Breaking News

ಉಪ ಚುನಾವಣೆ ಬಿಜೆಪಿಯಿಂದ ಪ್ರಚಾರ ಕಾರ್ಯಾಲಯ ಉದ್ಘಾಟನೆ. ಚುನಾವಣಾ ಪ್ರಚಾರಕ್ಕೆ ಚಾಲನೆ

ಬಾಗಲಕೋಟೆ : ಬಾಗಲಕೋಟೆಯಲ್ಲಿ ನನ್ನ ಗೆಲುವಲ್ಲ, ಬಿಜೆಪಿ, ಹಿಂದುತ್ವದ ಗೆಲುವಾಗಲಿ ಎಂದು ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿಯಾದ ಡಾ,ವೀರಣ್ಣ ಚರಂತಿಮಠ ಹೇಳಿದರು. ಅವರು ನಗರದ ಶಿವಾನಂದ ಜಿನ್ ನಲ್ಲಿರುವ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಚುನಾವಣಾ ಪ್ರಚಾರ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ತಮ್ಮನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ಪಕ್ಷ ಕೇಂದ್ರ ಹಾಗೂ ರಾಜ್ಯದ ಮುಖಂಡರಿಗೆ ಅಭಿನಂದನೆಗಳನ್ನು ತಿಳಿಸಿದ ಅವರು ಯಾವತ್ತಿದ್ದರೂ ಬಾಗಲಕೋಟೆ ಭಾರತೀಯ …

Read More »

ಕೈ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ ಒಂಬತ್ತರಂದು ಉಪಚುನಾವಣೆ ನಡೆಯಲಿದೆ. ಆಪೈಕಿ, ದಾವಣಗೆರೆ ದಕ್ಷಿಣ ಕ್ಷೇತ್ರವೂ ಒಂದು. ಟಿಕೆಟ್’ಗಾಗಿ ಭಾರೀ ಆಂತರಿಕ ಜಟಾಪಟಿಯ ನಡುವೆ, ಸಮರ್ಥ್ ಶಾಮನೂರು ನಾಮಪತ್ರವನ್ನು ಇಂದು (ಮಾರ್ಚ್. 20) ಸಲ್ಲಿಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ ಒಟ್ಟು 2 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ಗಮನಿಸಬೇಕಾದ ವಿಚಾರ ಏನಂದರೆ, ಕಾಂಗ್ರೆಸ್ ಹೈಕಮಾಂಡ್, ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡುವ …

Read More »

ದಾವಣಗೆರೆ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾದಿಕ್‌ ಪೈಲ್ವಾನ್‌ ನಾಮಪತ್ರ ಸಲ್ಲಿಕೆ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಮುಖಂಡ ಸಾದಿಕ್‌ ಪೈಲ್ವಾನ್‌ ಅವರು ಶುಕ್ರವಾರ ಉಮೇದುವಾರಿಕೆ ಸಲ್ಲಿಸಿದರು. ಪಕ್ಷದ ‘ಬಿ’ ಫಾರಂ ಇಲ್ಲದೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರವನ್ನು ಚುನಾವಣಾಧಿಕಾರಿಗೆ ನೀಡಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಸ್ಲಿಂ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆ. 2013ರ ವಿಧಾನಸಭಾ ಚುನಾವಣೆಯಿಂದಲೂ ಪಕ್ಷದ ಎದುರು ಟಿಕೆಟ್‌ಗೆ ಬೇಡಿಕೆ ಸಲ್ಲಿಸಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷದ ‘ಬಿ’ ಫಾರಂ ಸಿಗುವ ಸಂಪೂರ್ಣ …

Read More »

ತಂದೆ-ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸ್ತಾರೆ

ವಿಜಯಪುರ: ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಸಿದ್ದೇಶ್ವರ ಆಪ್ತಗೆ ನೀಡಿದ್ದಾರೆ. ಆದರೆ, ಇದು ಪಕ್ಕಾ ಅಲ್ಲ, ಕೊನೆ ಕ್ಷಣದಲ್ಲಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಪಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿಯುವ ವರೆಗೂ ಇದನ್ನ ನಂಬುವ ಹಾಗಿಲ್ಲ. ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಟ್ಟರೆ ಇದು ಬದಲಾಗುತ್ತೆ ಎಂದು ಯತ್ನಾಳ್‌ ತಿಳಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಟಿಕೆಟ್ …

