Breaking News

ಇಂಗಳೇಶ್ವರದಿಂದ ಬಿಸನಾಳಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳು; ಎಚ್ಚರಿಕೆ ನೀಡಿದ ರೈತರು

ವಿಶ್ವಗುರು ಬಸವಣ್ಣನವರ ಜನ್ಮಭೂಮಿ ಇಂಗಳೇಶ್ವರದಿಂದ ಬಿಸನಾಳಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆರೋಪಿಸಿದರು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಖಂಡ ಕರ್ನಾಟಕ ರೈತಸಂಘದ ವತಿಯಿಂದ ಪತ್ರಿಕಾಗೋಷ್ಠಿ ಯಲ್ಲಿ‌ ಮಾತನನಾಡಿದ ಅವರು ಮಳೆಗಾಲದಲ್ಲಿ ರಸ್ತೆ ಕೆಸರು ಗದ್ದೆಯಾಗಿ ಮಾರ್ಪಡುವುದರಿಂದ ರೈತರು, ವಾಹನ ಸವಾರರು ಹಾಗೂ ಗ್ರಾಮಸ್ಥರು …

Read More »

ಚಲಿಸುವ ರೈಲಿನಿಂದ ಬಿದ್ದ ಮಗು: ಚೈನ್ ಎಳೆದರೂ ನಿಲ್ಲದ ರೈಲು, ರೈಲ್ವೆ ಇಲಾಖೆ ವಿರುದ್ಧ ಪ್ರಯಾಣಿಕರ ತೀವ್ರ ಆಕ್ರೋಶ!

​ಕೋಲ್ಕತಾ: ಭಾರತೀಯ ರೈಲ್ವೆಯ ಭದ್ರತೆ ಮತ್ತು ತುರ್ತು ಸೇವೆಗಳ ಕಾರ್ಯಕ್ಷಮತೆಯನ್ನು ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗುವೊಂದು ಕೆಳಗೆ ಬಿದ್ದರೂ, ಪ್ರಯಾಣಿಕರು ಎಷ್ಟೇ ಬಾರಿ ತುರ್ತು ಚೈನ್ ಎಳೆದರೂ ರೈಲು ನಿಲ್ಲದೆ ಕಿಲೋಮೀಟರ್‌ಗಟ್ಟಲೆ ಮುಂದೆ ಸಾಗಿದ ಘಟನೆ ಜಲ್ಪೈಗುರಿ-ರಾಮನಗರ ಮಾರ್ಗದಲ್ಲಿ ಸಂಭವಿಸಿದೆ. ​ಘಟನೆಯ ವಿವರ: ​ಪಶ್ಚಿಮ ಬಂಗಾಳದ ಜಲ್ಪೈಗುರಿ ಮತ್ತು ರಾಮನಗರ ನಡುವೆ ರೈಲು ಸಂಚರಿಸುತ್ತಿದ್ದಾಗ, ತಾಯಿಯ ಕೈಯಲ್ಲಿದ್ದ ಮಗು ಆಕಸ್ಮಿಕವಾಗಿ ಜಾರಿ ಕೆಳಗೆ …

Read More »

ಟ್ಯಾಂಕ‌ರ್ ಮೂಲಕ ನೀರು ಪೂರೈಸಿ,ಅಧಿಕಾರಿಗಳಿಗೆ ಶಾಸಕ ಐಹೊಳೆ ಸೂಚನೆ

ಚಿಕ್ಕೋಡಿ: ನಾಗರಮುನ್ನೋಳಿ ಹೋಬಳಿಯ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಅವಶ್ಯವಿದ್ದಲ್ಲಿ ಕೊಳವೆಬಾವಿ ಇನ್ನುಳಿದೆಡೆ ಟ್ಯಾಂಕ‌ರ್ ಮೂಲಕ ಜನರಿಗೆ ನೀರು ಪೂರೈಸಬೇಕು ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅಧಿಕಾರಿಗಳಿಗೆ ಸೂಚಿಸಿದರು. ಚಿಕ್ಕೋಡಿ ಪಟ್ಟಣದ ಮಿನಿವಿಧಾನಸೌಧದ ಸಭಾಭವನದಲ್ಲಿ ತಾಲ್ಲೂಕಿನ‌ ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯ ಕುಡಿಯುವ ನೀರು, ಮೇವು ಪೂರೈಕೆ ಹಾಗೂ ಹವಾಮಾನ ವೈಪರಿತ್ಯ ಕುರಿತು ಕರೆದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೋಬಳಿ ವ್ಯಾಪ್ತಿಯ ಜೈನಾಪೂರ …

Read More »

