Breaking News

ಮಚ್ಚೆ ಗ್ರಾಮದ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಬೆಳಗಾವಿ:  ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿದ್ದಾರೆಂಬ ಆರೋಪ ಕೇಳಿ ಬಂದಿದ್ದು,  ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು ರಾಯಣ್ಣ ಮೂರ್ತಿಗೆ ಮೊದಲು  ಕಪ್ಪು ಬಣ್ಣವೇ ಇತ್ತು. ಅದರ ಮೇಲೆಯೇ ಮತ್ತೆ ಕರಿ ಮಸಿ ಸುರಿದಿದ್ದಾರೆಂದು ತಡರಾತ್ರಿ ತಿಳಿದು ಬಂದಿದ್ದು, ಕೆಲಕಾಲ ಯಾರೂ ಇದನ್ನು ಗಮನಿಸಿರಲಿಲ್ಲ. ರಾತ್ರಿ ಗ್ರಾಮದ ಕೆಲವು ಯುವಕರ ಗಮನಕ್ಕೆ ಬಂದಿದೆ. ಕೆಲವೇ ನಿಮಿಷಗಳಲ್ಲಿ ಹಲವರು ಸ್ಥಳದಲ್ಲಿ ಸೇರಿ …

Read More »

ಇನ್ನೂ 10 ವರ್ಷ ರಾಜಕೀಯದಲ್ಲಿ ಇರುತ್ತೇನೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಉದ್ದಿಮೆ ಜೊತೆಗೆ ರಾಜಕೀಯದಲ್ಲಿ ಇದ್ದುಕೊಂಡು 30 ವರ್ಷದಿಂದ ಸಮಾಜಸೇವೆ ಮಾಡುತ್ತಿದ್ದೇನೆ. ಈ ವೇಳೆ ಹಲವು ಏಳು-ಬೀಳು ಕಂಡಿದ್ದೇನೆ. ಕನಿಷ್ಠ 10 ವರ್ಷ ರಾಜಕೀಯದಲ್ಲಿದ್ದು ನಾಡಿನ ಅಭಿವೃದ್ಧಿಗೆ ಇನ್ನಷ್ಟು ಪೂರಕವಾಗಿ ಕೆಲಸ ಮಾಡುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರು ಪ್ರೆಸ್‌ಕ್ಲಬ್​​​ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಜೊತೆ 25 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಈ ವೇಳೆ ಶೋಷಿತರಿಗೆ ಸಾಮಾಜಿಕ …

Read More »

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

ಬೆಂಗಳೂರು: ಸದಾ ಒಂದಿಲ್ಲೊಂದು ವಿಷಯಗಳ ಬಗ್ಗೆ ಮಾತಾಡಿ ವಿವಾದ ಸೃಷ್ಟಿ ಮಾಡೋ ಸಚಿವ ಪ್ರಿಯಾಂಕ್  ಇಲಾಖೆ ಅಭಿವೃದ್ದಿ ವಿಚಾರದಲ್ಲಿ ಮಾತ್ರ ಹಿಂದೆ ಬಿದ್ದಂತೆ ಕಾಣ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ತಮ್ಮ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹದಲ್ಲಿ ಇಲಾಖೆ ಹಿಂದೆ ಬಿದ್ದಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಅಂಕಿ ಅಂಶಗಳ ಪ್ರಕಾರವೇ ಕಳೆದ 3 ವರ್ಷಗಳಿಂದ ತೆರಿಗೆ ಸಂಗ್ರಹದಲ್ಲಿ ಇಲಾಖೆ ಹಿಂದೆ ಬಿದ್ದಿದೆ. ಈ ಆರ್ಥಿಕ ವರ್ಷ ಅಂದರೆ 2025-26ನೇ ಸಾಲಿನ …

Read More »

ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

ಕಾರವಾರ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭಟ್ಕಳ (Bhatkal) ತಾಲೂಕಿನ ಹುರುಳಿಸಾಲದ ಮನೆ ಒಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 21 ಕೆಜಿ ಜಿಂಕೆ ಮಾಂಸ, ಜಿಂಕೆ (Deer) ಕೊಬ್ಬು ಹಾಗೂ ಎರಡು ಏರ್‌ಗನ್‌ಗಳು ಪತ್ತೆಯಾಗಿವೆ. ಜಾಫರ್ ಬ್ರಹ್ಮವರ್ ಎಂಬಾತ ಕಾಡಿನಲ್ಲಿ ಪ್ರಾಣಿಯನ್ನು ಹತ್ಯೆ ಮಾಡಿ, ಮಾಂಸವನ್ನು ಮನೆಯ ಪಕ್ಕದಲ್ಲೇ ಬೇರ್ಪಡಿಸಿ ಉಳಿದ ಅವಶೇಷಗಳನ್ನು ಪಾಳುಬಿದ್ದ ಬಾವಿಗೆ ಎಸೆದಿದ್ದ. ದಾಳಿ …

Read More »

