Breaking News

ಬೆಳಗಾವಿಯಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ 29ನೇ ರಾಜ್ಯಮಟ್ಟದ ಜಾಂಬೋರೇಟ್ ಉದ್ಘಾಟನೆ (

ಬೆಳಗಾವಿ: “ಜಾಂಬೋರೇಟ್‌ನಲ್ಲಿ ಭಾಗವಹಿಸಿದ ಮಕ್ಕಳಲ್ಲಿ ಭವಿಷ್ಯದ ಭಾರತ ನಿರ್ಮಾಣದ ಕಣ್ಣುಗಳು ನನಗೆ ಕಾಣಿಸಿದವು. ನೀವು ನಿಮ್ಮ ತಂದೆ-ತಾಯಿಯ ಆಸ್ತಿ ಅಷ್ಟೇ ಅಲ್ಲ. ಇಡೀ ದೇಶದ ಆಸ್ತಿಯನ್ನಾಗಿ ನಿಮ್ಮನ್ನು ರೂಪಿಸುವ ಕೆಲಸವನ್ನು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಡುತ್ತದೆ. ಸಿಕ್ಕ ಅವಕಾಶವನ್ನು ಬಳಸಿಕೊಂಡು ಉತ್ತಮ ಭವಿಷ್ಯ ಮತ್ತು ಅತ್ಯುತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ” ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಕರೆ ಕೊಟ್ಟರು. ಬೆಳಗಾವಿ ತಾಲ್ಲೂಕಿನ ಹೊನಗಾ ಗ್ರಾಮದ ಬಳಿಯ ಫಿನಿಕ್ಸ್ ಶಾಲೆಯ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ …

Read More »

ಬ್ಯಾಂಕ್​ ಖಾತೆಯಲ್ಲಿದ್ದ 6,69,904 ರೂ. ಹಣ ಖಾತೆದಾರರಿಗೂ ಗೊತ್ತಿಲ್ಲದೆ ವರ್ಗಾವಣೆ

ರಾಯಚೂರು: ಬ್ಯಾಂಕ್​ ಖಾತೆಯಲ್ಲಿದ್ದ 6,69,904 ರೂ. ಹಣವು ಖಾತೆದಾರರ ಗಮನಕ್ಕೂ ಬಾರದೆ, ವರ್ಗಾವಣೆ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ರೈತ ಮಹಿಳೆ ನೀಡಿದ ದೂರಿನ ಮೇರೆಗೆ ರಾಯಚೂರು ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದ ರೈತ ಮಹಿಳೆ ಜ್ಯೋತಿ ಎಂಬುವರೇ ಹಣ ಕಳೆದುಕೊಂಡವರು. ಇವರು ಮಾನ್ವಿ ಪಟ್ಟಣದ ಕೆನರಾ ಬ್ಯಾಂಕ್​ ಖಾತೆಯಲ್ಲಿದ್ದ ಹಣ ವರ್ಗಾವಣೆ ಆಗಿರುವುದಾಗಿ ದೂರು ನೀಡಿದ್ದಾರೆ. …

Read More »

ನಾನು ಹೈಕಮಾಂಡ್ ಎಂದು ಹೇಳುವ ಧೈರ್ಯ ಖರ್ಗೆ ಅವರಿಗೆ ಇಲ್ಲ’: ಹೆಚ್.ವಿಶ್ವನಾಥ್

ಮೈಸೂರು: ‘ನಾನು ಹೈಕಮಾಂಡ್ ಎಂದು ಹೇಳುವ ಧೈರ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು. ಜಲದರ್ಶಿನಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಸೀನಿಯರ್, ರಾಜ್ಯದ ಸಿಎಂ ಕುರ್ಚಿ ವಿಚಾರವಾಗಿ ಸರಿಯಾಗಿ ನಿರ್ಧಾರ ಕೈಗೊಳ್ಳಲು ಅವರಿಗೆ ಆಗುತ್ತಿಲ್ಲ. ದಲಿತ ಸಿಎಂ ವಿಚಾರ ಬಂದಾಗ ಡಿ.ಕೆ. ಶಿವಕುಮಾರ್ ಅವರು, ಖರ್ಗೆ ಅವರು ಸಿಎಂ ಆದರೆ ನಾನು ಬಿಟ್ಟು ಕೊಡುವೆ ಅಂದಿದ್ದರು. …

