Breaking News

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

ಚಿಕ್ಕಬಳ್ಳಾಪುರ: ಪ್ರತಿಷ್ಟಿತ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ  ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ ಪದವಿ ವ್ಯಾಸಂಗ ಮಾಡುತ್ತಿದ್ದಳು. 14ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಆತ್ಮಹತ್ಯೆ …

Read More »

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

ಬೆಂಗಳೂರು: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ ಅಂತ ಮಾಜಿ ಸಚಿವ ಆರಗ ಜ್ಞಾನೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಲ್ಲಿ ಫಾರಿನ್ ಟ್ರಿಪ್ ಪಾಲಿಟಿಕ್ಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ  ಸೊನ್ನೆ ಅಭಿವೃದ್ಧಿ, ಈಗ ಕಿತ್ತಾಟ ಶುರುವಾಗಿದೆ. ಅದು ಎಲ್ಲಿಗೆ ಹೋಗಿ ನಿಲ್ಲುತ್ತೋ ಹೇಳೋಕೆ ಸಾಧ್ಯವಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಅಂತಾರೆ. ಹೈಕಮಾಂಡನ್ನ ಧಿಕ್ಕರಿಸೋ ಕೆಲಸ ನಡೆದಿದೆ. ಸಿಎಂ-ಡಿಸಿಎಂ  ಕುರ್ಚಿ ಹೋರಾಟದಲ್ಲಿ ಸಂಪೂರ್ಣವಾಗಿ ಕರ್ನಾಟಕ …

Read More »

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್‌ ರಾಜಣ್ಣ  ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ಮಹಿಳಾ ಮೀಸಲಾತಿ ಬಂದ್ರೆ ಪುತ್ರಿ ರಶ್ಮಿ ರಾಜಣ್ಣ  ರನ್ನ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಸಿಎಂ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿ, ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತೆ ಅಂತ ಅಂದುಕೊಂಡ್ರೆ ಸುಳ್ಳು. ಸಿದ್ದರಾಮಯ್ಯ  ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ, ಬಜೆಟ್ …

Read More »

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿಗಳ  ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಹೈಕೋರ್ಟ್‌ಗೆ ಅನುಮತಿ ನೀಡಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಮಲಿಕ್ ಮಝಾರ್ ಸುಲ್ತಾನ್ ವಿರುದ್ಧ ಯುಪಿ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ದೇಶಾದ್ಯಂತ ಟ್ರಯಲ್ ಕೋರ್ಟ್‌ಗಳಲ್ಲಿ ನ್ಯಾಯಧೀಶರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಗಾಗ್ಗೆ ಇಂತಹ ಆದೇಶಗಳನ್ನು ಹೊರಡಿಸುತ್ತಿದೆ. ಕರ್ನಾಟಕದಲ್ಲಿ ಸಿವಿಲ್ ಜಡ್ಜ್‌ಗಳ …

Read More »

ಗೋಕಾಕ:ಕಾರಿನಲ್ಲಿ ರಿವಾಲ್ವರ್ ಇಟ್ಟುಕೊಂಡು ಓಡಾಡ್ತಿದ್ದವನು ಲಾಕ್

ಬೆಳಗಾವಿ ಜಿಲ್ಲೆ ಗೋಕಾಕ್ ನಗರತ ಕೋರ್ಟ್ ಸರ್ಕಲ್ ನಲ್ಲಿ ಪತ್ತೆ. ಅನುಮಾನಾಸ್ಪದ ಕಾರನ್ನ ತಡೆದು ಗೋಕಾಕ್ ಪೊಲೀಸರಿಂದ ಪರಿಶೀಲನೆ. ಆಗ ಲೈಸನ್ಸ್ ರಿವಾಲ್ವಾರ್ ಕಾರ್ ಡ್ಯಾಶ್ ಬೋರ್ಡ್ ನಲ್ಲಿ ಪತ್ತೆ. ಕಾರ್ ಚಾಲಕ ಬಾಗಲಕೋಟೆ ಜಿಲ್ಲೆ ನಿವಾಸಿ ರಮೇಶ ಕೇಸರಗೊಪ್ಪ ಚೌವಾಣ 52 ಅರೇಸ್ಟ್. ರಿವಾಲ್ವಾರ್ ಲೈಸನ್ಸ್ ಬಾಗಲಕೋಟೆ ಜಿಲ್ಲೆಗೆ ಮಾತ್ರ ಸಿಮೀತ. ರಿವಾಲ್ವಾರ್ ನವೀಕರಣ ಮುಗಿದಿದ್ದರೂ ಪೊಲೀಸ್ ಠಾಣೆ ಜಮಾ ಮಾಡಿಲ್ಲ. ಹೀಗಾಗಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲು. …

