Breaking News

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ಬೆಂಗಳೂರು: ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್‌  ವಿರುದ್ಧ ಎಫ್‌ಐಆರ್‌ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಚಿಕ್ಕೋಡಿ vs ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ ( ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್‌ ಅವರು 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ವಿಜಯಪುರ ತಂಡ ಗೆದ್ದ ಬಳಿಕ ಡಿಸಿಗೆ 500 ರೂಪಾಯಿ ಹಣ ನೀಡಿದ್ರು ಸಚಿವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ …

Read More »

ಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

ತಿರುವನಂತಪುರಂ: ಕೇರಳದ ʻತ್ರಿಶೂರ್‌ ಪೂರಂ ಉತ್ಸವʼಕ್ಕೆ  ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಮಂಗಳವಾರ (ಇಂದು) ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ  ಸಾವುಗಳನ್ನು ದೃಢಪಡಿಸಿದೆ. 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದಿಂದ ಶುರುವಾಗಿರುವ ತ್ರಿಶೂರ್ ಪೂರಂ ಉತ್ಸವದ ಭಾಗವಾಗಿ ಪಟಾಕಿಗಳನ್ನ ತಯಾರಿಸುತ್ತಿದ್ದ ಕಾರ್ಖಾನೆಯ ಶೆಡ್‌ನಲ್ಲಿ …

Read More »

ಬಸವಣ್ಣನವರ ಆದರ್ಶಗಳು ಯುವ ಪೀಳಿಗೆಗೆ ದಾರಿದೀಪ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಬಸವಣ್ಣನವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಅತ್ಯಂತ ಅಗತ್ಯವಾದ ದಾರಿದೀಪಗಳಾಗಿವೆ. ಅವರು ಕೇವಲ ಒಂದು ಧರ್ಮದ ಸ್ಥಾಪಕರಲ್ಲ, ಬದಲಾಗಿ ಒಂದು ಕ್ರಾಂತಿಕಾರಿ ಚಿಂತಕರು. ಸಮಾನತೆಗಾಗಿ 12 ನೇ ಶತಮಾನದಲ್ಲಿ ಹೋರಾಟ ಮಾಡಿ, ಜಗಕ್ಕೆ ಬೆಳಕಾದವರೂ ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು. ಮಹಾಂತೇಶ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಬಸವಣ್ಣನವರು …

Read More »

ವೈದ್ಯನ ಕೊ. .ಲೆ ಪ್ರಕರಣ – 24 ಗಂಟೆಯೊಳಗೆ ಆರೋಪಿಯ ಬಂಧನ 15 ಲಕ್ಷದ ಚಿನ್ನಾಭರಣ ಹಾಗೂ 50,000 ರೂ ನಗದು ವಶ

ಶಿರಸಿ: ಎರಡನೇ ಮದುವೆಯಾಗಲು ಸಜ್ಜಾಗಿದ್ದ ಆಯುರ್ವೇದ ವೈದ್ಯರೊಬ್ಬರನ್ನು ಹ. .ತ್ಯೆ. ಗೈದಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃ. ತ ಡಾ. ರಮೇಶ ಫಕೀರಪ್ಪ ಕಲಕುಟಕರ ಎಂಬುವವರು ಶಿರಸಿಯ ಕೆ.ಎಚ್.ಬಿ ಕಾಲೋನಿಯಲ್ಲಿ ವಾಸವಿದ್ದು ಆಯುರ್ವೇದ ವೈದ್ಯ ವೃತ್ತಿ ನಡೆಸುತ್ತಿದ್ದರು. ಐದು ತಿಂಗಳ ಹಿಂದೆಯಷ್ಟೇ ಇವರ ಪತ್ನಿ ನಿಧನರಾಗಿದ್ದರು. ಮನೆಯಲ್ಲಿ ಒಂಟಿಯಾಗಿದ್ದ ರಮೇಶ ಅವರು ಎರಡನೇ ವಿವಾಹವಾಗಲು ನಿರ್ಧರಿಸಿ, ಏಪ್ರಿಲ್ 20ರಂದು …

