ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 80.33 ಕಿಮೀ ಉದ್ದದ ರಸ್ತೆ ಸುಧಾರಣೆಗೆ ಕೇಂದ್ರ ಮೂಲಸೌಕರ್ಯ ರಸ್ತೆ ನಿಧಿ ಯೋಜನೆ ಅಡಿಯಲ್ಲಿ 86.40 ಕೋಟಿ ರೂ. ಅನುದಾನ ಬಿಡುಗಡೆ ಕೇಂದ್ರ ಹೆದ್ದಾರಿ ಸಚಿವ ನಿತಿನ ಗಡ್ಕರಿ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು. ದೆಹಲಿಯ ಹೊಸ ಸಂಸದ ಭವನದಲ್ಲಿ ಗುರುವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಬೆಳಗಾವಿ ಲೋಕಸಭಾ ವ್ಯಾಪ್ತಿಯಡಿ ಕೈಗೊಳ್ಳಬೇಕಾದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು. …
Read More »ಸಾಂಬ್ರಾ ಗ್ರಾಮದಲ್ಲಿ ನೂತನ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ನಾಮಫಲಕ ಉದ್ಘಾಟನೆ
ಬೆಳಗಾವಿ: ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಸಾಂಬ್ರಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ಎನ್ನುವ ನಾಮಫಲಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಗ್ರಾಮಗಳ ಅಭಿವೃದ್ಧಿಯೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬುನಾದಿಯಾಗಿದ್ದು, ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದರು. ಸಾಂಬ್ರಾ …
Read More »ಐಐಐಟಿಯಲ್ಲಿ ಜರುಗಿದ ಪ್ರದರ್ಶನದಲ್ಲಿ ಉತ್ತಮ ಸಾಧನೆ ಮಾಡಿದ ಎಸ್ಜಿಬಿಐಟಿ ವಿದ್ಯಾರ್ಥಿಗಳು
ಬೆಳಗಾವಿ: ಧಾರವಾಡದ ಐಐಐಟಿಯಲ್ಲಿ ಈಚೆಗೆ ಜರುಗಿದ ನೈನ್ 2.0 ಪದವಿ ಮತ್ತು ಯೋಜನಾ ಪ್ರದರ್ಶನದಲ್ಲಿ ನಗರದ ಎಸ್ಜಿಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಸಿದ್ಧಪಡಿಸಿ ಪ್ರದರ್ಶಿಸಿದ್ದ ಯೋಜನೆಗಳಿಗೆ ತಲಾ 2 ಲಕ್ಷ ರೂ. ಅನುದಾನದೊಂದಿಗೆ ಮೊದಲ ಮತ್ತು ದ್ವಿತೀಯ ಅತ್ಯುತ್ತಮ ಯೋಜನಾ ಪ್ರಶಸ್ತಿ ಲಭಿಸಿದೆ. ಈ ಪ್ರದರ್ಶನದಲ್ಲಿ ಎಸ್ಜಿಬಿಐಟಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಒಟ್ಟು 10 ಯೋಜನೆಗಳು ಮೌಲ್ಯಮಾಪನ ಸಮಿತಿ ಮತ್ತು ವಿದ್ಯಾರ್ಥಿಗಳಿಂದ ಹೆಚ್ಚಿನ ಮೆಚ್ಚುಗೆ ಪಡೆದವು. ಅದರಲ್ಲಿ ‘ಲಘು ಸಂಚಾರಕ್ಕಾಗಿ ಪ್ಲಾಸ್ಟಿಕ್ ಮತ್ತು ಮರಳನ್ನು …
Read More »ಕಟ್ಟೀಮನಿ ಕಥೆ ಹೇಳೋಣ ಸ್ಪರ್ಧೆ ಸಂಪನ್ನ
