ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಭಾರೀ ದುರಂತ ತಪ್ಪಿದೆ. ಬಸ್ನಲ್ಲಿ ಭರ್ತಿಯಾಗಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ …
Read More »ತೀವ್ರ ಕುತೂಹಲ ಮೂಡಿಸಿ ಚರ್ಚಗೆ ಗ್ರಾಸವಾದ ಶಾಸಕ ಯತ್ನಾಳರ ನೂತನ ಪ್ರಾದೇಶಿಕ ಪಕ್ಷ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ ಉಚ್ಚಾಟನೆಯಾಗಿ 13 ತಿಂಗಳು ಗತಿಸಿವೆ. ಶಾಸಕ ಯತ್ನಾಳರನ್ನು ಬಿಜೆಪಿ ಪಕ್ಷಕ್ಕೆ ಮರಳಿ ತೆಗೆದುಕೊಳ್ಳುವ ಒತ್ತಡ ಇದ್ದೆ ಇದೆ. ಆದ್ರೆ ಬಿಜೆಪಿ ಹೈಕಮಾಂಡ್ ಮೌನಕ್ಕೆ ಶರಣಾಗಿದೆ. ಆದ್ರೆ ಇತ್ತ ಯತ್ನಾಳ ಹೊಸ ಪಕ್ಷದ ಘೋಷಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಈ ಪ್ರಕಟಣೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಹಾಗಾದರೆ ಯತ್ನಾಳ ಹೊಸ ಪಕ್ಷಕ್ಕೆ ಸೇರ್ಪಡೆಗೊಳ್ಳುವ ನಾಯಕರು ಯಾರು? ಪಕ್ಷದ ಸಿದ್ಧಾಂತಗಳ ಕುರಿತು …
Read More »ಗೋಕಾಕ ನಗರದಲ್ಲಿ ಪಾಳುಬಿದ್ದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ
ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಪಾಳುಬಿದ್ದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿದೆ. ಗೋಕಾಕ ನಗರದ ಬೆಣಚಿನಮರಡಿ ಕ್ರಾಸ್ ಬಳಿ ಪಾಳುಬಿದ್ದ ಚರಂಡಿಯಲ್ಲಿ ಸುಮಾರು 30ರಿಂದ 40 ವರ್ಷದೊಳಗಿನ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಸ್ಥಳೀಯರು ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ, ಗೋಕಾಕ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …
Read More »ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ : ಈ ಬಾರಿ ಮಿತಿ ಮೀರಿದ ಮಳೆ ಗಾಳಿ ಬೀಸುವ ಸಾಧ್ಯತೆ..
ಪರಿಸರ ಮತ್ತು ಜಾಗತಿಕ ವಿದ್ಯಮಾನಗಳ ಬಗ್ಗೆ ಕೋಡಿಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಂಡ್ಯಜಿಲ್ಲೆಯ ಕಿಕ್ಕೇರಿಯಲ್ಲಿ ಮಾತನಾಡಿರುವ ಅವರು, ‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ ಎಂಬ ಭವಿಷ್ಯ ನುಡಿದಿದ್ದಾರೆ. ಪ್ರಕೃತಿಯ ಮುನಿಸು ಈ ಬಾರಿ ಮಿತಿಮೀರಲಿದ್ದು, ಗಾಳಿ ಮತ್ತು ಮಳೆಯ ಆರ್ಭಟದಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ವಾಯು ಮಾಲಿನ್ಯ ಅಥವಾ ವಾತಾವರಣದ ಬದಲಾವಣೆಯಿಂದಾಗಿ ಉಸಿರಾಟದ ತೊಂದರೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ …
Read More »ಚೈನೀಸ್ ಫುಡ್ ಅಂಗಡಿಗಳಲ್ಲಿ ಟೆಸ್ಟಿಂಗ್ ಪೌಡರ್ ಬಳಕೆ ವಿರುದ್ಧ ಧ್ವನಿ ಸಂಘಟನೆ ಆಕ್ರೋಶ
ವಿಷಕಾರಿ ರಾಸಾಯನಿಕ ಬಳಕೆ ನಿಲ್ಲಿಸುವಂತೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ಹುಕ್ಕೇರಿ ಪಟ್ಟಣದ ಚೈನೀಸ್ ಫುಡ್ ಅಂಗಡಿಗಳಲ್ಲಿ ಟೆಸ್ಟಿಂಗ್ ಪೌಡರ್ ಹಾಗೂ ರಾಸಾಯನಿಕ ಬಣ್ಣಗಳ ಬಳಕೆಯ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪದಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಕೆಲವು ಪ್ರಮುಖ ಚೈನೀಸ್ ಫುಡ್ ಅಂಗಡಿಗಳಿಗೆ ಭೇಟಿ ನೀಡಿದ ಪದಾಧಿಕಾರಿಗಳು, ಆಹಾರದಲ್ಲಿ ವಿಷಕಾರಿ ರಾಸಾಯನಿಕ ಪದಾರ್ಥಗಳ ಬಳಕೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಇಂತಹ ಪದಾರ್ಥಗಳನ್ನು ತಕ್ಷಣ ನಿಲ್ಲಿಸಬೇಕೆಂದು ಅಂಗಡಿ ಮಾಲೀಕರಿಗೆ …
Read More »ಕ್ರೂಜರ್-ಬೈಕ್ ನಡುವೆ ಭೀಕರ ಡಿಕ್ಕಿ; ಇಬ್ಬರು ಸವಾರರಿಗೆ ಗಂಭೀರ ಗಾಯ
ಜೋಯಿಡಾ: ತಾಲೂಕಿನ ಗುಂದ ಗ್ರಾಮದ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಘಟಗಿಯಿಂದ ಉಳವಿ ದೇವಸ್ಥಾನಕ್ಕೆ ಭೇಟಿ ನೀಡಿ ಎರಡು ಬೈಕ್ಗಳಲ್ಲಿ ನಾಲ್ವರು ಸ್ನೇಹಿತರು ಹಿಂತಿರುಗುತ್ತಿದ್ದರು. ಈ ವೇಳೆ ಗುಂದ ರಸ್ತೆಯಲ್ಲಿ ಎದುರಿನಿಂದ ಬಂದ ಕ್ರೂಜರ್ ಟ್ರಾಕ್ಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ವಿನಾಯಕ ಮತ್ತು ಆಕಾಶ …
Read More »ಹುಬ್ಬಳ್ಳಿಯಲ್ಲಿ ಹೆಚ್ಚಾದ ರೋಡ್ ರೋಮಿಯೋಗಳ ಹಾವಳಿ
ಹುಬ್ಬಳ್ಳಿ: ರಸ್ತೆಯಲ್ಲಿ ಹೋಗೋ ಯುವತಿಯರ ಅಂಗಾಗ ಮುಟ್ಟಿ ಹೋಗ್ತಿರೋ ದುರುಳರು ಈ ಹಿಂದೆ ಪ್ಲೈಯಿಂಗ್ ಕಿಸ್ ನೀಡೋ ವಿಡಿಯೋ ವೈರಲ್ ಆಗಿದ್ದವು ಇದೀಗ ಹಾಡಹಗಲೇ ಯುವತಿಯರನ್ನು ಟಚ್ ಮಾಡಿ ಹೋಗ್ತಿರೋ ಕೆಲ ಪುಂಡರು ಬೈಕ್ ನಲ್ಲಿ ಬಂದು ಅಂಗಾಂಗ ಮುಟ್ಟಿ ಎಸ್ಕೇಪ್ ಆಗ್ತಿರೋ ದುರುಳರು ಕೆಲ ದಿನಗಳ ಹಿಂದೆ ಹುಬ್ಬಳ್ಳಿ ನಗರದಲ್ಲಿ ನಡೆದ ಸಿಸಿಟಿವಿ ದೃಶ್ಯಗಳು ವೈರಲ್ ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ನಡೆದಿರೋ ಘಟನೆ ರಸ್ತೆಯಲ್ಲಿ ಹೋಗ್ತಿರೋ ಯುವತಿ …
Read More »ಸಿದ್ದರಾಮಯ್ಯರ ರಾಜಕೀಯದ ಅನಿವಾರ್ಯತೆ ಬಗ್ಗೆ ಜಾರಕಿಹೊಳಿ ಹೇಳಿದ್ದೇನು?