ಮಾನವೀಯತೆ ಮೆರೆದ ಸಿಪಿಐ ಜಾವೀದ್ ಮುಶಾಪುರೆ: ವೃದ್ಧನಿಗೆ ಮತ್ತೆ ಆಸರೆಯಾದ ವೃದ್ಧಾಪ್ಯ ವೇತನ!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮೋದಗಾ ಗ್ರಾಮದ 80 ವರ್ಷದ ವೃದ್ಧನೊಬ್ಬನ ಕಣ್ಣೀರ ಕಥೆಗೆ ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ಅವರು ಆಸರೆಯಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿದ್ದ ಪಿಂಚಣಿ ಹಣವನ್ನು ಪೋಲಿಸ್ ಅಧಿಕಾರಿಗಳ ಮುತುವರ್ಜಿಯಿಂದಾಗಿ ಮತ್ತೆ ದೊರೆಯುವಂತಾಗಿದ್ದು, ಇಲಾಖೆಯ ಈ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮೋದಗಾ ಗ್ರಾಮದ ನಿವಾಸಿ 80 ವರ್ಷದ ಪುಂಡಲಿಕ ಜೋತೆಪ್ಪ ಲೋಹಾರ್ ಎಂಬುವವರು ಕಳೆದ ಹಲವು …

Read More »

ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು; ಬಿಸಿಲಿಗೆ ಕುಸಿದು ಬಿದ್ದಿರುವ ಶಂಕೆ

ರಾಯಚೂರು: ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ್ (45) ಮೃತ ವ್ಯಕ್ತಿ. ಬಿಸಿಲಿನ ತಾಪಮಾನಕ್ಕೆ ದಣಿದು, ವಿಶ್ರಾಂತಿ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಾಪಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಹುಸೇನಪ್ಪ ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ಬರುವಾಗ ದಾರಿಯಲ್ಲಿ ಕುಸಿದು ಬಿದ್ದಿದ್ದಾರೆ. …

Read More »

ಪೊಲೀಸ್ ಪೇದೆ ಮದುವೆಗೆ ಮುಧೋಳಕ್ಕೆ ಓಡೋಡಿ ಬಂದ ರಾಜ್ಯಪಾಲ ಗೆಹ್ಲೋಟ್…!

ಬೆಳಗಾವಿ : ಸದಾಕಾಲವೂ ತಮ್ಮ ಬೆನ್ನೆಲುಬಾಗಿ ನಿಂತು‌ ಭದ್ರತೆ ಒದಗಿಸುವ ಸಿಬ್ಬಂದಿ ಮದುವೆಗೆ ರಾಜ್ಯಪಾಲರು ಓಡೋಡಿ ಬಂದು ಆಶಿರ್ವದಿಸಿದ ಅಪರೂಪದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭದ್ರತಾ ಸಿಬ್ಬಂದಿ ಪೊಲೀಸ್ ಕಾನ್ಸ್ಟೇಬಲ್ ಪರಮಾನಂದ ‌ಮಂಟೂರ್ ಮದುವೆ ಕಾರ್ಯಕ್ರಮಕ್ಕೆ ಸ್ವತಃ ರಾಜ್ಯಪಾಲರೇ ಆಗಮಿಸಿ ಶುಭಾಶಯ ತಿಳಿಸಿದ ಅಪರೂಪದ ‌ಘಟನೆ ಕಳೆದ ಶನಿವಾರ ನಡೆದಿದೆ. ಮುಧೋಳ ‌ಪಟ್ಟಣದಲ್ಲಿ ನಡೆದ ಪರಮಾನಂದ ಮಂಟೂರ್ ಅವರ ಮದುವೆ ಸಮಾರಂಭಕ್ಕೆ ಬೆಂಗಳೂನಿಂದ ಬೆಳಗಾವಿಗೆ …

Read More »

ಟಿಳಕವಾಡಿ ರೈಲ್ವೆ ಗೇಟ್ ಬಳಿಯ ಬ್ಯಾರಿಕೇಡ್ ತೆರವಿಗೆ ಗೃಹಸಚಿವರಿಗೆ ಮನವಿ

ಬೆಳಗಾವಿಯ ಟಿಳಕವಾಡಿಯ ಮೊದಲ ರೈಲ್ವೆ ಗೇಟ್ ಬಳಿ ಅಳವಡಿಸಲಾಗಿರುವ ಬ್ಯಾರಿಕೇಡ್‌ಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ‘ಬ್ಯಾರಿಕೇಡ್ ಹಠಾವೊ ಸಂಘಟನೆ’ಯು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿತು. ಗೃಹಸಚಿವರು ಬೆಳಗಾವಿ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ಸುಭಾಷ್ ಘೋಲಪ್ ಅವರು ಸಚಿವರನ್ನು ಭೇಟಿ ಮಾಡಿದರು. ಈ ಪ್ರದೇಶದ ಬ್ಯಾರಿಕೇಡ್‌ಗಳನ್ನು ಕೂಡಲೇ ತೆರವುಗೊಳಿಸಿ, ಇಬ್ಬರು ಪೊಲೀಸರನ್ನು ನಿಯೋಜಿಸಬೇಕು ಹಾಗೂ ಖಾಸಗಿ ಸಂಕೀರ್ಣದ ಮುಂದಿರುವ ಅಡೆತಡೆಗಳನ್ನು ನಿವಾರಿಸಬೇಕು ಎಂದು ಸುಭಾಷ್ ಘೋಲಪ್ …

