ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಹೊಸೂರು ರಸ್ತೆಯ ಲ್ಯಾಂಗ್ಫೋರ್ಡ್ ಟೌನ್ನಲ್ಲಿರುವ ಕಚೇರಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಶೋಕ್ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೇಕಲ್ನ ನಾರಾಯಣ ಆಸ್ಪತ್ರೆಗೆ ಸಿಜೆ ರಾಯ್ ಶವ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು? ಸಿ.ಜೆ.ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ ಕಂಪನಿಯನ್ನು ಹುಟ್ಟುಹಾಕಿದ್ದರು. ಪದೇ ಪದೆ ಐಟಿ ಇಲಾಖೆ …
Read More »ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್
ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ …
Read More »ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ
ಬೆಂಗಳೂರು: ಇತ್ತೀಚಿಗಷ್ಟೇ ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದಲ್ಲಿ ಹಿಂದೂಯೇತರರ ಪ್ರವೇಶ ನಿಷೇಧ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ. ಉಜ್ಜಯಿನಿ ಸಂತರು ಮತ್ತು ಹಿಂದೂ ಸಂಘಟನೆಗಳು ಮಂಡಿಸಿರುವ ನಿಲುವನ್ನು ಬೆಂಬಲಿಸುತ್ತಾ ಮಂದಿರ ಮಹಾಸಂಘವು ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ ಎಂದು ಧಾರ್ಮಿಕ ದತ್ತಿ ಇಲಾಖೆಗೆ ಆಗ್ರಹಿಸಿದೆ. ಕರ್ನಾಟಕ ಮಂದಿರ ಮಹಾಸಂಘದ ರಾಜ್ಯ ಸಂಯೋಜಕರಾದ ಶ್ರೀ.ಮೋಹನ್ ಗೌಡ ಅವರು, ಹಿಂದೂ ತೀರ್ಥಕ್ಷೇತ್ರಗಳು ಕೇವಲ ಪ್ರವಾಸಿ ಕೇಂದ್ರಗಳಲ್ಲ, ಬದಲಾಗಿ ಹಿಂದೂಗಳ ಪವಿತ್ರ ಮತ್ತು ಜಾಗೃತ …
Read More »ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆ
ಬೆಳಗಾವಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯನ್ನು ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲ ನಡೆಸಲಾಯಿತು. ಸಭೆಯಲ್ಲಿ ಪಂಚಿ ಗ್ಯಾರಂಟಿಗಳ ಅನುಷ್ಠಾನದ ಕುರಿತಾಗಿ ಪ್ರಗತಿ ಪರಿಶೀಲನೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳಲ್ಲಿ ಸಮಸ್ಯೆಗಳ ಕುರಿತು ಚರ್ಚೆ ಮಾಡಲಾಯಿತು, ಅನ್ನಭಾಗ್ಯ, ಗೃಹಜೋತಿ, ಗೃಹಲಕ್ಷ್ಮಿ, ಯುವ ನದಿ ,ಶಕ್ತಿ ಯೋಜನೆ, ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು ಅನ್ನಭಾಗ್ಯ ಯೋಜನೆ ಆಹಾರ ಇಲಾಖೆ ಅಕ್ಕಿ ವಿತರಣೆ ವಾಗುತ್ತಿದ್ದು ಫಲಾನವಿಗಳು ಇದನ್ನು …
Read More »ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್
ನವದೆಹಲಿ: ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ, ಖಾಸಗಿ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಬೇಕು ಅಂತ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳು …
Read More »ಕೇಂದ್ರ ಬಜೆಟ್ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು
ಬೆಂಗಳೂರು: ಫೆಬ್ರವರಿ 1 ರ ಭಾನುವಾರ ಕೇಂದ್ರ ಸರ್ಕಾರ ಬಜೆಟ್ ಮಂಡಿಸಲಿದೆ. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ `ಜಸ್ಟೀಸ್ ಫಾರ್ ಕರ್ನಾಟಕ’ ಅಂತ ಅಭಿಯಾನ ಶುರು ಮಾಡಿದ್ದಾರೆ. ಕರ್ನಾಟಕಕ್ಕೆ ನ್ಯಾಯ ಬೇಕು ಅಂತ ಕೇಂದ್ರದ ಮೇಲೆ ಒತ್ತಡ ಹೇರೋದು ಇದರ ಉದ್ದೇಶವಾಗಿದೆ. ತೆರಿಗೆ ಅನ್ಯಾಯ, ಅಭಿವೃದ್ಧಿಗೆ ಹಣಕಾಸು ಹಂಚಿಕೆ, ಬೆಂಗಳೂರು ಅಭಿವೃದ್ಧಿಗೆ ಅನುದಾನ ಸೇರಿ ಹಲವು ವಿಷಯ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಈ ಅಭಿಯಾನ ಆರಂಭಿಸಿದ್ದಾರೆ. ಒತ್ತಾಯಗಳೇನು? * ಬೆಂಗಳೂರಿನ …
Read More »ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ
ಬೆಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಲಂಚ ಪಡೆಯುವಾಗಲೇ ಪೊಲೀಸ್ ಇನ್ಸ್ಪೆಕ್ಟರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಗುರುವಾರ (ಜ.29) ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಒಟ್ಟು 5 ಲಕ್ಷ ರೂ. …
Read More »2 ದಿನಗಳ ಗದ್ದಲಕ್ಕೆ ತೆರೆ ಎಳೆದ ಸಭಾಪತಿ: ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಬಗ್ಗೆ ಚರ್ಚೆ ಆರಂಭ
ಬೆಂಗಳೂರು: ಟೀಕಿಸುವ ಭರದಲ್ಲಿ ಅಸಂವಿಧಾನಿಕ ಹೇಳಿಕೆ ನೀಡಿದ್ದ ಸಂಬಂಧ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು ರೂಲಿಂಗ್ ನೀಡುವ ಮೂಲಕ ಎರಡು ದಿನಗಳಿಂದ ನಡೆಯುತ್ತಿದ್ದ ಗದ್ದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಸದನ ಆರಂಭವಾಗುತ್ತಿದ್ದಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ನಮ್ಮನ್ನು ನಿಂದಿಸಿರುವ ಹರಿಪ್ರಸಾದ್ ಅವರು ಕ್ಷಮೆಯಾಚಿಸಬೇಕೆಂಬುದು ನಮ್ಮ ಒತ್ತಾಯವಾಗಿದೆ. ಹೀಗಾಗಿ, …
Read More »ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ!
ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ ರಾಯ್ ಅವರು ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಶೋಕ್ ನಗರ ಠಾಣಾ ವ್ಯಾಪ್ತಿಯ ಲ್ಯಾಂಗ್ ಫೋರ್ಡ್ ಟೌನ್ನಲ್ಲಿರುವ ತಮ್ಮದೇ ಕಚೇರಿಯಲ್ಲಿ ಎದೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸಿ.ಜೆ.ರಾಯ್, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಆನೇಕಲ್ನ ನಾರಾಯಣ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅಶೋಕ್ ನಗರ ಠಾಣೆ ಪೊಲೀಸರು ಭೇಟಿ …
Read More »ಚಿಕ್ಕೋಡಿ:ಕೆಎಲ್ಇ ಇಂಜಿನಿಯರಿಂಗ್ ವಿದ್ಯಾರ್ಥಿನಿಗಳು ನೇಟಬಾಲ್ – ಯುನಿವರ್ಸಿಟಿ ಬ್ಲೂ ಆಯ್ಕೆ
ಚಿಕ್ಕೋಡಿಯ ಕೆ. ಎಲ್. ಇ ಇಂಜಿನೀಯರಿಂಗ್ ಕಾಲೇಜಿನ ವಿಧ್ಯಾರ್ಥಿನಿಯರಾದ ನಿಶಾ ಮಾನಗಾಂವೆ, ಶೋಭಾ ಮುರಚಟ್ಟಿ, ಸಪ್ನಾ ಖೋತ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯದ ನೇಟಬಾಲ್ ಕ್ರೀಡೆಯಲ್ಲಿ 2025-26ನೇ ಸಾಲಿನ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವೆಂದು ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ತಿಳಿಸಿದ್ದಾರೆ. ಆಂದ್ರಪ್ರದೇಶದ ಕೃಷ್ಣಾ ವಿಶ್ವವಿದ್ಯಾಲಯ, ಮಚಲಿಪಟ್ಟಣಂದಲ್ಲಿ ಫೆಬ್ರುವರಿ 14 ರಿಂದ 18 ರ ವರೆಗೆ ಜರುಗಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ನೇಟಬಾಲ್ ಪಂದ್ಯಾವಳಿಯಲ್ಲಿ ಈ …
Read More »
Laxmi News 24×7