ಬೆಂಗಳೂರು : ಬಿಜೆಪಿ-ಜೆಡಿಎಸ್ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಮೈತ್ರಿ ಆಗಲಿದೆ. ಆದರೆ ಕ್ಷೇತ್ರ ಹಂಚಿಕೆ …
Read More »ಉಪ್ಪಿ ಮನವಿ ಈ ವರ್ಷದ ಗಣೇಶ ಹಬ್ಬದಂದು ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳಿಗೆ ಡಬಲ್ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್ ಹೇಳಿರುವ ಯುಐ ಸಿನಿಮಾದ ಟೀಸರ್ ಲಾಂಚ್ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್ 18ರಂದು ಫುಲ್ ಬ್ಯುಸಿಯಾಗಿರುತ್ತಾರೆ. ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್ಡೇ ದಿನ ಮನೆಯಲ್ಲಿ ಸಿಗಲ್ಲ ಉಪ್ಪಿ!: “ಎಲ್ಲಾ ಅಭಿಮಾನಿ ದೇವರುಗಳಿಗೆ ನಮಸ್ಕಾರ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಸೆಪ್ಟೆಂಬರ್ 18 ಈ ವರ್ಷ ಬಾರಿ ವಿಶೇಷ. ಯಾಕಂದ್ರೆ ಗಣೇಶ ಚತುರ್ಥಿ ಹಬ್ಬ ಆ ದಿನಾನೇ. ಅಭಿಮಾನಿಗಳ ಹಬ್ಬನೂ ಅದೇ ದಿನ. ನಿಮ್ಮೆಲ್ಲರ ಬಹುನಿರೀಕ್ಷಿತ ‘ಯುಐ’ ಸಿನಿಮಾದ ಟೀಸರ್ ಕೂಡ ಅಂದೇ ಲಾಂಚ್ ಮಾಡುತ್ತಿದ್ದೇವೆ. ಈ ಪ್ರಯುಕ್ತ ನಾನು ತುಂಬಾ ಬ್ಯುಸಿ ಇರುತ್ತೇನೆ. ಸೆಪ್ಟೆಂಬರ್ 17ರ ರಾತ್ರಿ ಅಥವಾ 18ರ ಬೆಳಗ್ಗೆ ಕತ್ರಿಗುಪ್ಪೆ ಹಾಗೂ ಸದಾಶಿವನಗರದ ಮನೆಯಲ್ಲಿ ಸಿಗುವುದಿಲ್ಲ. ನನಗೆ ತುಂಬಾ ಕೆಲಸಗಳಿರುವುದರಿಂದ ಸೆಪ್ಟೆಂಬರ್ 18ರಂದು ಮಧ್ಯಾಹ್ನ 2 ಗಂಟೆಯ ಮೇಲೆ ಊರ್ವಶಿ ಥಿಯೇಟರ್ನಲ್ಲಿ ನಿಮಗಾಗಿ ಕಾಯುತ್ತಿರುತ್ತೇನೆ. ನೀವೆಲ್ಲರೂ ಅಲ್ಲೇ ಬನ್ನಿ. ಕೇಕ್ ಕತ್ತರಿಸೋಣ. ಎಲ್ಲ ಸಂಭ್ರಮವನ್ನು ಆಚರಿಸೋಣ. 2 ಗಂಟೆಯಿಂದ 8 ಗಂಟೆಯವರೆಗೂ ಈ ಸಂಭ್ರಮಾಚರಣೆ ಇರುತ್ತದೆ. 6 ಗಂಟೆಯ ನಂತರ ಥಿಯೇಟರ್ ಒಳಗಡೆ ‘ಯುಐ’ ಟೀಸರ್ ಲಾಂಚ್ ಮಾಡುತ್ತೇವೆ. ಬನ್ನಿ, ಎಲ್ಲರೂ ಪಾಲ್ಗೊಳ್ಳೋಣ” ಎಂದು ರಿಯಲ್ ಸ್ಟಾರ್ ಉಪೇಂದ್ರ ವಿಡಿಯೋ ಮೂಲಕ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಯುಐ ಚಿತ್ರದಲ್ಲಿ ನಟ ಉಪೇಂದ್ರ ನಟಿಸುವುದರ ಜೊತೆಗೆ ಆಯಕ್ಷನ್ ಕಟ್ ಕೂಡ ಹೇಳಿದ್ದಾರೆ. ಉಪ್ಪಿ 