Read More »

ಕರ್ನಾಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳಕರರಿಗೆ ಪಿತೃಶೋಕ

ಕರ್ನಾಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳಕರರಿಗೆ ಪಿತೃಶೋಕ; ಡಾ. ಅಂಜಲಿತಾಯಿ ನಿಂಬಾಳಕರರ ಮಾವರ ನಿಧನ. : ಕರ್ನಾಟಕ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಮಾನ್ಯ ಶ್ರೀ ಹೇಮಂತ ನಿಂಬಾಳಕರ ಅವರ ತಂದೆ ಹಾಗೂ ಖಾನಾಪೂರದ ಮಾಜಿ ಶಾಸಕಿ ಮತ್ತು ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ಹೇಮಂತ ನಿಂಬಾಳಕರ ಅವರ ಮಾವರಾದ ಶ್ರೀ ಮಧುಕರರಾವ್ ಬಾಳವಂತರಾವ್ ನಿಂಬಾಳಕರ (ವಯಸ್ಸು 87 ವರ್ಷ) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ …

Read More »

ಗೋಮಾತಾ ಗೌರವ ದಿನದ ಪ್ರಯುಕ್ತ ಗೋ ಸಂರಕ್ಷಣೆಗಾಗಿ ಹಸುವಿನ ಸಮೇತ ಪ್ರತಿಭಟನೆ

 ಬೆಳಗಾವಿ : ಗೋಮಾತಾ ಗೌರವ ದಿನದ ಪ್ರಯುಕ್ತ ನಗರದಲ್ಲಿ ಸೋಮವಾರ ಗೋ ರಕ್ಷಣೆಯ ಜಾಗೃತಿಗಾಗಿ ಗೋವು ಸಮೇತ ರ‌್ಯಾಲಿ ಕೈಗೊಳ್ಳಲಾಯಿತು. ನಗರದ ಅಂಬೇಡ್ಕರ ಉದ್ಯಾನದಿಂದ ಆರಂಭಗೊಂಡ ಗೋ ಮಾತಾ ಗೌರವ ಅಭಿಯಾನ ಸಂಘಟನೆಯ ನೇತೃತ್ವದ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದ ಗೋ ಭಕ್ತರು, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಚನ್ನಮ್ಮ ವೃತ್ತದ ಮೂಲಕ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತೆರಳಿ ಮನವಿ ಸಲ್ಲಿಸಿದರು. ಗೋವುಗಳಿಗೆ ರಾಷ್ಟ್ರೀಯ ಗೌರವದ ಅಧಿಕೃತ ಸ್ಥಾನ ನೀಡಬೇಕು. ದೇಶಾದ್ಯಂತ ಗೋ ಹತ್ಯೆ …

Read More »

ಹಾಸ್ಯ ಬರಹಗಾರ ನರಸಿಂಹಮೂರ್ತಿಗೆ ಸನ್ಮಾನ

ಬೆಳಗಾವಿ: ಖ್ಯಾತ ಹಾಸ್ಯ ಬರಹಗಾರ ಎಂ.ಎಸ್.ನರಸಿಂಹ ಮೂರ್ತಿ ಅವರನ್ನು ರಂಗಸೃಷ್ಟಿ ಸಾಂಸ್ಕೃತಿಕ ಸಂಘಟನೆ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು. ಕನ್ನಡಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ರಂಗಸೃಷ್ಟಿ ಪದಾಧಿಕಾರಿಗಳು ನರಸಿಂಹಮೂರ್ತಿಯವರನ್ನು ಸನ್ಮಾನಿಸಿದರು. ಇದಕ್ಕೂ ಮೊದಲು, ಮಂಗಳವಾರ ಪ್ರದರ್ಶನವಾಗಲಿರುವ ಎಂ.ಎಸ್ ನರಸಿಂಹ ಮೂರ್ತಿ ಅವರ ರಚನೆಯ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕದ ರಂಗತಾಲೀಮು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸೆಕೆಂಡ್ ಹ್ಯಾಂಡ್ ಸದಾಶಿವ ಅಮೇರಿಕದಲ್ಲಿ ಅತ್ಯಂತ ಯಶಸ್ವಿಯಾಗಿ ಪ್ರದರ್ಶನ ಕಂಡ ನಾಟಕವಾಗಿದ್ದು, ರಂಗಸೃಷ್ಟಿ ತಂಡದ ಕಲಾವಿದರು ಮನೋಜ್ಞವಾಗಿ ಅಭಿನಯಿಸಿದ್ದಾರೆ. …

Read More »