ಬೆಳಗಾವಿಯಲ್ಲಿ ಅತ್ತೆಯೇ ಅಳಿಯನ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದೆ. ಪುತ್ರಿಯರ ಮದುವೆ ಸಾಲ ತೀರಿಸಲು ಅಡ್ಡದಾರಿ ಹಿಡಿದ ಮಹಿಳೆ, ಅಳಿಯನ ಮನೆಯಲ್ಲೇ ಚಿನ್ನಾಭರಣ ಕದ್ದು ಸಿಕ್ಕಿಬಿದ್ದಿದ್ದಾಳೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ, ಶಿವಾ ಅಪ್ಪಯನವರ ಬಂಧಿತ ಆರೋಪಿಗಳು. ಚಿಕ್ಕ ಮಗಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲಿ ಮಹಿಳೆ ಉಜ್ವಲಾ, 16.57 ಲಕ್ಷ ಮೌಲ್ಯದ 110 …
Read More »ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹ*ತ್ಯೆಗೆ ಶರಣಾದ ತಂದೆ.!!!
ತುಮಕೂರು: ಕುಣಿಗಲ್ ತಾಲ್ಲೂಕಿನ ಆಲ್ಕೆರೆ (ಹಾಲ್ಕೆರೆ) ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ದಿಂಬಿನಿಂದ ಕೊಂದು, ನಂತರ ಸ್ವತಃ ನೇಣಿಗೆ ಶರಣಾಗಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಮೃತರು ಶಿವಣ್ಣ (40), ಅವನ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (5) ಎಂದು ಗುರುತಿಸಲಾಗಿದೆ. ಘಟನೆಯ ವಿವರ ಶಿವಣ್ಣನ ಮೃತದೇಹವು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಕ್ಕಳು ಮಂಚದ …
Read More »ಬಿರಿಯಾನಿ, ಕಲ್ಲಂಗಡಿ ಸೇವಿಸಿ ಮೃತಪಟ್ಟ ಒಂದೇ ಕುಟುಂಬದ ನಾಲ್ವರು: ರೋಚಕ ತಿರುವು ಪಡೆದ ಪ್ರಕರಣ.!!!
ಮುಂಬೈನಲ್ಲಿ ಕಲ್ಲಂಗಡಿ ಹಣ್ಣು ತಿಂದ ನಂತರ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ಇದು ಆಹಾರ ವಿಷಾಹಾರ (Food Poisoning) ಎಂದು ಶಂಕಿಸಲಾಗಿತ್ತು, ಆದರೆ ಮರಣೋತ್ತರ ಪರೀಕ್ಷೆಯ ವರದಿ ಬೆಚ್ಚಿಬೀಳಿಸುವ ಸತ್ಯವನ್ನು ಹೊರಹಾಕಿದೆ. ಎನ್ಡಿಟಿವಿ ವರದಿಯ ಪ್ರಕಾರ, ಮೃತರ ಮೆದುಳು, ಹೃದಯ ಮತ್ತು ಕರುಳು ಸೇರಿದಂತೆ ಪ್ರಮುಖ ಅಂಗಾಂಗಗಳು ಹಸಿರು ಬಣ್ಣಕ್ಕೆ ತಿರುಗಿರುವುದು ಪತ್ತೆಯಾಗಿದೆ. ಮೃತ ಅಬ್ದುಲ್ಲಾ ಅವರ ದೇಹದಲ್ಲಿ ‘ಮಾರ್ಫಿನ್’ (Morphine) …
Read More »ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ.!
ಬೆಂಗಳೂರು: ಸ್ಯಾಂಡಲ್ವುಡ್ನ ಜನಪ್ರಿಯ ನಟ ಡಾಲಿ ಧನಂಜಯ್ ಮತ್ತು ಅವರ ಪತ್ನಿ ಡಾ. ಧನ್ಯತಾ ಅವರ ಕುಟುಂಬದಲ್ಲಿ ಸಂತಸದ ಹೊಳೆ ಹರಿದಿದೆ. ಈ ದಂಪತಿಗೆ ಗಂಡು ಮಗುವಿನ ಆಗಮನವಾಗಿದ್ದು, ಕುಟುಂಬದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಾ. ಧನ್ಯತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಸುರಕ್ಷಿತವಾಗಿ ನಡೆದಿದ್ದು ತಾಯಿ ಹಾಗೂ ಮಗು ಇಬ್ಬರೂ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂತಸದ ಸುದ್ದಿಯೊಂದಿಗೆ ಕುಟುಂಬದ …
Read More »ಬೀರೇಶ್ವರ ಸಂಸ್ಥೆಯ ಶಾಖಾ ವ್ಯವಸ್ಥಾಪಕರಿಗೆ ವ್ಯಕ್ತಿತ್ವ ವಿಕಸನ ತರಬೇತಿ
ಬೆಳಗಾವಿಯ ಐ.ಟಿ.ಸಿ.ವೆಲ್ ಕಮ್ ಹೋಟೆಲನಲ್ಲಿ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೊಸಾಯಿಟಿ ಲಿ., (ಮಲ್ಟಿ- ಸ್ಟೇಟ್) ಮುಖ್ಯ ಸಿಬ್ಬಂದಿಗಳ (HOD) ಹಾಗೂ ಶಾಖಾ ವ್ಯವಸ್ಥಾಪಕರಿಗೆ 2 ದಿನದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರವನ್ನು ಡಾ.ಡಿ.ಜಿ.ಕುಲಕರ್ಣಿ ಉದ್ದೇಶಿಸಿ ಮಾತನಾಡಿದರು. ಬ್ಯಾಂಕ್ ಸಿಬ್ಬಂದಿಗೆ ವ್ಯಕ್ತಿತ್ವ ವಿಕಸನ (Personality Development) ತರಬೇತಿಯು ಸಂಸ್ಥೆಯ ಸದಸ್ಯರಿಗೆ ಸೇವೆಯನ್ನೂ ನೀಡಲು ಬಹಳ ಮುಖ್ಯವಾಗಿದೆ. ಸಹಕಾರ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೇಗೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.ಈ ತರಬೇತಿಯು ಕೇವಲ ಸಂವಹನ …