Read More »

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ …

Read More »

ಇವರ ಸಾಧನೆ ಸಾಲದ ಹೊರೆ ಅಷ್ಟೇ

ವಿಜಯಪುರ: ರಾಜ್ಯ ಸರ್ಕಾರ 1000 ದಿನಗಳ ಸಂಭ್ರಮ ಆಚರಿಸಿದೆ. ಆದರೆ ಇವರ ಸಾಧನೆ ಕೇವಲ ಸಾಲದ ಹೊರೆ ಅಷ್ಟೇ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, 1000 ದಿನ ರಾಜ್ಯ ಸರ್ಕಾರ ಪೂರೈಸಿದೆ ಎಂದು ಸಂಭ್ರಮಿಸುತ್ತಿದ್ದಾರೆ. ಪ್ರತಿನಿತ್ಯ ಗದ್ದುಗೆ ಗುದ್ದಾಟ ನಡೆಯುತ್ತಿದೆ. ಒಂದೆ ಕಡೆ ರಾಜ್ಯ ಸೊರಗಿ ಹೋಗಿದೆ. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ …

Read More »

ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ

ವಿಜಯನಗರ: ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತೊಬ್ಬ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬವರು ಗ್ರಾ.ಪಂ. ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮನೆ ನಿರ್ಮಾಣಕ್ಕಾಗಿ ಇ-ಸೊತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ …

Read More »

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

ವಿಜಯಪುರ: ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ, ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರನಂತೆ ವಸೂಲಿಗೆ ನಿಂತಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಯತೀಂದ್ರ ಕೂಡ ವಸೂಲಿ ಕಂಪನಿಯಾಗಿದ್ದಾನೆ. ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ. ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರ ಹಾಗೆ ವಸೂಲಿಗೆ ನಿಂತಿದ್ದಾನೆ. ವಿಜಯೇಂದ್ರ ಕಡೆ ರಾತ್ರಿ ಟ್ರೇನಿಂಗ್ ತೆಗೆದುಕೊಳ್ಳುತ್ತಾನಂತೆ. ಹೇಗೆ …

Read More »

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

ಬೀದರ್: ಮುಖ ತೊಳೆಯಲು ಹೋಗಿ ಕಾಲು ಜಾರಿ ನೀರುಪಾಲಾಗಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆಯೂ ಜಲಸಮಾಧಿಯಾಗಿರುವ ಘಟನೆ ಬೀದರ್‌ನ  ಹಾಲಳ್ಳಿ ಗ್ರಾಮದ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ನಡೆದಿದೆ. ಮೃತರನ್ನು ಹಳ್ಳೆಖೇಡ್(ಬಿ) ಗ್ರಾಮದ ತಂದೆ ಈಶಪ್ಪ (50) ಮತ್ತು ಮಗ ಅಮರೇಶ (23) ಎಂದು ಗುರುತಿಸಲಾಗಿದೆ. ತಂದೆ-ಮಗ ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ, ವಾಪಸ್ ಹಳ್ಳಿಖೇಡ್‌ಗೆ ಹೋಗುತ್ತಿದ್ದರು. ಈ ವೇಳೆ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ಮಗ ಮುಖ ತೊಳೆಯಲು …

Read More »