ಚಾಮರಾಜನಗರ: ಸಿಎಂ ಸಿದ್ದರಾಮಯ್ಯನವರು ಈಗ ಕಾಂಪ್ರಮೈಸ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಕಾಂಪ್ರಮೈಸ್ ಪಾಲಿಟಿಕ್ಸ್ ಈಗ ಅನಿವಾರ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲ ಟೈಮ್ನಲ್ಲೂ ಒಂದೇ ರೀತಿ ಬಿಗಿಯಾಗಿ ರಾಜಕಾರಣ ಮಾಡಲು ಆಗಲ್ಲ. ಕಾಂಪ್ರಮೈಸ್ ಅನಿವಾರ್ಯ ಎಂದರು. ಬೆಂಬಲಿಗರನ್ನು ಕಾಪಾಡುವ ವಿಚಾರದಲ್ಲಿ ಸಿದ್ದರಾಮಯ್ಯ ವೀಕ್ ಆಗಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೆ ಹಾಗೆ ಅನ್ನಿಸುವುದಿಲ್ಲ, ರಾಜಕೀಯದಲ್ಲಿ ಕೆಲವೊಮ್ಮೆ ವೀಕ್ ಆಗಿರಬೇಕಾಗುತ್ತದೆ, ಮತ್ತೆ …
Read More »ಒಳಮೀಸಲು ಜಾರಿ ಮೊದಲೇ ಕೃಷಿ ಇಲಾಖೆ ನೇಮಕಾತಿಗೆ ಅವಕಾಶ ಕೊಡಲ್ಲ: ಎಚ್.ಆಂಜನೇಯ
ಚಿತ್ರದುರ್ಗ: ಒಳಮೀಸಲು ಜಾರಿಗೆ ಸರ್ಕಾರ ತೀರ್ಮಾನ ಕೈಗೊಳ್ಳುವ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೃಷಿ ಇಲಾಖೆಯ ಅಧಿಕಾರಿಗಳ ಹುದ್ದೆ ಭರ್ತಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ಅವಕಾಶ ಕೊಡುವುದಿಲ್ಲ. ಒಳ ಮೀಸಲು ಜಾರಿ ನಂತರವೇ ಹುದ್ದೆಗಳ ಹಂಚಿಕೆಯಾಗಿ ಪರೀಕ್ಷೆ ಮತ್ತು ನೇಮಕಾತಿ ನಡೆಯಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗೊಳಿಸದೆ ಒಂದೆ ಒಂದು ಹುದ್ದೆಯನ್ನು ತುಂಬಲು ಬಿಡುವುದಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ …
Read More »37 ವರ್ಷದ ಮಹಿಳೆ 22ರ ಯುವಕನ ಪ್ರೀತಿಸಿ ಮದುವೆ
ಮೈಸೂರು: 37 ವರ್ಷದ ಮಹಿಳೆಯ ಮೇಲೆ 22 ವರ್ಷದ ಯುವಕನಿಗೆ ಪ್ರೇಮಾಂಕುರವಾಗಿದೆ. 1 ವರ್ಷದ ಪ್ರೀತಿಗಾಗಿ 14 ವರ್ಷದ ಮಗನ ಬಿಟ್ಟು ಬಂದ ಮಹಿಳೆಯು 22 ವರ್ಷದ ಯುವಕನನ್ನು ಮದುವೆಯಾಗಿದ್ದಾರೆ. ಈ ಮದುವೆಗೆ ಪೋಷಕರಿಂದ ವಿರೋಧ ವ್ಯಕ್ತ ಆಗುತ್ತಿದ್ದಂತೆ ರಕ್ಷಣೆ ಕೋರಿ ಮೈಸೂರು ಎಸ್ಪಿ ಕಚೇರಿಗೆ ಈ ಜೋಡಿ ಮಂಗಳವಾರ ಭೇಟಿ ನೀಡಿದೆ. ಬೆಂಗಳೂರಿನ ಚಳ್ಳಘಟ್ಟ ನಿವಾಸಿ 37 ವರ್ಷದ ಕವಿತಾ ಮತ್ತು ಮೈಸೂರಿನ ರಮ್ಮನಹಳ್ಳಿ ನಿವಾಸಿ ಭಾಸ್ಕರ್ ಮದುವೆಯಾದವರು. …
Read More »
Laxmi News 24×7