Read More »ಬೆಳಗಾವಿ ನಗರದ ಜ್ವಲಂತ ಸಮಸ್ಯೆಗಳಿಗೆ ಧ್ವನಿ ಎತ್ತಲು ಎಫ್ಒಎಬಿ ನಿರ್ಧಾರ
ಬೆಳಗಾವಿ: ಕೈತಪ್ಪುತ್ತಿರುವ ಯೋಜನೆಗಳು ಸೇರಿದಂತೆ ಬೆಳಗಾವಿ ನಗರದ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತಲು ಫೆಡರೇಶನ್ ಆಫ್ ಅಸೋಸಿಯೇಶನ್ ಆಫ್ ಬೆಳಗಾವಿ (ಎಫ್ಒಎಬಿ) ನಿರ್ಧರಿಸಿದೆ. ಇಲ್ಲಿಯ ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ಗುರುವಾರ ಸಂಜೆ ಸೇರಿದ್ದ ಅಸೋಸಿಯೇಶನ್ ಪದಾಧಿಕಾರಿಗಳ ಸಭೆ ಈ ಕುರಿತು ಸುದೀರ್ಘವಾಗಿ ಚರ್ಚಿಸಿತು. ಎಫ್ಒಎಬಿ ಸಂಚಾಲಕ ಚೈತನ್ಯ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ಬೆಳಗಾವಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಚೆಂಬರ್ ಆಫ್ ಕಾಮರ್ಸ್, ಕ್ರೆಡೈ, …
Read More »ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ದೂರು
ಮೈಸೂರು: ಟಿ ನರಸೀಪುರದ ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್ ರಾಜ್ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದರು. …
Read More »ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್.ಅಶೋಕ್
ಬೆಂಗಳೂರು: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಲಹದಿಂದ ಹೆಚ್ಚು ಗೊಂದಲ ಉಂಟಾಗಿದೆ. ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಮಲ್ಲಿಕಾರ್ಜುನ ಖರ್ಗೆ ಕೂಡ ಸಿಎಂ ಆಗಲು ಪ್ರಯತ್ನ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಕುರ್ಚಿ ಕಲಹದಿಂದಾಗಿ ಇಡೀ ಸರ್ಕಾರ ಗೊಂದಲದ ಗೂಡಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಹೇಳಿಕೆ ನೀಡಿ ಇನ್ನಷ್ಟು ಗೊಂದಲ ಉಂಟುಮಾಡಿದ್ದಾರೆ. ಮುಂದೆ ನನ್ನ ಪರ್ವ …
Read More »ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ
ಬೆಂಗಳೂರು: ಇದು ಆಡಳಿತವಲ್ಲ, ಸಂಘಟಿತ ಲೂಟಿ ಎಂದು ಗ್ಯಾಸ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆ ಮುಗಿದ ತಕ್ಷಣ ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1ರಂದು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 993 ರೂ.ಯಷ್ಟು ಹೆಚ್ಚಿಸಲಾಗಿದೆ. ಚುನಾವಣಾ ಅವಧಿಯಲ್ಲಿ ಅಂತಹ …
Read More »ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ
ಬೆಂಗಳೂರು: ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿಯಲಿ ಅಂತಾನೇ ಬಿಜೆಪಿಗರು ಕಾಯ್ತಾ ಇದ್ರು. ಚುನಾವಣೆ ಮುಗಿದ ಕೂಡಲೇ ಗ್ಯಾಸ್ ಬೆಲೆ ಹೆಚ್ಚಳ ಮಾಡಿದ್ದಾರೆ. ಜನ ಸಾಮಾನ್ಯರು ಹಾಗೂ ಕಾರ್ಮಿಕರ ಬಗ್ಗೆ ಬಿಜೆಪಿಗರಿಗೆ ಕಾಳಜಿ ಇಲ್ಲ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಬೇಕಿದೆ. ಗ್ಯಾಸ್ ಬೆಲೆ ಏರಿಕೆ ಮಾಡಿ, …
Read More »
Laxmi News 24×7