2 ಸಿನಿಮಾ ಬಳಿಕ ಉಪೇಂದ್ರ ಡೈರೆಕ್ಟರ್ ಕ್ಯಾಪ್ ತೊಟ್ಟ ಚಿತ್ರವಿದು. ಉಪ್ಪಿ 2 ಸಿನಿಮಾ 2015ರಲ್ಲಿ ತೆರೆಕಂಡಿತ್ತು. ಉಪೇಂದ್ರ ಅವರ ನಟನೆಗೆ ಮಾತ್ರವಲ್ಲ, ನಿರ್ದೇಶನ ಶೈಲಿಗೂ ಕೂಡ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇವರು ನಟಿಸುವುದರ ಜೊತೆಗೆ ನಿರ್ದೇಶನ ಮಾಡಿರುವ ಯುಐ ಚಿತ್ರದ ಟೀಸರ್ ಸೆಪ್ಟಂಬರ್ 18ರಂದು ಅವರ ಹುಟ್ಟುಹಬ್ಬದ ದಿನವೇ ಅನಾವರಣಗೊಳ್ಳಲು ತಯಾರಾಗಿದೆ. ಸದ್ಯ ಯುಐ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಎಡಿಟಿಂಗ್ ಕೆಲಸ ನಡೆಯುತ್ತಿದೆ. ಉಪೇಂದ್ರ ಈ ಚಿತ್ರದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಕ್ಯಾಮರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಷ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ಹೊಸ ತಂತ್ರಜ್ಞಾನವನ್ನು ಜೇಮ್ಸ್ ಕ್ಯಾಮರಾನ್ ‘ಅವತಾರ್ 2’ ಸಿನಿಮಾಗೆ ಬಳಸಲಾಗಿತ್ತು. ಇಷ್ಟೇ ಅಲ್ಲ, ಸುಮಾರು 14 ಸಾವಿರ ವಿಎಫ್ಎಕ್ಸ್ ಶಾಟ್ಸ್ ಅನ್ನು ಬಳಸಲಾಗಿದೆ. ಹಿಂದೆಂದೂ ಕನ್ನಡದಲ್ಲಿ ಈ ಟೆಕ್ನಾಲಜಿ ಬಳಸಿಲ್ಲ ಅನ್ನೋದು ಗಮನಾರ್ಹ. ಉಪ್ಪಿ ನಿರ್ದೇಶಿಸಿದ ಈವರೆಗಿನ ಸಿನಿಮಾಗಳಲ್ಲಿ ಇದು ದುಬಾರಿ ಎನ್ನಲಾಗಿದೆ. ಸಿನಿಮಾ ಬಜೆಟ್ ಸುಮಾರು 100 ಕೋಟಿ ರೂಪಾಯಿ ಎಂದು ವರದಿಯಾಗಿದೆ. ಅಲ್ಲದೇ ತಾಂತ್ರಿಕವಾಗಿಯೂ ಈ ಚಿತ್ರ ಅಡ್ವಾನ್ಸ್ ಆಗಿರುತ್ತೆ ಅನ್ನೋದು ಗೊತ್ತಾಗಿದೆ. ಮತ್ತೊಂದೆಡೆ ಯುಐ ಚಿತ್ರ ರಿಲೀಸ್ ಯಾವಾಗ? ಅನ್ನೋ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿದೆ. ನಿರ್ಮಾಪಕರ ಮೂಲಗಳ ಪ್ರಕಾರ, ಈ ಸಿನಿಮಾ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣವಾಗುತ್ತಿರುವ ಹೈ ಬಜೆಟ್ ಚಿತ್ರಗಳಲ್ಲಿ ಯುಐ ಕೂಡ ಒಂದು. ಹಲವಾರು ಸ್ಪೆಷಾಲಿಟಿಗಳಿಗೆ ಸೌತ್ ಇಂಡಸ್ಟ್ರಿಯಲ್ಲಿ ಟಾಕ್ ಆಗುತ್ತಿರುವ ಈ ಚಿತ್ರದ ಮೂಲಕ ಉಪ್ಪಿ ಪ್ರೇಕ್ಷಕರಿಗೆ ಏನು ಹೇಳಲು ಹೊರಟಿದ್ದಾರೆ ಅನ್ನೋದನ್ನು ಕಾದು ನೋಡಬೇಕು.