Read More »

ವೈದ್ಯ ರಮೇಶ ಕಲ್ಗುಟ್ಕರ ಹತ್ಯೆ ಆರೋಪಿ ಬಂಧನ: 15 ಲಕ್ಷ ರೂ ಚಿನ್ನಾಭರಣ,50,000 ರೂ ನಗದು ವಶ

ಶಿರಸಿ: ನಗರವನ್ನೇ ಬೆಚ್ಚಿಬೀಳಿಸಿದ್ದ,ದಿನಾಂಕ 19 ರಂದು ನಡೆದ ಆಯುರ್ವೇದ ವೈದ್ಯ ರಮೇಶ ಕಲಗುಟಕರ್ ಹತ್ಯೆ ಆರೋಪಿಯನ್ನು ಬಂಧಿಸಿ ಆತನಿಂದ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಂಜುನಾಥ ಪಿ ಎಲ್ (70)ಸಾ :ಪಡುಬೈಲ್ ಮಳಲೂರು ಶಿವಮೊಗ್ಗ ಎಂಬಾತನೆ ಬಂದಿತ ಆರೋಪಿಯಾಗಿದ್ದಾನೆ.ಆರೋಪಿಯಿಂದ 50,000 ನಗದನ್ನೂ ವಶಕ್ಕೆ ಪಡೆಯಲಾಗಿದೆ. ಎಸ್ ಪಿ ದೀಪನ್,ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿಇವರುಗಳ ನೇತೃತ್ವದಲ್ಲಿ ಡಿ ವೈ ಎಸ್ ಪಿ ಶ್ರೀಮತಿ ಗೀತಾ ಪಾಟೀಲ್, ಸಿ ಪಿ ಐ ಶಶಿಕಾಂತ್ …

Read More »

ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಎನ್​ಕೌಂಟರ್​ನಲ್ಲಿ ಸಾವು.!

ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಜಸೀಮ್ ಅಲಿಯಾಸ್ ಛೋಟು ಎಂಬ ಆರೋಪಿಗಾಗಿ ವಾರಗಟ್ಟಲೆ ಹುಡುಕಾಟ ನಡೆಸಿದ ನಂತರ ನಗರದ ಬಂತ್ಲಾ ಕಾಲುವೆ ಕಟ್ ಬಳಿ ಈ ಎನ್‌ಕೌಂಟರ್ ನಡೆದಿದೆ. ಮೃತ ಬಾಲಕಿಗೆ ಕೇವಲ ನಾಲ್ಕು ವರ್ಷ ವಯಸ್ಸು. ಏಪ್ರಿಲ್ 11 ರಂದು ಬಾಲಕಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ದಿನಗೂಲಿ ಕಾರ್ಮಿಕರಾಗಿದ್ದ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದಾಗ, …

Read More »

ಸೂಪರ್ ಮಾರ್ಕೆಟ್‌ನಲ್ಲಿ ಕಳ್ಳತನ ಮಾಡಿದ್ದ ಆರೋಪಿ 48 ಗಂಟೆಯೊಳಗೆ ಅರೆಸ್ಟ್

ಹೊನ್ನಾವರ: ಪಟ್ಟಣದ ಹೃದಯಭಾಗದಲ್ಲಿರುವ ಸೂಪರ್ ಮಾರ್ಕೆಟ್‌ನಲ್ಲಿ ನಗದು ಹಾಗೂ ಎನ್‌ವಿಆರ್ (NVR) ಕಳ್ಳತನ ಮಾಡಿದ್ದ ಆರೋಪಿಯನ್ನು ಹೊನ್ನಾವರ ಪೊಲೀಸರು ಕೇವಲ 48 ಗಂಟೆಗಳ ಕಾರ್ಯಾಚರಣೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊನ್ನಾವರ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಎ.ಆರ್.ಎಮ್ (ARM) ಸೂಪರ್ ಮಾರ್ಕೆಟ್‌ನಲ್ಲಿ ಕಳೆದ ಏಪ್ರಿಲ್ 16 ರಂದು ಕಳ್ಳತನ ನಡೆದಿತ್ತು. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿತ್ತು. ಉತ್ತರಕನ್ನಡ ಜಿಲ್ಲಾ ಪೊಲೀಸ್ …

