ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವೋಟ್ ಜೋರಿ ಆರೋಪ ಹೊರಿಸಿದರು. ಕೋರ್ಟ್ ಆದೇಶದ ಮೇರೆಗೆ ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ ಆಯಿತು. ರಾಜೇಗೌಡ ಕಳೆದ ವಿಧಾನಸಭೆಯಲ್ಲಿ 201 ಮತಗಳಿಂದ ಗೆದ್ದಿದ್ದರು. ರಾಜೇಗೌಡಗೆ ಇವಿಎಂ …
Read More »ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ರಾಜೀನಾಮೆ
ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಔಪಚಾರಿಕವಾಗಿ ಕಳುಹಿಸಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವಲ್ಲಿ ಡಿಎಂಕೆ ವಿಫಲವಾದ ಹಿನ್ನೆಲೆ ಸ್ಟಾಲಿನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಟಿವಿಕೆ ನಾಯಕ ದಳಪತಿ ವಿಜಯ್ 2 ವಾರಗಳಲ್ಲಿ …
Read More »ಮನೆಗೆಲಸ ಮಾಡ್ಕೊಂಡು ತಿಂಗಳಿಗೆ 2,500 ರೂ. ಸಂಪಾದಿಸುತ್ತಿದ್ದ ಬಂಗಾಳದ ಮಹಿಳೆ ಈಗ ಬಿಜೆಪಿ ಶಾಸಕಿ
ಕೋಲ್ಕತ್ತಾ: ಮನೆಗೆಲಸ ಮಾಡಿಕೊಂಡು ತಿಂಗಳಿಗೆ 2,500 ರೂ. ಸಂಪಾದನೆ ಮಾಡುತ್ತಿದ್ದ ಮಹಿಳೆಗೆ ಬಂಗಾಳ ಚುನಾವಣೆಯಲ್ಲಿ ಅದೃಷ್ಟ ಖುಲಾಯಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಕಲಿತಾ ಮಾಝಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕಲಿತಾ ಮಾಝಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 12,535 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸಿ ಶಾಸಕಿಯಾಗಿದ್ದಾರೆ. ಸಾಧಾರಣ ಹಿನ್ನೆಲೆಯಿಂದ ಬಂದ ಮಾಝಿ ಆರ್ಥಿಕ ಸಂಕಷ್ಟದಿಂದಾಗಿ ಬಾಲ್ಯದಲ್ಲೇ ಶಿಕ್ಷಣವನ್ನು ತ್ಯಜಿಸಬೇಕಾಯಿತು. ತನ್ನ ಕುಟುಂಬವನ್ನು ಪೋಷಿಸಲು, …
Read More »ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಬೆಳಗಾವಿ, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. …
Read More »ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ …
Read More »ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಗೆಲುವು ಸಖತ್ ಕ್ರೇಜ್ ಹುಟ್ಟುಹಾಕಿದೆ. ದಶಕಗಳ ಇತಿಹಾಸ ಹೊಂದಿರುವ ಡಿಎಂಕೆ ಮತ್ತು ಎಐಎಡಿಎಂಕೆಯಂತಹ ಪ್ರಬಲ ಪಕ್ಷಗಳನ್ನು ಹಿಂದಿಕ್ಕಿ ಗೆಲುವಿನ ಪತಾಕೆ ಹಾರಿಸಿದ್ದಾಗಿದೆ. ಈ ರಾಜಕೀಯ ವಿಜಯೋತ್ಸವದ ಸಮಯದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವ ಮತ್ತೊಂದು ಹೆಸರು ‘ತ್ರಿಷಾ’. ಹೌದು, ವಿಜಯ್ ಯಶಸ್ಸಿನ ಬೆನ್ನಲ್ಲೇ ನಾಯಕಿ ತ್ರಿಷಾ ಸ್ವತಃ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಿದ್ದು, ಈಗ ಸೋಷಿಯಲ್ ಮೀಡಿಯಾದಲ್ಲಿ ಹಲ್ಚಲ್ ಎಬ್ಬಿಸಿದೆ. ಇದು ಕೇವಲ …
Read More »ನಾನು ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಸತತ ಮೂರು ಬಾರಿ ಅಧಿಕಾರದಲ್ಲಿದ್ದ, ನಂತರ ನಿನ್ನೆ ಬಿಜೆಪಿ ವಿರುದ್ಧ ಸೋತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಫಲಿತಾಂಶ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಮಮತಾ ಬ್ಯಾನರ್ಜಿ, ನಾನು ರಾಜೀನಾಮೆ ಕೊಡಲ್ಲ. ನಾನು ಸೋತಿಲ್ಲ, ಹೀಗಾಗಿ ರಾಜಭವನಕ್ಕೆ ಹೋಗಲ್ಲ. ಬಿಜೆಪಿಗೆ ಸಿಕ್ಕ ಜನಾದೇಶ ಲೂಟಿಯ ಫಲಿತಾಂಶ ಎಂದು ವಾಗ್ದಾಳಿ ನಡೆಸಿದ್ದಾರೆ. ಬ್ಯಾನರ್ಜಿಯವರ ಈ ನಡೆ ರಾಜ್ಯದಲ್ಲಿ ರಾಷ್ಟ್ರಪತಿ …
Read More »ತಮಿಳುನಾಡು ರಾಜಕೀಯದಲ್ಲಿ ವಿಜಯ್ ಸೃಷ್ಟಿಸಿದ ಸಂಚಲನ: ನಟನಿಂದ ನಾಯಕನಾಗುವ ಹಾದಿಯಲ್ಲಿ ಪೋಷಕರ ಪಾತ್ರವೇನು?
ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಭರ್ಜರಿ ಜಯಭೇರಿ ಬಾರಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ಕೇವಲ ಎರಡು ವರ್ಷಗಳ ಹಿಂದೆ ಪಕ್ಷ ಆರಂಭಿಸಿದ್ದ ವಿಜಯ್, ಇಂದು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ. ಆದರೆ, ಈ ಐತಿಹಾಸಿಕ ಯಶಸ್ಸಿನ ಹಿಂದೆ ಅವರ ಪೋಷಕರಾದ ಎಸ್.ಎ. ಚಂದ್ರಶೇಖರ್ ಮತ್ತು ಶೋಬಾ ಅವರ ಶ್ರಮ ಹಾಗೂ ಹಳೆಯ ವಿವಾದಗಳ ದೊಡ್ಡ …
Read More »2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ
ಮೈಸೂರು: ಕಳೆದ ವರ್ಷದ ನಾಡಹಬ್ಬ ಮೈಸೂರು ದಸರಾದ ಖರ್ಚು ವೆಚ್ಚದ ಲೆಕ್ಕವನ್ನು ಮೈಸೂರು ಜಿಲ್ಲಾಡಳಿತ ಈಗ ಬಿಡುಗಡೆ ಮಾಡಿದೆ. ದಸರಾ ಮುಗಿದು 7 ತಿಂಗಳ ಬಳಿಕ ಖರ್ಚು ವೆಚ್ಚದ ಲೆಕ್ಕವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು, ಕಳೆದ ವರ್ಷ ಒಟ್ಟು 43 ಕೋಟಿ ರೂ. ಖರ್ಚು ಮಾಡಿರುವುದಾಗಿ ಹೇಳಿದೆ. ಯುವದಸರಾಗೆ ಬರೋಬ್ಬರಿ 16 ಕೋಟಿ ರೂ. ವೆಚ್ಚ ಮಾಡಿದೆ. ಸಿವಿಲ್ ಕಾಮಗಾರಿಗಳಿಗೆ 6 ಕೋಟಿ ರೂ. ಏರ್ ಶೋಗೆ 55 ಲಕ್ಷ …
Read More »96 ಲಕ್ಷ ವೋಟ್ ಡಿಲೀಟ್ ಮಾಡಿದ್ದಾರೆ ಅಂತ ಮಮತಾ ಆರೋಪ ಮಾಡಿದ್ದಾರೆ: ಪರಮೇಶ್ವರ್
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಮತಪಟ್ಟಿ ಪರಿಷ್ಕರಣೆ ವೇಳೆ 96 ಲಕ್ಷ ವೋಟ್ಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಇದು ನಿಜವೇ ಆಗಿದ್ದರೆ, ಇದು ಎಷ್ಟರ ಮಟ್ಟಿಗೆ ಕಾನೂನಾತ್ಮಕವಾಗಿದೆ ಎಂಬುದನ್ನು ನೋಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು . ಈ ವೇಳೆ, ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಹೇಗೆ ನಡೆದುಕೊಂಡಿದ್ದಾರೆ ಎಂದು ಗೊತ್ತಿದೆ. …
Read More »
Laxmi News 24×7