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ

ಬಾಗಲಕೋಟೆ: ಶಿವಾಜಿ ಜಯಂತಿ  ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ. ಮಸೀದಿ‌ ಕಡೆಯಿಂದ ಕಲ್ಲು ಬಂದಿದೆ.ನಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಎಸ್‌ಪಿ, ಪೊಲೀಸರ ಮೇಲೂ ಕಲ್ಲು ಬಿದ್ದಿದೆ ಎಂದು ಹಿಂದೂ ಮುಖಂಡರು ಪಬ್ಲಿಕ್‌ ಟಿವಿಗೆ ತಿಳಿಸಿದ್ದಾರೆ. ಕಲ್ಲು ತೂರಿದ ಬೆನ್ನಲ್ಲೇ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. …

Read More »

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

ನವದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ಇಂಡಿಯಾ AI Impact ಶೃಂಗಸಭೆಯಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ  ಅವರು ಜಾಗತಿಕ ದಿಗ್ಗಜರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜಾಗತಿಕ ಉದ್ಯಮ ದಿಗ್ಗಜರು, ಸಂಶೋಧಕರು ಮತ್ತು ನವೋದ್ಯಮ ಸ್ಥಾಪಕರ ಜೊತೆಗೆ ಸಚಿವರು ವ್ಯಾಪಕ ಸಮಾಲೋಚನೆ ನಡೆಸಿದರು. ಶೃಂಗಸಭೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೃತಕ ಜಾಣ್ಮೆ …

Read More »

ಯಾರಿಗೂ ಅನ್ಯಾಯವಾಗದು ಅಪಪ್ರಚಾರಕ್ಕೆ ಕಿವಿಗೊಡಬೇಡಿ

ಬೆಳಗಾವಿ: ‘ಬಿಡಿಸಿಸಿ ಬ್ಯಾಂಕ್‌ ಗ್ರಾಹಕರು ಅಪಪ್ರಚಾರಕ್ಕೆ ಕಿವಿಕೊಡಬೇಡಿ. ಬ್ಯಾಂಕನ್ನು ಚೆನ್ನಾಗಿ ನಡೆಸುತ್ತೇವೆ. ಯಾವ ರೈತರಿಗೂ, ಗ್ರಾಹಕರಿಗೂ ಅನ್ಯಾಯ ಆಗಲು ಬಿಡುವುದಿಲ್ಲ’ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ‌ ಹೇಳಿದರು. ಸಿಪಿಇಡಿ ಮೈದಾನದಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಕೊಡಲು ಉದ್ದೇಶಿಸಿರುವ ಹೊಸ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬ್ಯಾಂಕಿನ ಮೇಲೆ ಗ್ರಾಹಕರು ವಿಶ್ವಾಸ ಇಟ್ಟುಕೊಂಡು ಹೋಗಬೇಕು. ಸಚಿವ ಸತೀಶ್‌ ಜಾರಕಿಹೊಳಿ ಹಾಗೂ …

Read More »

ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ : ಪ್ರಧಾನಿ ಮೋದಿ

ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು ಆಡಳಿತ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಜನ ದಿನ ಹಿನ್ನಲೆಯಲ್ಲಿ ಮೋದಿ ಅವರು ಸರಣೆ ಮಾಡಿ ವಂದಿಸಿದ್ದಾರೆ. ಫೆ 19, 1630 ರಂದು ಜನಿಸಿದ ಅವರು 17 ನೇ ಶತಮಾನದಲ್ಲಿ ಮತ್ತೆ ಹಿಂದೂ ಸಾಮ್ರಾಜ ್ಯ ಸ್ಥಾಪಿಸಿದರು.ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು, …

Read More »

ಮುಷ್ಕರ ನಡುವೆಯೂ ಸಾರಿಗೆ ನಿಗಮಗಳ ಬಸ್‌‍ ಸೇವೆ ಯಥಾಸ್ಥಿತಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್‌‍ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಬಸ್‌‍ ಸಂಚಾರ ಎಂದಿನಂತೆ ಮುಂದುವರೆದಿದ್ದು, ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ಬೆಂಗಳೂರು ಚಲೋ ಮುಷ್ಕರ ನಡೆಸುವುದಾಗಿ …

Read More »

“ಮಾರ್ಚ್ 11 ರಿಂದ 15 ವರೆಗೆ ನಿಪ್ಪಾಣಿಯಲ್ಲಿ ಅದ್ದೂರಿ ಕೃಷಿ ಉತ್ಸವ”

ನಿಪ್ಪಾಣಿ: ನಗರದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅವರಣರದಲ್ಲಿ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೋಸಾಯಿಟಿ ಲಿ.,ಯಕ್ಸಂಬಾ (ಮಲ್ಟಿ – ಸ್ಟೇಟ್) ಹಾಗೂ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿಯಮಿತ.,(ಬಹು -ರಾಜ್ಯ) ಸಂಯುಕ್ತಾಶ್ರಯದಲ್ಲಿ ಮಾರ್ಚ 11 ರಿಂದ 15 ವರೆಗೆ 5 ದಿನಗಳ ಕಾಲ ನಡೆಯಲಿರುವ ಬೃಹತ್ “ಕೃಷಿ ಉತ್ಸವ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ,ಸಲಹೆ ಸೂಚನೆಗಳನ್ನು ನೀಡಿದರು. …

Read More »