ಉಪ್ಪಿ ಮನವಿಈ ವರ್ಷದ ಗಣೇಶ ಹಬ್ಬದಂದು ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳಿಗೆ ಡಬಲ್ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್ ಹೇಳಿರುವ ಯುಐ ಸಿನಿಮಾದ ಟೀಸರ್ ಲಾಂಚ್ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್ 18ರಂದು ಫುಲ್ ಬ್ಯುಸಿಯಾಗಿರುತ್ತಾರೆ. ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್ಡೇ …
Read More »ಟೈಮ್ ಮ್ಯಾಗಜೀನ್ನ ವಿಶ್ವದ 100 ಅತ್ಯುತ್ತಮ ಕಂಪನಿಗಳಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ.
ನವದೆಹಲಿ : ಟೈಮ್ ಮ್ಯಾಗಜೀನ್ ಬಿಡುಗಡೆ ಮಾಡಿರುವ ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ. 100ರ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಕಂಪನಿ ಇನ್ಪೋಸಿಸ್ ಆಗಿದೆ. ಬೆಂಗಳೂರು ಮೂಲದ ಇನ್ಪೋಸಿಸ್ ಟಾಪ್ 100 ಪಟ್ಟಿಯಲ್ಲಿ 64 ನೇ ಸ್ಥಾನದಲ್ಲಿದೆ. “ಟೈಮ್ ಮ್ಯಾಗಜೀನ್ನ ವಿಶ್ವದ ಅತ್ಯುತ್ತಮ ಕಂಪನಿಗಳ 2023ರ ಪಟ್ಟಿಯಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ. ನಾವು ಅಗ್ರ 3 ಜಾಗತಿಕ ವೃತ್ತಿಪರ ಸೇವಾ ಸಂಸ್ಥೆಗಳಲ್ಲಿ ಒಂದಾಗಿದ್ದೇವೆ ಮತ್ತು …
Read More »ವೈಭವದ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಆನೆಗೆ ಇಂದು ಮರಳು ಮೂಟೆ ಹೊರಿಸುವ ಮೂಲಕ ಭಾರ ಹೊರುವ ತಾಲೀಮನ್ನು ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಿ ಆರಂಭಿಸಲಾಯಿತು. ಅರಮನೆಯ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ಮಧ್ಯಾಹ್ನ 12:30 ರಿಂದ 1 ಗಂಟೆಯ ಒಳಗಿನ ಶುಭ ಮುಹೂರ್ತದಲ್ಲಿ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ನಂತರ 1 ಗಂಟೆಯಿಂದ 1:45 ರವರೆಗೆ …
Read More »S.P. ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ ಸನ್ಮಾನಿಸಿದ: ಸೋಮಶೇಖರ್ ಹುಡೆದ
ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಸಿಟಿ,ಅಲಿಯನ್ಸ್ ಅಂತರಾಷ್ಟ್ರೀಯ ಸೇವಾ ಸ್ಥಾಪಕ ಜಿಲ್ಲಾ ಗವರ್ನರ್ ದಿನಕರ್ ಶೆಟ್ಟಿ ಹಾಗೂ ಅಲಯನ್ಸ್ ಕ್ಲಬ್ ಸದಸ್ಯರಾದ ಸೋಮಶೇಖರ್ ಹುಡೆದ ಮತ್ತು ಬೈಲಹೊಂಗಲ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಸುಧಾಕರ್ ಶೆಟ್ಟಿ ಮತ್ತು ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಪ್ರಭಾಕರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ …
