Breaking News

ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಂಗಳೂರು: ಬಾಡಿಗೆ ಮನೆಯಲ್ಲಿ ಬೆತ್ತಲೆ ಹಾಗೂ ಕೊಳೆತ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದೆ. ಪೂಜಾ ದತ್ತಾ ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಪೂಜಾ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇತ್ತೀಚಿಗೆ ಕೆಲಸ ಕಳೆದುಕೊಂಡಿದ್ದಳು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೂಜಾ ದತ್ತಾ ಜಾರ್ಖಂಡ್ ಮೂಲದವಳು. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ವಾಸವಿದ್ದಳು. ಈ ಹಿಂದೆ ಖಾಸಗಿ …

Read More »

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

ಮುಂಬೈ: ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಎಂಬ ಆದೇಶಕ್ಕೆ ಮಹಾರಾಷ್ಟ್ರ ಸರ್ಕಾರ  6 ತಿಂಗಳ ಬ್ರೇಕ್ ಹಾಕಿದೆ. ಇತ್ತೀಚಿಗಷ್ಟೇ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್  ಅವರು ಮೇ.1ರಿಂದ ಮಹಾರಾಷ್ಟ್ರದಲ್ಲಿ ಎಲ್ಲಾ ಪರವಾನಗಿ ಪಡೆದ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಮಾತನಾಡುವುದು ಕಡ್ಡಾಯವಾಗಿ ಜಾರಿಗೊಳಿಸುವುದಾಗಿ ಘೋಷಿಸಿದ್ದರು. ಈ ಸಂಬಂಧ ಶಿವಸೇನಾ ನಾಯಕ ಸಂಜಯ್ ನಿರುಪಮ್  ಅವರು ಪ್ರತಾಪ್ ಸರ್ನಾಯಕ್ ಅವರಿಗೆ ಪತ್ರ ಬರೆದಿದ್ದು, ಆರು ತಿಂಗಳಿಂದ ಒಂದು ವರ್ಷದವರೆಗೆ ಮುಂದೂಡುವಂತೆ …

Read More »

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ

ನವದೆಹಲಿ: ಹೇಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌  ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು  ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.‌ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ 16.3 ಓವರ್‌ನಲ್ಲಿ 75 ರನ್‌ಗಳಿಸಿ ಆಲೌಟ್‌ ಆಯಿತು. 76 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ 6.3 ಓವರ್‌ನಲ್ಲಿಯೇ 77 ರನ್‌ಗಳಿಸುವ ಮೂಲಕ ಗೆಲುವು ಸಾಧಿಸಿದೆ. ಚೇಸಿಂಗ್‌ ಆರಂಭಿಸಿದ ಆರ್‌ಸಿಬಿ ಗೆಲುವಿನ ಭರವಸೆಯೊಂದಿಗೆ ಆಟ ಶುರು …

Read More »

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

ರಾಮನಗರ: ಸಿದ್ದರಾಮಯ್ಯ  ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌. ಬೇರೆಯವರೂ ರೇಸ್‌ನಲ್ಲಿದ್ದಾರೆ, ಆದರೆ ಅದು ಕಾಲಕ್ಕೆ ತಕ್ಕಂತೆ ತೀರ್ಮಾನ ಆಗುತ್ತೆ. ಸದ್ಯಕ್ಕೆ ಸಿದ್ದರಾಮಯ್ಯನವರು ಬೇಡ ಅಂದಾಗ ಆ ಸ್ಥಾನದ ರೇಸ್‌ನಲ್ಲಿರೋದು ಡಿಕೆಶಿ. ಈ ಅವಧಿಯಲ್ಲೇ ಡಿಕೆಶಿಗೆ ಅವಕಾಶ ಸಿಗುತ್ತೆ. ನಮ್ಮ ಹೈಕಮಾಂಡ್ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತೆ ಎಂದು ರಾಮನಗರದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಡಿ.ಸುಧಾಕರ್ ಅನಾರೋಗ್ಯ ವಿಚಾರದ ಬಗ್ಗೆ ಹೆಚ್ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ …

Read More »

ಭಾವಪೂರ್ವ ಶ್ರದ್ಧಾಂಜಲಿ

ಗೋಕಾಕದ ಖ್ಯಾತ ಶಂಕರ್ ಬೇಲ್ ಪುರಿ ವ್ಯಾಪಾರಸ್ಥರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದನಿಯ ಎನಿಸುತ್ತಿದೆ. ಇವರ ಆತ್ಮಕ್ಕೆ ದೇವರು ಶಾಂತಿ ಮತ್ತು ಅವರ ಕುಟುಂಬಕ್ಕೆ ಆ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ .

Read More »

ಈಗ ಏನ್ ಮಾಡ್ತಿದ್ದಾರೆ ಖ್ಯಾತ ಪತ್ರಕರ್ತ ಲಕ್ಷ್ಮಣ‌ ಹೂಗಾರ್…?