Read More »

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ  ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಚಿತ್ರದುರ್ಗದ ನೆಹರು ನಗರದವನಾಗಿರುವ ಆರೋಪಿ ಪತಿ ಸುಹೇಲ್, ಪತ್ನಿ ತಾಸಿನಾ ಬಾನು ಹಾಗೂ ಪುತ್ರಿ ರೋಷನಿ, ಸಹೋದರಿ ನೇಹಾ, ನೇಹಾ ಪುತ್ರಿ ಇಕ್ರಾ, ಹಿರಿಯ ಸಹೋದರಿ ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ …

Read More »

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

ಚಿಕ್ಕಮಗಳೂರು: ಯುಗಾದಿ ಹಬ್ಬದ ದಿನವೇ ಕಾಲಭೈರವೇಶ್ವನ ದೇಗುಲದ  ಎದುರು ವಾಮಾಚಾರ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ  ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ಕಳೆದ ರಾತ್ರಿ ದುಷ್ಕರ್ಮಿಗಳು ದೇವರ ಗುಡಿ ಎದುರೇ ವಾಮಾಚಾರ ನಡೆಸಿದ್ದಾರೆ. ದೇವಸ್ಥಾನದ ಮುಂಭಾಗ ದೊಡ್ಡ ಕಲ್ಲುಗಳನ್ನ ವೃತ್ತಾಕಾರದಲ್ಲಿ ಇಟ್ಟು ಅದರ ಮಧ್ಯೆ ವಾಮಾಚಾರ ನಡೆಸಿದ್ದಾರೆ. ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ನಾಣ್ಯಗಳನ್ನು ಕೃತ್ಯಕ್ಕೆ ಬಳಸಿದ್ದಾರೆ. ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಕಳಸದ ಕಳಸೇಶ್ವರ …

Read More »

ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಹಿಂದೆ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡುತ್ತಾರೆ. ಹೌದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ …

Read More »

ಕಾಕತಿ ಜಿ.ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಇಂದು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಜಿ.ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ  ಪಿ.ಡಬ್ಲ್ಯೂ.ಡಿ ಇಲಾಖೆಯ ಎಸ್.ಟಿ.ಪಿ ಮತ್ತು ಟಿ.ಎಸ್.ಪಿ ಅನುದಾನ ಅಡಿಯಲ್ಲಿ ಸುಮಾರು ₹1.60 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಕಾಮಗಾರಿಗಳ ವಿವರ: 1️⃣ ಹೊನಗಾ ಗ್ರಾಮ – ಜನತಾ ಪ್ಲಾಟ್ ಹಾಗೂ ಭೈರವನಾಥ ಗಲ್ಲಿಯಲ್ಲಿ ₹60 ಲಕ್ಷ ವೆಚ್ಚದ ಸಿ.ಸಿ ಚರಂಡಿ …

Read More »

ಉಪಚುನಾವಣೆ | ಕರಪತ್ರ, ಪೋಸ್ಟರ್ ಮುದ್ರಿಸಲು ಅನುಮತಿ ಕಡ್ಡಾಯ: ಸಂಗಪ್ಪ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, ಪೋಸ್ಟರ್ ಹಾಗೂ ಕಿರುಹೊತ್ತಿಗೆ ಸೇರಿದಂತೆ ಇತ್ಯಾದಿಗಳನ್ನು ಮುದ್ರಿಸುವ ಪೂರ್ವದಲ್ಲಿ ಮುದ್ರಕರು ನಿಗದಿತ ನಮೂನೆ ಭರ್ತಿ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮುದ್ರಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುದ್ರಕರ ಮತ್ತು ಪ್ರಕಾಶಕರ ಹೆಸರನ್ನು ಹೊಂದಿರದ ಯಾವುದೇ ಚುನಾವಣೆಯ …

Read More »

ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 5000 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG ಮತ್ತು UKG) ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಣಮಟ್ಟದ ಶಿಕ್ಷಣ: ಅಂಗನವಾಡಿಗಳಲ್ಲಿ ಕೇವಲ ಪೌಷ್ಟಿಕ ಆಹಾರ ನೀಡುವುದಷ್ಟೇ ಅಲ್ಲದೆ, …

Read More »