Read More »ದೇವಾಲಯಗಳ ಆವರಣ ಹಾಗೂ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು : ದೇವಾಲಯಗಳ ಆವರಣ ಹಾಗೂ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇಗುಲಗಳ ಸುತ್ತಮುತ್ತ ಬೀಡಿ, ಸಿಗರೇಟ್, ಪಾನ್ ಮಸಾಲ, ಗುಟ್ಕಾ ದಂತಹ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ಆದೇಶ ಶೀಘ್ರದಲ್ಲೇ ಹೊರಬೀಳಲಿದೆ. ದೇವಾಲಯದ ಹೊರಭಾಗದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಕಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಾರೆ. …
Read More »ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಭೇಟಿ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ವೇಳೆ ಮಕ್ಕಳೊಂದಿಗೆ ಊಟ ಮಾಡಿದರು. ಅನಂತರ ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಮೆನು ಪ್ರಕಾರ ಉಪಹಾರ, ಊಟ ನೀಡುತ್ತಿದ್ದಾರೆಯೇ? ಇಲ್ಲಿ ಏನಾದರೂ ಸಮಸ್ಯೆಗಳಿವೆಯೇ? ಎನ್ನುವುದನ್ನು ವಿದ್ಯಾರ್ಥಿಗಳಿಗೆ ಪ್ರಶ್ನೆ ಮಾಡಿ ಕೇಳಿ …
Read More »ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್ಗಳ ಪಾತ್ರ ಪ್ರಮುಖವಾಗಿದೆ.: ಪ್ರಧಾನಿ
ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್ 15ರಂದು ರಾಷ್ಟ್ರೀಯ ಇಂಜಿನಿಯರ್ಸ್ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಇಂಜಿನಿಯರ್ಸ್ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ …
Read More »ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿರುವ ಆರೋಪ ಸಂಬಂಧ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಬಂದ ಅರ್ಧ ಗಂಟೆಯಲ್ಲೇ ಚೈತ್ರಾ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚೈತ್ರಾ ಬೆಳಗಿನ ಟಿಫಿನ್ ಕೂಡ ಮಾಡಿರಲಿಲ್ಲ ಎಂಬ ಮಾಹಿತಿ ಇದೆ. ಏನಿದು ಪ್ರಕರಣ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ …
Read More »ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿ
ರಾಯಚೂರು: ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಸಂಗಮ ಬಾರ್ ಹಿಂಭಾಗದ ಬಡಾವಣೆಯ ಮನೆಯೊಂದರಲ್ಲಿ ಗುರುವಾರ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಪಾರ್ವತಮ್ಮ ಲಿಂಗಯ್ಯ ಗುಂತಗೋಳ ಎಂಬುವರ ಮನೆಯಲ್ಲಿ ಕೃತ್ಯ ಎಸಗಲಾಗಿದೆ. ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಕಳ್ಳರು ನುಗ್ಗಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಇದ್ದ ವಯೋವೃದ್ಧೆ ಕಳ್ಳರ ಕೃತ್ಯಕ್ಕೆ ಪ್ರತಿರೋಧ ತೋರಿದಾಗ ಖದೀಮರು ಬಾಯಿಯಲ್ಲಿ ಬಟ್ಟೆಯನ್ನು ಇಟ್ಟು, …
Read More »