ತುಂಬಾ ಜನರಲ್ಲಿ ಈ‌ ಪ್ರಶ್ನೆ ಇದೆ. ಕಳೆದ ಹತ್ತು ವರ್ಷಗಳ ಹಿಂದೆ ಕನ್ನಡ ಸುದ್ದಿ ವಾಹಿನಿಗಳಲ್ಲಿ ಕುಳಿತು ರಾಜಕೀಯ ನಾಯಕರನ್ನು ಖಡಕ್ ಪ್ರಶ್ನೆಗಳ ಮೂಲಕ ಕಟ್ಟಿ ಹಾಕುತ್ತಿದ್ದ ಈ‌ ಗಟ್ಟಿ ಪತ್ರಕರ್ತ ಈಗ ಎಲ್ಲಿ ಅಂತ. ಸಧ್ಯ ಲಕ್ಷ್ಮಣ ಹೂಗಾರ್ ಅವರು‌ ಕೃಷಿ ‌ಕಾಯದಲ್ಲಿ ತೊಡಗಿರುವ ಒಂದು‌ ಫೋಟೋ ಸಾಮಾಜಿಕ‌ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.‌ ಆದರೆ ಲಕ್ಷ್ಮಣ ಹೂಗಾರ್ ಯಾಕೆ ಪತ್ರಿಕೋದ್ಯಮದಿಂದ‌ ದೂರ ಉಳಿದರು ಎಂಬ ಪ್ರಶ್ನೆಗೆ ಈವರೆಗೂ …

Read More »

ಶ್ರೀ ಬೀರದೇವರ ಜನ್ಮೋತ್ಸವ ಜಾತ್ರೆ: ಉತ್ಸವದ ಮಧ್ಯೆ ಅಕ್ರಮ ಆರೋಪಗಳು ಗಂಭೀರ ಚರ್ಚೆಗೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕರಗಾಂವ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಬೀರದೇವರ ಮಠದಲ್ಲಿ ಮೇ 6, 2026 ರಂದು ಜರುಗಲಿರುವ ಜನ್ಮೋತ್ಸವ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಹಬ್ಬದ ಸಡಗರದ ನಡುವೆ ಮಠದ ಆಡಳಿತ ಹಾಗೂ ಆಸ್ತಿ ಬಳಕೆಯ ಕುರಿತು ಗಂಭೀರ ಆರೋಪಗಳು ಕೇಳಿಬಂದು ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿವೆ. ಸ್ಥಳೀಯ ಮೂಲಗಳ ಪ್ರಕಾರ, ಹಾಲುಮತ ಸಮುದಾಯದ ಭಕ್ತಿಭಾವದ ಕೇಂದ್ರವಾಗಿರುವ ಈ ಮಠದಲ್ಲಿ ಭಕ್ತರಿಂದ ಸಲ್ಲಿಸಲ್ಪಡುವ …

Read More »

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

ಲಕ್ನೋ: ಪಶ್ಚಿಮ ಬಂಗಾಳದ  ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಗಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಲ್ಲಿನ ಜನರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಹಲವು ವರ್ಷಗಳಿಂದ ಭಯದಲ್ಲಿ ಬದುಕುತ್ತಿದ್ದ ಮತದಾರರು ಬದಲಾವಣೆ ಮತ್ತು ಅಭಿವೃದ್ಧಿಯನ್ನು ಬಯಸಿದ್ದಾರೆ. ಪಶ್ಚಿಮ ಬಂಗಾಳದ ಮತದಾರರು, ವಿಶೇಷವಾಗಿ ಯುವಕರು, ಮಹಿಳೆಯರು, ರೈತರು ಮತ್ತು ಕಾರ್ಮಿಕರು ಬದಲಾವಣೆ ಬಯಸಿದ್ದಾರೆ. ಜೊತೆಗೆ ಪ್ರಮುಖ ಬೇಡಿಕೆಗಳನ್ನು ಹೊಂದಿದ್ದಾರೆ. ಇದೆಲ್ಲವನ್ನೂ ನಾನು ಗ್ರಹಿಸಿದ್ದೇನೆ ಎಂದು ಮೋದಿ ಪತ್ರದಲ್ಲಿ ತಿಳಿಸಿದ್ದಾರೆ. …

Read More »

ಮೂರು ದಿನ ಭಾರಿ ಮಳೆ: 17 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಏಪ್ರಿಲ್ 28, 29 ಮತ್ತು 30 ರಂದು ಮಳೆ ಆಗಲಿದ್ದು, 17 ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಕೊಡಗು, ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಮೈಸೂರು, ದಾವಣಗೆರೆ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ …

Read More »

ಬೈಲಹೊಂಗಲನಲ್ಲಿ ಭೀಕರ ರಸ್ತೆ ಅಪಘಾತ

ಬೈಲಹೊಂಗಲ: ದನಗಳನ್ನು ಸಾಗಿಸುತ್ತಿದ್ದ ಬೊಲೆರೋ ವಾಹನ ಮಿನಿ ಡಿಸೈಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾನುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಗಾಯಗೊಂಡ ಘಟನೆ ನಗರದ ಧಾರವಾಡ ಬೈಪಾಸ್ ರಸ್ತೆಯ ಹಳೆಯ ದನದ ಮಾರುಕಟ್ಟೆ ಸಮೀಪ ನಡೆದಿದೆ. ಗೋಕಾಕ ತಾಲೂಕಿನ ಮಾಲದಿನ್ನಿ ಗ್ರಾಮದ ಕಲ್ಲಪ್ಪ ವಡ್ಡರಗಾಂವಿ ಅವರಿಗೆ ಸೇರಿದ ಬೊಲೆರೋ ವಾಹನವು ಮೂಡಲಗಿಯಿಂದ ದನಗಳನ್ನು ತುಂಬಿಕೊಂಡು ಬೈಲಹೊಂಗಲದ ಹಳೆಯ ದನದ ಮಾರುಕಟ್ಟೆ ಕಡೆ ಸಾಗುತ್ತಿತ್ತು. …

Read More »