ಬೆಳಗಾವಿ: ಹೇಳುವ, ಕೇಳುವ ಮತ್ತು ಬರೆಯುವ ಪರಂಪರೆಯಲ್ಲಿ ಆಧುನಿಕ ಕಾಲದ ಯುವ ಜನಾಂಗ ಸೇರಬೇಕು. ಸಂವಹನದ ಹೊಸ ಹೊಸ ಸಾಧ್ಯತೆಗಳನ್ನು ಮತ್ತು ಮಾರ್ಗಗಳನ್ನು ಕಂಡುಹಿಡಿಯುವ ಪ್ರಯತ್ನ ಮಾಡಬೇಕಿದೆ ಎಂದು ರಂಗತಜ್ಞ ಡಾ.ರಾಮಕೃಷ್ಣ ಮರಾಠೆ ಹೇಳಿದರು. ನಗರದ ಬಸವರಾಜ ಕಟ್ಟೀಮನಿ ಸಭಾ ಭವನದಲ್ಲಿ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ ಶುಕ್ರವಾರ ಪದವಿ ಮತ್ತು ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಟ್ಟೀಮನಿ ಕಥೆ ಹೇಳೋಣ ಎನ್ನುವ ಸ್ಪರ್ಧೆಯ ಅಂತಿಮ ಹಂತ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು …
Read More »ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ ಸೇರಿ ಮೂವರು ಅರೆಸ್ಟ್
ಬೆಂಗಳೂರು: ಹಣದಾಸೆಗೆ ಬಿದ್ದು 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ ಕರಾಳ ಕೃತ್ಯ ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ, ಆಕೆಯ ಮಲತಂದೆ ಹಾಗೂ ಮತ್ತೋರ್ವ ಮಹಿಳೆ ವಾಣಿ ಎಂಬಾಕೆಯನ್ನ ಬಂಧಿಸಿದ್ದಾರೆ. ಬಂಧಿತ ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ …
Read More »ಬೆಳಗಾವಿಯಲ್ಲಿ ಡಿಜೆ, ಲೌಡ್ಸ್ಪೀಕರ್ ಬಳಕೆಗೆ ಬ್ರೇಕ್: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ ಜಿಲ್ಲೆಯಲ್ಲಿ ಇನ್ನು ಮುಂದೆ ಡಿಜೆ ಮತ್ತು ಮಿತಿಮೀರಿದ ಶಬ್ದದ ಸಾಧನಗಳನ್ನು ಬಳಸುವಂತಿಲ್ಲ. ಸಾರ್ವಜನಿಕ ಶಾಂತಿ, ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಂತ ಹಬ್ಬ, ಮೆರವಣಿಗೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅತಿಯಾದ ಶಬ್ದವನ್ನು ಹೊರಸೂಸುವ ಡಿಜೆ ವ್ಯವಸ್ಥೆಗಳು ಮತ್ತು ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ್ ರೋಷನ್ ಅವರು ತಕ್ಷಣದಿಂದ …
Read More »ಪಿಕೆಪಿಎಸ್ ದಲ್ಲಿ ಸೇವೆ ಸಲ್ಲಿಸಿದ ಬಸಪ್ಪಾ ಶಿದ್ನಾಳ ನಿಧನ
ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ಹಿರಿಯರು ಶಿದ್ನಾಳ ಮನೆತನದ ಬಸಪ್ಪಾ ಬಾಳಪ್ಪ ಶಿದ್ನಾಳ ಶುಕ್ರವಾರ ನಿಧನರಾದರು. ಮೃತರು ಗ್ರಾಮದ ಮಡಿವಾಳೇಶ್ವರ ಪಿಕೆಪಿಎಸ್ ದಲ್ಲಿ 3ದಶಕಗಳ ಕಾಲ ಅವಿರತ ಸೇವೆ ಸಲ್ಲಿಸಿ ಗ್ರಾಮದ ರೈತರಿಗೆ ಉತ್ತಮ ಸೇವೆ ನೀಡಿ ಜನಮಾನಸದಲ್ಲಿ ಉಳಿದಿದ್ದರು. ಅತ್ಯಂತ ಸರಳ ಸ್ವಭಾವದವರಾಗಿದ್ದ ಇವರು ಗ್ರಾಮದ ಎಲ್ಲ ಕಾರ್ಯಗಳಲ್ಲಿ ತೊಡಗಿಕೊಂಡು ಮರಡಿ ಬಸವೇಶ್ವರ ದೇವಸ್ಥಾನದ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಇವರು ಶುಕ್ರವಾರ ನಿಧನರಾದರು. ಮೃತರಿಗೆ ಪತ್ನಿ, ಒರ್ವ ಮಗಳು …