Read More »

ಶಿವಾಪುರದ ಗ್ರಾಮದಲ್ಲಿ ಬಸವ ಜಯಂತಿ ಸಂಭ್ರಮ: ಹಾಸ್ಯ ರಸಮಂಜರಿ ಕಾರ್ಯಕ್ರಮದಲ್ಲಿ ಭಾಗಿ 

​”ಇವನಾರವ ಇವನಾರವ ಇವನಾರವನೆನ್ನದೆ, ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದು ಎನಿಸಯ್ಯ…” ​ಜಗಜ್ಯೋತಿ ಬಸವಣ್ಣನವರ ಜಯಂತಿಯ ಶುಭ ಸಂದರ್ಭದಲ್ಲಿ, ಇಂದು ಶಿವಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಹಾಸ್ಯ ರಸಮಂಜರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಲಾಯಿತು. ​ಬಸವಣ್ಣನವರ ತತ್ತ್ವ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪ. ಅಂತಹ ಮಹಾಪುರುಷರ ಸ್ಮರಣೆಯ ಜೊತೆಗೆ, ಹಾಸ್ಯ ಕಾರ್ಯಕ್ರಮದ ಮೂಲಕ ಗ್ರಾಮಸ್ಥರೆಲ್ಲರೂ ಒಗ್ಗೂಡಿ ನಲಿದ ಕ್ಷಣಗಳು ಮನಸ್ಸಿಗೆ ಮುದ ನೀಡಿದವು. ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಶಿವಾಪುರದ …

Read More »

ರಾಯಚೂರು: ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಯುವಕನನ್ನು ಕೂಡಿ ಹಾಕಿ ಹಲ್ಲೆ

ರಾಯಚೂರು: ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದಂತಹ ಘಟನೆ ರಾಯಚೂರು ನಗರದ ಐಡಿಎಂಸಿ ಲೇಔಟ್‌ನಲ್ಲಿ ನಡೆದಿದೆ. ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ರೂಮ್‌ನ ಡೋರ್ ಲಾಕ್ ಮಾಡಿದ ಯುವತಿ ಬಳಿಕ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ಮೆಹಬೂಬ್ ಯುವತಿಯಿಂದ ಹಲ್ಲೆಗೊಳಗಾದ ಯುವಕ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೆಹಬೂಬ್ ಕೆಲಸ ಮಾಡುತ್ತಿದ್ದ. ಆಗಿದ್ದೇನು? ಮೆಹಬೂಬ್ ಕೆಲಸ ಮಾಡುತ್ತಿದ್ದ ಆಸ್ಪತ್ರೆಗೆ ಯುವತಿಯೊಬ್ಬಳು ಚಿಕಿತ್ಸೆಗಾಗಿ ಬಂದಿದ್ದಳು. ಈ ವೇಳೆ ಮೆಹಬೂಬ್ ಆಕೆಗೆ ಚುಡಾಯಿಸಿದ್ದಾನೆ …

Read More »

ಬಾಗಲಕೋಟೆಯಲ್ಲಿ ಭೀಕರ ಹತ್ಯೆ : ಹೊಸ ಕಾರು ಖರೀದಿಸಿದ್ದ ಯುವಕನನ್ನ ಅದೇ ಕಾರಲ್ಲಿ ಸುಟ್ಟು ಕೊಂದ ಪಾಪಿಗಳು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಬಳಿ ಮನುಕುಲವೇ ತಲೆತಗ್ಗಿಸುವಂತಹ ಘಟನೆ ನಡೆದಿದೆ. ಹೊಸ ಕಾರು ಖರೀದಿಸಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕಾರಿನ ಸಮೇತ ಯುವಕನನ್ನು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆಗೀಡಾದ ವ್ಯಕ್ತಿಯ …

Read More »