Read More »

ಕೊಪ್ಪಳದಿಂದ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್​ನಲ್ಲಿ ಹಸುಗೂಸು ರವಾನೆ

ಕೊಪ್ಪಳ: ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹಸುಗೂಸನ್ನು ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್​ನಲ್ಲಿ ಹುಬ್ಬಳ್ಳಿ ಕಿಮ್ಸ್​ಗೆ ಕರೆದೊಯ್ಯಲಾಗಿದೆ. ಕುಕನೂರ ತಾಲೂಕಿನ ಗುತ್ತೂರ ನಿವಾಸಿಗಳಾದ ಮಲ್ಲಪ್ಪ ವಿಜಯಲಕ್ಷ್ಮೀ ದಂಪತಿಗೆ ಹತ್ತು ಗಂಟೆಗಳ ಹಿಂದೆ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ನವಜಾತ ಶಿಶುವನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಜಿಲ್ಲಾ ಆಸ್ಪತ್ರೆಯಲ್ಲಿ ಮಗು ತಪಾಸಣೆ ಮಾಡಿದ ಬಳಿಕ ಮಗುವಿನ ಕರಳುಗಳು ಹೊರಗಡೆ ಬಂದಿರುವ ಕಾರಣ ಮಗುವಿಗೆ …

Read More »

ಹಿರೇಕೊಡಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ

ಚಿಕ್ಕೋಡಿ:ಹಿರೇಕೊಡಿ ಗ್ರಾಮದ ಟಾಂಗ್ಯಾನಕೋಡಿ–ಚಿಕ್ಕೋಡಿ ಮುಖ್ಯ ರಸ್ತೆಯಿಂದ ಕಮ್ಮಾರ, ಸನದಿ, ಮಾಳಿ, ದೇವಡಕರ, ಕಾಗಲೆ, ಕರಗಾಂವೆ ಹಾಗೂ ಬಂಡಗರ ತೋಟದವರೆಗೆ ಸಂಪರ್ಕ ಕಲ್ಪಿಸುವ 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಇಂದು ಗ್ರಾಮಸ್ಥರು ಹಾಗೂ ಗ್ರಾಮ ಮುಖಂಡರು ಅಧಿಕೃತವಾಗಿ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಹುಕ್ಕೇರಿ ಅವರ ಸತತ ಪ್ರಯತ್ನದಿಂದ ಈ …

Read More »

ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ:ಸಚಿವ ಸಂತೋಷ ಲಾಡ್

ಚಿಕ್ಕೋಡಿ-“ಮರಾಠಾ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಿದೆ. ದೇಶದಲ್ಲಿ ಅತ್ಯಂತ ಕಟ್ಟ ಕಡೆಯ ಸ್ಥಾನದಲ್ಲಿ ಮರಾಠಾ ಸಮುದಾಯವಿದ್ದು, ಇದನ್ನು ಮೇಲೆತ್ತಲು ಸಂಘಟನೆ ಅತ್ಯವಶ್ಯಕವಾಗಿದೆ” ಎಂದು ಕಾರ್ಮಿಕ ಸಚಿವ, ಮರಾಠಾ ಸಮಾಜದ ಮುಖಂಡ ಸಂತೋಷ ಲಾಡ್ ಹೇಳಿದರು. ಚಿಕ್ಕೋಡಿ ಪಟ್ಟಣದ ಪದ್ಮಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ಚಿಕ್ಕೋಡಿ ತಾಲ್ಲೂಕು ಮರಾಠಾ ಸಮಾಜ ಬಾಂಧವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಛತ್ರಪತಿ ಶಿವಾಜಿ …

Read More »

ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ..

ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ…* ವಿಜಯಪುರ ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿವೆ, ಅದರಲ್ಲೂ ಪ್ರಮುಖವಾಗಿ ವಿಜಯಪುರ ನಗರದಲ್ಲಿರುವ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಮುಲ್ಕ ಮೈದಾನ್ ತೋಫ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಈ ಬಾರಿ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಳವಾಗಿದೆ. ಅದರಲ್ಲೂ ಈ ವಾರವಿಡಿ ಕ್ರೀಸ್ ಮಸ್ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. …

Read More »

ಒಂದು ಎಕರೆಗೆ 180 ಟನ್ ಕಬ್ಬು ಇಳುವರಿ,ಮಾಜಿ ಶಾಸಕ ಶಾಮ ಘಾಟಕೆಯವರ ಪ್ರಗತಿಪರ ಕೃಷಿ

ಚಿಕ್ಕೋಡಿ:ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಮಾಜಿ ಶಾಸಕ ಶಾಮ ಘಾಟಗೆಯವರ ಜಮೀನಿನಲ್ಲಿ ಎಕರೆಗೆ 180 ಟನ್ ಕಬ್ಬು ಬೆಳೆಸಿ ದಾಖಲೆ ನಿರ್ಮಿಸಿ,ಇತರ ರೈತರಿಗೆ ಮಾದರಿಯಾಗಿದ್ದಾರೆ. ಮಾಜಿ ಶಾಸಕ ಶಾಮ ಘಾಟಗೆಯವರು ಕೇವಲ ಒಬ್ಬ ರಾಜಕಾರಣಿ ಆಗದೆ, ಕೃಷಿಯಲ್ಲೂ ಅಷ್ಟೇ ಆಸಕ್ತಿಯಿಂದ ಮುತುವರ್ಜಿ ವಹಿಸಿ ಎಕರೆಗೆ 180 ಟನ್ ಕಬ್ಬು ಬೆಳೆದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ಎಕರೆ ಜಮೀನಿನಲ್ಲಿ 40 ಟನ್ ಹಸಿ ಮೆಣಸಿನಕಾಯಿ, ಒಂದು ಎಕರೆ ಜಮೀನಿನಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಹಂಪಿಯಲ್ಲಿ ಗುಡ್ಡ ಹತ್ತುವಾಗ ಜಾರಿಬಿದ್ದು ಗಾಯಗೊಂಡ ಫ್ರಾನ್ಸ್ ಪ್ರವಾಸಿ; 2 ದಿನಗಳ ಬಳಿಕ ರಕ್ಷಣೆ

ವಿಜಯನಗರ: ವಿಶ್ವವಿಖ್ಯಾತ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಪ್ರವಾಸಿಗನೊಬ್ಬ ಗುಡ್ಡ ಏರಲು ತೆರಳಿ ಕಾಲು ಜಾರಿ ಬಿದ್ದು, ಗಾಯಗೊಂಡ ಘಟನೆ ಮಹಾನವಮಿ ದಿಬ್ಬ ಸಮೀಪ ಡಿ.24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಫ್ರಾನ್ಸ್‌ನ ಬ್ರುನೊ ರೋಜರ್ (52) ಗಾಯಾಳು ಎಂದು ತಿಳಿದುಬಂದಿದೆ. ಬ್ರುನೊ ರೋಜರ್ ಅವರು ಮಹಾನವಮಿ ದಿಬ್ಬದ ಬಳಿಯ ಅಷ್ಟಭುಜ ಸ್ನಾನಗುಡ್ಡದ ಹಿಂಭಾಗಕ್ಕೆ ತೆರಳಿದ್ದಾರೆ. ಗುಡ್ಡ ಏರಲು ಮುಂದಾಗಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಕಾಲಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ …

Read More »