Read More »ಅಡಿಗೆ ಅನಿಲ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಯಾವುದೆ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುತ್ತಿದೆ:-ಆಹಾರ ಸಚಿವ ಕೆಹೆಚ್. ಮುನಿಯಪ್ಪ
ವಿಧಾನ ಸೌಧ: ಅಡಿಗೆ ಅನಿಲ ಕುರಿತು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಇಂದು ವಿಧಾನ ಸೌಧದ ಕೊಠಡಿಯಲ್ಲಿ IOC ,BPC,HPC,GAIL ನ ಸಂಸ್ಥೆಗಳ ಅಧಿಕಾರಿಗಳು ಹಾಗೂ ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷರೊಂದಿಗೆ ಸಭೆಯನ್ನು ನಡೆಸಿದರು. ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್,ದಿವ್ಯ, ಮುರಳಿ …
Read More »ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮಡಿಕೇರಿ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. 35 ವರ್ಷ ಪ್ರಾಯದ ಕಾಡಾನೆ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿತ್ತು. ಸಿದ್ದಾಪುರ ಸಮೀಪ ಕಾಫಿ ಬೆಳೆಗಾರರೊಬ್ಬರನ್ನು ಇತ್ತೀಚೆಗೆ ಬಲಿ ತೆಗೆದುಕೊಂಡಿತ್ತು. ಗ್ರಾಮಸ್ಥರು ಕಾಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಬೆಳಗ್ಗೆಯಿಂದಲೇ 6 ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಸಿದ್ದಾಪುರ, ಪಾಲಿಬೆಟ್ಟ, ಅಮ್ಮತ್ತಿ ಸುತ್ತಮುತ್ತಲ ಕಾಫಿ …
Read More »ರಕ್ತದಾನದ ಮನೋಭಾವ ಬೆಳಸಿಕೊಳ್ಳಿ: ಡಾ.ರವೀಂದ್ರ
ರಾಮದುರ್ಗ: ರಕ್ತದಾನ ಜೀವ ರಕ್ಷಣೆಗಿರುವ ಶ್ರೇಷ್ಠದಾನವಾಗಿದ್ದು ತುರ್ತು ಪರಿಸ್ಥಿ ಸಂದರ್ಭಗಳಲ್ಲಿ ಮುಕ್ತವಾಗಿ ರಕ್ತದಾನ ಮಾಡುವ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಿ ಜೊತೆಗೆ ಸಾರ್ವಜನೀಕರಲ್ಲೂ ಅರಿವು ಮೂಡಿಸುವ ಕೆಲಸ ಮಾಡಿ ಎಂದು ಪ್ಯಾಥೋಲಾಜಿಸ್ಟ ಜನರಲ್ ಹಾಸ್ಪಿಟಲ್ ವೈದ್ಯರಾದ ಡಾ. ರವೀಂದ್ರ.ಜಿ. ಪಾಟೀಲ ಹೇಳಿದರು. ನಗರದ ಶ್ರೀಮತಿ ಐ. ಎಸ್ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ರೆಡಕ್ರಾಸ್ ಮತ್ತು ರಾಷ್ಟ್ರೀಯ ಸ್ವಯಂ ಸೇವಾ ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ …
Read More »
Laxmi News 24×7