಲೆ ರಾಡ್ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದರೆ, 8 ಜನರಿಗೆ ಗಾಯವಾಗಿತ್ತು. ಆರೋಪಿ ಬಾಲಕನ ಪತ್ತೆಗಾಗಿ 7 ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು. ತೀವ್ರ ಹುಡುಕಾಟ ನಡೆಸಿದ ಬಳ್ಳಾರಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. …
Read More »ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ
ಯಾದಗಿರಿ: ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು (ಮಾ.9) ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೇ ಇದೀಗ ಮುತ್ಯಾ ಭಕ್ತರು …
Read More »ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ನೈರುತ್ಯ ರೈಲ್ವೆಯು ವಂದೇ ಭಾರತ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾ.15ರಿಂದ ಜಾರಿಗೆ ಬರಲಿದ್ದು, ಮಾಹಿತಿ ಕೆಳಗಿನಂತಿದೆ. 1. ರೈಲು ಸಂಖ್ಯೆ 20669: ಎಸ್ಎಸ್ಎಸ್ ಹುಬ್ಬಳ್ಳಿ -ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯಲ್ಲಿ ಬೆಳಿಗ್ಗೆ 7:05ರಿಂದ 07:10 ಗಂಟೆ ಮತ್ತು ಘಟಪ್ರಭಾದಲ್ಲಿ ಬೆಳಿಗ್ಗೆ 07:48ರಿಂದ 07:50ರವರೆಗೆ ನಿಲುಗಡೆಯಾಗಲಿದೆ. 2. ರೈಲು ಸಂಖ್ಯೆ 20661: ಕೆಎಸ್ಆರ್ ಬೆಂಗಳೂರು -ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ದಾವಣಗೆರೆಯಲ್ಲಿ …
Read More »ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್ ವಿರುದ್ಧ ಹೆಚ್ಡಿಡಿ ಕಿಡಿ
ನವದೆಹಲಿ: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ದೂರಿದ್ದಾರೆ. ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ …
Read More »ರಾಮದುರ್ಗ ಅಭಿವೃದ್ಧಿಗೆ ಸದಾಬದ್ದ
ಈತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರಾಮದುರ್ಗ ಕ್ಷೇತ್ರಕ್ಕೆ ಸಾರಿಗೆ, ಶಿಕ್ಷಣ, ನೀರಾವರಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಿಶೇಷ ಅನುದಾನ ಕುದರೆ ಬಯಲು ಮೈದಾನದಲ್ಲಿ ರೂ. 30 ಕೋಟಿ ವೆಚ್ಚದ ಸುಸಜ್ಜಿತ ನೂತನ ಬಸ್ ನಿಲ್ದಾಣಕ್ಕೆ ಮಂಜೂರಾತಿ, ನೋದಾಯಿತ ಕಾರ್ಮಿಕ ಮಕ್ಕಳ ಶಿಕ್ಷಣಕ್ಕೆ ರೂ. 40 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ತಾಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ …
Read More »ಜಮೀರ್ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್ಗೆ ಸಿರಾಜ್ ಅಹ್ಮದ್ ವಾರ್ನಿಂಗ್
ದಾವಣಗೆರೆ: ಜಮೀರ್ ಅಹ್ಮದ್ ಅವರ ಬಗ್ಗೆ ಏನಾದರೂ ಮಾತನಾಡಿದರೆ ಜನ ಸಹಿಸುವುದಿಲ್ಲ. ಕೂಡಲೇ ಜಮೀರ್ ಅವರ ಬಳಿ ಕ್ಷಮೆ ಕೋರುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷ ಹಾಗೂ ಕೆಎಂಡಿಸಿ ನಿರ್ದೆಶಕ ಸಿರಾಜ್ ಅಹ್ಮದ್ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರಿಗೆ ಆಗ್ರಹಿಸಿದ್ದಾರೆ. ಜಮೀರ್ ವಿರುದ್ಧ ಏಕವಚನದಲ್ಲಿ ಮಲ್ಲಿಕಾರ್ಜುನ್ ಮಾತನಾಡಿದ್ದಕ್ಕೆ ಬೂದಿಹಾಳ ರಸ್ತೆಯಲ್ಲಿನ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಮತದಾರರು ಮಾತ್ರ ದೊಡ್ಡವರು, ನೀವು ಅಲ್ಲ ಜಮೀರ್ ಅಲ್ಲ. …
Read More »ಸಿಲಿಂಡರ್ ಬೆಲೆ ಏರಿಕೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ
ಬೆಳಗಾವಿ: ‘ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಎಂಬ ‘ಉಡುಗೊರೆ’ ನೀಡಿದೆ. ಕೇಂದ್ರದ ಈ ಕ್ರಮ ಅತ್ಯಂತ ದುಃಖಕರ ಹಾಗೂ ಖಂಡನೀಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ₹60 ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಬಳಕೆಯ …
Read More »GBA ಚುನಾವಣೆ: ಐದು ನಗರ ಪಾಲಿಕೆಗಳ ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು …
Read More »
Laxmi News 24×7